Homeಅಂತರಾಷ್ಟ್ರೀಯ'ಭಾರತೀಯರ ವೆಚ್ಚದಲ್ಲಿ 'ಬ್ರಾಹ್ಮಣರು' ಲಾಭ ಗಳಿಸುತ್ತಿದ್ದಾರೆ': ಶ್ವೇತಭವನ ಸಲಹೆಗಾರ ನವರೊ

‘ಭಾರತೀಯರ ವೆಚ್ಚದಲ್ಲಿ ‘ಬ್ರಾಹ್ಮಣರು’ ಲಾಭ ಗಳಿಸುತ್ತಿದ್ದಾರೆ’: ಶ್ವೇತಭವನ ಸಲಹೆಗಾರ ನವರೊ

- Advertisement -
- Advertisement -

ರಷ್ಯಾದಿಂದ ತೈಲ ಖರೀದಿಸುತ್ತಿರುವುದಕ್ಕೆ ಭಾರತದ ವಿರುದ್ಧ ಹೊಸ ವಾಗ್ದಾಳಿ ನಡೆಸಿರುವ ಅಮೆರಿಕದ ಶ್ವೇತಭವನದ ವ್ಯಾಪಾರ ಸಲಹೆಗಾರ ಪೀಟರ್ ನವರೊ, “ಬ್ರಾಹ್ಮಣರು’ ಭಾರತೀಯ ಜನರ ವೆಚ್ಚದಲ್ಲಿ ಲಾಭ ಗಳಿಸುತ್ತಿದ್ದಾರೆ. ಅದನ್ನು ‘ನಿಲ್ಲಿಸಬೇಕಾಗಿದೆ’ ಎಂದು ಸಂಚಲನಕಾರಿ ಹೇಳಿಕೆ ನೀಡಿದ್ದಾರೆ.

‘ಮೋದಿ ಒಬ್ಬರು ಮಹಾನ್ ನಾಯಕ’ ಎಂದು ಟ್ರಂಪ್ ಆಡಳಿತದ ವ್ಯಾಪಾರ ಮತ್ತು ಉತ್ಪಾದನೆಯ ಹಿರಿಯ ಸಲಹೆಗಾರ ನವರೊ ಭಾನುವಾರ (ಆ.29) ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

“ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವಾಗ, ಭಾರತೀಯ ನಾಯಕ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಹೇಗೆ ಸಹಕರಿಸುತ್ತಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ”

“ನಾನು ಸರಳವಾಗಿ ಹೇಳುವುದೇನೆಂದರೆ, ಭಾರತೀಯರೇ ದಯವಿಟ್ಟು ಇಲ್ಲಿ ಏನು ನಡೆಯುತ್ತಿದೆ ಎಂಬುವುದನ್ನು ಅರ್ಥಮಾಡಿಕೊಳ್ಳಿ. ನೀವು ಭಾರತೀಯ ಜನರ ವೆಚ್ಚದಲ್ಲಿ ಬ್ರಾಹ್ಮಣರು ಲಾಭ ಗಳಿಸುವಂತೆ ಮಾಡುತ್ತಿದ್ದೀರಿ. ನಾವು ಅದನ್ನು ನಿಲ್ಲಿಸಬೇಕು” ಎಂದು ನವರೊ ಹೇಳಿದ್ದಾರೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವ್ಯಾಪಾರ ಮತ್ತು ಸುಂಕ ನೀತಿಗಳಿಂದಾಗಿ ಅಮೆರಿಕ ಮತ್ತು ಭಾರತ ನಡುವಿನ ಸಂಬಂಧ ಹದೆಗೆಟ್ಟ ನಂತರ, ನವರೊ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಭಾರತ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುತ್ತಿದ್ದಾರೆ.

ಉಕ್ರೇನ್ ಜೊತೆ ರಷ್ಯಾ ನಡೆಸುತ್ತಿರುವ ಯುದ್ಧವನ್ನು ಭಾರತದ ಪ್ರಧಾನಿ ನರೇಂದ್ರ ‘ಮೋದಿಯ ಯುದ್ಧ’ ಎಂದು ಆಗಸ್ಟ್ 28ರಂದು ನವರೊ ಹೇಳಿದ್ದರು. ರಷ್ಯಾದಿಂದ ತೈಲ ಖರೀದಿಸುವ ಮೂಲಕ ಉಕ್ರೇನ್ ಮೇಲಿನ ದಾಳಿಗೆ ಭಾರತ ಸಹಕಾರ ನೀಡುತ್ತಿದೆ ಎಂದು ಆರೋಪಿಸಿದ್ದರು.

ಟ್ರಂಪ್ ಆಡಳಿತ ಭಾರತದ ಮೇಲೆ ಶೇ.25 ರಷ್ಟು ಪ್ರತಿ ಸುಂಕ ಮತ್ತು ರಷ್ಯಾದಿಂದ ತೈಲ ಖರೀದಿಸುತ್ತಿರುವುದಕ್ಕೆ ದಂಡದ ರೂಪದಲ್ಲಿ ಹೆಚ್ಚುವರಿಯಾಗಿ ಶೇ.25 ರಷ್ಟು ಸುಂಕವನ್ನು ವಿಧಿಸಿದೆ.

ಭಾರತವು ತನ್ನ ಮೇಲೆ ವಿಧಿಸಲಾದ ಸುಂಕಗಳನ್ನು ‘ನ್ಯಾಯಸಮ್ಮತವಲ್ಲದ ಮತ್ತು ಅಸಮಂಜಸ’ ಎಂದು ಕರೆದಿದೆ.

ಚೀನಾ ರಷ್ಯಾದಿಂದ ತೈಲು ಖರೀದಿಸುತ್ತಿರುದು ಮತ್ತು ಭಾರತದ ಮೇಲೆ ಶೇ.50ರಷ್ಟು ಸುಂಕ ಹೇರಿರುವುದನ್ನು ಉಲ್ಲೇಖಿಸಿ, “ಪುಟಿನ್ ಅವರನ್ನು ಉಸಿರುಗಟ್ಟಿಸಲು’ ಇವಿಷ್ಟು ಸಾಕಾ? ಎಂಬ ಪ್ರಶ್ನೆಗೆ ಉತ್ತರಿಸಿದ ನವರೊ, ‘ಪ್ರಸ್ತುತ ಭಾರತದ ಮೇಲೆ ಶೇ.50ರಷ್ಟು ಸುಂಕ ವಿಧಿಸಲಾಗಿದೆ. ಚೀನಾ ಮೇಲೆ ಅದಕ್ಕಿಂತ ಕೊಂಚ ಹೆಚ್ಚೇ ವಿಧಿಸಿದ್ದೇವೆ. ನಮಗೆ ಸಮಸ್ಯೆ ಆಗದಂತೆ ಇನ್ನೂ ಎಷ್ಟು ಹೆಚ್ಚು ಮಾಡಲು ನೀವು ಬಯಸುತ್ತೀರಿ? ಎಂದು ಕೇಳಿದ್ದಾರೆ.

ಫೆಬ್ರವರಿ 2022ರಲ್ಲಿ ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡುವ ಮೊದಲು, ಭಾರತವು ರಷ್ಯಾದಿಂದ ತೈಲ ಖರೀದಿಸುತ್ತಿರಲಿಲ್ಲ ಅಥವಾ ಖರೀದಿ ಪ್ರಮಾಣ ಬಹಳ ಕಡಿಮೆ ಇತ್ತು.

ಈಗ ಏನಾಯಿತು? ರಷ್ಯಾದ ತೈಲ ಸಂಸ್ಕರಣಾಗಾರಗಳು ಭಾರತದ ದೊಡ್ಡ ತೈಲ ಕಂಪನಿಗಳ ಜೊತೆಗೆ ಕೈ ಜೋಡಿಸಿದವು. ಪುಟಿನ್ ಅವರು ಮೋದಿಯವರಿಗೆ ಕಚ್ಚಾ ತೈಲದ ಮೇಲೆ ರಿಯಾಯಿತಿ ನೀಡುತ್ತಾರೆ. ಭಾರತವು ಆ ಕಚ್ಚಾ ತೈಲವನ್ನು ಸಂಸ್ಕರಿಸಿ, ಯುರೋಪ್, ಆಫ್ರಿಕಾ ಮತ್ತು ಏಷಿಯಾಕ್ಕೆ ಹೆಚ್ಚಿನ ಬೆಲೆಗೆ (ಪ್ರೀಮಿಯಂನಲ್ಲಿ) ರವಾನಿಸುತ್ತದೆ. ಇದರಿಂದ ಅವರು ಭಾರೀ ಪ್ರಮಾಣದ ಲಾಭ ಗಳಿಸುತ್ತಾರೆ ಎಂದು ನವರೊ ಟೀಕಿಸಿದ್ದಾರೆ.

ಉಕ್ರೇನ್‌ನಲ್ಲಿ ನಡೆಯುತ್ತಿರುವುದು ‘ಮೋದಿ ಯುದ್ಧ’: ಅಮೆರಿಕ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...