Homeಕರ್ನಾಟಕಅಮಾಯಕ ಹಿಂದೂ ಹುಡುಗ ಶ್ರೇಯಸ್ ಸಾವಿಗೆ ಭಜರಂಗಿಗಳು ಕಾರಣರೇ? 

ಅಮಾಯಕ ಹಿಂದೂ ಹುಡುಗ ಶ್ರೇಯಸ್ ಸಾವಿಗೆ ಭಜರಂಗಿಗಳು ಕಾರಣರೇ? 

- Advertisement -
- Advertisement -

“ನನ್ನ ಮಗ ಯಾರ ತಂಟೆಗೂ ಹೋಗೋನಲ್ಲ… ಮನೆಯ ಜಗುಲಿ ಮೇಲೆ ತನ್ನ ಪಾಡಿಗೆ ತಾನು ಕುಳಿತಿದ್ದವನನ್ನು ಬಿಜೆಪಿಯ ಪಾತಕ ಸ್ವಭಾವದ ಇಬ್ಬರು ಪುಢಾರಿಗಳು ಪ್ಲಾನ್‌ಮಾಡಿ ಏಳು ಕಿ.ಮೀ ದೂರದ ದುರ್ಗಮ ಕಾಡಿನ ಹೊಳೆ ಹತ್ತಿರ ಕರೆದೊಯ್ದು ಕಗ್ಗೊಲೆ ಮಾಡಿದ್ದಾರೆ… ಅಲ್ಲಿಗೆ ಹೋಗಲು ಸರಿಯಾದ ದಾರಿಯೂ ಇಲ್ಲ…. ಏಳೆಂಟು ಅಡಿಯಷ್ಟು ಆಳ ನೀರು ಹರಿವ ಆ ಹೊಳೆಗೆ ಮೀನು ಹಿಡಿಯಲಿಕ್ಕೂ ಯಾರೂ ಹೋಗೋದಿಲ್ಲ…. ಅಂಥ ಕಡೆ ನನ್ನ ಮಗನ ಕರೆದೊಯ್ದು ಕೊಂದು ಹಾಕಿದ್ದಾರೆ…. ನನ್ನ ಮನೆ ದೀಪವೇ ಆರಿಹೋಗಿದೆ…” ಎಂದು ಆ ತಾಯಿ ಭೋರೆಂದು ಬಿಕ್ಕಳಿಸುವಾಗ ಎಂಥವರ ಕರುಳು ಚುರ್ ಅನ್ನದೇ ಇರದು!!

ಆಕೆ ಬ್ರಹ್ಮಾವರ ತಾಲ್ಲೂಕಿನ ಹೊಸೂರು ಗ್ರಾಮದ ಕುರ್ಪಾಡಿಯಲ್ಲಿ ಬೀಡಿ ಕಟ್ಟಿ ಬದುಕು ಸಾಗಿಸುವ ಶೋಭಾ ಶೇರ್ವೆಗಾರ್. ಗಂಡನಿಗೆ ಅನಾರೋಗ್ಯ, ಇರುವ ಚೂರುಪಾರು ಬಂಗಾರ ಗಿರವಿಯಿಟ್ಟು, ಕೂಲಿ ಮಾಡಿ ತನ್ನೆರಡು ಮಕ್ಕಳನ್ನು ಓದಿಸುತ್ತಿದ್ದ ಆಕೆ ಹಿರಿಯ ಮಗ ಶ್ರೇಯಸ್‌ನನ್ನು ಅನ್ಯಾಯವಾಗಿ ಕಳಕೊಂಡ ನೋವಿನಲ್ಲಿ ಜರ್ಜರಿತಳಾಗಿಹೋಗಿದ್ದಾಳೆ. ವಯಸ್ಸಿನಲ್ಲಿ ಶ್ರೇಯಸ್‌ಗಿಂತ ಎರಡು ಪಟ್ಟು ದೊಡ್ಡವನಾದ ಸದಾನಂದ ಪೂಜಾರಿ ಮತ್ತಾತನ ಶಿಷ್ಯ ಯೋಗೀಶ್ ಪೂಜಾರಿ ಎಂಬ ರೌಡಿಗಳೇ ಕೊಲೆ ಮಾಡಿದ್ದಾರೆಂದು ಆಕೆ ನೇರಾನೇರ ಹೇಳುತ್ತ ಬಾಯ್ಬಾಯಿ ಬಡಿದುಕೊಳ್ಳುತ್ತಿದ್ದಾಳೆ. ಈ ಇಬ್ಬರೂ ಪಕ್ಕಾ ಭಜರಂಗಿ ಭೂಪರು ಹಲವು ದೋನಂಬರ್ ದಂಧೆ-ದೊಂಬಿಯ ಈ ಧೀರರ ಬಗ್ಗೆ ಕರ್ಜೆ-ಕಳ್ತೂರು, ಹೊಸೂರು ಪರಿಸರದಲ್ಲಿ ಯಾರೊಬ್ಬರಲ್ಲೂ ಒಳ್ಳೆಯ ಅಭಿಪ್ರಾಯವಿಲ್ಲ.

ಸದಾನಂದ ಪೂಜಾರಿ

ಆ ತಾಯಿ ಆರೋಪಿಸುತ್ತಿರುವ ಸದಾನಂದ ಪೂಜಾರಿ ಯಾರು ಎಂದು ಹುಡುಕಿದರೆ ಗಾಬರಿಯಾಗುತ್ತದೆ. ಹುಡುಗಿಯರಂತೂ ಸದಾನಂದ ಪೂಜಾರಿಯ ನೆರಳು ಕಂಡರೇ ಸಾಕು, ದೂರದಲ್ಲೇ ಅದೃಶ್ಯರಾಗಿ ಬಿಡುತ್ತಾರೆ. ಇಂಥ ಸದಾನಂದ ಪೂಜಾರಿಯ ದಾದಾಗಿರಿ ಯಾವ ರೇಂಜಿಗಿದೆಯೆಂದರೆ, ಕೌಬ್ರಿಗೇಡ್, ಅನೈತಿಕ ಪೊಲೀಸ್ ಪಡೆಯೂ ಆತ ಖತರ್‌ನಾಕ್ ಅಂತಲೇ ಬ್ರಾಂಡ್ ಮಾಡಿಬಿಟ್ಟಿದೆ!! ಆದರೆ ಪೊಲೀಸರು ಮಾತ್ರ ಅದ್ಯಾಕೋ ಸುಮ್ಮನಿದ್ದಾರೆ. ಖಡಕ್ ಎಸ್ಪಿ ನಿಶಾ ಜೇಮ್ಸ್‌ಗೂ ಏನು ಮಾಡೋದಂತಲೇ ಹೊಳೆಯುತ್ತಿಲ್ಲ. ಉಡುಪಿ-ಬ್ರಹ್ಮಾವರದ ಶಾಸಕ ರಂಗೀಲಾ ರಘುಪತಿಭಟ್ಟನ ಅತ್ಯಾಪ್ತ ಸರ್ಕಲ್ಲಿನ ಧಾಂಡಿಗ ಈ ಸದಾನಂದ ಪೂಜಾರಿ ಎಂಬುದೇ ಪೊಲೀಸರ ಕೈಕಟ್ಟಿಹಾಕಿಬಿಟ್ಟಿದೆಯೆಂದು ಜನರಾಡಿಕೊಳ್ಳುತ್ತಿದ್ದಾರೆ…….

ಯೋಗೇಶ್

ಅಂದು ನವೆಂಬರ್ ಐದನೇ ತಾರೀಖು ಮಧ್ಯಾಹ್ನ 12;30ರ ಸುಮಾರಿಗೆ ಪಕ್ಕದ ಮನೆಯ ರಾಕೇಶ್ ಎಂಬ ಹುಡುಗ ಬಂದು ಮೀನು ಹಿಡಿಯಲು ಹೋಗೋಣ ಎಂದು ಶ್ರೇಯಸ್‌ನ ಕರೆದಿದ್ದಾರೆ. ಇಲ್ಲ ನಂಗೆ ಓದೋದಿದೆ ಎಂದು ಹೇಳಿದ್ದಾನೆ ಶ್ರೇಯಸ್. ಒತ್ತಾಯ ಮಾಡಿ ತನ್ನ ಬೈಕಲ್ಲಿ ರಾಕೇಶ್ ಆತನ ಕರೆದುಕೊಂಡು ಮುಡಿಸಾಲು ಹೊಳೆಬಳಿ ಹೋಗಿದ್ದಾನೆ. ಅಲ್ಲಿ ಸದಾನಂದ ಪೂಜಾರಿ ತನ್ನ ಚೇಲಾ ಯೋಗೀಶ್ ಜೊತೆ ತೋಟೆ (ಸ್ಫೋಟಕ) ಹಾಕಿ ಮೀನು ಹಿಡಿಯುತ್ತಿರುತ್ತಾನೆ. ಕೆಲದಿನಗಳ ಹಿಂದೆ ಸಂತೆಕಟ್ಟೆಯಲ್ಲಿ ನಡೆದ ಶಾರದೋತ್ಸವ ಮೆರವಣಿಗೆ ಸಂದರ್ಭದಲ್ಲಿ ಶ್ರೇಯಸ್ ಮತ್ತವನ ಗೆಳೆಯರ ಮೇಲೆ ವಿನಾಕಾರಣ ಮುಗಿಬಿದ್ದಿದ್ದ ಸದಾನಂದ ಪೂಜಾರಿ-ಯೋಗೀಶ್ ಪೂಜಾರಿ ಕಂಡಾಗ ಆತ ಗಾಬರಿಗೆ ಬಿದ್ದಿರಬೇಕು. ಯಾಕೆ ಉಪಾಯವಾಗಿ ರಾಕೇಶ್ ತನ್ನನ್ನು ವೈರಿಗಳ ಕೈಗೆ ಕೊಡುತ್ತಿದ್ದಾನೆಂಬ ಭಯಕ್ಕೂ ಬಿದ್ದಿರಲೇಬೇಕು.

ಹುಡುಗಿ ಒಬ್ಬಳ ವಿಷಯವಾಗಿ ಸದಾನಂದ ಪೂಜಾರಿ ಮತ್ತು ಶ್ರೇಯಸ್ ನಡುವೆ ವೈಮನಸ್ಸು ಬೆಳೆದಿತ್ತು. ಸುರಸುಂದರಾಂಗನೂ, ಪ್ರತಿಭಾನ್ವಿತ ವಿದ್ಯಾರ್ಥಿಯೂ, ಪ್ರಸಿದ್ಧ ವಾಲಿಬಾಲ್ ಪಟುವೂ ಆಗಿದ್ದ ಶ್ರೇಯಸ್‌ಗೆ ಬುಡಕಟ್ಟು ಸಮುದಾಯದ ಚೆಂದದ ಸಹಪಾಠಿ ಜತೆ ಅನ್ಯೋನ್ಯ ಗೆಳೆತನವಿತ್ತು. ಆ ಬಡವರ ಮನೆ ಹುಡುಗಿ ಮೇಲೆ ಸದಾನಂದ ಕಣ್ಣುಹಾಕಿದ್ದ. ಹೇಗಾದರೂ ಮಾಡಿ ಆಕೆಯನ್ನು ತನ್ನ ಅಡ್ಡೆಗೆ ತಂದುಬಿಡುವಂತೆ ಶ್ರೇಯಸ್‌ಗೆ  ಆತ ಒತ್ತಡ ಹಾಕುತ್ತಲೇ ಇದ್ದ. ಇದೇ ಕಾರಣಕ್ಕೆ ಶಾರದೋತ್ಸವ ಹೊತ್ತಲ್ಲಿ ಶ್ರೇಯಸ್‌ಗೆ ಹೆದರಿಸಲು ಸದಾನಂದ ಗ್ಯಾಂಗ್ ಕಟ್ಟಿಕೊಂಡುಹೋಗಿದ್ದ. ಶ್ರೇಯಸ್‌ನ ಪಳಗಿಸಲು ವಿಫಲವಾಗಿದ್ದ ಸದಾನಂದ ಆತನ ಮನ ಒಲಿಸಲಿಕ್ಕೋ ಅಥವಾ ಬೆದರಿಸಲಿಕ್ಕೋ ಭೀಭತ್ಸ ಹೊಳೆ ಹತ್ತಿರ ಕರೆಸಿಕೊಂಡಿದ್ದನಾ ಎಂಬ ಅನುಮಾನ ಊರಲ್ಲಿ ಮಡುಗಟ್ಟಿದೆ.

ಹೊಳೆಯಿಂದ ಹೊರತಂದ ಶ್ರೇಯಸ್‌ನ ಮೃತದೇಹ ಕಂಡವರಿಗೆ ಅದು ನೀರಿಗೆ ಬಿದ್ದು ಸಾವು ಅನ್ನಿಸುತ್ತಿಲ್ಲ. ಕೊಲೆ ಎಂಬ ಅನುಮಾನ ಮೂಡಲು ಇದಕ್ಕೆ ಬಲವಾದ ಸಾಂದರ್ಭಿಕ ಸಾಕ್ಷ್ಯಗಳೂ ಇವೆ. ತಾವು ನೀರಿಗೆ ಬಿದ್ದ ಶ್ರೇಯಸ್‌ನ ಬಚಾಯಿಸಲು ಪ್ರಯತ್ನ ಮಾಡಿದರೂ ಸಾಧ್ಯವಾಗಲಿಲ್ಲ ಎನ್ನುತ್ತಿರುವ ಸದಾನಂದ ಮತ್ತು ಯೋಗೀಶನ ಬಟ್ಟೆ ಒಂಚೂರು ಒದ್ದೆಯಾಗಿರಲಿಲ್ಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಶ್ರೇಯಸ್‌ನ ಕುತ್ತಿಗೆಯಲ್ಲಿ ಗಾಯದ ಗುರುತೂ ಇತ್ತು. ನಡುವಯಸ್ಸಿಗೆ ಹತ್ತಿರವಿರುವ ಸದಾನಂದನೊಂದಿಗೆ ಹತ್ತೊಂಬತ್ತರ ಪೋರ ಶ್ರೇಯಸ್‌ಗೆ ಮೀನು ಹಿಡಿಯಲು ಜತೆಯಾಗಿ ಹೋಗುವಂತ ದೋಸ್ತಿ ಇರಲು ಸಾಧ್ಯವೇ ಇಲ್ಲ. ಅಲ್ಲದೆ ಹುಡುಗಿ ವಿಷಯವಾಗಿ ಸದಾನಂದ ಸತಾಯಿಸಲು ಶುರುಮಾಡಿದ ನಂತರವಂತೂ ಶ್ರೇಯಸ್ ಆತನ ಫೋನ್ ಕಾಲ್ ಕೂಡ ಸ್ವೀಕರಿಸದೆ ಅವಾಯ್ಡ್ ಮಾಡುತ್ತಿದ್ದನಂತೆ ಎನ್ನುವ ಅವನ ಸ್ನೇಹಿತರು ಶ್ರೇಯಸ್‌ನ ಹೆಣ ಕಂಡ ಹತ್ತಿರದವರು ಆತ ನೀರೇ ಕುಡಿದಿಲ್ಲವೆಂದು ದೃಢವಾಗಿ ಹೇಳುತ್ತಾರೆ.

ಇದೆಲ್ಲ ಸಹಜವಾಗೇ ಕೊಲೆಯ ಶಂಕೆ ಮೂಡಿಸುತ್ತದೆ. ಹೆಣಸಿಕ್ಕ ನಂತರ ಬ್ರಹ್ಮಾವರದ ಪೊಲೀಸರ ವರ್ತನೆಯೂ ಏನೋ ಮುಚ್ಚಿಹಾಕಲು ತಿಣುಕಾಡುತ್ತಿರುವಂತಿದೆ. ಮಣಿಪಾಲದಲ್ಲಿ ಪೋಸ್ಟ್ಮಾರ್ಟಮ್ ನಡೆಯುತ್ತಿದ್ದಾಗ ಸಬ್‌ಇನ್ಸ್ಪೆಕ್ಟರ್ ರಾಘವೇಂದ್ರ ವೈದ್ಯರ ಬಳಿಯೇ ಇದ್ದದ್ದು ಏಕೆ? ಪ್ರಕರಣ ನಡೆದು ಎರಡು ವಾರವಾದರೂ ಪೊಲೀಸರೇಕೆ ಹುಡುಗನ ತಾಯ್ತಂದೆಯ ಹೇಳಿಕೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ? ಶಾಸಕ ರಘುಪತಿ ಭಟ್ಟರ ರಹಸ್ಯ ನಿರ್ದೇಶನ ಪೊಲೀಸರು ಪಾಲಿಸುತ್ತಿದ್ದಾರಾ? ಸದಾನಂದ ಪೂಜಾರಿಯ “ಇತಿಹಾಸ” ಗೊತ್ತಿದ್ದೂ ಪೊಲೀಸರೇಕೆ ಕಾನೂನಿನ ಕುಣಿಕೆ ಬಿಗಿಮಾಡುತ್ತಿಲ್ಲಾ? ಇಂಥ ಚರ್ಚೆ ಈಗ ಉಡುಪಿ-ಬ್ರಹ್ಮಾವರದಾದ್ಯಂತ ಬಿರುಸಾಗಿ ಸಾಗಿದೆ.

ಶ್ರೇಯಸ್‌ನ ಸಂಶಯಾಸ್ಪದ ಸಾವಿನ ಪ್ರಕರಣದಲ್ಲಿ ಸದಾನಂದ ಪೂಜಾರಿ “ಅಮಾಯಕ”ನೆಂದು ಹೇಳಲು ಸ್ಥಳೀಯರಿಗೆ ಕಾರಣಗಳೇ ಸಿಗುತ್ತಿಲ್ಲ. ಸದ್ಯಕ್ಕೆ ಅಕ್ರಮ ಮರಳು ದಂಧೆಯಲ್ಲಿ ಹೆಬ್ರಿ ಪೊಲೀಸ್ ಸ್ಟೇಷನ್‌ನಲ್ಲೇ ರೌಡಿ ಶೀಟರ್ ಎಂಬ ಕೀರ್ತಿಯೂ ಇದೆ. ತನಗೆ ಎಮ್ಮೆಲ್ಲೆ ಸಾಹೇಬರ ಬಲವಿರುವುದರಿಂದ ಏನು ಬೇಕಾದರೂ ಮಾಡಿ ದಕ್ಕಿಸಿಕೊಳ್ಳುತ್ತೇನೆಂಬ ಪೊಗರಿನ ಸದಾನಂದ ಕರ್ಜೆ ಪರಿಸರದಲ್ಲಿ ಬಾರಾಭಾನ್ಗಡಿ ಮಾಡುತ್ತಲೇ ಇದ್ದಾನೆ.  ಕೆಲವು ದಿನಗಳ ಹಿಂದೆ ಪಾಪದವರೊಬ್ಬರ ಮನೆಯ ಗೇಟು ಕಿತ್ತು ಎಲ್ಲೋ ಎಸೆದಿದ್ದ ಸದಾನಂದನ ಗ್ಯಾಂಗ್ ಮೇಲೆ ಕಂಪ್ಲೇಂಟೂ ಆಗಿದೆ. ಕಳೆದ ಡಿಸೆಂಬರ್‌ನಲ್ಲಿ ಕರ್ಜೆಯ ಮಹಾಲಿಂಗೇಶ್ವರ ದೇವಳದ ಆನುವಂಶಿಕ ಮೊಕ್ತೇಸರ ಮತ್ತು ಅರ್ಚಕನ ಬೆತ್ತಲೆ ಮಾಡಿ ಹಲ್ಲೆ ನಡೆಸಿದ ಪ್ರಕರಣ ಕೇಸೂ ಈ ಗ್ಯಾಂಗಿನ ಮೇಲಿದೆ. ದಿನಕ್ಕೊಂದು ಅನಾಹುತ-ಅವ್ಯವಹಾರ ಮಾಡುವ ಸದಾನಂದನ ತಂಡ ಮುಗ್ಧ ಶ್ರೇಯಸ್‌ನ ಸಾಯಿಸಿಲ್ಲವೆಂದು ಹೇಳೋದಾದರೂ ಎನ್ನುವುದು ಊರವರ ಅಭಿಪ್ರಾಯ.

ದುರ್ಬಲ-ಅಸಹಾಯಕ ಶ್ರೇಯಸ್ ಹೆತ್ತವರಿಗೆ ಎಸ್ಪಿ ನಿಶಾ ಮೇಡಮ್ ನ್ಯಾಯ ಕೊಡಿಸುವರಾ? ಒಂದು ವಾರದಲ್ಲಿ ಸರಿಯಾದ ತನಿಖೆ ನಡೆಯದಿದ್ದರೆ ಎಸ್ಪಿ ಕಚೇರಿ ಎದುರು ಧರಣಿ ಕುಳಿತುಕೊಳ್ಳುವುದಾಗಿ ಮಾಜಿ ಶಾಸಕ ಪ್ರಮೋದ್ ಮಧ್ವಾರಾಜ್ ಆವಾಜ್ ಹಾಕಿದ್ದಾರೆ. ಆಗಲೇ ಹತ್ತು ದಿನ ಕಳೆದಿದೆ. ಶ್ರೇಯಸ್ ತಾಯ್ತಂದೆ ಪ್ರಮೋದ್‌ರನ್ನು ನಂಬಿಕೊಂಡಿದ್ದಾರೆ. ಏಳು ಮೀನುಗಾರರ ಸುವರ್ಣ ತ್ರಿಭುಜ ನೋಟನ್ನು ಮುಳುಗಿಸಿದ ನೇವಿ ಹಡಗು ಐಎಸ್‌ಎಸ್ ಕೊಚ್ಚಿನ್ ಪ್ರಕರಣ ತಾರ್ಕಿಕ ಅಂತ್ಯಕ್ಕೆ ತಲುಪಿಸದ ಪ್ರಮೋದ್ ಮಧ್ವರಾಜ್ ಶ್ರೇಯಸ್ ಕೇಸ್ ಗಂಭೀರವಾಗಿ ಪರಿಗಣಿಸಿದ್ದಾರಾ? ಎಂಬ ಪ್ರಶ್ನೆ ಏಳುವುದು ಸಹಜವಾಗಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಿಷ್ಪಕ್ಷಪಾತವಾದ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಬೇಕು. ಆದರೆ ಕೇಂದ್ರ ಮತ್ತು ರಾಜ್ಯ; ಎರಡೂ ಕಡೆ ಮನುವಾದಿಗಳೇ ಅಧಿಕಾರದಲ್ಲಿ ಇರುವುದರಿಂದ ಇದು ಸಾಧ್ಯವಾ?

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...