Homeಕರ್ನಾಟಕಶಾಲಾ ಪಠ್ಯಪುಸ್ತಕದಲ್ಲಿ ಬ್ರಾಹ್ಮಣರ ಅವಹೇಳನ ಆರೋಪ: ಕ್ರಮಕ್ಕೆ ಸೂಚಿಸಿದ ಮುಖ್ಯಮಂತ್ರಿ

ಶಾಲಾ ಪಠ್ಯಪುಸ್ತಕದಲ್ಲಿ ಬ್ರಾಹ್ಮಣರ ಅವಹೇಳನ ಆರೋಪ: ಕ್ರಮಕ್ಕೆ ಸೂಚಿಸಿದ ಮುಖ್ಯಮಂತ್ರಿ

’ವರ್ಣ ವ್ಯವಸ್ಥೆಯಿಂದ ಸಾಮಾಜಿಕ ವಿಘಟನೆಯಾಯಿತು’ ಎಂಬುವುದು ಸೇರಿದಂತೆ ಬ್ರಾಹ್ಮಣ ಸಮುದಾವನ್ನು ಕೆಟ್ಟ ರೀತಿಯಲ್ಲಿ ಬಿಂಬಿಸುವ ಅಂಶಗಳನ್ನು ತೆಗೆದು ಹಾಕಬೇಕು ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ನಿಯೋಗ ಮನವಿ ಸಲ್ಲಿಸಿತ್ತು

- Advertisement -
- Advertisement -

’ವರ್ಣ ವ್ಯವಸ್ಥೆಯಿಂದ ಸಾಮಾಜಿಕ ವಿಘಟನೆಯಾಯಿತು’ ಎಂಬುವುದು ಸೇರಿದಂತೆ ಶಾಲಾ ಪಠ್ಯಪುಸ್ತಕದಲ್ಲಿ ಬ್ರಾಹ್ಮಣ ಸಮುದಾವನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ಬಿಂಬಿಸುವ ಅಂಶಗಳನ್ನು ತೆಗೆದು ಹಾಕಬೇಕು ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ನಿಯೋಗ ಮನವಿ ಸಲ್ಲಿಸಿದ ಹಿನ್ನಲೆಯಲ್ಲಿ, ’ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನಕಾರಿ ಅಂಶಗಳಿದ್ದರೆ ಪರಿಶೀಲಿಸಿ ತಕ್ಷಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ.

ನಿನ್ನೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿಯೋಗವು, “ಶಾಲಾ ಪಠ್ಯಪುಸ್ತಕದಲ್ಲಿ ಬ್ರಾಹ್ಮಣರ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುವ ವಿಷಯವನ್ನು ಸೇರಿಸಿರುವುದು ಆಘಾತಕಾರಿ ವಿಷಯ. ಅಲ್ಲದೆ, ಇದು ಬೆಳೆಯುತ್ತಿರುವ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಲಿದೆ” ಎಂದು ತನ್ನ ಮನವಿಯಲ್ಲಿ ದೂರಿಕೊಂಡಿತ್ತು.

ಇದನ್ನೂ ಓದಿ: ಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?

“ವೇದಗಳ ಕಾಲದಲ್ಲಿ ಆಚರಿಸುತ್ತಿದ್ದ ಯಜ್ಞ, ಯಾಗಗಳಲ್ಲಿ ಆಹಾರ ಧಾನ್ಯ, ಹಾಲು, ತುಪ್ಪವನ್ನು ಹವಿಸ್ಸು ಎಂದು ದಹಿಸುತ್ತಿದ್ದುದರಿಂದ ಆಹಾರದ ಅಭಾವ ಸೃಷ್ಟಿಯಾಯಿತು ಎಂದು ಕಪೋಕಲ್ಪಿತವಾಗಿ ಉಲ್ಲೇಖಿಸಿ ಸನಾತನ ಸಂಪ್ರದಾಯ ಆಚರಣೆಗಳಿಗೆ ಅವಮಾನ ಮಾಡಲಾಗಿದೆ. ಇದೆಲ್ಲವನ್ನೂ ಬ್ರಾಹ್ಮಣರು ಮಾಡುತ್ತಿದ್ದರೆಂದು ತಪ್ಪು ಅಭಿಪ್ರಾಯ ಮೂಡುವಂತೆ ನಮೂದಿಸಿಲಾಗಿದೆ. ಇದು ನಮ್ಮ ಸನಾತನ ಧರ್ಮ ಹಾಗೂ ಸಂಪ್ರದಾಯಕ್ಕೆ ಎಸಗಿದ ಅಪಚಾರ” ಎಂದು ತಮ್ಮ ಮನವಿಯಲ್ಲಿ ಉಲ್ಲೇಖಿಸಿತ್ತು.

“ವೈದಿಕೆ ಆಚರಣೆಗಳು ದುಬಾರಿಯಾಗಿದ್ದು, ಸಂಸ್ಕೃತ ಮಂತ್ರದ ಮೂಲಕ ನಡೆಸುತ್ತಿದ್ದುದರಿಂದ ಜನಸಾಮಾನ್ಯರಿಗೆ ಲಭ್ಯವಾಗುತ್ತಿರಲಿಲ್ಲ ಹಾಗೂ ಅರ್ಥ ಆಗುತ್ತಿರಲಿಲ್ಲ. ವರ್ಣ ವ್ಯವಸ್ಥೆಯಿಂದ ಸಾಮಾಜಿಕ ವಿಘಟನೆಯಾಯಿತು ಎಂಬ ಸತ್ಯಕ್ಕೆ ದೂರವಾದ ಅಂಶಗಳನ್ನು ಪಠ್ಯದಲ್ಲಿ ಉಲ್ಲೇಖಿಸಿರುವುದು ವಿಷಾದನೀಯ. ಇದು ಬ್ರಾಹ್ಮಣ ಸಮುದಾವನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ಬಿಂಬಿಸುವ ಹೇಯ ಕೆಲಸ. ಹೀಗಾಗಿ, ಈ ಅಂಶಗಳನ್ನು ತೆಗೆದು ಹಾಕಬೇಕು” ಎಂದು ಮಂಡಳಿಯ ನಿಯೋಗ ಮನವಿ ಮಾಡಿತ್ತು.

ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ “ಆರನೇ ಮತ್ತು ಒಂಬತ್ತನೇ ತರಗತಿಯ ಶಾಲಾ ಪಠ್ಯಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನಕಾರಿ ಅಂಶಗಳಿದ್ದರೆ ಪರಿಶೀಲಿಸಿ, ತಕ್ಷಣ ಕ್ರಮ ತೆಗೆದುಕೊಳ್ಳಬೇಕು” ಎಂದು ಶಿಕ್ಷಣ ಇಲಾಖೆಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಬ್ರಾಹ್ಮಣ್ಯದ ವಿರೋಧ ಮತ್ತು ಜಾತಿ ವಾಸ್ತವದ ಪ್ರಶ್ನೆಗೆ ಒಂದು ಉತ್ತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...