Homeಕರ್ನಾಟಕಅಮಾಯಕ ಹಿಂದೂ ಹುಡುಗ ಶ್ರೇಯಸ್ ಸಾವಿಗೆ ಭಜರಂಗಿಗಳು ಕಾರಣರೇ? 

ಅಮಾಯಕ ಹಿಂದೂ ಹುಡುಗ ಶ್ರೇಯಸ್ ಸಾವಿಗೆ ಭಜರಂಗಿಗಳು ಕಾರಣರೇ? 

- Advertisement -
- Advertisement -

“ನನ್ನ ಮಗ ಯಾರ ತಂಟೆಗೂ ಹೋಗೋನಲ್ಲ… ಮನೆಯ ಜಗುಲಿ ಮೇಲೆ ತನ್ನ ಪಾಡಿಗೆ ತಾನು ಕುಳಿತಿದ್ದವನನ್ನು ಬಿಜೆಪಿಯ ಪಾತಕ ಸ್ವಭಾವದ ಇಬ್ಬರು ಪುಢಾರಿಗಳು ಪ್ಲಾನ್‌ಮಾಡಿ ಏಳು ಕಿ.ಮೀ ದೂರದ ದುರ್ಗಮ ಕಾಡಿನ ಹೊಳೆ ಹತ್ತಿರ ಕರೆದೊಯ್ದು ಕಗ್ಗೊಲೆ ಮಾಡಿದ್ದಾರೆ… ಅಲ್ಲಿಗೆ ಹೋಗಲು ಸರಿಯಾದ ದಾರಿಯೂ ಇಲ್ಲ…. ಏಳೆಂಟು ಅಡಿಯಷ್ಟು ಆಳ ನೀರು ಹರಿವ ಆ ಹೊಳೆಗೆ ಮೀನು ಹಿಡಿಯಲಿಕ್ಕೂ ಯಾರೂ ಹೋಗೋದಿಲ್ಲ…. ಅಂಥ ಕಡೆ ನನ್ನ ಮಗನ ಕರೆದೊಯ್ದು ಕೊಂದು ಹಾಕಿದ್ದಾರೆ…. ನನ್ನ ಮನೆ ದೀಪವೇ ಆರಿಹೋಗಿದೆ…” ಎಂದು ಆ ತಾಯಿ ಭೋರೆಂದು ಬಿಕ್ಕಳಿಸುವಾಗ ಎಂಥವರ ಕರುಳು ಚುರ್ ಅನ್ನದೇ ಇರದು!!

ಆಕೆ ಬ್ರಹ್ಮಾವರ ತಾಲ್ಲೂಕಿನ ಹೊಸೂರು ಗ್ರಾಮದ ಕುರ್ಪಾಡಿಯಲ್ಲಿ ಬೀಡಿ ಕಟ್ಟಿ ಬದುಕು ಸಾಗಿಸುವ ಶೋಭಾ ಶೇರ್ವೆಗಾರ್. ಗಂಡನಿಗೆ ಅನಾರೋಗ್ಯ, ಇರುವ ಚೂರುಪಾರು ಬಂಗಾರ ಗಿರವಿಯಿಟ್ಟು, ಕೂಲಿ ಮಾಡಿ ತನ್ನೆರಡು ಮಕ್ಕಳನ್ನು ಓದಿಸುತ್ತಿದ್ದ ಆಕೆ ಹಿರಿಯ ಮಗ ಶ್ರೇಯಸ್‌ನನ್ನು ಅನ್ಯಾಯವಾಗಿ ಕಳಕೊಂಡ ನೋವಿನಲ್ಲಿ ಜರ್ಜರಿತಳಾಗಿಹೋಗಿದ್ದಾಳೆ. ವಯಸ್ಸಿನಲ್ಲಿ ಶ್ರೇಯಸ್‌ಗಿಂತ ಎರಡು ಪಟ್ಟು ದೊಡ್ಡವನಾದ ಸದಾನಂದ ಪೂಜಾರಿ ಮತ್ತಾತನ ಶಿಷ್ಯ ಯೋಗೀಶ್ ಪೂಜಾರಿ ಎಂಬ ರೌಡಿಗಳೇ ಕೊಲೆ ಮಾಡಿದ್ದಾರೆಂದು ಆಕೆ ನೇರಾನೇರ ಹೇಳುತ್ತ ಬಾಯ್ಬಾಯಿ ಬಡಿದುಕೊಳ್ಳುತ್ತಿದ್ದಾಳೆ. ಈ ಇಬ್ಬರೂ ಪಕ್ಕಾ ಭಜರಂಗಿ ಭೂಪರು ಹಲವು ದೋನಂಬರ್ ದಂಧೆ-ದೊಂಬಿಯ ಈ ಧೀರರ ಬಗ್ಗೆ ಕರ್ಜೆ-ಕಳ್ತೂರು, ಹೊಸೂರು ಪರಿಸರದಲ್ಲಿ ಯಾರೊಬ್ಬರಲ್ಲೂ ಒಳ್ಳೆಯ ಅಭಿಪ್ರಾಯವಿಲ್ಲ.

ಸದಾನಂದ ಪೂಜಾರಿ

ಆ ತಾಯಿ ಆರೋಪಿಸುತ್ತಿರುವ ಸದಾನಂದ ಪೂಜಾರಿ ಯಾರು ಎಂದು ಹುಡುಕಿದರೆ ಗಾಬರಿಯಾಗುತ್ತದೆ. ಹುಡುಗಿಯರಂತೂ ಸದಾನಂದ ಪೂಜಾರಿಯ ನೆರಳು ಕಂಡರೇ ಸಾಕು, ದೂರದಲ್ಲೇ ಅದೃಶ್ಯರಾಗಿ ಬಿಡುತ್ತಾರೆ. ಇಂಥ ಸದಾನಂದ ಪೂಜಾರಿಯ ದಾದಾಗಿರಿ ಯಾವ ರೇಂಜಿಗಿದೆಯೆಂದರೆ, ಕೌಬ್ರಿಗೇಡ್, ಅನೈತಿಕ ಪೊಲೀಸ್ ಪಡೆಯೂ ಆತ ಖತರ್‌ನಾಕ್ ಅಂತಲೇ ಬ್ರಾಂಡ್ ಮಾಡಿಬಿಟ್ಟಿದೆ!! ಆದರೆ ಪೊಲೀಸರು ಮಾತ್ರ ಅದ್ಯಾಕೋ ಸುಮ್ಮನಿದ್ದಾರೆ. ಖಡಕ್ ಎಸ್ಪಿ ನಿಶಾ ಜೇಮ್ಸ್‌ಗೂ ಏನು ಮಾಡೋದಂತಲೇ ಹೊಳೆಯುತ್ತಿಲ್ಲ. ಉಡುಪಿ-ಬ್ರಹ್ಮಾವರದ ಶಾಸಕ ರಂಗೀಲಾ ರಘುಪತಿಭಟ್ಟನ ಅತ್ಯಾಪ್ತ ಸರ್ಕಲ್ಲಿನ ಧಾಂಡಿಗ ಈ ಸದಾನಂದ ಪೂಜಾರಿ ಎಂಬುದೇ ಪೊಲೀಸರ ಕೈಕಟ್ಟಿಹಾಕಿಬಿಟ್ಟಿದೆಯೆಂದು ಜನರಾಡಿಕೊಳ್ಳುತ್ತಿದ್ದಾರೆ…….

ಯೋಗೇಶ್

ಅಂದು ನವೆಂಬರ್ ಐದನೇ ತಾರೀಖು ಮಧ್ಯಾಹ್ನ 12;30ರ ಸುಮಾರಿಗೆ ಪಕ್ಕದ ಮನೆಯ ರಾಕೇಶ್ ಎಂಬ ಹುಡುಗ ಬಂದು ಮೀನು ಹಿಡಿಯಲು ಹೋಗೋಣ ಎಂದು ಶ್ರೇಯಸ್‌ನ ಕರೆದಿದ್ದಾರೆ. ಇಲ್ಲ ನಂಗೆ ಓದೋದಿದೆ ಎಂದು ಹೇಳಿದ್ದಾನೆ ಶ್ರೇಯಸ್. ಒತ್ತಾಯ ಮಾಡಿ ತನ್ನ ಬೈಕಲ್ಲಿ ರಾಕೇಶ್ ಆತನ ಕರೆದುಕೊಂಡು ಮುಡಿಸಾಲು ಹೊಳೆಬಳಿ ಹೋಗಿದ್ದಾನೆ. ಅಲ್ಲಿ ಸದಾನಂದ ಪೂಜಾರಿ ತನ್ನ ಚೇಲಾ ಯೋಗೀಶ್ ಜೊತೆ ತೋಟೆ (ಸ್ಫೋಟಕ) ಹಾಕಿ ಮೀನು ಹಿಡಿಯುತ್ತಿರುತ್ತಾನೆ. ಕೆಲದಿನಗಳ ಹಿಂದೆ ಸಂತೆಕಟ್ಟೆಯಲ್ಲಿ ನಡೆದ ಶಾರದೋತ್ಸವ ಮೆರವಣಿಗೆ ಸಂದರ್ಭದಲ್ಲಿ ಶ್ರೇಯಸ್ ಮತ್ತವನ ಗೆಳೆಯರ ಮೇಲೆ ವಿನಾಕಾರಣ ಮುಗಿಬಿದ್ದಿದ್ದ ಸದಾನಂದ ಪೂಜಾರಿ-ಯೋಗೀಶ್ ಪೂಜಾರಿ ಕಂಡಾಗ ಆತ ಗಾಬರಿಗೆ ಬಿದ್ದಿರಬೇಕು. ಯಾಕೆ ಉಪಾಯವಾಗಿ ರಾಕೇಶ್ ತನ್ನನ್ನು ವೈರಿಗಳ ಕೈಗೆ ಕೊಡುತ್ತಿದ್ದಾನೆಂಬ ಭಯಕ್ಕೂ ಬಿದ್ದಿರಲೇಬೇಕು.

ಹುಡುಗಿ ಒಬ್ಬಳ ವಿಷಯವಾಗಿ ಸದಾನಂದ ಪೂಜಾರಿ ಮತ್ತು ಶ್ರೇಯಸ್ ನಡುವೆ ವೈಮನಸ್ಸು ಬೆಳೆದಿತ್ತು. ಸುರಸುಂದರಾಂಗನೂ, ಪ್ರತಿಭಾನ್ವಿತ ವಿದ್ಯಾರ್ಥಿಯೂ, ಪ್ರಸಿದ್ಧ ವಾಲಿಬಾಲ್ ಪಟುವೂ ಆಗಿದ್ದ ಶ್ರೇಯಸ್‌ಗೆ ಬುಡಕಟ್ಟು ಸಮುದಾಯದ ಚೆಂದದ ಸಹಪಾಠಿ ಜತೆ ಅನ್ಯೋನ್ಯ ಗೆಳೆತನವಿತ್ತು. ಆ ಬಡವರ ಮನೆ ಹುಡುಗಿ ಮೇಲೆ ಸದಾನಂದ ಕಣ್ಣುಹಾಕಿದ್ದ. ಹೇಗಾದರೂ ಮಾಡಿ ಆಕೆಯನ್ನು ತನ್ನ ಅಡ್ಡೆಗೆ ತಂದುಬಿಡುವಂತೆ ಶ್ರೇಯಸ್‌ಗೆ  ಆತ ಒತ್ತಡ ಹಾಕುತ್ತಲೇ ಇದ್ದ. ಇದೇ ಕಾರಣಕ್ಕೆ ಶಾರದೋತ್ಸವ ಹೊತ್ತಲ್ಲಿ ಶ್ರೇಯಸ್‌ಗೆ ಹೆದರಿಸಲು ಸದಾನಂದ ಗ್ಯಾಂಗ್ ಕಟ್ಟಿಕೊಂಡುಹೋಗಿದ್ದ. ಶ್ರೇಯಸ್‌ನ ಪಳಗಿಸಲು ವಿಫಲವಾಗಿದ್ದ ಸದಾನಂದ ಆತನ ಮನ ಒಲಿಸಲಿಕ್ಕೋ ಅಥವಾ ಬೆದರಿಸಲಿಕ್ಕೋ ಭೀಭತ್ಸ ಹೊಳೆ ಹತ್ತಿರ ಕರೆಸಿಕೊಂಡಿದ್ದನಾ ಎಂಬ ಅನುಮಾನ ಊರಲ್ಲಿ ಮಡುಗಟ್ಟಿದೆ.

ಹೊಳೆಯಿಂದ ಹೊರತಂದ ಶ್ರೇಯಸ್‌ನ ಮೃತದೇಹ ಕಂಡವರಿಗೆ ಅದು ನೀರಿಗೆ ಬಿದ್ದು ಸಾವು ಅನ್ನಿಸುತ್ತಿಲ್ಲ. ಕೊಲೆ ಎಂಬ ಅನುಮಾನ ಮೂಡಲು ಇದಕ್ಕೆ ಬಲವಾದ ಸಾಂದರ್ಭಿಕ ಸಾಕ್ಷ್ಯಗಳೂ ಇವೆ. ತಾವು ನೀರಿಗೆ ಬಿದ್ದ ಶ್ರೇಯಸ್‌ನ ಬಚಾಯಿಸಲು ಪ್ರಯತ್ನ ಮಾಡಿದರೂ ಸಾಧ್ಯವಾಗಲಿಲ್ಲ ಎನ್ನುತ್ತಿರುವ ಸದಾನಂದ ಮತ್ತು ಯೋಗೀಶನ ಬಟ್ಟೆ ಒಂಚೂರು ಒದ್ದೆಯಾಗಿರಲಿಲ್ಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಶ್ರೇಯಸ್‌ನ ಕುತ್ತಿಗೆಯಲ್ಲಿ ಗಾಯದ ಗುರುತೂ ಇತ್ತು. ನಡುವಯಸ್ಸಿಗೆ ಹತ್ತಿರವಿರುವ ಸದಾನಂದನೊಂದಿಗೆ ಹತ್ತೊಂಬತ್ತರ ಪೋರ ಶ್ರೇಯಸ್‌ಗೆ ಮೀನು ಹಿಡಿಯಲು ಜತೆಯಾಗಿ ಹೋಗುವಂತ ದೋಸ್ತಿ ಇರಲು ಸಾಧ್ಯವೇ ಇಲ್ಲ. ಅಲ್ಲದೆ ಹುಡುಗಿ ವಿಷಯವಾಗಿ ಸದಾನಂದ ಸತಾಯಿಸಲು ಶುರುಮಾಡಿದ ನಂತರವಂತೂ ಶ್ರೇಯಸ್ ಆತನ ಫೋನ್ ಕಾಲ್ ಕೂಡ ಸ್ವೀಕರಿಸದೆ ಅವಾಯ್ಡ್ ಮಾಡುತ್ತಿದ್ದನಂತೆ ಎನ್ನುವ ಅವನ ಸ್ನೇಹಿತರು ಶ್ರೇಯಸ್‌ನ ಹೆಣ ಕಂಡ ಹತ್ತಿರದವರು ಆತ ನೀರೇ ಕುಡಿದಿಲ್ಲವೆಂದು ದೃಢವಾಗಿ ಹೇಳುತ್ತಾರೆ.

ಇದೆಲ್ಲ ಸಹಜವಾಗೇ ಕೊಲೆಯ ಶಂಕೆ ಮೂಡಿಸುತ್ತದೆ. ಹೆಣಸಿಕ್ಕ ನಂತರ ಬ್ರಹ್ಮಾವರದ ಪೊಲೀಸರ ವರ್ತನೆಯೂ ಏನೋ ಮುಚ್ಚಿಹಾಕಲು ತಿಣುಕಾಡುತ್ತಿರುವಂತಿದೆ. ಮಣಿಪಾಲದಲ್ಲಿ ಪೋಸ್ಟ್ಮಾರ್ಟಮ್ ನಡೆಯುತ್ತಿದ್ದಾಗ ಸಬ್‌ಇನ್ಸ್ಪೆಕ್ಟರ್ ರಾಘವೇಂದ್ರ ವೈದ್ಯರ ಬಳಿಯೇ ಇದ್ದದ್ದು ಏಕೆ? ಪ್ರಕರಣ ನಡೆದು ಎರಡು ವಾರವಾದರೂ ಪೊಲೀಸರೇಕೆ ಹುಡುಗನ ತಾಯ್ತಂದೆಯ ಹೇಳಿಕೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ? ಶಾಸಕ ರಘುಪತಿ ಭಟ್ಟರ ರಹಸ್ಯ ನಿರ್ದೇಶನ ಪೊಲೀಸರು ಪಾಲಿಸುತ್ತಿದ್ದಾರಾ? ಸದಾನಂದ ಪೂಜಾರಿಯ “ಇತಿಹಾಸ” ಗೊತ್ತಿದ್ದೂ ಪೊಲೀಸರೇಕೆ ಕಾನೂನಿನ ಕುಣಿಕೆ ಬಿಗಿಮಾಡುತ್ತಿಲ್ಲಾ? ಇಂಥ ಚರ್ಚೆ ಈಗ ಉಡುಪಿ-ಬ್ರಹ್ಮಾವರದಾದ್ಯಂತ ಬಿರುಸಾಗಿ ಸಾಗಿದೆ.

ಶ್ರೇಯಸ್‌ನ ಸಂಶಯಾಸ್ಪದ ಸಾವಿನ ಪ್ರಕರಣದಲ್ಲಿ ಸದಾನಂದ ಪೂಜಾರಿ “ಅಮಾಯಕ”ನೆಂದು ಹೇಳಲು ಸ್ಥಳೀಯರಿಗೆ ಕಾರಣಗಳೇ ಸಿಗುತ್ತಿಲ್ಲ. ಸದ್ಯಕ್ಕೆ ಅಕ್ರಮ ಮರಳು ದಂಧೆಯಲ್ಲಿ ಹೆಬ್ರಿ ಪೊಲೀಸ್ ಸ್ಟೇಷನ್‌ನಲ್ಲೇ ರೌಡಿ ಶೀಟರ್ ಎಂಬ ಕೀರ್ತಿಯೂ ಇದೆ. ತನಗೆ ಎಮ್ಮೆಲ್ಲೆ ಸಾಹೇಬರ ಬಲವಿರುವುದರಿಂದ ಏನು ಬೇಕಾದರೂ ಮಾಡಿ ದಕ್ಕಿಸಿಕೊಳ್ಳುತ್ತೇನೆಂಬ ಪೊಗರಿನ ಸದಾನಂದ ಕರ್ಜೆ ಪರಿಸರದಲ್ಲಿ ಬಾರಾಭಾನ್ಗಡಿ ಮಾಡುತ್ತಲೇ ಇದ್ದಾನೆ.  ಕೆಲವು ದಿನಗಳ ಹಿಂದೆ ಪಾಪದವರೊಬ್ಬರ ಮನೆಯ ಗೇಟು ಕಿತ್ತು ಎಲ್ಲೋ ಎಸೆದಿದ್ದ ಸದಾನಂದನ ಗ್ಯಾಂಗ್ ಮೇಲೆ ಕಂಪ್ಲೇಂಟೂ ಆಗಿದೆ. ಕಳೆದ ಡಿಸೆಂಬರ್‌ನಲ್ಲಿ ಕರ್ಜೆಯ ಮಹಾಲಿಂಗೇಶ್ವರ ದೇವಳದ ಆನುವಂಶಿಕ ಮೊಕ್ತೇಸರ ಮತ್ತು ಅರ್ಚಕನ ಬೆತ್ತಲೆ ಮಾಡಿ ಹಲ್ಲೆ ನಡೆಸಿದ ಪ್ರಕರಣ ಕೇಸೂ ಈ ಗ್ಯಾಂಗಿನ ಮೇಲಿದೆ. ದಿನಕ್ಕೊಂದು ಅನಾಹುತ-ಅವ್ಯವಹಾರ ಮಾಡುವ ಸದಾನಂದನ ತಂಡ ಮುಗ್ಧ ಶ್ರೇಯಸ್‌ನ ಸಾಯಿಸಿಲ್ಲವೆಂದು ಹೇಳೋದಾದರೂ ಎನ್ನುವುದು ಊರವರ ಅಭಿಪ್ರಾಯ.

ದುರ್ಬಲ-ಅಸಹಾಯಕ ಶ್ರೇಯಸ್ ಹೆತ್ತವರಿಗೆ ಎಸ್ಪಿ ನಿಶಾ ಮೇಡಮ್ ನ್ಯಾಯ ಕೊಡಿಸುವರಾ? ಒಂದು ವಾರದಲ್ಲಿ ಸರಿಯಾದ ತನಿಖೆ ನಡೆಯದಿದ್ದರೆ ಎಸ್ಪಿ ಕಚೇರಿ ಎದುರು ಧರಣಿ ಕುಳಿತುಕೊಳ್ಳುವುದಾಗಿ ಮಾಜಿ ಶಾಸಕ ಪ್ರಮೋದ್ ಮಧ್ವಾರಾಜ್ ಆವಾಜ್ ಹಾಕಿದ್ದಾರೆ. ಆಗಲೇ ಹತ್ತು ದಿನ ಕಳೆದಿದೆ. ಶ್ರೇಯಸ್ ತಾಯ್ತಂದೆ ಪ್ರಮೋದ್‌ರನ್ನು ನಂಬಿಕೊಂಡಿದ್ದಾರೆ. ಏಳು ಮೀನುಗಾರರ ಸುವರ್ಣ ತ್ರಿಭುಜ ನೋಟನ್ನು ಮುಳುಗಿಸಿದ ನೇವಿ ಹಡಗು ಐಎಸ್‌ಎಸ್ ಕೊಚ್ಚಿನ್ ಪ್ರಕರಣ ತಾರ್ಕಿಕ ಅಂತ್ಯಕ್ಕೆ ತಲುಪಿಸದ ಪ್ರಮೋದ್ ಮಧ್ವರಾಜ್ ಶ್ರೇಯಸ್ ಕೇಸ್ ಗಂಭೀರವಾಗಿ ಪರಿಗಣಿಸಿದ್ದಾರಾ? ಎಂಬ ಪ್ರಶ್ನೆ ಏಳುವುದು ಸಹಜವಾಗಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಿಷ್ಪಕ್ಷಪಾತವಾದ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಬೇಕು. ಆದರೆ ಕೇಂದ್ರ ಮತ್ತು ರಾಜ್ಯ; ಎರಡೂ ಕಡೆ ಮನುವಾದಿಗಳೇ ಅಧಿಕಾರದಲ್ಲಿ ಇರುವುದರಿಂದ ಇದು ಸಾಧ್ಯವಾ?

LEAVE A REPLY

Please enter your comment!
Please enter your name here

- Advertisment -

ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು

ಟೆಕ್ಸಾಸ್‌ನ ಆಸ್ಟಿನ್ ನಗರದ ಬಾರ್ ಒಂದರ ಹೊರಗಡೆ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಭಯೋತ್ಪಾದನಾ ಕೃತ್ಯವಾಗಿರಬಹುದು ಎಂಬ ಶಂಕೆಯ ಮೇಲೆ ತನಿಖೆ...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...