Homeಅಂತರಾಷ್ಟ್ರೀಯ'ಭಾರತೀಯರ ವೆಚ್ಚದಲ್ಲಿ 'ಬ್ರಾಹ್ಮಣರು' ಲಾಭ ಗಳಿಸುತ್ತಿದ್ದಾರೆ': ಶ್ವೇತಭವನ ಸಲಹೆಗಾರ ನವರೊ

‘ಭಾರತೀಯರ ವೆಚ್ಚದಲ್ಲಿ ‘ಬ್ರಾಹ್ಮಣರು’ ಲಾಭ ಗಳಿಸುತ್ತಿದ್ದಾರೆ’: ಶ್ವೇತಭವನ ಸಲಹೆಗಾರ ನವರೊ

- Advertisement -
- Advertisement -

ರಷ್ಯಾದಿಂದ ತೈಲ ಖರೀದಿಸುತ್ತಿರುವುದಕ್ಕೆ ಭಾರತದ ವಿರುದ್ಧ ಹೊಸ ವಾಗ್ದಾಳಿ ನಡೆಸಿರುವ ಅಮೆರಿಕದ ಶ್ವೇತಭವನದ ವ್ಯಾಪಾರ ಸಲಹೆಗಾರ ಪೀಟರ್ ನವರೊ, “ಬ್ರಾಹ್ಮಣರು’ ಭಾರತೀಯ ಜನರ ವೆಚ್ಚದಲ್ಲಿ ಲಾಭ ಗಳಿಸುತ್ತಿದ್ದಾರೆ. ಅದನ್ನು ‘ನಿಲ್ಲಿಸಬೇಕಾಗಿದೆ’ ಎಂದು ಸಂಚಲನಕಾರಿ ಹೇಳಿಕೆ ನೀಡಿದ್ದಾರೆ.

‘ಮೋದಿ ಒಬ್ಬರು ಮಹಾನ್ ನಾಯಕ’ ಎಂದು ಟ್ರಂಪ್ ಆಡಳಿತದ ವ್ಯಾಪಾರ ಮತ್ತು ಉತ್ಪಾದನೆಯ ಹಿರಿಯ ಸಲಹೆಗಾರ ನವರೊ ಭಾನುವಾರ (ಆ.29) ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

“ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವಾಗ, ಭಾರತೀಯ ನಾಯಕ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಹೇಗೆ ಸಹಕರಿಸುತ್ತಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ”

“ನಾನು ಸರಳವಾಗಿ ಹೇಳುವುದೇನೆಂದರೆ, ಭಾರತೀಯರೇ ದಯವಿಟ್ಟು ಇಲ್ಲಿ ಏನು ನಡೆಯುತ್ತಿದೆ ಎಂಬುವುದನ್ನು ಅರ್ಥಮಾಡಿಕೊಳ್ಳಿ. ನೀವು ಭಾರತೀಯ ಜನರ ವೆಚ್ಚದಲ್ಲಿ ಬ್ರಾಹ್ಮಣರು ಲಾಭ ಗಳಿಸುವಂತೆ ಮಾಡುತ್ತಿದ್ದೀರಿ. ನಾವು ಅದನ್ನು ನಿಲ್ಲಿಸಬೇಕು” ಎಂದು ನವರೊ ಹೇಳಿದ್ದಾರೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವ್ಯಾಪಾರ ಮತ್ತು ಸುಂಕ ನೀತಿಗಳಿಂದಾಗಿ ಅಮೆರಿಕ ಮತ್ತು ಭಾರತ ನಡುವಿನ ಸಂಬಂಧ ಹದೆಗೆಟ್ಟ ನಂತರ, ನವರೊ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಭಾರತ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುತ್ತಿದ್ದಾರೆ.

ಉಕ್ರೇನ್ ಜೊತೆ ರಷ್ಯಾ ನಡೆಸುತ್ತಿರುವ ಯುದ್ಧವನ್ನು ಭಾರತದ ಪ್ರಧಾನಿ ನರೇಂದ್ರ ‘ಮೋದಿಯ ಯುದ್ಧ’ ಎಂದು ಆಗಸ್ಟ್ 28ರಂದು ನವರೊ ಹೇಳಿದ್ದರು. ರಷ್ಯಾದಿಂದ ತೈಲ ಖರೀದಿಸುವ ಮೂಲಕ ಉಕ್ರೇನ್ ಮೇಲಿನ ದಾಳಿಗೆ ಭಾರತ ಸಹಕಾರ ನೀಡುತ್ತಿದೆ ಎಂದು ಆರೋಪಿಸಿದ್ದರು.

ಟ್ರಂಪ್ ಆಡಳಿತ ಭಾರತದ ಮೇಲೆ ಶೇ.25 ರಷ್ಟು ಪ್ರತಿ ಸುಂಕ ಮತ್ತು ರಷ್ಯಾದಿಂದ ತೈಲ ಖರೀದಿಸುತ್ತಿರುವುದಕ್ಕೆ ದಂಡದ ರೂಪದಲ್ಲಿ ಹೆಚ್ಚುವರಿಯಾಗಿ ಶೇ.25 ರಷ್ಟು ಸುಂಕವನ್ನು ವಿಧಿಸಿದೆ.

ಭಾರತವು ತನ್ನ ಮೇಲೆ ವಿಧಿಸಲಾದ ಸುಂಕಗಳನ್ನು ‘ನ್ಯಾಯಸಮ್ಮತವಲ್ಲದ ಮತ್ತು ಅಸಮಂಜಸ’ ಎಂದು ಕರೆದಿದೆ.

ಚೀನಾ ರಷ್ಯಾದಿಂದ ತೈಲು ಖರೀದಿಸುತ್ತಿರುದು ಮತ್ತು ಭಾರತದ ಮೇಲೆ ಶೇ.50ರಷ್ಟು ಸುಂಕ ಹೇರಿರುವುದನ್ನು ಉಲ್ಲೇಖಿಸಿ, “ಪುಟಿನ್ ಅವರನ್ನು ಉಸಿರುಗಟ್ಟಿಸಲು’ ಇವಿಷ್ಟು ಸಾಕಾ? ಎಂಬ ಪ್ರಶ್ನೆಗೆ ಉತ್ತರಿಸಿದ ನವರೊ, ‘ಪ್ರಸ್ತುತ ಭಾರತದ ಮೇಲೆ ಶೇ.50ರಷ್ಟು ಸುಂಕ ವಿಧಿಸಲಾಗಿದೆ. ಚೀನಾ ಮೇಲೆ ಅದಕ್ಕಿಂತ ಕೊಂಚ ಹೆಚ್ಚೇ ವಿಧಿಸಿದ್ದೇವೆ. ನಮಗೆ ಸಮಸ್ಯೆ ಆಗದಂತೆ ಇನ್ನೂ ಎಷ್ಟು ಹೆಚ್ಚು ಮಾಡಲು ನೀವು ಬಯಸುತ್ತೀರಿ? ಎಂದು ಕೇಳಿದ್ದಾರೆ.

ಫೆಬ್ರವರಿ 2022ರಲ್ಲಿ ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡುವ ಮೊದಲು, ಭಾರತವು ರಷ್ಯಾದಿಂದ ತೈಲ ಖರೀದಿಸುತ್ತಿರಲಿಲ್ಲ ಅಥವಾ ಖರೀದಿ ಪ್ರಮಾಣ ಬಹಳ ಕಡಿಮೆ ಇತ್ತು.

ಈಗ ಏನಾಯಿತು? ರಷ್ಯಾದ ತೈಲ ಸಂಸ್ಕರಣಾಗಾರಗಳು ಭಾರತದ ದೊಡ್ಡ ತೈಲ ಕಂಪನಿಗಳ ಜೊತೆಗೆ ಕೈ ಜೋಡಿಸಿದವು. ಪುಟಿನ್ ಅವರು ಮೋದಿಯವರಿಗೆ ಕಚ್ಚಾ ತೈಲದ ಮೇಲೆ ರಿಯಾಯಿತಿ ನೀಡುತ್ತಾರೆ. ಭಾರತವು ಆ ಕಚ್ಚಾ ತೈಲವನ್ನು ಸಂಸ್ಕರಿಸಿ, ಯುರೋಪ್, ಆಫ್ರಿಕಾ ಮತ್ತು ಏಷಿಯಾಕ್ಕೆ ಹೆಚ್ಚಿನ ಬೆಲೆಗೆ (ಪ್ರೀಮಿಯಂನಲ್ಲಿ) ರವಾನಿಸುತ್ತದೆ. ಇದರಿಂದ ಅವರು ಭಾರೀ ಪ್ರಮಾಣದ ಲಾಭ ಗಳಿಸುತ್ತಾರೆ ಎಂದು ನವರೊ ಟೀಕಿಸಿದ್ದಾರೆ.

ಉಕ್ರೇನ್‌ನಲ್ಲಿ ನಡೆಯುತ್ತಿರುವುದು ‘ಮೋದಿ ಯುದ್ಧ’: ಅಮೆರಿಕ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...