Homeಕರೋನಾ ತಲ್ಲಣಬೀದಿಗೆ ಬಿದ್ದ ಲೋಹದ ಮೇಲೆ ಚಿತ್ತಾರ ಮೂಡಿಸುವ ಒನಿಪೆಂಟಾದ ಕಲಾವಿದರ ಬದುಕು

ಬೀದಿಗೆ ಬಿದ್ದ ಲೋಹದ ಮೇಲೆ ಚಿತ್ತಾರ ಮೂಡಿಸುವ ಒನಿಪೆಂಟಾದ ಕಲಾವಿದರ ಬದುಕು

- Advertisement -
- Advertisement -

ಒನಿಪೆಂಟಾ ಆಂಧ್ರಪ್ರದೇಶದ ಒಂದು ಚಿಕ್ಕ ಹಳ್ಳಿ. ಹಿತ್ತಾಳೆ, ಕಂಚಿನ ಮೇಲೆ ಕುಸುರಿ ಕಲೆಗಾಗಿ ಜಗತ್‌ಪ್ರಸಿದ್ದವಾಗಿದ್ದ ಊರು. ದೇಶದ ಮೂಲೆ ಮೂಲೆಯಿಂದ, ಜಗತ್ತಿನ ನಾನಾ ದೇಶಗಳಿಂದ ಬರುವ ಪ್ರವಾಸಿಗಳಿಂದ ಒನಿಪೆಂಟಾ ಹಳ್ಳಿ ಒಂದು ಕಾಲದಲ್ಲಿ ತುಂಬಿರುತ್ತಿತ್ತು. ಬೇರೆ ಬೇರೆ ಭಾಷೆಯ ಜನರ ಮಾತಿನ ಕಲರವ ಕೇಳುತ್ತಿತ್ತು.  ಚೌಕಾಸಿಯ ವ್ಯಾಪಾರಗಳು ನಡೆಯುತ್ತಿತ್ತು. ಇಂದು ಒನಿಪೆಂಟಾದಲ್ಲಿ ಹೇಳಲಿಕ್ಕೆ ಏನೂ ಇಲ್ಲ. ಪ್ರವಾಸಿಗಳಿಲ್ಲ. ಕಲಾವಿದರೂ ಊರು ಬಿಡುವ ಹಂತಕ್ಕೆ ತಲುಪಿದ್ದಾರೆ. ಕೊರೋನಾ ಸಾಂಕ್ರಾಮಿಕದ ಆರ್ಥಿಕ ಹೊಡೆತಕ್ಕೆ ದೇಶದಲ್ಲಿ ನೂರಾರು ಕಸುಬುಗಳು ನಾಶವಾಗಿವೆ. ಅದರೆ ನಡುವೆ ಒನಿಪೆಂಟಾದ ಹಿತ್ತಾಳೆಯ ಕಲಾವಿದರ ಬದುಕು ಇನ್ನಷ್ಟು ದುಸ್ತರವಾಗಿದೆ.

ಕಳೆದ 15 ತಿಂಗಳುಗಳಿಂದ ಹಿತ್ತಾಳೆಯ ಕಲೆಯನ್ನೇ ನಂಬಿ, ಲೋಹದಲ್ಲಿ ಜೀವ ಹಿಡಿದು ಬದುಕುತ್ತಿದ್ದ ಒನಿಪೆಂಟಾ ಕಲಾವಿದರು ಕೆಲಸವಿಲ್ಲದೇ ನಿರುದ್ಯೋಗಿಗಳಾಗಿದ್ದಾರೆ. ದೇವಸ್ಥಾನಗಳು, ಶಾಲೆ – ಕಾಲೇಜುಗಳು, ಮಾರುಕಟ್ಟೆಗಳು ಕೊರೋನಾ ಕಾರಣಕ್ಕೆ ಬಂದ್‌ ಆಗಿರುವುದರಿಂದ ಹಿತ್ತಾಳೆ ಕಂಚುಗಳ ಮೇಲೆ ಚಿತ್ತಾರ ಮೂಡಿಸುತ್ತಿದ್ದ ಕಲಾವಿದರು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ.

ನೂರಕ್ಕು ಹೆಚ್ಚು ಕಲಾವಿದರು ಲೋಹದ ಕುಸುರಿ ಕಲೆಗಾರಿಕೆಯಲ್ಲಿಯೇ ತೊಡಗಿಕೊಂಡಿದ್ದಾರೆ. ಹಿತ್ತಾಳೆಯ ಕಲಾಕೃತಿಗಳ ತಯಾರಿಕೆಯಲ್ಲಿಯೇ ಜೀವನ ಆಧರಿಸಿದ್ದಾರೆ. ಅವರಿಗೆ ಸದ್ಯದಲ್ಲಿ ಯಾವ ಆದಾಯವೂ ಇಲ್ಲವಾಗಿದೆ ಎಂದು ಒನಪೆಂಟಾ ಲೋಹ ಕಲಾವಿದರ ಸಹಕಾರಿ ಸಂಘದ ಅಧ್ಯಕ್ಷ ಎಫ್.ಎಮ್‌ ಇಸ್ಮಾಯಿಲ್‌ ತಿಳಿಸಿದ್ದಾರೆ.

ಕೊರೋನಾ ಸಾಂಕ್ರಾಮಿಕ ಆರಂಭವಾದಾಗಿನಿಂದ ವ್ಯಾಪರ ನೆಲ ಕಚ್ಚಿದೆ. ಬೇರೆ ಬೇರೆ ಊರುಗಳಿಂದ ವ್ಯಾಪಾರಿಗಳು ಬರುತ್ತಿಲ್ಲ. ಸರ್ಕಾರ ಸಾಂಪ್ರದಾಯಿಕ ಕಲೆಯಲ್ಲಿ ತೊಡಗಿರುವ ಕಲಾವಿದರ ಸಹಾಯಕ್ಕೆ ನಿಲ್ಲಬೇಕಿದೆ. ಒಂದಷ್ಟು ಪರಿಹಾರದ ರೀತಿಯಲ್ಲಿ ಸಹಾಯವನ್ನು, ಸಬ್ಸಿಡಿಯನ್ನು ನೀಡಬೇಕು ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ : ರಾಜ್ಯಕ್ಕೆ ಹೆಚ್ಚಿನ ಲಸಿಕೆ ನೀಡುವಂತೆ ಆಗ್ರಹಿಸಿ ಪ್ರಧಾನಿ ಭೇಟಿಗೆ ಸಜ್ಜಾದ ತಮಿಳುನಾಡು ಸಿಎಂ ಸ್ಟಾಲಿನ್

ಕಳೆದ ಅನೇಕ ಶತಮಾನಗಳಿಂದ ತಲೆ ಮಾರುಗಳಿಂದ ತಲೆ ಮಾರುಗಳಿಗೆ ಈ ಕಂಚಿನ, ಹಿತ್ತಾಳೆಯ ಮೇಲೆ ಚಿತ್ತಾರ ಮೂಡಿಸುವ ಕಲೆ ಹರಿದು ಬಂದಿದೆ. ಇಷ್ಟು ವರ್ಷದಲ್ಲಿ ಹಿಂದೆ ಎಂದೂ ಇಂತಹ ವಿಪತ್ತುಗಳು ಬಂದಿರಲಿಲ್ಲ. ಜಿಲ್ಲಾ ಕೇಂದ್ರದಿಂದ 43 ಕಿಲೋ ಮೀಟರ್‌ ದೂರವಿರುವ ಒನಿಪೆಂಟಾ ಹಳ್ಳಿಯಲ್ಲಿ ಇಂದು ವಿಶೇಷವಾದ ಲೋಹದ ಕಲೆ ಅಳಿವಿನ ಅಂಚಿಗೆ ಬಂದು ತಲುಪಿದೆ. 13 ನೇ ಶತಮಾನದ ಜನಮೇಜಯಡು ಎಂಬ ರಾಜನ ಕಾಲದಿಂದ ಆರಂಭವಾದ ಲೋಹದ ಚಿತ್ತಾರ ಕಲೆ ಆ ಕಾಲದಲ್ಲಿ ಪೋಥುಲುರಿ ವೀರ ಬ್ರಹ್ಮೇಂದ್ರ ಸ್ವಾಮಿ ಎಂಬ ಕಲಾವಿದನಿಂದ ವಿಶ್ವಪ್ರಸಿದ್ಧವಾಯಿತು.

ಆರಂಭದಲ್ಲಿ ಈ ಊರನ್ನು ಕಾಮಸಲಿವನಿಪೆಂಟಾ ಎಂದು ಕರೆಯಲಾಗುತ್ತಿತ್ತು. ಕ್ರಮೇಣ ಊರಿನ ಹೆಸರು ಒನಿಪೆಂಟಾ ಎಂದಾಯಿತು. ಈ ಊರಿನಲ್ಲಿ ಸಧ್ಯ 500 ಕ್ಕೂ ಹೆಚ್ಚು ಕುಟುಂಬಗಳು ಹಿತ್ತಾಳೆಯ ಕರ ಕುಶಲ ವಸ್ತುಗಳ ತಯಾರಿಕೆಯಲ್ಲಿ ತೊಡಗಿದ್ದಾರೆ. ಭಿನ್ನ ಭಿನ್ನ ಶೈಲಿಯ ದೀಪಗಳು, ಚಿತ್ತಾರದ ಪಾತ್ರೆಗಳು, ವಿಭಿನ್ನ ಕಲಾಕೃತಿಗಳು ಒನಿಪೆಂಟಾ ಕಲಾವಿದರ ಕೈಯಲ್ಲಿ ತಯಾರಾಗಿ ಬಾಂಬೆ, ಹೈದ್ರಾಬಾದ್‌, ಬೆಂಗಳೂರು, ಚೆನ್ನೈಗೆ ಹೋಗುತ್ತಿದ್ದವು. ಹಾಗೇ ಕಚ್ಚಾ ಲೋಹಗಳು ಹೈದ್ರಾಬಾದ್‌, ಬೆಂಗಳೂರು, ಚೆನ್ನೈ, ಹೈದ್ರಾಬಾದ್‌ ನಗರಗಳಿಂದ ಒನಿಪೆಂಟಾ ಊರಿಗೆ ಬರುತ್ತವೆ. ಹಿತ್ತಾಳೆಯನ್ನು ಬಳಸಿಕೊಂಡು ಒನಿಪೆಂಟಾದ ಕಲಾವಿದರು, ಅಡಿಗೆ ಮನೆ ಪಾತ್ರೆ, ಪಗಡೆಗಳು, ಚಿತ್ರಗಳು, ದೇವ – ದೇವತೆಯ ವಿಗ್ರಹಗಳು, ಹಂಡೆಗಳು, ಸುಂದರ ಅಲಂಕಾರಿಕ ವಸ್ತುಗಳನ್ನು ತಯಾರಿಸುತ್ತಾರೆ. ಒನಿಪೆಂಟಾದ ವಿಶೇಷ ಶೈಲಿಯ ಕುಸುರಿಯಿಂದ ಅಲಂಕೃತವಾದ ಯಾವುದೇ ಲೋಹವಿರಲಿ ಅದು ಮನೆಗೆ ಮೆರಗು ಕೊಡುತ್ತದೆ ಎಂದು ಸ್ಥಳೀಯರು ಹೇಳುತ್ತಾರೆ.

ಮದುವೆಗಳಲ್ಲಿ ವಧುವಿಗೆ ಹಿತ್ತಾಳೆಯ ಪಾತ್ರೆ ಪಗಡೆಗಳನ್ನು ಕೊಟ್ಟು ಕಳುಹಿಸುವ ಸಂಪ್ರದಾಯವಿದೆ. ಹಾಗೇ ದೇವಸ್ಥಾನಗಳ ಧ್ವಜಸ್ಥಂಭ, ದೇವರ ವಿಗ್ರಹಗಳು, ಹಿತ್ತಾಳೆ ದೀಪಗಳು, ಗೋಪುರದ ಕಳಶ, ಗೋಡೆಗಳಿಗೆ ಲೇಪನ ಹೀಗೆ ವರ್ಷವಿಡಿ ಒಂದಿಲ್ಲೊಂದು ದೇವಸ್ಥಾನಗಳಲ್ಲಿ ಇಲ್ಲಿನ ಕಲಾವಿದರಿಗೆ ಕೆಲಸವಿರುತ್ತಿತ್ತು. ಆದರೆ ಕೊರೋನಾ ಕಾರಣದಿಂದ ಎಲ್ಲಿಂದಲೂ ಈ ಕಲಾವಿದರಿಗೆ ಕೆಲಸ ಬರುತ್ತಿಲ್ಲ. ಹಾಗಾಗಿ ಹಿತ್ತಾಳೆ ಮತ್ತು ಲೋಹದ ಕೆಲಸ ಮಾಡುತ್ತಿದ್ದ 500 ಕುಟುಂಬಗಳಲ್ಲಿ ಈಗ ಕೇವಲ 222 ಕುಟುಂಬಗಳು ಮಾತ್ರ ತಮ್ಮ ಸಾಂಪ್ರದಾಯಿಕ ಕಸುಬಿನಲ್ಲಿ ಉಳಿದಿವೆ. 100 ಕುಟುಂಬಗಳು ಚೆನ್ನೈ, ಹೈದ್ರಾಬಾದ್‌, ಬೆಂಗಳೂರಿನಂತಹ  ನಗರಗಳಿಗೆ ಬದುಕು ಅರಸಿ ವಲಸೆ ಹೋಗಿವೆ. ಉಳಿದ ಕೆಲವೇ ಕೆಲವರು ಇರುವ ಕೆಲಸವನ್ನೇ ನಂಬಿ ಜೀವ ಸಾಗಿಸುತ್ತಿದ್ದಾರೆ.

ನಮಗೆ ಬೇರೆ ಕೆಲಸ ಗೊತ್ತಿಲ್ಲ. ನಾವು ಹಿತ್ತಾಳೆಯ ಕುಸುರಿ ವೃತ್ತಿಯನ್ನು ಬಿಟ್ಟು ಬಿಡಲು ಸಾದ್ಯವಿಲ್ಲ. ನಮ್ಮ ತಲತಲಾಂತರದಿಂದ ನಡೆಸಿಕೋಂಡು ಬಂದಿದ್ದೇವೆ. ಈ ಕಾಲ ಸರಿದು ಮುಂದೆ ನಮಗೂ ಒಳ್ಳೆಯ ದಿನಗಳು ಬರಬಹುದು.‌ ಹಿತ್ತಾಳೆಯೂ ಹೊಳೆಯಬಹುದು ಎನ್ನುತ್ತಾರೆ ಮೋರ್ ವಿರೋಜಿ ಮತ್ತು ಮುಕ್ತಿಯಾ ಭಾಷಾ ಎಂಬ ಒನಿಪೆಂಟಾದ ಕಲಾವಿದರು.

ಕೊರೋನಾ ಸಾಂಕ್ರಾಮಿಕ ಕಳೆದು ಒನಿಪೆಂಟಾ ಕಲಾವಿದರಿಗೆ ಒಂದಷ್ಟು ನೆಮ್ಮದಿಯ ಉಸಿರಾಡುವ ಕಾಲ ಬರಲಿ. ತಲ ತಲಾಂತರದಿಂದ ಕಾಪಾಡಿಕೊಂಡು ಬಂದಿರುವ ಒನಿಪೆಂಟಾದ ದೇಸೀ ಸಂಸ್ಕೃತಿ ಮತ್ತು ಕಲೆಯನ್ನು ಉಳಿಸಲು ಸರ್ಕಾರಗಳೂ ಒಂದಷ್ಟು ಪ್ರಯತ್ನ ಪಡಬೇಕು. ಒನಿಪೆಂಟಾದ ಕಲಾವಿದರಿಗೆ  ಸರ್ಕಾರಗಳು ಆರ್ಥಿಕವಾಗಿ ಸಹಾಯ ಮಾಡಿ ಅವರನ್ನು ಮೇಲೆತ್ತಬೇಕು.


ಇದನ್ನೂ ಓದಿ :ಗೋಹತ್ಯೆ ತಡೆ ಕಾನೂನಿನ ದುರ್ಬಳಕೆ: ಪೊಲೀಸರ ವಿರುದ್ಧ ಅಲಹಾಬಾದ್ ಹೈಕೋರ್ಟ್ ಗರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...