Homeಮುಖಪುಟಆದಿವಾಸಿಯ ಮೇಲೆ ಮೂತ್ರ ಮಾಡಿದ ಶುಕ್ಲಾ ಮನೆ ಮರುನಿರ್ಮಾಣಕ್ಕೆ ಬ್ರಾಹ್ಮಣ ಗುಂಪಿನಿಂದ ಹಣ ಸಂಗ್ರಹ

ಆದಿವಾಸಿಯ ಮೇಲೆ ಮೂತ್ರ ಮಾಡಿದ ಶುಕ್ಲಾ ಮನೆ ಮರುನಿರ್ಮಾಣಕ್ಕೆ ಬ್ರಾಹ್ಮಣ ಗುಂಪಿನಿಂದ ಹಣ ಸಂಗ್ರಹ

- Advertisement -
- Advertisement -

ಬುಡಕಟ್ಟು ಸಮುದಾಯದ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಆರೋಪಿಯ ಮನೆ ಮರುನಿರ್ಮಾಣಕ್ಕೆ ಸಹಾಯ ಮಾಡಲು ಮಧ್ಯಪ್ರದೇಶದ ‘ಬ್ರಾಹ್ಮಣ ಸಮಾಜ’ದ ಸದಸ್ಯರು ನಿಧಿ ಸಂಗ್ರಹ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

ಆರೋಪಿ ಪ್ರವೇಶ್ ಶುಕ್ಲಾ ವಾಸಿಸುತ್ತಿದ್ದ ಮನೆಯನ್ನು ಅಕ್ರಮ ಜಾಗದಲ್ಲಿ ನಿರ್ಮಿಸಲಾಗಿತ್ತು ಎನ್ನುವ ಕಾರಣಕ್ಕೆ ಸರ್ಕಾರ ನೆಲಸಮಗೊಳಿಸಿತ್ತು. ಇದೀಗ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಬ್ರಾಹ್ಮಣ ಸಮುದಾಯವು ಆಕ್ರೋಶಗೊಂಡಿದೆ. ಕುಬ್ರಿ ಗ್ರಾಮದಲ್ಲಿರುವ ಮನೆಯನ್ನು ತನ್ನ ಅಜ್ಜಿ ನಿರ್ಮಿಸಿದ್ದು, ಪ್ರವೇಶ್ ಅಥವಾ ಅವರ ತಂದೆಯ ಹೆಸರಿನಲ್ಲಿಲ್ಲ ಎಂದು ಅವರ ಪತ್ನಿ ಕಾಂಚನ್ ಹೇಳಿದ್ದಾರೆ.

ಪ್ರವೇಶ್ ಶುಕ್ಲಾ ಅವರ ತಂದೆ ರಮಾಕಾಂತ್ ಶುಕ್ಲಾ ಅವರ ಖಾತೆ ಸಂಖ್ಯೆಯು ಸಮುದಾಯದ ವಾಟ್ಸಾಪ್ ಗುಂಪುಗಳಲ್ಲಿ ಹರಿದಾಡುತ್ತಿದೆ ಮತ್ತು ಜನರು ರಾಜ್ಯಾದ್ಯಂತ ಹಣವನ್ನು ದೇಣಿಗೆ ನೀಡಲು ಪ್ರಾರಂಭಿಸಿದ್ದಾರೆ.

ಈ ಬಗ್ಗೆ ಅಖಿಲ ಭಾರತೀಯ ಬ್ರಾಹ್ಮಣ ಸಮಾಜದ ರಾಜ್ಯಾಧ್ಯಕ್ಷ ಪುಷ್ಪೇಂದ್ರ ಮಿಶ್ರಾ ಮಾತನಾಡಿ, ”ಮನೆ ನೆಲಸಮಗೊಳಿಸಲಾಗಿರುವ ಕುಟುಂಬಕ್ಕೆ ಸಂಘಟನೆಯೇ ಮನೆ ನಿರ್ಮಿಸಿಕೊಡುತ್ತದೆ. ನಾವು ಆರಂಭದಲ್ಲಿ 51 ಸಾವಿರ ರೂ. ಕುಟುಂಬದ ಮುಖ್ಯಸ್ಥರ ಖಾತೆಗೆ ಹಾಕಿದ್ದೇವೆ. ಇದೀಗ ಸಹಾಯಕ್ಕಾಗಿ ನಮ್ಮ ಸಂಸ್ಥೆಯಾದ್ಯಂತ ಪ್ರಸಾರ ಮಾಡಲಾಗಿದೆ. ಜನರು ಮನೆ ನಿರ್ಮಾಣಕ್ಕೆ ಕೊಡುಗೆ ನೀಡುತ್ತಿದ್ದಾರೆ” ಎಂದು ಹೇಳಿದರು.

ರಮಾಕಾಂತ್ ಶುಕ್ಲಾ ಮಾತನಾಡಿ, ”ಅವನು ನನ್ನ ಮಗ, ಆದರೆ ನಾನು ಕಾನೂನು ಪಾಲಿಸುವ ನಾಗರಿಕ ಮತ್ತು ನನ್ನ ಮಗನ ವಿರುದ್ಧ ಸಂವಿಧಾನದ ಪ್ರಕಾರ ಯಾವುದೇ ಕಾನೂನು ಕ್ರಮವನ್ನು ಸ್ವಾಗತಿಸುತ್ತೇನೆ. ಆದರೆ ನಮ್ಮ ಮನೆಯನ್ನು ಏಕೆ ನೆಲಸಮ ಮಾಡಲಾಯಿತು? ಸಂಸದರ ಕಾನೂನು ಹೇಳುತ್ತದೆ ಮಳೆಗಾಲದಲ್ಲಿ ಅತಿಕ್ರಮಣಗಳನ್ನು ನೆಲಸಮ ಮಾಡಬಾರದು ಎಂದು… ನಮ್ಮ ಕುಟುಂಬವು ಯಾವುದೇ ತಪ್ಪಿಲ್ಲದೆ ಸಂಕಷ್ಟ ಎದುರಿಸುತ್ತಿದೆ. ಮೊದಲೆರಡು ದಿನ ನೆರೆಹೊರೆಯವರು ಊಟಕ್ಕೆ ವ್ಯವಸ್ಥೆ ಮಾಡಿದರು. ಈಗ ನಾವು ಹೇಗಾದರೂ ನಿರ್ವಹಿಸುತ್ತಿದ್ದೇವೆ” ಎಂದು TOI ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಘಟನೆ ಖಂಡಿಸಿ ಪಕ್ಷ ತೊರೆದ ಬಿಜೆಪಿ ನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....