Homeಮುಖಪುಟನೌಕಾಪಡೆಯ ಬ್ರಹ್ಮೋಸ್ ಸೂಪರ್‌ಸಾನಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

ನೌಕಾಪಡೆಯ ಬ್ರಹ್ಮೋಸ್ ಸೂಪರ್‌ಸಾನಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

ಭಾರತ-ಚೀನಾ ಗಡಿಯಲ್ಲಿ ಚೀನಾದೊಂದಿಗೆ ನಡೆಯುತ್ತಿರುವ ಸಂಘರ್ಷದ ಮಧ್ಯೆ ಭಾರತ ಕಳೆದ ಎರಡು ತಿಂಗಳುಗಳಲ್ಲಿ ಶಸ್ತ್ರಾಸ್ತ್ರಗಳ ಸರಣಿ ಪರೀಕ್ಷೆ ನಡೆಸಿದೆ.

- Advertisement -
- Advertisement -

ಭಾರತೀಯ ನೌಕಾಪಡೆ ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಬ್ರಹ್ಮೋಸ್ ಸೂಪರ್‌ಸಾನಿಕ್‌ ಕ್ಷಿಪಣಿಯ ನೌಕಾ ಆವೃತ್ತಿಯನ್ನು ಭಾನುವಾರ ಅರಬ್ಬೀ ಸಮುದ್ರದಲ್ಲಿ ಯಶಸ್ವಿಯಾಗಿ ಪರೀಕ್ಷಿಸಲಾಯಿತು ಎಂದು ರಕ್ಷಣಾ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

“ಕ್ಷಿಪಣಿಯು ಉನ್ನತ ಮಟ್ಟದ ಮತ್ತು ಅತ್ಯಂತ ಸಂಕೀರ್ಣವಾದ ಕುಶಲ ತಂತ್ರಜ್ಞಾನ ಹೊಂದಿದೆ. ಬ್ರಹ್ಮೋಸ್‌ ನಿಖರವಾಗಿ ತಲುಪಲಿದೆ. ಭಾರತೀಯ ನೌಕಾಪಡೆಯಲ್ಲಿ ವಿಧ್ವಂಸಕ ಕೃತ್ಯವನ್ನು ತಡೆಯುವ ಮತ್ತೊಂದು ಅಸ್ತ್ರವಾಗಲಿದೆ” ಎಂದು ಸಚಿವಾಲಯ ಹೇಳಿದೆ.

ಅಂತ್ಯಂತ ಸಂಕೀರ್ಣವಾದ ಕುಶಲ ತಂತ್ರಜ್ಞಾನ ಹೊಂದಿರುವ, ಪಿನ್‌ – ಪಾಯಿಂಟ್‌ನಷ್ಟು ನಿಖರತೆಯೊಂದಿಗೆ ಗುರಿ ಸಾಧಿಸುವಂತಹ  ಈ ಕ್ಷಿಪಣಿಯನ್ನು ಐಎನ್‌ಎಸ್‌ ಚೆನ್ನೈನಿಂದ ಪರೀಕ್ಷಾರ್ಥವಾಗಿ ಹಾರಿಸಲಾಯಿತು.

290 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಇದಾಗಿದೆ. ಬ್ರಹ್ಮೋಸ್​ ಕ್ಷಿಪಣಿಯನ್ನ ಭಾರತ ಹಾಗೂ ರಷ್ಯಾ ಜಂಟಿಯಾಗಿ ವಿನ್ಯಾಸಗೊಳಿಸಿ, ಅಭಿವೃದ್ಧಿಪಡಿಸಿದೆ. ಇದು ಭೂ, ವಾಯು ಮತ್ತು ನೌಕಾ ರೂಪಾಂತರಗಳನ್ನು ಹೊಂದಿದೆ. ಕ್ಷಿಪಣಿಯು ಮ್ಯಾಕ್ 2.8 ನ ವೇಗವನ್ನು ಹೊಂದಿದ್ದು, ಇದು ಶಬ್ದದ ವೇಗಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ.

ಬ್ರಹ್ಮೋಸ್ ನೌಕಾ ಆವೃತ್ತಿ ಕ್ಷಿಪಣಿಯ ಪರೀಕ್ಷೆ ಯಶಸ್ವಿಗೊಳಿಸಿದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ), ಬ್ರಹ್ಮೋಸ್ ಏರೋಸ್ಪೇಸ್ ಮತ್ತು ಭಾರತೀಯ ನೌಕಪಡೆಯ ಸಿಬ್ಬಂದಿಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿನಂದಿಸಿದರು.

ಸೆಪ್ಟೆಂಬರ್ 30 ರಂದು ಒಡಿಶಾದ ಬಾಲಸೋರ್‌ನಲ್ಲಿ 400 ಕಿ.ಮೀ ದೂರದಲ್ಲಿರುವ ಗುರಿಗಳನ್ನು ತಲುಪಬಲ್ಲ ವಿಸ್ತೃತ ಶ್ರೇಣಿಯ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಭಾರತ ಪರೀಕ್ಷಿಸಿದ ಕೆಲವೇ ದಿನಗಳ ನಂತರ ಇಂದು ಮತ್ತೊಂದು ಪರೀಕ್ಷೆ ನಡೆಸಲಾಗಿದೆ.

ಸದ್ಯ ಲಡಾಖ್‌ನ ಭಾರತ-ಚೀನಾ ಗಡಿಯಲ್ಲಿ ಚೀನಾದೊಂದಿಗೆ ನಡೆಯುತ್ತಿರುವ ಸಂಘರ್ಷದ ಮಧ್ಯೆ ಭಾರತ ಕಳೆದ ಎರಡು ತಿಂಗಳುಗಳಲ್ಲಿ ಶಸ್ತ್ರಾಸ್ತ್ರಗಳ ಸರಣಿ ಪರೀಕ್ಷೆ ನಡೆಸಿದೆ.


ಇದನ್ನೂ ಓದಿ: ಹೈಪರ್‌ ಸಾನಿಕ್‌ ತಂತ್ರಜ್ಞಾನದ ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಯಶಸ್ವಿ ಉಡಾವಣೆ ಮಾಡಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...