Homeಮುಖಪುಟವಿಚಾರಣಾಧೀನ ಖೈದಿಯ ಬೆನ್ನಿಗೆ ಓಂ ಎಂದು ಕೆತ್ತಿಸಿದ ಅಧಿಕಾರಿಗಳು: ತನಿಖೆಗೆ ಕೋರ್ಟ್ ಆದೇಶ

ವಿಚಾರಣಾಧೀನ ಖೈದಿಯ ಬೆನ್ನಿಗೆ ಓಂ ಎಂದು ಕೆತ್ತಿಸಿದ ಅಧಿಕಾರಿಗಳು: ತನಿಖೆಗೆ ಕೋರ್ಟ್ ಆದೇಶ

- Advertisement -
- Advertisement -

ದೆಹಲಿಯ ತಿಹಾರ್ ಜೈಲಿನಲ್ಲಿ ಶಬ್ಬೀರ್ ಎನ್ನುವ ವಿಚಾರಣಾಧೀನ ಖೈದಿಗೆ ಚಿತ್ರಹಿಂಸೆ ನೀಡಿರುವ ಜೈಲಿನ ಅಧಿಕಾರಿಗಳು, ಬೆನ್ನಿಗೆ ಓಂ ಎಂದು ಕೆತ್ತಿಸುವ ಮೂಲಕ ಮಾನವ ಹಕ್ಕು ಉಲ್ಲಂಘನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ದೆಹಲಿಯ ಸಲೀಮ್‍ಪುರ್ ನಿವಾಸಿಯಾದ ಶಬ್ಬೀರ್ ಆಲಯಾಸ್ ನಬ್ಬೀರ್ ಎನ್ನುವ 34 ವರ್ಷದ ಕ್ರಿಮಿನಲ್ ಪ್ರಕರಣದ ಆರೋಪಿಯಾಗಿ 2016ರ ಮಾರ್ಚ್‍ನಲ್ಲಿ ತಿಹಾರ್ ಜೈಲು ಸೇರಿದ್ದರು. ನಂತರ ತಾನಿದ್ದ ಜೈಲ್ ನಂಬರ್ 4ರಲ್ಲಿ ಇಂಡಕ್ಷನ್ ಸ್ಟೋವ್ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಜೈಲ್ ಸೂಪರಿಡೆಂಟ್‍ಗೆ ದೂರಿ ನೀಡಿದ್ದ.

ಇದರಿಂದ ಕುಪಿತಗೊಂಡು ಜೈಲು ಸೂಪರಿಡೆಂಟ್ ಶಬ್ಬೀರ್‍ನನ್ನು ತನ್ನ ಕಚೇರಿಗೆ ಕರೆಸಿಕೊಂಡು ಚೆನ್ನಾಗಿ ಥಳಿಸಲಾಗಿದೆ, ಕ್ರೂರವಾಗಿ ಆತನ ಬೆನ್ನಿನ ಮೇಲೆ ಓಂ ಎಂದು ಬರೆಸಿ ಹಿಂಸೆ ನೀಡಿದ್ದಲ್ಲದೇ ಊಟ ಕೊಡದೇ ಎರಡು ದಿನ ಉಪವಾಸ ಕೆಡವಿದ್ದರೆಂದು ಶಬ್ಬೀರ್ ಆರೋಪಿಸಿದ್ದಾರೆ. ಶಬ್ಬೀರ್ ಕುಟುಂಬ ಇದನ್ನರಿತು ಆತನ ತಾಯಿ ‘ನನ್ನ ಮಗನ ಜೀವಕ್ಕೆ ಜೈಲಿನಲ್ಲಿ ಅಪಾಯವಿದೆ’ ಎಂದು ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯ ವಿಚಾರಣೆ ನಡೆಸಿದ ದೆಹಲಿಯ ಕಾರ್ಕಾರ್‍ಡೂಮದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಈ ವಿಚಾರವಾಗಿ ತನಿಖೆಗೆ ಆದೇಶಿಸಿದ್ದು, ಬೆನ್ನಿನ ಮೇಲಿನ ಗುರುತು ಪತ್ತೆ ಹಚ್ಚಲು ವೈದ್ಯಕೀಯ ಪರೀಕ್ಷೆ ನಡೆಸುವಂತೆ ಸೂಚಿಸಿದೆ. ಜೊತೆಗೆ ಜೈಲಿನ ಸಿಸಿಟಿವಿ ಫೂಟೆಜ್, ಜೈಲಿನ ಸಹ ಖೈದಿಗಳ ಹೇಳಿಕೆಗಳನ್ನು ಪಡೆದು ಸಲ್ಲಿಸುವಂತೆ ಸೂಚಿಸಿದ್ದಲ್ಲದೇ, ಜೈಲು ಅಧಿಕಾರಿಗಳಿಗೆ ಜೈಲಿನಲ್ಲಿ ಸಮರ್ಪಕ ಭದ್ರತೆ ಮತ್ತು ಸುರಕ್ಷತೆಯ ವಾತವಾರಣ ಇರುವಂತೆ ನೋಡಿಕೊಳ್ಳಬೇಕೆಂದು ಖಡಕ್ ಎಚ್ಚರಿಕೆ ನೀಡಿದೆ.

ಜೈಲು ಅಧಿಕಾರಿಗಳು ‘ಶಬ್ಬೀರ್ ಒಬ್ಬ ಇರ್ಫಾನ್ ಖಾನ್ ಗ್ಯಾಂಗಿನ ಸದಸ್ಯ. ಕ್ರಿಮಿನಲ್ ಆರೋಪದ ಮೇಲೆ ಆಮ್ರ್ಸ್ ಆಕ್ಟ್, ಮೊಕ್ಕಾ ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿ ಇಡಲಾಗಿಗೆ ಎಂದು ತಿಳಿಸಿದ್ದಾರೆ. ಎಂತಹ ಖೈದಿಯೇ ಆದರೂ ಈ ರೀತಿ ಚಿತ್ರಹಿಂಸೆ ನೀಡುವುದು, ಧಾರ್ಮಿಕ ಚಿತ್ರಗಳನ್ನು ಕೊರೆಸುವುದು ಕಾನೂನಿಗೆ ವಿರುದ್ಧವಾದುದು ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಬಹುತೇಕರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...