Homeಕರೋನಾ ತಲ್ಲಣಬೀದಿಗೆ ಬಿದ್ದ ಲೋಹದ ಮೇಲೆ ಚಿತ್ತಾರ ಮೂಡಿಸುವ ಒನಿಪೆಂಟಾದ ಕಲಾವಿದರ ಬದುಕು

ಬೀದಿಗೆ ಬಿದ್ದ ಲೋಹದ ಮೇಲೆ ಚಿತ್ತಾರ ಮೂಡಿಸುವ ಒನಿಪೆಂಟಾದ ಕಲಾವಿದರ ಬದುಕು

- Advertisement -
- Advertisement -

ಒನಿಪೆಂಟಾ ಆಂಧ್ರಪ್ರದೇಶದ ಒಂದು ಚಿಕ್ಕ ಹಳ್ಳಿ. ಹಿತ್ತಾಳೆ, ಕಂಚಿನ ಮೇಲೆ ಕುಸುರಿ ಕಲೆಗಾಗಿ ಜಗತ್‌ಪ್ರಸಿದ್ದವಾಗಿದ್ದ ಊರು. ದೇಶದ ಮೂಲೆ ಮೂಲೆಯಿಂದ, ಜಗತ್ತಿನ ನಾನಾ ದೇಶಗಳಿಂದ ಬರುವ ಪ್ರವಾಸಿಗಳಿಂದ ಒನಿಪೆಂಟಾ ಹಳ್ಳಿ ಒಂದು ಕಾಲದಲ್ಲಿ ತುಂಬಿರುತ್ತಿತ್ತು. ಬೇರೆ ಬೇರೆ ಭಾಷೆಯ ಜನರ ಮಾತಿನ ಕಲರವ ಕೇಳುತ್ತಿತ್ತು.  ಚೌಕಾಸಿಯ ವ್ಯಾಪಾರಗಳು ನಡೆಯುತ್ತಿತ್ತು. ಇಂದು ಒನಿಪೆಂಟಾದಲ್ಲಿ ಹೇಳಲಿಕ್ಕೆ ಏನೂ ಇಲ್ಲ. ಪ್ರವಾಸಿಗಳಿಲ್ಲ. ಕಲಾವಿದರೂ ಊರು ಬಿಡುವ ಹಂತಕ್ಕೆ ತಲುಪಿದ್ದಾರೆ. ಕೊರೋನಾ ಸಾಂಕ್ರಾಮಿಕದ ಆರ್ಥಿಕ ಹೊಡೆತಕ್ಕೆ ದೇಶದಲ್ಲಿ ನೂರಾರು ಕಸುಬುಗಳು ನಾಶವಾಗಿವೆ. ಅದರೆ ನಡುವೆ ಒನಿಪೆಂಟಾದ ಹಿತ್ತಾಳೆಯ ಕಲಾವಿದರ ಬದುಕು ಇನ್ನಷ್ಟು ದುಸ್ತರವಾಗಿದೆ.

ಕಳೆದ 15 ತಿಂಗಳುಗಳಿಂದ ಹಿತ್ತಾಳೆಯ ಕಲೆಯನ್ನೇ ನಂಬಿ, ಲೋಹದಲ್ಲಿ ಜೀವ ಹಿಡಿದು ಬದುಕುತ್ತಿದ್ದ ಒನಿಪೆಂಟಾ ಕಲಾವಿದರು ಕೆಲಸವಿಲ್ಲದೇ ನಿರುದ್ಯೋಗಿಗಳಾಗಿದ್ದಾರೆ. ದೇವಸ್ಥಾನಗಳು, ಶಾಲೆ – ಕಾಲೇಜುಗಳು, ಮಾರುಕಟ್ಟೆಗಳು ಕೊರೋನಾ ಕಾರಣಕ್ಕೆ ಬಂದ್‌ ಆಗಿರುವುದರಿಂದ ಹಿತ್ತಾಳೆ ಕಂಚುಗಳ ಮೇಲೆ ಚಿತ್ತಾರ ಮೂಡಿಸುತ್ತಿದ್ದ ಕಲಾವಿದರು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ.

ನೂರಕ್ಕು ಹೆಚ್ಚು ಕಲಾವಿದರು ಲೋಹದ ಕುಸುರಿ ಕಲೆಗಾರಿಕೆಯಲ್ಲಿಯೇ ತೊಡಗಿಕೊಂಡಿದ್ದಾರೆ. ಹಿತ್ತಾಳೆಯ ಕಲಾಕೃತಿಗಳ ತಯಾರಿಕೆಯಲ್ಲಿಯೇ ಜೀವನ ಆಧರಿಸಿದ್ದಾರೆ. ಅವರಿಗೆ ಸದ್ಯದಲ್ಲಿ ಯಾವ ಆದಾಯವೂ ಇಲ್ಲವಾಗಿದೆ ಎಂದು ಒನಪೆಂಟಾ ಲೋಹ ಕಲಾವಿದರ ಸಹಕಾರಿ ಸಂಘದ ಅಧ್ಯಕ್ಷ ಎಫ್.ಎಮ್‌ ಇಸ್ಮಾಯಿಲ್‌ ತಿಳಿಸಿದ್ದಾರೆ.

ಕೊರೋನಾ ಸಾಂಕ್ರಾಮಿಕ ಆರಂಭವಾದಾಗಿನಿಂದ ವ್ಯಾಪರ ನೆಲ ಕಚ್ಚಿದೆ. ಬೇರೆ ಬೇರೆ ಊರುಗಳಿಂದ ವ್ಯಾಪಾರಿಗಳು ಬರುತ್ತಿಲ್ಲ. ಸರ್ಕಾರ ಸಾಂಪ್ರದಾಯಿಕ ಕಲೆಯಲ್ಲಿ ತೊಡಗಿರುವ ಕಲಾವಿದರ ಸಹಾಯಕ್ಕೆ ನಿಲ್ಲಬೇಕಿದೆ. ಒಂದಷ್ಟು ಪರಿಹಾರದ ರೀತಿಯಲ್ಲಿ ಸಹಾಯವನ್ನು, ಸಬ್ಸಿಡಿಯನ್ನು ನೀಡಬೇಕು ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ : ರಾಜ್ಯಕ್ಕೆ ಹೆಚ್ಚಿನ ಲಸಿಕೆ ನೀಡುವಂತೆ ಆಗ್ರಹಿಸಿ ಪ್ರಧಾನಿ ಭೇಟಿಗೆ ಸಜ್ಜಾದ ತಮಿಳುನಾಡು ಸಿಎಂ ಸ್ಟಾಲಿನ್

ಕಳೆದ ಅನೇಕ ಶತಮಾನಗಳಿಂದ ತಲೆ ಮಾರುಗಳಿಂದ ತಲೆ ಮಾರುಗಳಿಗೆ ಈ ಕಂಚಿನ, ಹಿತ್ತಾಳೆಯ ಮೇಲೆ ಚಿತ್ತಾರ ಮೂಡಿಸುವ ಕಲೆ ಹರಿದು ಬಂದಿದೆ. ಇಷ್ಟು ವರ್ಷದಲ್ಲಿ ಹಿಂದೆ ಎಂದೂ ಇಂತಹ ವಿಪತ್ತುಗಳು ಬಂದಿರಲಿಲ್ಲ. ಜಿಲ್ಲಾ ಕೇಂದ್ರದಿಂದ 43 ಕಿಲೋ ಮೀಟರ್‌ ದೂರವಿರುವ ಒನಿಪೆಂಟಾ ಹಳ್ಳಿಯಲ್ಲಿ ಇಂದು ವಿಶೇಷವಾದ ಲೋಹದ ಕಲೆ ಅಳಿವಿನ ಅಂಚಿಗೆ ಬಂದು ತಲುಪಿದೆ. 13 ನೇ ಶತಮಾನದ ಜನಮೇಜಯಡು ಎಂಬ ರಾಜನ ಕಾಲದಿಂದ ಆರಂಭವಾದ ಲೋಹದ ಚಿತ್ತಾರ ಕಲೆ ಆ ಕಾಲದಲ್ಲಿ ಪೋಥುಲುರಿ ವೀರ ಬ್ರಹ್ಮೇಂದ್ರ ಸ್ವಾಮಿ ಎಂಬ ಕಲಾವಿದನಿಂದ ವಿಶ್ವಪ್ರಸಿದ್ಧವಾಯಿತು.

ಆರಂಭದಲ್ಲಿ ಈ ಊರನ್ನು ಕಾಮಸಲಿವನಿಪೆಂಟಾ ಎಂದು ಕರೆಯಲಾಗುತ್ತಿತ್ತು. ಕ್ರಮೇಣ ಊರಿನ ಹೆಸರು ಒನಿಪೆಂಟಾ ಎಂದಾಯಿತು. ಈ ಊರಿನಲ್ಲಿ ಸಧ್ಯ 500 ಕ್ಕೂ ಹೆಚ್ಚು ಕುಟುಂಬಗಳು ಹಿತ್ತಾಳೆಯ ಕರ ಕುಶಲ ವಸ್ತುಗಳ ತಯಾರಿಕೆಯಲ್ಲಿ ತೊಡಗಿದ್ದಾರೆ. ಭಿನ್ನ ಭಿನ್ನ ಶೈಲಿಯ ದೀಪಗಳು, ಚಿತ್ತಾರದ ಪಾತ್ರೆಗಳು, ವಿಭಿನ್ನ ಕಲಾಕೃತಿಗಳು ಒನಿಪೆಂಟಾ ಕಲಾವಿದರ ಕೈಯಲ್ಲಿ ತಯಾರಾಗಿ ಬಾಂಬೆ, ಹೈದ್ರಾಬಾದ್‌, ಬೆಂಗಳೂರು, ಚೆನ್ನೈಗೆ ಹೋಗುತ್ತಿದ್ದವು. ಹಾಗೇ ಕಚ್ಚಾ ಲೋಹಗಳು ಹೈದ್ರಾಬಾದ್‌, ಬೆಂಗಳೂರು, ಚೆನ್ನೈ, ಹೈದ್ರಾಬಾದ್‌ ನಗರಗಳಿಂದ ಒನಿಪೆಂಟಾ ಊರಿಗೆ ಬರುತ್ತವೆ. ಹಿತ್ತಾಳೆಯನ್ನು ಬಳಸಿಕೊಂಡು ಒನಿಪೆಂಟಾದ ಕಲಾವಿದರು, ಅಡಿಗೆ ಮನೆ ಪಾತ್ರೆ, ಪಗಡೆಗಳು, ಚಿತ್ರಗಳು, ದೇವ – ದೇವತೆಯ ವಿಗ್ರಹಗಳು, ಹಂಡೆಗಳು, ಸುಂದರ ಅಲಂಕಾರಿಕ ವಸ್ತುಗಳನ್ನು ತಯಾರಿಸುತ್ತಾರೆ. ಒನಿಪೆಂಟಾದ ವಿಶೇಷ ಶೈಲಿಯ ಕುಸುರಿಯಿಂದ ಅಲಂಕೃತವಾದ ಯಾವುದೇ ಲೋಹವಿರಲಿ ಅದು ಮನೆಗೆ ಮೆರಗು ಕೊಡುತ್ತದೆ ಎಂದು ಸ್ಥಳೀಯರು ಹೇಳುತ್ತಾರೆ.

ಮದುವೆಗಳಲ್ಲಿ ವಧುವಿಗೆ ಹಿತ್ತಾಳೆಯ ಪಾತ್ರೆ ಪಗಡೆಗಳನ್ನು ಕೊಟ್ಟು ಕಳುಹಿಸುವ ಸಂಪ್ರದಾಯವಿದೆ. ಹಾಗೇ ದೇವಸ್ಥಾನಗಳ ಧ್ವಜಸ್ಥಂಭ, ದೇವರ ವಿಗ್ರಹಗಳು, ಹಿತ್ತಾಳೆ ದೀಪಗಳು, ಗೋಪುರದ ಕಳಶ, ಗೋಡೆಗಳಿಗೆ ಲೇಪನ ಹೀಗೆ ವರ್ಷವಿಡಿ ಒಂದಿಲ್ಲೊಂದು ದೇವಸ್ಥಾನಗಳಲ್ಲಿ ಇಲ್ಲಿನ ಕಲಾವಿದರಿಗೆ ಕೆಲಸವಿರುತ್ತಿತ್ತು. ಆದರೆ ಕೊರೋನಾ ಕಾರಣದಿಂದ ಎಲ್ಲಿಂದಲೂ ಈ ಕಲಾವಿದರಿಗೆ ಕೆಲಸ ಬರುತ್ತಿಲ್ಲ. ಹಾಗಾಗಿ ಹಿತ್ತಾಳೆ ಮತ್ತು ಲೋಹದ ಕೆಲಸ ಮಾಡುತ್ತಿದ್ದ 500 ಕುಟುಂಬಗಳಲ್ಲಿ ಈಗ ಕೇವಲ 222 ಕುಟುಂಬಗಳು ಮಾತ್ರ ತಮ್ಮ ಸಾಂಪ್ರದಾಯಿಕ ಕಸುಬಿನಲ್ಲಿ ಉಳಿದಿವೆ. 100 ಕುಟುಂಬಗಳು ಚೆನ್ನೈ, ಹೈದ್ರಾಬಾದ್‌, ಬೆಂಗಳೂರಿನಂತಹ  ನಗರಗಳಿಗೆ ಬದುಕು ಅರಸಿ ವಲಸೆ ಹೋಗಿವೆ. ಉಳಿದ ಕೆಲವೇ ಕೆಲವರು ಇರುವ ಕೆಲಸವನ್ನೇ ನಂಬಿ ಜೀವ ಸಾಗಿಸುತ್ತಿದ್ದಾರೆ.

ನಮಗೆ ಬೇರೆ ಕೆಲಸ ಗೊತ್ತಿಲ್ಲ. ನಾವು ಹಿತ್ತಾಳೆಯ ಕುಸುರಿ ವೃತ್ತಿಯನ್ನು ಬಿಟ್ಟು ಬಿಡಲು ಸಾದ್ಯವಿಲ್ಲ. ನಮ್ಮ ತಲತಲಾಂತರದಿಂದ ನಡೆಸಿಕೋಂಡು ಬಂದಿದ್ದೇವೆ. ಈ ಕಾಲ ಸರಿದು ಮುಂದೆ ನಮಗೂ ಒಳ್ಳೆಯ ದಿನಗಳು ಬರಬಹುದು.‌ ಹಿತ್ತಾಳೆಯೂ ಹೊಳೆಯಬಹುದು ಎನ್ನುತ್ತಾರೆ ಮೋರ್ ವಿರೋಜಿ ಮತ್ತು ಮುಕ್ತಿಯಾ ಭಾಷಾ ಎಂಬ ಒನಿಪೆಂಟಾದ ಕಲಾವಿದರು.

ಕೊರೋನಾ ಸಾಂಕ್ರಾಮಿಕ ಕಳೆದು ಒನಿಪೆಂಟಾ ಕಲಾವಿದರಿಗೆ ಒಂದಷ್ಟು ನೆಮ್ಮದಿಯ ಉಸಿರಾಡುವ ಕಾಲ ಬರಲಿ. ತಲ ತಲಾಂತರದಿಂದ ಕಾಪಾಡಿಕೊಂಡು ಬಂದಿರುವ ಒನಿಪೆಂಟಾದ ದೇಸೀ ಸಂಸ್ಕೃತಿ ಮತ್ತು ಕಲೆಯನ್ನು ಉಳಿಸಲು ಸರ್ಕಾರಗಳೂ ಒಂದಷ್ಟು ಪ್ರಯತ್ನ ಪಡಬೇಕು. ಒನಿಪೆಂಟಾದ ಕಲಾವಿದರಿಗೆ  ಸರ್ಕಾರಗಳು ಆರ್ಥಿಕವಾಗಿ ಸಹಾಯ ಮಾಡಿ ಅವರನ್ನು ಮೇಲೆತ್ತಬೇಕು.


ಇದನ್ನೂ ಓದಿ :ಗೋಹತ್ಯೆ ತಡೆ ಕಾನೂನಿನ ದುರ್ಬಳಕೆ: ಪೊಲೀಸರ ವಿರುದ್ಧ ಅಲಹಾಬಾದ್ ಹೈಕೋರ್ಟ್ ಗರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...