Homeಕರ್ನಾಟಕಅಮಾಯಕ ಹಿಂದೂ ಹುಡುಗ ಶ್ರೇಯಸ್ ಸಾವಿಗೆ ಭಜರಂಗಿಗಳು ಕಾರಣರೇ? 

ಅಮಾಯಕ ಹಿಂದೂ ಹುಡುಗ ಶ್ರೇಯಸ್ ಸಾವಿಗೆ ಭಜರಂಗಿಗಳು ಕಾರಣರೇ? 

- Advertisement -
- Advertisement -

“ನನ್ನ ಮಗ ಯಾರ ತಂಟೆಗೂ ಹೋಗೋನಲ್ಲ… ಮನೆಯ ಜಗುಲಿ ಮೇಲೆ ತನ್ನ ಪಾಡಿಗೆ ತಾನು ಕುಳಿತಿದ್ದವನನ್ನು ಬಿಜೆಪಿಯ ಪಾತಕ ಸ್ವಭಾವದ ಇಬ್ಬರು ಪುಢಾರಿಗಳು ಪ್ಲಾನ್‌ಮಾಡಿ ಏಳು ಕಿ.ಮೀ ದೂರದ ದುರ್ಗಮ ಕಾಡಿನ ಹೊಳೆ ಹತ್ತಿರ ಕರೆದೊಯ್ದು ಕಗ್ಗೊಲೆ ಮಾಡಿದ್ದಾರೆ… ಅಲ್ಲಿಗೆ ಹೋಗಲು ಸರಿಯಾದ ದಾರಿಯೂ ಇಲ್ಲ…. ಏಳೆಂಟು ಅಡಿಯಷ್ಟು ಆಳ ನೀರು ಹರಿವ ಆ ಹೊಳೆಗೆ ಮೀನು ಹಿಡಿಯಲಿಕ್ಕೂ ಯಾರೂ ಹೋಗೋದಿಲ್ಲ…. ಅಂಥ ಕಡೆ ನನ್ನ ಮಗನ ಕರೆದೊಯ್ದು ಕೊಂದು ಹಾಕಿದ್ದಾರೆ…. ನನ್ನ ಮನೆ ದೀಪವೇ ಆರಿಹೋಗಿದೆ…” ಎಂದು ಆ ತಾಯಿ ಭೋರೆಂದು ಬಿಕ್ಕಳಿಸುವಾಗ ಎಂಥವರ ಕರುಳು ಚುರ್ ಅನ್ನದೇ ಇರದು!!

ಆಕೆ ಬ್ರಹ್ಮಾವರ ತಾಲ್ಲೂಕಿನ ಹೊಸೂರು ಗ್ರಾಮದ ಕುರ್ಪಾಡಿಯಲ್ಲಿ ಬೀಡಿ ಕಟ್ಟಿ ಬದುಕು ಸಾಗಿಸುವ ಶೋಭಾ ಶೇರ್ವೆಗಾರ್. ಗಂಡನಿಗೆ ಅನಾರೋಗ್ಯ, ಇರುವ ಚೂರುಪಾರು ಬಂಗಾರ ಗಿರವಿಯಿಟ್ಟು, ಕೂಲಿ ಮಾಡಿ ತನ್ನೆರಡು ಮಕ್ಕಳನ್ನು ಓದಿಸುತ್ತಿದ್ದ ಆಕೆ ಹಿರಿಯ ಮಗ ಶ್ರೇಯಸ್‌ನನ್ನು ಅನ್ಯಾಯವಾಗಿ ಕಳಕೊಂಡ ನೋವಿನಲ್ಲಿ ಜರ್ಜರಿತಳಾಗಿಹೋಗಿದ್ದಾಳೆ. ವಯಸ್ಸಿನಲ್ಲಿ ಶ್ರೇಯಸ್‌ಗಿಂತ ಎರಡು ಪಟ್ಟು ದೊಡ್ಡವನಾದ ಸದಾನಂದ ಪೂಜಾರಿ ಮತ್ತಾತನ ಶಿಷ್ಯ ಯೋಗೀಶ್ ಪೂಜಾರಿ ಎಂಬ ರೌಡಿಗಳೇ ಕೊಲೆ ಮಾಡಿದ್ದಾರೆಂದು ಆಕೆ ನೇರಾನೇರ ಹೇಳುತ್ತ ಬಾಯ್ಬಾಯಿ ಬಡಿದುಕೊಳ್ಳುತ್ತಿದ್ದಾಳೆ. ಈ ಇಬ್ಬರೂ ಪಕ್ಕಾ ಭಜರಂಗಿ ಭೂಪರು ಹಲವು ದೋನಂಬರ್ ದಂಧೆ-ದೊಂಬಿಯ ಈ ಧೀರರ ಬಗ್ಗೆ ಕರ್ಜೆ-ಕಳ್ತೂರು, ಹೊಸೂರು ಪರಿಸರದಲ್ಲಿ ಯಾರೊಬ್ಬರಲ್ಲೂ ಒಳ್ಳೆಯ ಅಭಿಪ್ರಾಯವಿಲ್ಲ.

ಸದಾನಂದ ಪೂಜಾರಿ

ಆ ತಾಯಿ ಆರೋಪಿಸುತ್ತಿರುವ ಸದಾನಂದ ಪೂಜಾರಿ ಯಾರು ಎಂದು ಹುಡುಕಿದರೆ ಗಾಬರಿಯಾಗುತ್ತದೆ. ಹುಡುಗಿಯರಂತೂ ಸದಾನಂದ ಪೂಜಾರಿಯ ನೆರಳು ಕಂಡರೇ ಸಾಕು, ದೂರದಲ್ಲೇ ಅದೃಶ್ಯರಾಗಿ ಬಿಡುತ್ತಾರೆ. ಇಂಥ ಸದಾನಂದ ಪೂಜಾರಿಯ ದಾದಾಗಿರಿ ಯಾವ ರೇಂಜಿಗಿದೆಯೆಂದರೆ, ಕೌಬ್ರಿಗೇಡ್, ಅನೈತಿಕ ಪೊಲೀಸ್ ಪಡೆಯೂ ಆತ ಖತರ್‌ನಾಕ್ ಅಂತಲೇ ಬ್ರಾಂಡ್ ಮಾಡಿಬಿಟ್ಟಿದೆ!! ಆದರೆ ಪೊಲೀಸರು ಮಾತ್ರ ಅದ್ಯಾಕೋ ಸುಮ್ಮನಿದ್ದಾರೆ. ಖಡಕ್ ಎಸ್ಪಿ ನಿಶಾ ಜೇಮ್ಸ್‌ಗೂ ಏನು ಮಾಡೋದಂತಲೇ ಹೊಳೆಯುತ್ತಿಲ್ಲ. ಉಡುಪಿ-ಬ್ರಹ್ಮಾವರದ ಶಾಸಕ ರಂಗೀಲಾ ರಘುಪತಿಭಟ್ಟನ ಅತ್ಯಾಪ್ತ ಸರ್ಕಲ್ಲಿನ ಧಾಂಡಿಗ ಈ ಸದಾನಂದ ಪೂಜಾರಿ ಎಂಬುದೇ ಪೊಲೀಸರ ಕೈಕಟ್ಟಿಹಾಕಿಬಿಟ್ಟಿದೆಯೆಂದು ಜನರಾಡಿಕೊಳ್ಳುತ್ತಿದ್ದಾರೆ…….

ಯೋಗೇಶ್

ಅಂದು ನವೆಂಬರ್ ಐದನೇ ತಾರೀಖು ಮಧ್ಯಾಹ್ನ 12;30ರ ಸುಮಾರಿಗೆ ಪಕ್ಕದ ಮನೆಯ ರಾಕೇಶ್ ಎಂಬ ಹುಡುಗ ಬಂದು ಮೀನು ಹಿಡಿಯಲು ಹೋಗೋಣ ಎಂದು ಶ್ರೇಯಸ್‌ನ ಕರೆದಿದ್ದಾರೆ. ಇಲ್ಲ ನಂಗೆ ಓದೋದಿದೆ ಎಂದು ಹೇಳಿದ್ದಾನೆ ಶ್ರೇಯಸ್. ಒತ್ತಾಯ ಮಾಡಿ ತನ್ನ ಬೈಕಲ್ಲಿ ರಾಕೇಶ್ ಆತನ ಕರೆದುಕೊಂಡು ಮುಡಿಸಾಲು ಹೊಳೆಬಳಿ ಹೋಗಿದ್ದಾನೆ. ಅಲ್ಲಿ ಸದಾನಂದ ಪೂಜಾರಿ ತನ್ನ ಚೇಲಾ ಯೋಗೀಶ್ ಜೊತೆ ತೋಟೆ (ಸ್ಫೋಟಕ) ಹಾಕಿ ಮೀನು ಹಿಡಿಯುತ್ತಿರುತ್ತಾನೆ. ಕೆಲದಿನಗಳ ಹಿಂದೆ ಸಂತೆಕಟ್ಟೆಯಲ್ಲಿ ನಡೆದ ಶಾರದೋತ್ಸವ ಮೆರವಣಿಗೆ ಸಂದರ್ಭದಲ್ಲಿ ಶ್ರೇಯಸ್ ಮತ್ತವನ ಗೆಳೆಯರ ಮೇಲೆ ವಿನಾಕಾರಣ ಮುಗಿಬಿದ್ದಿದ್ದ ಸದಾನಂದ ಪೂಜಾರಿ-ಯೋಗೀಶ್ ಪೂಜಾರಿ ಕಂಡಾಗ ಆತ ಗಾಬರಿಗೆ ಬಿದ್ದಿರಬೇಕು. ಯಾಕೆ ಉಪಾಯವಾಗಿ ರಾಕೇಶ್ ತನ್ನನ್ನು ವೈರಿಗಳ ಕೈಗೆ ಕೊಡುತ್ತಿದ್ದಾನೆಂಬ ಭಯಕ್ಕೂ ಬಿದ್ದಿರಲೇಬೇಕು.

ಹುಡುಗಿ ಒಬ್ಬಳ ವಿಷಯವಾಗಿ ಸದಾನಂದ ಪೂಜಾರಿ ಮತ್ತು ಶ್ರೇಯಸ್ ನಡುವೆ ವೈಮನಸ್ಸು ಬೆಳೆದಿತ್ತು. ಸುರಸುಂದರಾಂಗನೂ, ಪ್ರತಿಭಾನ್ವಿತ ವಿದ್ಯಾರ್ಥಿಯೂ, ಪ್ರಸಿದ್ಧ ವಾಲಿಬಾಲ್ ಪಟುವೂ ಆಗಿದ್ದ ಶ್ರೇಯಸ್‌ಗೆ ಬುಡಕಟ್ಟು ಸಮುದಾಯದ ಚೆಂದದ ಸಹಪಾಠಿ ಜತೆ ಅನ್ಯೋನ್ಯ ಗೆಳೆತನವಿತ್ತು. ಆ ಬಡವರ ಮನೆ ಹುಡುಗಿ ಮೇಲೆ ಸದಾನಂದ ಕಣ್ಣುಹಾಕಿದ್ದ. ಹೇಗಾದರೂ ಮಾಡಿ ಆಕೆಯನ್ನು ತನ್ನ ಅಡ್ಡೆಗೆ ತಂದುಬಿಡುವಂತೆ ಶ್ರೇಯಸ್‌ಗೆ  ಆತ ಒತ್ತಡ ಹಾಕುತ್ತಲೇ ಇದ್ದ. ಇದೇ ಕಾರಣಕ್ಕೆ ಶಾರದೋತ್ಸವ ಹೊತ್ತಲ್ಲಿ ಶ್ರೇಯಸ್‌ಗೆ ಹೆದರಿಸಲು ಸದಾನಂದ ಗ್ಯಾಂಗ್ ಕಟ್ಟಿಕೊಂಡುಹೋಗಿದ್ದ. ಶ್ರೇಯಸ್‌ನ ಪಳಗಿಸಲು ವಿಫಲವಾಗಿದ್ದ ಸದಾನಂದ ಆತನ ಮನ ಒಲಿಸಲಿಕ್ಕೋ ಅಥವಾ ಬೆದರಿಸಲಿಕ್ಕೋ ಭೀಭತ್ಸ ಹೊಳೆ ಹತ್ತಿರ ಕರೆಸಿಕೊಂಡಿದ್ದನಾ ಎಂಬ ಅನುಮಾನ ಊರಲ್ಲಿ ಮಡುಗಟ್ಟಿದೆ.

ಹೊಳೆಯಿಂದ ಹೊರತಂದ ಶ್ರೇಯಸ್‌ನ ಮೃತದೇಹ ಕಂಡವರಿಗೆ ಅದು ನೀರಿಗೆ ಬಿದ್ದು ಸಾವು ಅನ್ನಿಸುತ್ತಿಲ್ಲ. ಕೊಲೆ ಎಂಬ ಅನುಮಾನ ಮೂಡಲು ಇದಕ್ಕೆ ಬಲವಾದ ಸಾಂದರ್ಭಿಕ ಸಾಕ್ಷ್ಯಗಳೂ ಇವೆ. ತಾವು ನೀರಿಗೆ ಬಿದ್ದ ಶ್ರೇಯಸ್‌ನ ಬಚಾಯಿಸಲು ಪ್ರಯತ್ನ ಮಾಡಿದರೂ ಸಾಧ್ಯವಾಗಲಿಲ್ಲ ಎನ್ನುತ್ತಿರುವ ಸದಾನಂದ ಮತ್ತು ಯೋಗೀಶನ ಬಟ್ಟೆ ಒಂಚೂರು ಒದ್ದೆಯಾಗಿರಲಿಲ್ಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಶ್ರೇಯಸ್‌ನ ಕುತ್ತಿಗೆಯಲ್ಲಿ ಗಾಯದ ಗುರುತೂ ಇತ್ತು. ನಡುವಯಸ್ಸಿಗೆ ಹತ್ತಿರವಿರುವ ಸದಾನಂದನೊಂದಿಗೆ ಹತ್ತೊಂಬತ್ತರ ಪೋರ ಶ್ರೇಯಸ್‌ಗೆ ಮೀನು ಹಿಡಿಯಲು ಜತೆಯಾಗಿ ಹೋಗುವಂತ ದೋಸ್ತಿ ಇರಲು ಸಾಧ್ಯವೇ ಇಲ್ಲ. ಅಲ್ಲದೆ ಹುಡುಗಿ ವಿಷಯವಾಗಿ ಸದಾನಂದ ಸತಾಯಿಸಲು ಶುರುಮಾಡಿದ ನಂತರವಂತೂ ಶ್ರೇಯಸ್ ಆತನ ಫೋನ್ ಕಾಲ್ ಕೂಡ ಸ್ವೀಕರಿಸದೆ ಅವಾಯ್ಡ್ ಮಾಡುತ್ತಿದ್ದನಂತೆ ಎನ್ನುವ ಅವನ ಸ್ನೇಹಿತರು ಶ್ರೇಯಸ್‌ನ ಹೆಣ ಕಂಡ ಹತ್ತಿರದವರು ಆತ ನೀರೇ ಕುಡಿದಿಲ್ಲವೆಂದು ದೃಢವಾಗಿ ಹೇಳುತ್ತಾರೆ.

ಇದೆಲ್ಲ ಸಹಜವಾಗೇ ಕೊಲೆಯ ಶಂಕೆ ಮೂಡಿಸುತ್ತದೆ. ಹೆಣಸಿಕ್ಕ ನಂತರ ಬ್ರಹ್ಮಾವರದ ಪೊಲೀಸರ ವರ್ತನೆಯೂ ಏನೋ ಮುಚ್ಚಿಹಾಕಲು ತಿಣುಕಾಡುತ್ತಿರುವಂತಿದೆ. ಮಣಿಪಾಲದಲ್ಲಿ ಪೋಸ್ಟ್ಮಾರ್ಟಮ್ ನಡೆಯುತ್ತಿದ್ದಾಗ ಸಬ್‌ಇನ್ಸ್ಪೆಕ್ಟರ್ ರಾಘವೇಂದ್ರ ವೈದ್ಯರ ಬಳಿಯೇ ಇದ್ದದ್ದು ಏಕೆ? ಪ್ರಕರಣ ನಡೆದು ಎರಡು ವಾರವಾದರೂ ಪೊಲೀಸರೇಕೆ ಹುಡುಗನ ತಾಯ್ತಂದೆಯ ಹೇಳಿಕೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ? ಶಾಸಕ ರಘುಪತಿ ಭಟ್ಟರ ರಹಸ್ಯ ನಿರ್ದೇಶನ ಪೊಲೀಸರು ಪಾಲಿಸುತ್ತಿದ್ದಾರಾ? ಸದಾನಂದ ಪೂಜಾರಿಯ “ಇತಿಹಾಸ” ಗೊತ್ತಿದ್ದೂ ಪೊಲೀಸರೇಕೆ ಕಾನೂನಿನ ಕುಣಿಕೆ ಬಿಗಿಮಾಡುತ್ತಿಲ್ಲಾ? ಇಂಥ ಚರ್ಚೆ ಈಗ ಉಡುಪಿ-ಬ್ರಹ್ಮಾವರದಾದ್ಯಂತ ಬಿರುಸಾಗಿ ಸಾಗಿದೆ.

ಶ್ರೇಯಸ್‌ನ ಸಂಶಯಾಸ್ಪದ ಸಾವಿನ ಪ್ರಕರಣದಲ್ಲಿ ಸದಾನಂದ ಪೂಜಾರಿ “ಅಮಾಯಕ”ನೆಂದು ಹೇಳಲು ಸ್ಥಳೀಯರಿಗೆ ಕಾರಣಗಳೇ ಸಿಗುತ್ತಿಲ್ಲ. ಸದ್ಯಕ್ಕೆ ಅಕ್ರಮ ಮರಳು ದಂಧೆಯಲ್ಲಿ ಹೆಬ್ರಿ ಪೊಲೀಸ್ ಸ್ಟೇಷನ್‌ನಲ್ಲೇ ರೌಡಿ ಶೀಟರ್ ಎಂಬ ಕೀರ್ತಿಯೂ ಇದೆ. ತನಗೆ ಎಮ್ಮೆಲ್ಲೆ ಸಾಹೇಬರ ಬಲವಿರುವುದರಿಂದ ಏನು ಬೇಕಾದರೂ ಮಾಡಿ ದಕ್ಕಿಸಿಕೊಳ್ಳುತ್ತೇನೆಂಬ ಪೊಗರಿನ ಸದಾನಂದ ಕರ್ಜೆ ಪರಿಸರದಲ್ಲಿ ಬಾರಾಭಾನ್ಗಡಿ ಮಾಡುತ್ತಲೇ ಇದ್ದಾನೆ.  ಕೆಲವು ದಿನಗಳ ಹಿಂದೆ ಪಾಪದವರೊಬ್ಬರ ಮನೆಯ ಗೇಟು ಕಿತ್ತು ಎಲ್ಲೋ ಎಸೆದಿದ್ದ ಸದಾನಂದನ ಗ್ಯಾಂಗ್ ಮೇಲೆ ಕಂಪ್ಲೇಂಟೂ ಆಗಿದೆ. ಕಳೆದ ಡಿಸೆಂಬರ್‌ನಲ್ಲಿ ಕರ್ಜೆಯ ಮಹಾಲಿಂಗೇಶ್ವರ ದೇವಳದ ಆನುವಂಶಿಕ ಮೊಕ್ತೇಸರ ಮತ್ತು ಅರ್ಚಕನ ಬೆತ್ತಲೆ ಮಾಡಿ ಹಲ್ಲೆ ನಡೆಸಿದ ಪ್ರಕರಣ ಕೇಸೂ ಈ ಗ್ಯಾಂಗಿನ ಮೇಲಿದೆ. ದಿನಕ್ಕೊಂದು ಅನಾಹುತ-ಅವ್ಯವಹಾರ ಮಾಡುವ ಸದಾನಂದನ ತಂಡ ಮುಗ್ಧ ಶ್ರೇಯಸ್‌ನ ಸಾಯಿಸಿಲ್ಲವೆಂದು ಹೇಳೋದಾದರೂ ಎನ್ನುವುದು ಊರವರ ಅಭಿಪ್ರಾಯ.

ದುರ್ಬಲ-ಅಸಹಾಯಕ ಶ್ರೇಯಸ್ ಹೆತ್ತವರಿಗೆ ಎಸ್ಪಿ ನಿಶಾ ಮೇಡಮ್ ನ್ಯಾಯ ಕೊಡಿಸುವರಾ? ಒಂದು ವಾರದಲ್ಲಿ ಸರಿಯಾದ ತನಿಖೆ ನಡೆಯದಿದ್ದರೆ ಎಸ್ಪಿ ಕಚೇರಿ ಎದುರು ಧರಣಿ ಕುಳಿತುಕೊಳ್ಳುವುದಾಗಿ ಮಾಜಿ ಶಾಸಕ ಪ್ರಮೋದ್ ಮಧ್ವಾರಾಜ್ ಆವಾಜ್ ಹಾಕಿದ್ದಾರೆ. ಆಗಲೇ ಹತ್ತು ದಿನ ಕಳೆದಿದೆ. ಶ್ರೇಯಸ್ ತಾಯ್ತಂದೆ ಪ್ರಮೋದ್‌ರನ್ನು ನಂಬಿಕೊಂಡಿದ್ದಾರೆ. ಏಳು ಮೀನುಗಾರರ ಸುವರ್ಣ ತ್ರಿಭುಜ ನೋಟನ್ನು ಮುಳುಗಿಸಿದ ನೇವಿ ಹಡಗು ಐಎಸ್‌ಎಸ್ ಕೊಚ್ಚಿನ್ ಪ್ರಕರಣ ತಾರ್ಕಿಕ ಅಂತ್ಯಕ್ಕೆ ತಲುಪಿಸದ ಪ್ರಮೋದ್ ಮಧ್ವರಾಜ್ ಶ್ರೇಯಸ್ ಕೇಸ್ ಗಂಭೀರವಾಗಿ ಪರಿಗಣಿಸಿದ್ದಾರಾ? ಎಂಬ ಪ್ರಶ್ನೆ ಏಳುವುದು ಸಹಜವಾಗಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಿಷ್ಪಕ್ಷಪಾತವಾದ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಬೇಕು. ಆದರೆ ಕೇಂದ್ರ ಮತ್ತು ರಾಜ್ಯ; ಎರಡೂ ಕಡೆ ಮನುವಾದಿಗಳೇ ಅಧಿಕಾರದಲ್ಲಿ ಇರುವುದರಿಂದ ಇದು ಸಾಧ್ಯವಾ?

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...