Homeಅಂತರಾಷ್ಟ್ರೀಯ'ಭಾರತೀಯರ ವೆಚ್ಚದಲ್ಲಿ 'ಬ್ರಾಹ್ಮಣರು' ಲಾಭ ಗಳಿಸುತ್ತಿದ್ದಾರೆ': ಶ್ವೇತಭವನ ಸಲಹೆಗಾರ ನವರೊ

‘ಭಾರತೀಯರ ವೆಚ್ಚದಲ್ಲಿ ‘ಬ್ರಾಹ್ಮಣರು’ ಲಾಭ ಗಳಿಸುತ್ತಿದ್ದಾರೆ’: ಶ್ವೇತಭವನ ಸಲಹೆಗಾರ ನವರೊ

- Advertisement -
- Advertisement -

ರಷ್ಯಾದಿಂದ ತೈಲ ಖರೀದಿಸುತ್ತಿರುವುದಕ್ಕೆ ಭಾರತದ ವಿರುದ್ಧ ಹೊಸ ವಾಗ್ದಾಳಿ ನಡೆಸಿರುವ ಅಮೆರಿಕದ ಶ್ವೇತಭವನದ ವ್ಯಾಪಾರ ಸಲಹೆಗಾರ ಪೀಟರ್ ನವರೊ, “ಬ್ರಾಹ್ಮಣರು’ ಭಾರತೀಯ ಜನರ ವೆಚ್ಚದಲ್ಲಿ ಲಾಭ ಗಳಿಸುತ್ತಿದ್ದಾರೆ. ಅದನ್ನು ‘ನಿಲ್ಲಿಸಬೇಕಾಗಿದೆ’ ಎಂದು ಸಂಚಲನಕಾರಿ ಹೇಳಿಕೆ ನೀಡಿದ್ದಾರೆ.

‘ಮೋದಿ ಒಬ್ಬರು ಮಹಾನ್ ನಾಯಕ’ ಎಂದು ಟ್ರಂಪ್ ಆಡಳಿತದ ವ್ಯಾಪಾರ ಮತ್ತು ಉತ್ಪಾದನೆಯ ಹಿರಿಯ ಸಲಹೆಗಾರ ನವರೊ ಭಾನುವಾರ (ಆ.29) ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

“ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವಾಗ, ಭಾರತೀಯ ನಾಯಕ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಹೇಗೆ ಸಹಕರಿಸುತ್ತಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ”

“ನಾನು ಸರಳವಾಗಿ ಹೇಳುವುದೇನೆಂದರೆ, ಭಾರತೀಯರೇ ದಯವಿಟ್ಟು ಇಲ್ಲಿ ಏನು ನಡೆಯುತ್ತಿದೆ ಎಂಬುವುದನ್ನು ಅರ್ಥಮಾಡಿಕೊಳ್ಳಿ. ನೀವು ಭಾರತೀಯ ಜನರ ವೆಚ್ಚದಲ್ಲಿ ಬ್ರಾಹ್ಮಣರು ಲಾಭ ಗಳಿಸುವಂತೆ ಮಾಡುತ್ತಿದ್ದೀರಿ. ನಾವು ಅದನ್ನು ನಿಲ್ಲಿಸಬೇಕು” ಎಂದು ನವರೊ ಹೇಳಿದ್ದಾರೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವ್ಯಾಪಾರ ಮತ್ತು ಸುಂಕ ನೀತಿಗಳಿಂದಾಗಿ ಅಮೆರಿಕ ಮತ್ತು ಭಾರತ ನಡುವಿನ ಸಂಬಂಧ ಹದೆಗೆಟ್ಟ ನಂತರ, ನವರೊ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಭಾರತ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುತ್ತಿದ್ದಾರೆ.

ಉಕ್ರೇನ್ ಜೊತೆ ರಷ್ಯಾ ನಡೆಸುತ್ತಿರುವ ಯುದ್ಧವನ್ನು ಭಾರತದ ಪ್ರಧಾನಿ ನರೇಂದ್ರ ‘ಮೋದಿಯ ಯುದ್ಧ’ ಎಂದು ಆಗಸ್ಟ್ 28ರಂದು ನವರೊ ಹೇಳಿದ್ದರು. ರಷ್ಯಾದಿಂದ ತೈಲ ಖರೀದಿಸುವ ಮೂಲಕ ಉಕ್ರೇನ್ ಮೇಲಿನ ದಾಳಿಗೆ ಭಾರತ ಸಹಕಾರ ನೀಡುತ್ತಿದೆ ಎಂದು ಆರೋಪಿಸಿದ್ದರು.

ಟ್ರಂಪ್ ಆಡಳಿತ ಭಾರತದ ಮೇಲೆ ಶೇ.25 ರಷ್ಟು ಪ್ರತಿ ಸುಂಕ ಮತ್ತು ರಷ್ಯಾದಿಂದ ತೈಲ ಖರೀದಿಸುತ್ತಿರುವುದಕ್ಕೆ ದಂಡದ ರೂಪದಲ್ಲಿ ಹೆಚ್ಚುವರಿಯಾಗಿ ಶೇ.25 ರಷ್ಟು ಸುಂಕವನ್ನು ವಿಧಿಸಿದೆ.

ಭಾರತವು ತನ್ನ ಮೇಲೆ ವಿಧಿಸಲಾದ ಸುಂಕಗಳನ್ನು ‘ನ್ಯಾಯಸಮ್ಮತವಲ್ಲದ ಮತ್ತು ಅಸಮಂಜಸ’ ಎಂದು ಕರೆದಿದೆ.

ಚೀನಾ ರಷ್ಯಾದಿಂದ ತೈಲು ಖರೀದಿಸುತ್ತಿರುದು ಮತ್ತು ಭಾರತದ ಮೇಲೆ ಶೇ.50ರಷ್ಟು ಸುಂಕ ಹೇರಿರುವುದನ್ನು ಉಲ್ಲೇಖಿಸಿ, “ಪುಟಿನ್ ಅವರನ್ನು ಉಸಿರುಗಟ್ಟಿಸಲು’ ಇವಿಷ್ಟು ಸಾಕಾ? ಎಂಬ ಪ್ರಶ್ನೆಗೆ ಉತ್ತರಿಸಿದ ನವರೊ, ‘ಪ್ರಸ್ತುತ ಭಾರತದ ಮೇಲೆ ಶೇ.50ರಷ್ಟು ಸುಂಕ ವಿಧಿಸಲಾಗಿದೆ. ಚೀನಾ ಮೇಲೆ ಅದಕ್ಕಿಂತ ಕೊಂಚ ಹೆಚ್ಚೇ ವಿಧಿಸಿದ್ದೇವೆ. ನಮಗೆ ಸಮಸ್ಯೆ ಆಗದಂತೆ ಇನ್ನೂ ಎಷ್ಟು ಹೆಚ್ಚು ಮಾಡಲು ನೀವು ಬಯಸುತ್ತೀರಿ? ಎಂದು ಕೇಳಿದ್ದಾರೆ.

ಫೆಬ್ರವರಿ 2022ರಲ್ಲಿ ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡುವ ಮೊದಲು, ಭಾರತವು ರಷ್ಯಾದಿಂದ ತೈಲ ಖರೀದಿಸುತ್ತಿರಲಿಲ್ಲ ಅಥವಾ ಖರೀದಿ ಪ್ರಮಾಣ ಬಹಳ ಕಡಿಮೆ ಇತ್ತು.

ಈಗ ಏನಾಯಿತು? ರಷ್ಯಾದ ತೈಲ ಸಂಸ್ಕರಣಾಗಾರಗಳು ಭಾರತದ ದೊಡ್ಡ ತೈಲ ಕಂಪನಿಗಳ ಜೊತೆಗೆ ಕೈ ಜೋಡಿಸಿದವು. ಪುಟಿನ್ ಅವರು ಮೋದಿಯವರಿಗೆ ಕಚ್ಚಾ ತೈಲದ ಮೇಲೆ ರಿಯಾಯಿತಿ ನೀಡುತ್ತಾರೆ. ಭಾರತವು ಆ ಕಚ್ಚಾ ತೈಲವನ್ನು ಸಂಸ್ಕರಿಸಿ, ಯುರೋಪ್, ಆಫ್ರಿಕಾ ಮತ್ತು ಏಷಿಯಾಕ್ಕೆ ಹೆಚ್ಚಿನ ಬೆಲೆಗೆ (ಪ್ರೀಮಿಯಂನಲ್ಲಿ) ರವಾನಿಸುತ್ತದೆ. ಇದರಿಂದ ಅವರು ಭಾರೀ ಪ್ರಮಾಣದ ಲಾಭ ಗಳಿಸುತ್ತಾರೆ ಎಂದು ನವರೊ ಟೀಕಿಸಿದ್ದಾರೆ.

ಉಕ್ರೇನ್‌ನಲ್ಲಿ ನಡೆಯುತ್ತಿರುವುದು ‘ಮೋದಿ ಯುದ್ಧ’: ಅಮೆರಿಕ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...