Homeಅಂತರಾಷ್ಟ್ರೀಯ'ಭಾರತೀಯರ ವೆಚ್ಚದಲ್ಲಿ 'ಬ್ರಾಹ್ಮಣರು' ಲಾಭ ಗಳಿಸುತ್ತಿದ್ದಾರೆ': ಶ್ವೇತಭವನ ಸಲಹೆಗಾರ ನವರೊ

‘ಭಾರತೀಯರ ವೆಚ್ಚದಲ್ಲಿ ‘ಬ್ರಾಹ್ಮಣರು’ ಲಾಭ ಗಳಿಸುತ್ತಿದ್ದಾರೆ’: ಶ್ವೇತಭವನ ಸಲಹೆಗಾರ ನವರೊ

- Advertisement -
- Advertisement -

ರಷ್ಯಾದಿಂದ ತೈಲ ಖರೀದಿಸುತ್ತಿರುವುದಕ್ಕೆ ಭಾರತದ ವಿರುದ್ಧ ಹೊಸ ವಾಗ್ದಾಳಿ ನಡೆಸಿರುವ ಅಮೆರಿಕದ ಶ್ವೇತಭವನದ ವ್ಯಾಪಾರ ಸಲಹೆಗಾರ ಪೀಟರ್ ನವರೊ, “ಬ್ರಾಹ್ಮಣರು’ ಭಾರತೀಯ ಜನರ ವೆಚ್ಚದಲ್ಲಿ ಲಾಭ ಗಳಿಸುತ್ತಿದ್ದಾರೆ. ಅದನ್ನು ‘ನಿಲ್ಲಿಸಬೇಕಾಗಿದೆ’ ಎಂದು ಸಂಚಲನಕಾರಿ ಹೇಳಿಕೆ ನೀಡಿದ್ದಾರೆ.

‘ಮೋದಿ ಒಬ್ಬರು ಮಹಾನ್ ನಾಯಕ’ ಎಂದು ಟ್ರಂಪ್ ಆಡಳಿತದ ವ್ಯಾಪಾರ ಮತ್ತು ಉತ್ಪಾದನೆಯ ಹಿರಿಯ ಸಲಹೆಗಾರ ನವರೊ ಭಾನುವಾರ (ಆ.29) ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

“ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವಾಗ, ಭಾರತೀಯ ನಾಯಕ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಹೇಗೆ ಸಹಕರಿಸುತ್ತಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ”

“ನಾನು ಸರಳವಾಗಿ ಹೇಳುವುದೇನೆಂದರೆ, ಭಾರತೀಯರೇ ದಯವಿಟ್ಟು ಇಲ್ಲಿ ಏನು ನಡೆಯುತ್ತಿದೆ ಎಂಬುವುದನ್ನು ಅರ್ಥಮಾಡಿಕೊಳ್ಳಿ. ನೀವು ಭಾರತೀಯ ಜನರ ವೆಚ್ಚದಲ್ಲಿ ಬ್ರಾಹ್ಮಣರು ಲಾಭ ಗಳಿಸುವಂತೆ ಮಾಡುತ್ತಿದ್ದೀರಿ. ನಾವು ಅದನ್ನು ನಿಲ್ಲಿಸಬೇಕು” ಎಂದು ನವರೊ ಹೇಳಿದ್ದಾರೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವ್ಯಾಪಾರ ಮತ್ತು ಸುಂಕ ನೀತಿಗಳಿಂದಾಗಿ ಅಮೆರಿಕ ಮತ್ತು ಭಾರತ ನಡುವಿನ ಸಂಬಂಧ ಹದೆಗೆಟ್ಟ ನಂತರ, ನವರೊ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಭಾರತ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುತ್ತಿದ್ದಾರೆ.

ಉಕ್ರೇನ್ ಜೊತೆ ರಷ್ಯಾ ನಡೆಸುತ್ತಿರುವ ಯುದ್ಧವನ್ನು ಭಾರತದ ಪ್ರಧಾನಿ ನರೇಂದ್ರ ‘ಮೋದಿಯ ಯುದ್ಧ’ ಎಂದು ಆಗಸ್ಟ್ 28ರಂದು ನವರೊ ಹೇಳಿದ್ದರು. ರಷ್ಯಾದಿಂದ ತೈಲ ಖರೀದಿಸುವ ಮೂಲಕ ಉಕ್ರೇನ್ ಮೇಲಿನ ದಾಳಿಗೆ ಭಾರತ ಸಹಕಾರ ನೀಡುತ್ತಿದೆ ಎಂದು ಆರೋಪಿಸಿದ್ದರು.

ಟ್ರಂಪ್ ಆಡಳಿತ ಭಾರತದ ಮೇಲೆ ಶೇ.25 ರಷ್ಟು ಪ್ರತಿ ಸುಂಕ ಮತ್ತು ರಷ್ಯಾದಿಂದ ತೈಲ ಖರೀದಿಸುತ್ತಿರುವುದಕ್ಕೆ ದಂಡದ ರೂಪದಲ್ಲಿ ಹೆಚ್ಚುವರಿಯಾಗಿ ಶೇ.25 ರಷ್ಟು ಸುಂಕವನ್ನು ವಿಧಿಸಿದೆ.

ಭಾರತವು ತನ್ನ ಮೇಲೆ ವಿಧಿಸಲಾದ ಸುಂಕಗಳನ್ನು ‘ನ್ಯಾಯಸಮ್ಮತವಲ್ಲದ ಮತ್ತು ಅಸಮಂಜಸ’ ಎಂದು ಕರೆದಿದೆ.

ಚೀನಾ ರಷ್ಯಾದಿಂದ ತೈಲು ಖರೀದಿಸುತ್ತಿರುದು ಮತ್ತು ಭಾರತದ ಮೇಲೆ ಶೇ.50ರಷ್ಟು ಸುಂಕ ಹೇರಿರುವುದನ್ನು ಉಲ್ಲೇಖಿಸಿ, “ಪುಟಿನ್ ಅವರನ್ನು ಉಸಿರುಗಟ್ಟಿಸಲು’ ಇವಿಷ್ಟು ಸಾಕಾ? ಎಂಬ ಪ್ರಶ್ನೆಗೆ ಉತ್ತರಿಸಿದ ನವರೊ, ‘ಪ್ರಸ್ತುತ ಭಾರತದ ಮೇಲೆ ಶೇ.50ರಷ್ಟು ಸುಂಕ ವಿಧಿಸಲಾಗಿದೆ. ಚೀನಾ ಮೇಲೆ ಅದಕ್ಕಿಂತ ಕೊಂಚ ಹೆಚ್ಚೇ ವಿಧಿಸಿದ್ದೇವೆ. ನಮಗೆ ಸಮಸ್ಯೆ ಆಗದಂತೆ ಇನ್ನೂ ಎಷ್ಟು ಹೆಚ್ಚು ಮಾಡಲು ನೀವು ಬಯಸುತ್ತೀರಿ? ಎಂದು ಕೇಳಿದ್ದಾರೆ.

ಫೆಬ್ರವರಿ 2022ರಲ್ಲಿ ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡುವ ಮೊದಲು, ಭಾರತವು ರಷ್ಯಾದಿಂದ ತೈಲ ಖರೀದಿಸುತ್ತಿರಲಿಲ್ಲ ಅಥವಾ ಖರೀದಿ ಪ್ರಮಾಣ ಬಹಳ ಕಡಿಮೆ ಇತ್ತು.

ಈಗ ಏನಾಯಿತು? ರಷ್ಯಾದ ತೈಲ ಸಂಸ್ಕರಣಾಗಾರಗಳು ಭಾರತದ ದೊಡ್ಡ ತೈಲ ಕಂಪನಿಗಳ ಜೊತೆಗೆ ಕೈ ಜೋಡಿಸಿದವು. ಪುಟಿನ್ ಅವರು ಮೋದಿಯವರಿಗೆ ಕಚ್ಚಾ ತೈಲದ ಮೇಲೆ ರಿಯಾಯಿತಿ ನೀಡುತ್ತಾರೆ. ಭಾರತವು ಆ ಕಚ್ಚಾ ತೈಲವನ್ನು ಸಂಸ್ಕರಿಸಿ, ಯುರೋಪ್, ಆಫ್ರಿಕಾ ಮತ್ತು ಏಷಿಯಾಕ್ಕೆ ಹೆಚ್ಚಿನ ಬೆಲೆಗೆ (ಪ್ರೀಮಿಯಂನಲ್ಲಿ) ರವಾನಿಸುತ್ತದೆ. ಇದರಿಂದ ಅವರು ಭಾರೀ ಪ್ರಮಾಣದ ಲಾಭ ಗಳಿಸುತ್ತಾರೆ ಎಂದು ನವರೊ ಟೀಕಿಸಿದ್ದಾರೆ.

ಉಕ್ರೇನ್‌ನಲ್ಲಿ ನಡೆಯುತ್ತಿರುವುದು ‘ಮೋದಿ ಯುದ್ಧ’: ಅಮೆರಿಕ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...