Homeಕರೋನಾ ತಲ್ಲಣಬೀದಿಗೆ ಬಿದ್ದ ಲೋಹದ ಮೇಲೆ ಚಿತ್ತಾರ ಮೂಡಿಸುವ ಒನಿಪೆಂಟಾದ ಕಲಾವಿದರ ಬದುಕು

ಬೀದಿಗೆ ಬಿದ್ದ ಲೋಹದ ಮೇಲೆ ಚಿತ್ತಾರ ಮೂಡಿಸುವ ಒನಿಪೆಂಟಾದ ಕಲಾವಿದರ ಬದುಕು

- Advertisement -
- Advertisement -

ಒನಿಪೆಂಟಾ ಆಂಧ್ರಪ್ರದೇಶದ ಒಂದು ಚಿಕ್ಕ ಹಳ್ಳಿ. ಹಿತ್ತಾಳೆ, ಕಂಚಿನ ಮೇಲೆ ಕುಸುರಿ ಕಲೆಗಾಗಿ ಜಗತ್‌ಪ್ರಸಿದ್ದವಾಗಿದ್ದ ಊರು. ದೇಶದ ಮೂಲೆ ಮೂಲೆಯಿಂದ, ಜಗತ್ತಿನ ನಾನಾ ದೇಶಗಳಿಂದ ಬರುವ ಪ್ರವಾಸಿಗಳಿಂದ ಒನಿಪೆಂಟಾ ಹಳ್ಳಿ ಒಂದು ಕಾಲದಲ್ಲಿ ತುಂಬಿರುತ್ತಿತ್ತು. ಬೇರೆ ಬೇರೆ ಭಾಷೆಯ ಜನರ ಮಾತಿನ ಕಲರವ ಕೇಳುತ್ತಿತ್ತು.  ಚೌಕಾಸಿಯ ವ್ಯಾಪಾರಗಳು ನಡೆಯುತ್ತಿತ್ತು. ಇಂದು ಒನಿಪೆಂಟಾದಲ್ಲಿ ಹೇಳಲಿಕ್ಕೆ ಏನೂ ಇಲ್ಲ. ಪ್ರವಾಸಿಗಳಿಲ್ಲ. ಕಲಾವಿದರೂ ಊರು ಬಿಡುವ ಹಂತಕ್ಕೆ ತಲುಪಿದ್ದಾರೆ. ಕೊರೋನಾ ಸಾಂಕ್ರಾಮಿಕದ ಆರ್ಥಿಕ ಹೊಡೆತಕ್ಕೆ ದೇಶದಲ್ಲಿ ನೂರಾರು ಕಸುಬುಗಳು ನಾಶವಾಗಿವೆ. ಅದರೆ ನಡುವೆ ಒನಿಪೆಂಟಾದ ಹಿತ್ತಾಳೆಯ ಕಲಾವಿದರ ಬದುಕು ಇನ್ನಷ್ಟು ದುಸ್ತರವಾಗಿದೆ.

ಕಳೆದ 15 ತಿಂಗಳುಗಳಿಂದ ಹಿತ್ತಾಳೆಯ ಕಲೆಯನ್ನೇ ನಂಬಿ, ಲೋಹದಲ್ಲಿ ಜೀವ ಹಿಡಿದು ಬದುಕುತ್ತಿದ್ದ ಒನಿಪೆಂಟಾ ಕಲಾವಿದರು ಕೆಲಸವಿಲ್ಲದೇ ನಿರುದ್ಯೋಗಿಗಳಾಗಿದ್ದಾರೆ. ದೇವಸ್ಥಾನಗಳು, ಶಾಲೆ – ಕಾಲೇಜುಗಳು, ಮಾರುಕಟ್ಟೆಗಳು ಕೊರೋನಾ ಕಾರಣಕ್ಕೆ ಬಂದ್‌ ಆಗಿರುವುದರಿಂದ ಹಿತ್ತಾಳೆ ಕಂಚುಗಳ ಮೇಲೆ ಚಿತ್ತಾರ ಮೂಡಿಸುತ್ತಿದ್ದ ಕಲಾವಿದರು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ.

ನೂರಕ್ಕು ಹೆಚ್ಚು ಕಲಾವಿದರು ಲೋಹದ ಕುಸುರಿ ಕಲೆಗಾರಿಕೆಯಲ್ಲಿಯೇ ತೊಡಗಿಕೊಂಡಿದ್ದಾರೆ. ಹಿತ್ತಾಳೆಯ ಕಲಾಕೃತಿಗಳ ತಯಾರಿಕೆಯಲ್ಲಿಯೇ ಜೀವನ ಆಧರಿಸಿದ್ದಾರೆ. ಅವರಿಗೆ ಸದ್ಯದಲ್ಲಿ ಯಾವ ಆದಾಯವೂ ಇಲ್ಲವಾಗಿದೆ ಎಂದು ಒನಪೆಂಟಾ ಲೋಹ ಕಲಾವಿದರ ಸಹಕಾರಿ ಸಂಘದ ಅಧ್ಯಕ್ಷ ಎಫ್.ಎಮ್‌ ಇಸ್ಮಾಯಿಲ್‌ ತಿಳಿಸಿದ್ದಾರೆ.

ಕೊರೋನಾ ಸಾಂಕ್ರಾಮಿಕ ಆರಂಭವಾದಾಗಿನಿಂದ ವ್ಯಾಪರ ನೆಲ ಕಚ್ಚಿದೆ. ಬೇರೆ ಬೇರೆ ಊರುಗಳಿಂದ ವ್ಯಾಪಾರಿಗಳು ಬರುತ್ತಿಲ್ಲ. ಸರ್ಕಾರ ಸಾಂಪ್ರದಾಯಿಕ ಕಲೆಯಲ್ಲಿ ತೊಡಗಿರುವ ಕಲಾವಿದರ ಸಹಾಯಕ್ಕೆ ನಿಲ್ಲಬೇಕಿದೆ. ಒಂದಷ್ಟು ಪರಿಹಾರದ ರೀತಿಯಲ್ಲಿ ಸಹಾಯವನ್ನು, ಸಬ್ಸಿಡಿಯನ್ನು ನೀಡಬೇಕು ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ : ರಾಜ್ಯಕ್ಕೆ ಹೆಚ್ಚಿನ ಲಸಿಕೆ ನೀಡುವಂತೆ ಆಗ್ರಹಿಸಿ ಪ್ರಧಾನಿ ಭೇಟಿಗೆ ಸಜ್ಜಾದ ತಮಿಳುನಾಡು ಸಿಎಂ ಸ್ಟಾಲಿನ್

ಕಳೆದ ಅನೇಕ ಶತಮಾನಗಳಿಂದ ತಲೆ ಮಾರುಗಳಿಂದ ತಲೆ ಮಾರುಗಳಿಗೆ ಈ ಕಂಚಿನ, ಹಿತ್ತಾಳೆಯ ಮೇಲೆ ಚಿತ್ತಾರ ಮೂಡಿಸುವ ಕಲೆ ಹರಿದು ಬಂದಿದೆ. ಇಷ್ಟು ವರ್ಷದಲ್ಲಿ ಹಿಂದೆ ಎಂದೂ ಇಂತಹ ವಿಪತ್ತುಗಳು ಬಂದಿರಲಿಲ್ಲ. ಜಿಲ್ಲಾ ಕೇಂದ್ರದಿಂದ 43 ಕಿಲೋ ಮೀಟರ್‌ ದೂರವಿರುವ ಒನಿಪೆಂಟಾ ಹಳ್ಳಿಯಲ್ಲಿ ಇಂದು ವಿಶೇಷವಾದ ಲೋಹದ ಕಲೆ ಅಳಿವಿನ ಅಂಚಿಗೆ ಬಂದು ತಲುಪಿದೆ. 13 ನೇ ಶತಮಾನದ ಜನಮೇಜಯಡು ಎಂಬ ರಾಜನ ಕಾಲದಿಂದ ಆರಂಭವಾದ ಲೋಹದ ಚಿತ್ತಾರ ಕಲೆ ಆ ಕಾಲದಲ್ಲಿ ಪೋಥುಲುರಿ ವೀರ ಬ್ರಹ್ಮೇಂದ್ರ ಸ್ವಾಮಿ ಎಂಬ ಕಲಾವಿದನಿಂದ ವಿಶ್ವಪ್ರಸಿದ್ಧವಾಯಿತು.

ಆರಂಭದಲ್ಲಿ ಈ ಊರನ್ನು ಕಾಮಸಲಿವನಿಪೆಂಟಾ ಎಂದು ಕರೆಯಲಾಗುತ್ತಿತ್ತು. ಕ್ರಮೇಣ ಊರಿನ ಹೆಸರು ಒನಿಪೆಂಟಾ ಎಂದಾಯಿತು. ಈ ಊರಿನಲ್ಲಿ ಸಧ್ಯ 500 ಕ್ಕೂ ಹೆಚ್ಚು ಕುಟುಂಬಗಳು ಹಿತ್ತಾಳೆಯ ಕರ ಕುಶಲ ವಸ್ತುಗಳ ತಯಾರಿಕೆಯಲ್ಲಿ ತೊಡಗಿದ್ದಾರೆ. ಭಿನ್ನ ಭಿನ್ನ ಶೈಲಿಯ ದೀಪಗಳು, ಚಿತ್ತಾರದ ಪಾತ್ರೆಗಳು, ವಿಭಿನ್ನ ಕಲಾಕೃತಿಗಳು ಒನಿಪೆಂಟಾ ಕಲಾವಿದರ ಕೈಯಲ್ಲಿ ತಯಾರಾಗಿ ಬಾಂಬೆ, ಹೈದ್ರಾಬಾದ್‌, ಬೆಂಗಳೂರು, ಚೆನ್ನೈಗೆ ಹೋಗುತ್ತಿದ್ದವು. ಹಾಗೇ ಕಚ್ಚಾ ಲೋಹಗಳು ಹೈದ್ರಾಬಾದ್‌, ಬೆಂಗಳೂರು, ಚೆನ್ನೈ, ಹೈದ್ರಾಬಾದ್‌ ನಗರಗಳಿಂದ ಒನಿಪೆಂಟಾ ಊರಿಗೆ ಬರುತ್ತವೆ. ಹಿತ್ತಾಳೆಯನ್ನು ಬಳಸಿಕೊಂಡು ಒನಿಪೆಂಟಾದ ಕಲಾವಿದರು, ಅಡಿಗೆ ಮನೆ ಪಾತ್ರೆ, ಪಗಡೆಗಳು, ಚಿತ್ರಗಳು, ದೇವ – ದೇವತೆಯ ವಿಗ್ರಹಗಳು, ಹಂಡೆಗಳು, ಸುಂದರ ಅಲಂಕಾರಿಕ ವಸ್ತುಗಳನ್ನು ತಯಾರಿಸುತ್ತಾರೆ. ಒನಿಪೆಂಟಾದ ವಿಶೇಷ ಶೈಲಿಯ ಕುಸುರಿಯಿಂದ ಅಲಂಕೃತವಾದ ಯಾವುದೇ ಲೋಹವಿರಲಿ ಅದು ಮನೆಗೆ ಮೆರಗು ಕೊಡುತ್ತದೆ ಎಂದು ಸ್ಥಳೀಯರು ಹೇಳುತ್ತಾರೆ.

ಮದುವೆಗಳಲ್ಲಿ ವಧುವಿಗೆ ಹಿತ್ತಾಳೆಯ ಪಾತ್ರೆ ಪಗಡೆಗಳನ್ನು ಕೊಟ್ಟು ಕಳುಹಿಸುವ ಸಂಪ್ರದಾಯವಿದೆ. ಹಾಗೇ ದೇವಸ್ಥಾನಗಳ ಧ್ವಜಸ್ಥಂಭ, ದೇವರ ವಿಗ್ರಹಗಳು, ಹಿತ್ತಾಳೆ ದೀಪಗಳು, ಗೋಪುರದ ಕಳಶ, ಗೋಡೆಗಳಿಗೆ ಲೇಪನ ಹೀಗೆ ವರ್ಷವಿಡಿ ಒಂದಿಲ್ಲೊಂದು ದೇವಸ್ಥಾನಗಳಲ್ಲಿ ಇಲ್ಲಿನ ಕಲಾವಿದರಿಗೆ ಕೆಲಸವಿರುತ್ತಿತ್ತು. ಆದರೆ ಕೊರೋನಾ ಕಾರಣದಿಂದ ಎಲ್ಲಿಂದಲೂ ಈ ಕಲಾವಿದರಿಗೆ ಕೆಲಸ ಬರುತ್ತಿಲ್ಲ. ಹಾಗಾಗಿ ಹಿತ್ತಾಳೆ ಮತ್ತು ಲೋಹದ ಕೆಲಸ ಮಾಡುತ್ತಿದ್ದ 500 ಕುಟುಂಬಗಳಲ್ಲಿ ಈಗ ಕೇವಲ 222 ಕುಟುಂಬಗಳು ಮಾತ್ರ ತಮ್ಮ ಸಾಂಪ್ರದಾಯಿಕ ಕಸುಬಿನಲ್ಲಿ ಉಳಿದಿವೆ. 100 ಕುಟುಂಬಗಳು ಚೆನ್ನೈ, ಹೈದ್ರಾಬಾದ್‌, ಬೆಂಗಳೂರಿನಂತಹ  ನಗರಗಳಿಗೆ ಬದುಕು ಅರಸಿ ವಲಸೆ ಹೋಗಿವೆ. ಉಳಿದ ಕೆಲವೇ ಕೆಲವರು ಇರುವ ಕೆಲಸವನ್ನೇ ನಂಬಿ ಜೀವ ಸಾಗಿಸುತ್ತಿದ್ದಾರೆ.

ನಮಗೆ ಬೇರೆ ಕೆಲಸ ಗೊತ್ತಿಲ್ಲ. ನಾವು ಹಿತ್ತಾಳೆಯ ಕುಸುರಿ ವೃತ್ತಿಯನ್ನು ಬಿಟ್ಟು ಬಿಡಲು ಸಾದ್ಯವಿಲ್ಲ. ನಮ್ಮ ತಲತಲಾಂತರದಿಂದ ನಡೆಸಿಕೋಂಡು ಬಂದಿದ್ದೇವೆ. ಈ ಕಾಲ ಸರಿದು ಮುಂದೆ ನಮಗೂ ಒಳ್ಳೆಯ ದಿನಗಳು ಬರಬಹುದು.‌ ಹಿತ್ತಾಳೆಯೂ ಹೊಳೆಯಬಹುದು ಎನ್ನುತ್ತಾರೆ ಮೋರ್ ವಿರೋಜಿ ಮತ್ತು ಮುಕ್ತಿಯಾ ಭಾಷಾ ಎಂಬ ಒನಿಪೆಂಟಾದ ಕಲಾವಿದರು.

ಕೊರೋನಾ ಸಾಂಕ್ರಾಮಿಕ ಕಳೆದು ಒನಿಪೆಂಟಾ ಕಲಾವಿದರಿಗೆ ಒಂದಷ್ಟು ನೆಮ್ಮದಿಯ ಉಸಿರಾಡುವ ಕಾಲ ಬರಲಿ. ತಲ ತಲಾಂತರದಿಂದ ಕಾಪಾಡಿಕೊಂಡು ಬಂದಿರುವ ಒನಿಪೆಂಟಾದ ದೇಸೀ ಸಂಸ್ಕೃತಿ ಮತ್ತು ಕಲೆಯನ್ನು ಉಳಿಸಲು ಸರ್ಕಾರಗಳೂ ಒಂದಷ್ಟು ಪ್ರಯತ್ನ ಪಡಬೇಕು. ಒನಿಪೆಂಟಾದ ಕಲಾವಿದರಿಗೆ  ಸರ್ಕಾರಗಳು ಆರ್ಥಿಕವಾಗಿ ಸಹಾಯ ಮಾಡಿ ಅವರನ್ನು ಮೇಲೆತ್ತಬೇಕು.


ಇದನ್ನೂ ಓದಿ :ಗೋಹತ್ಯೆ ತಡೆ ಕಾನೂನಿನ ದುರ್ಬಳಕೆ: ಪೊಲೀಸರ ವಿರುದ್ಧ ಅಲಹಾಬಾದ್ ಹೈಕೋರ್ಟ್ ಗರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....