Homeಅಂತರಾಷ್ಟ್ರೀಯ'ಭಾರತೀಯರ ವೆಚ್ಚದಲ್ಲಿ 'ಬ್ರಾಹ್ಮಣರು' ಲಾಭ ಗಳಿಸುತ್ತಿದ್ದಾರೆ': ಶ್ವೇತಭವನ ಸಲಹೆಗಾರ ನವರೊ

‘ಭಾರತೀಯರ ವೆಚ್ಚದಲ್ಲಿ ‘ಬ್ರಾಹ್ಮಣರು’ ಲಾಭ ಗಳಿಸುತ್ತಿದ್ದಾರೆ’: ಶ್ವೇತಭವನ ಸಲಹೆಗಾರ ನವರೊ

- Advertisement -
- Advertisement -

ರಷ್ಯಾದಿಂದ ತೈಲ ಖರೀದಿಸುತ್ತಿರುವುದಕ್ಕೆ ಭಾರತದ ವಿರುದ್ಧ ಹೊಸ ವಾಗ್ದಾಳಿ ನಡೆಸಿರುವ ಅಮೆರಿಕದ ಶ್ವೇತಭವನದ ವ್ಯಾಪಾರ ಸಲಹೆಗಾರ ಪೀಟರ್ ನವರೊ, “ಬ್ರಾಹ್ಮಣರು’ ಭಾರತೀಯ ಜನರ ವೆಚ್ಚದಲ್ಲಿ ಲಾಭ ಗಳಿಸುತ್ತಿದ್ದಾರೆ. ಅದನ್ನು ‘ನಿಲ್ಲಿಸಬೇಕಾಗಿದೆ’ ಎಂದು ಸಂಚಲನಕಾರಿ ಹೇಳಿಕೆ ನೀಡಿದ್ದಾರೆ.

‘ಮೋದಿ ಒಬ್ಬರು ಮಹಾನ್ ನಾಯಕ’ ಎಂದು ಟ್ರಂಪ್ ಆಡಳಿತದ ವ್ಯಾಪಾರ ಮತ್ತು ಉತ್ಪಾದನೆಯ ಹಿರಿಯ ಸಲಹೆಗಾರ ನವರೊ ಭಾನುವಾರ (ಆ.29) ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

“ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವಾಗ, ಭಾರತೀಯ ನಾಯಕ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಹೇಗೆ ಸಹಕರಿಸುತ್ತಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ”

“ನಾನು ಸರಳವಾಗಿ ಹೇಳುವುದೇನೆಂದರೆ, ಭಾರತೀಯರೇ ದಯವಿಟ್ಟು ಇಲ್ಲಿ ಏನು ನಡೆಯುತ್ತಿದೆ ಎಂಬುವುದನ್ನು ಅರ್ಥಮಾಡಿಕೊಳ್ಳಿ. ನೀವು ಭಾರತೀಯ ಜನರ ವೆಚ್ಚದಲ್ಲಿ ಬ್ರಾಹ್ಮಣರು ಲಾಭ ಗಳಿಸುವಂತೆ ಮಾಡುತ್ತಿದ್ದೀರಿ. ನಾವು ಅದನ್ನು ನಿಲ್ಲಿಸಬೇಕು” ಎಂದು ನವರೊ ಹೇಳಿದ್ದಾರೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವ್ಯಾಪಾರ ಮತ್ತು ಸುಂಕ ನೀತಿಗಳಿಂದಾಗಿ ಅಮೆರಿಕ ಮತ್ತು ಭಾರತ ನಡುವಿನ ಸಂಬಂಧ ಹದೆಗೆಟ್ಟ ನಂತರ, ನವರೊ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಭಾರತ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುತ್ತಿದ್ದಾರೆ.

ಉಕ್ರೇನ್ ಜೊತೆ ರಷ್ಯಾ ನಡೆಸುತ್ತಿರುವ ಯುದ್ಧವನ್ನು ಭಾರತದ ಪ್ರಧಾನಿ ನರೇಂದ್ರ ‘ಮೋದಿಯ ಯುದ್ಧ’ ಎಂದು ಆಗಸ್ಟ್ 28ರಂದು ನವರೊ ಹೇಳಿದ್ದರು. ರಷ್ಯಾದಿಂದ ತೈಲ ಖರೀದಿಸುವ ಮೂಲಕ ಉಕ್ರೇನ್ ಮೇಲಿನ ದಾಳಿಗೆ ಭಾರತ ಸಹಕಾರ ನೀಡುತ್ತಿದೆ ಎಂದು ಆರೋಪಿಸಿದ್ದರು.

ಟ್ರಂಪ್ ಆಡಳಿತ ಭಾರತದ ಮೇಲೆ ಶೇ.25 ರಷ್ಟು ಪ್ರತಿ ಸುಂಕ ಮತ್ತು ರಷ್ಯಾದಿಂದ ತೈಲ ಖರೀದಿಸುತ್ತಿರುವುದಕ್ಕೆ ದಂಡದ ರೂಪದಲ್ಲಿ ಹೆಚ್ಚುವರಿಯಾಗಿ ಶೇ.25 ರಷ್ಟು ಸುಂಕವನ್ನು ವಿಧಿಸಿದೆ.

ಭಾರತವು ತನ್ನ ಮೇಲೆ ವಿಧಿಸಲಾದ ಸುಂಕಗಳನ್ನು ‘ನ್ಯಾಯಸಮ್ಮತವಲ್ಲದ ಮತ್ತು ಅಸಮಂಜಸ’ ಎಂದು ಕರೆದಿದೆ.

ಚೀನಾ ರಷ್ಯಾದಿಂದ ತೈಲು ಖರೀದಿಸುತ್ತಿರುದು ಮತ್ತು ಭಾರತದ ಮೇಲೆ ಶೇ.50ರಷ್ಟು ಸುಂಕ ಹೇರಿರುವುದನ್ನು ಉಲ್ಲೇಖಿಸಿ, “ಪುಟಿನ್ ಅವರನ್ನು ಉಸಿರುಗಟ್ಟಿಸಲು’ ಇವಿಷ್ಟು ಸಾಕಾ? ಎಂಬ ಪ್ರಶ್ನೆಗೆ ಉತ್ತರಿಸಿದ ನವರೊ, ‘ಪ್ರಸ್ತುತ ಭಾರತದ ಮೇಲೆ ಶೇ.50ರಷ್ಟು ಸುಂಕ ವಿಧಿಸಲಾಗಿದೆ. ಚೀನಾ ಮೇಲೆ ಅದಕ್ಕಿಂತ ಕೊಂಚ ಹೆಚ್ಚೇ ವಿಧಿಸಿದ್ದೇವೆ. ನಮಗೆ ಸಮಸ್ಯೆ ಆಗದಂತೆ ಇನ್ನೂ ಎಷ್ಟು ಹೆಚ್ಚು ಮಾಡಲು ನೀವು ಬಯಸುತ್ತೀರಿ? ಎಂದು ಕೇಳಿದ್ದಾರೆ.

ಫೆಬ್ರವರಿ 2022ರಲ್ಲಿ ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡುವ ಮೊದಲು, ಭಾರತವು ರಷ್ಯಾದಿಂದ ತೈಲ ಖರೀದಿಸುತ್ತಿರಲಿಲ್ಲ ಅಥವಾ ಖರೀದಿ ಪ್ರಮಾಣ ಬಹಳ ಕಡಿಮೆ ಇತ್ತು.

ಈಗ ಏನಾಯಿತು? ರಷ್ಯಾದ ತೈಲ ಸಂಸ್ಕರಣಾಗಾರಗಳು ಭಾರತದ ದೊಡ್ಡ ತೈಲ ಕಂಪನಿಗಳ ಜೊತೆಗೆ ಕೈ ಜೋಡಿಸಿದವು. ಪುಟಿನ್ ಅವರು ಮೋದಿಯವರಿಗೆ ಕಚ್ಚಾ ತೈಲದ ಮೇಲೆ ರಿಯಾಯಿತಿ ನೀಡುತ್ತಾರೆ. ಭಾರತವು ಆ ಕಚ್ಚಾ ತೈಲವನ್ನು ಸಂಸ್ಕರಿಸಿ, ಯುರೋಪ್, ಆಫ್ರಿಕಾ ಮತ್ತು ಏಷಿಯಾಕ್ಕೆ ಹೆಚ್ಚಿನ ಬೆಲೆಗೆ (ಪ್ರೀಮಿಯಂನಲ್ಲಿ) ರವಾನಿಸುತ್ತದೆ. ಇದರಿಂದ ಅವರು ಭಾರೀ ಪ್ರಮಾಣದ ಲಾಭ ಗಳಿಸುತ್ತಾರೆ ಎಂದು ನವರೊ ಟೀಕಿಸಿದ್ದಾರೆ.

ಉಕ್ರೇನ್‌ನಲ್ಲಿ ನಡೆಯುತ್ತಿರುವುದು ‘ಮೋದಿ ಯುದ್ಧ’: ಅಮೆರಿಕ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...