Homeಅಂತರಾಷ್ಟ್ರೀಯ'ಭಾರತೀಯರ ವೆಚ್ಚದಲ್ಲಿ 'ಬ್ರಾಹ್ಮಣರು' ಲಾಭ ಗಳಿಸುತ್ತಿದ್ದಾರೆ': ಶ್ವೇತಭವನ ಸಲಹೆಗಾರ ನವರೊ

‘ಭಾರತೀಯರ ವೆಚ್ಚದಲ್ಲಿ ‘ಬ್ರಾಹ್ಮಣರು’ ಲಾಭ ಗಳಿಸುತ್ತಿದ್ದಾರೆ’: ಶ್ವೇತಭವನ ಸಲಹೆಗಾರ ನವರೊ

- Advertisement -
- Advertisement -

ರಷ್ಯಾದಿಂದ ತೈಲ ಖರೀದಿಸುತ್ತಿರುವುದಕ್ಕೆ ಭಾರತದ ವಿರುದ್ಧ ಹೊಸ ವಾಗ್ದಾಳಿ ನಡೆಸಿರುವ ಅಮೆರಿಕದ ಶ್ವೇತಭವನದ ವ್ಯಾಪಾರ ಸಲಹೆಗಾರ ಪೀಟರ್ ನವರೊ, “ಬ್ರಾಹ್ಮಣರು’ ಭಾರತೀಯ ಜನರ ವೆಚ್ಚದಲ್ಲಿ ಲಾಭ ಗಳಿಸುತ್ತಿದ್ದಾರೆ. ಅದನ್ನು ‘ನಿಲ್ಲಿಸಬೇಕಾಗಿದೆ’ ಎಂದು ಸಂಚಲನಕಾರಿ ಹೇಳಿಕೆ ನೀಡಿದ್ದಾರೆ.

‘ಮೋದಿ ಒಬ್ಬರು ಮಹಾನ್ ನಾಯಕ’ ಎಂದು ಟ್ರಂಪ್ ಆಡಳಿತದ ವ್ಯಾಪಾರ ಮತ್ತು ಉತ್ಪಾದನೆಯ ಹಿರಿಯ ಸಲಹೆಗಾರ ನವರೊ ಭಾನುವಾರ (ಆ.29) ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

“ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವಾಗ, ಭಾರತೀಯ ನಾಯಕ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಹೇಗೆ ಸಹಕರಿಸುತ್ತಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ”

“ನಾನು ಸರಳವಾಗಿ ಹೇಳುವುದೇನೆಂದರೆ, ಭಾರತೀಯರೇ ದಯವಿಟ್ಟು ಇಲ್ಲಿ ಏನು ನಡೆಯುತ್ತಿದೆ ಎಂಬುವುದನ್ನು ಅರ್ಥಮಾಡಿಕೊಳ್ಳಿ. ನೀವು ಭಾರತೀಯ ಜನರ ವೆಚ್ಚದಲ್ಲಿ ಬ್ರಾಹ್ಮಣರು ಲಾಭ ಗಳಿಸುವಂತೆ ಮಾಡುತ್ತಿದ್ದೀರಿ. ನಾವು ಅದನ್ನು ನಿಲ್ಲಿಸಬೇಕು” ಎಂದು ನವರೊ ಹೇಳಿದ್ದಾರೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವ್ಯಾಪಾರ ಮತ್ತು ಸುಂಕ ನೀತಿಗಳಿಂದಾಗಿ ಅಮೆರಿಕ ಮತ್ತು ಭಾರತ ನಡುವಿನ ಸಂಬಂಧ ಹದೆಗೆಟ್ಟ ನಂತರ, ನವರೊ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಭಾರತ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುತ್ತಿದ್ದಾರೆ.

ಉಕ್ರೇನ್ ಜೊತೆ ರಷ್ಯಾ ನಡೆಸುತ್ತಿರುವ ಯುದ್ಧವನ್ನು ಭಾರತದ ಪ್ರಧಾನಿ ನರೇಂದ್ರ ‘ಮೋದಿಯ ಯುದ್ಧ’ ಎಂದು ಆಗಸ್ಟ್ 28ರಂದು ನವರೊ ಹೇಳಿದ್ದರು. ರಷ್ಯಾದಿಂದ ತೈಲ ಖರೀದಿಸುವ ಮೂಲಕ ಉಕ್ರೇನ್ ಮೇಲಿನ ದಾಳಿಗೆ ಭಾರತ ಸಹಕಾರ ನೀಡುತ್ತಿದೆ ಎಂದು ಆರೋಪಿಸಿದ್ದರು.

ಟ್ರಂಪ್ ಆಡಳಿತ ಭಾರತದ ಮೇಲೆ ಶೇ.25 ರಷ್ಟು ಪ್ರತಿ ಸುಂಕ ಮತ್ತು ರಷ್ಯಾದಿಂದ ತೈಲ ಖರೀದಿಸುತ್ತಿರುವುದಕ್ಕೆ ದಂಡದ ರೂಪದಲ್ಲಿ ಹೆಚ್ಚುವರಿಯಾಗಿ ಶೇ.25 ರಷ್ಟು ಸುಂಕವನ್ನು ವಿಧಿಸಿದೆ.

ಭಾರತವು ತನ್ನ ಮೇಲೆ ವಿಧಿಸಲಾದ ಸುಂಕಗಳನ್ನು ‘ನ್ಯಾಯಸಮ್ಮತವಲ್ಲದ ಮತ್ತು ಅಸಮಂಜಸ’ ಎಂದು ಕರೆದಿದೆ.

ಚೀನಾ ರಷ್ಯಾದಿಂದ ತೈಲು ಖರೀದಿಸುತ್ತಿರುದು ಮತ್ತು ಭಾರತದ ಮೇಲೆ ಶೇ.50ರಷ್ಟು ಸುಂಕ ಹೇರಿರುವುದನ್ನು ಉಲ್ಲೇಖಿಸಿ, “ಪುಟಿನ್ ಅವರನ್ನು ಉಸಿರುಗಟ್ಟಿಸಲು’ ಇವಿಷ್ಟು ಸಾಕಾ? ಎಂಬ ಪ್ರಶ್ನೆಗೆ ಉತ್ತರಿಸಿದ ನವರೊ, ‘ಪ್ರಸ್ತುತ ಭಾರತದ ಮೇಲೆ ಶೇ.50ರಷ್ಟು ಸುಂಕ ವಿಧಿಸಲಾಗಿದೆ. ಚೀನಾ ಮೇಲೆ ಅದಕ್ಕಿಂತ ಕೊಂಚ ಹೆಚ್ಚೇ ವಿಧಿಸಿದ್ದೇವೆ. ನಮಗೆ ಸಮಸ್ಯೆ ಆಗದಂತೆ ಇನ್ನೂ ಎಷ್ಟು ಹೆಚ್ಚು ಮಾಡಲು ನೀವು ಬಯಸುತ್ತೀರಿ? ಎಂದು ಕೇಳಿದ್ದಾರೆ.

ಫೆಬ್ರವರಿ 2022ರಲ್ಲಿ ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡುವ ಮೊದಲು, ಭಾರತವು ರಷ್ಯಾದಿಂದ ತೈಲ ಖರೀದಿಸುತ್ತಿರಲಿಲ್ಲ ಅಥವಾ ಖರೀದಿ ಪ್ರಮಾಣ ಬಹಳ ಕಡಿಮೆ ಇತ್ತು.

ಈಗ ಏನಾಯಿತು? ರಷ್ಯಾದ ತೈಲ ಸಂಸ್ಕರಣಾಗಾರಗಳು ಭಾರತದ ದೊಡ್ಡ ತೈಲ ಕಂಪನಿಗಳ ಜೊತೆಗೆ ಕೈ ಜೋಡಿಸಿದವು. ಪುಟಿನ್ ಅವರು ಮೋದಿಯವರಿಗೆ ಕಚ್ಚಾ ತೈಲದ ಮೇಲೆ ರಿಯಾಯಿತಿ ನೀಡುತ್ತಾರೆ. ಭಾರತವು ಆ ಕಚ್ಚಾ ತೈಲವನ್ನು ಸಂಸ್ಕರಿಸಿ, ಯುರೋಪ್, ಆಫ್ರಿಕಾ ಮತ್ತು ಏಷಿಯಾಕ್ಕೆ ಹೆಚ್ಚಿನ ಬೆಲೆಗೆ (ಪ್ರೀಮಿಯಂನಲ್ಲಿ) ರವಾನಿಸುತ್ತದೆ. ಇದರಿಂದ ಅವರು ಭಾರೀ ಪ್ರಮಾಣದ ಲಾಭ ಗಳಿಸುತ್ತಾರೆ ಎಂದು ನವರೊ ಟೀಕಿಸಿದ್ದಾರೆ.

ಉಕ್ರೇನ್‌ನಲ್ಲಿ ನಡೆಯುತ್ತಿರುವುದು ‘ಮೋದಿ ಯುದ್ಧ’: ಅಮೆರಿಕ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...