Homeಕರೋನಾ ತಲ್ಲಣಬೀದಿಗೆ ಬಿದ್ದ ಲೋಹದ ಮೇಲೆ ಚಿತ್ತಾರ ಮೂಡಿಸುವ ಒನಿಪೆಂಟಾದ ಕಲಾವಿದರ ಬದುಕು

ಬೀದಿಗೆ ಬಿದ್ದ ಲೋಹದ ಮೇಲೆ ಚಿತ್ತಾರ ಮೂಡಿಸುವ ಒನಿಪೆಂಟಾದ ಕಲಾವಿದರ ಬದುಕು

- Advertisement -
- Advertisement -

ಒನಿಪೆಂಟಾ ಆಂಧ್ರಪ್ರದೇಶದ ಒಂದು ಚಿಕ್ಕ ಹಳ್ಳಿ. ಹಿತ್ತಾಳೆ, ಕಂಚಿನ ಮೇಲೆ ಕುಸುರಿ ಕಲೆಗಾಗಿ ಜಗತ್‌ಪ್ರಸಿದ್ದವಾಗಿದ್ದ ಊರು. ದೇಶದ ಮೂಲೆ ಮೂಲೆಯಿಂದ, ಜಗತ್ತಿನ ನಾನಾ ದೇಶಗಳಿಂದ ಬರುವ ಪ್ರವಾಸಿಗಳಿಂದ ಒನಿಪೆಂಟಾ ಹಳ್ಳಿ ಒಂದು ಕಾಲದಲ್ಲಿ ತುಂಬಿರುತ್ತಿತ್ತು. ಬೇರೆ ಬೇರೆ ಭಾಷೆಯ ಜನರ ಮಾತಿನ ಕಲರವ ಕೇಳುತ್ತಿತ್ತು.  ಚೌಕಾಸಿಯ ವ್ಯಾಪಾರಗಳು ನಡೆಯುತ್ತಿತ್ತು. ಇಂದು ಒನಿಪೆಂಟಾದಲ್ಲಿ ಹೇಳಲಿಕ್ಕೆ ಏನೂ ಇಲ್ಲ. ಪ್ರವಾಸಿಗಳಿಲ್ಲ. ಕಲಾವಿದರೂ ಊರು ಬಿಡುವ ಹಂತಕ್ಕೆ ತಲುಪಿದ್ದಾರೆ. ಕೊರೋನಾ ಸಾಂಕ್ರಾಮಿಕದ ಆರ್ಥಿಕ ಹೊಡೆತಕ್ಕೆ ದೇಶದಲ್ಲಿ ನೂರಾರು ಕಸುಬುಗಳು ನಾಶವಾಗಿವೆ. ಅದರೆ ನಡುವೆ ಒನಿಪೆಂಟಾದ ಹಿತ್ತಾಳೆಯ ಕಲಾವಿದರ ಬದುಕು ಇನ್ನಷ್ಟು ದುಸ್ತರವಾಗಿದೆ.

ಕಳೆದ 15 ತಿಂಗಳುಗಳಿಂದ ಹಿತ್ತಾಳೆಯ ಕಲೆಯನ್ನೇ ನಂಬಿ, ಲೋಹದಲ್ಲಿ ಜೀವ ಹಿಡಿದು ಬದುಕುತ್ತಿದ್ದ ಒನಿಪೆಂಟಾ ಕಲಾವಿದರು ಕೆಲಸವಿಲ್ಲದೇ ನಿರುದ್ಯೋಗಿಗಳಾಗಿದ್ದಾರೆ. ದೇವಸ್ಥಾನಗಳು, ಶಾಲೆ – ಕಾಲೇಜುಗಳು, ಮಾರುಕಟ್ಟೆಗಳು ಕೊರೋನಾ ಕಾರಣಕ್ಕೆ ಬಂದ್‌ ಆಗಿರುವುದರಿಂದ ಹಿತ್ತಾಳೆ ಕಂಚುಗಳ ಮೇಲೆ ಚಿತ್ತಾರ ಮೂಡಿಸುತ್ತಿದ್ದ ಕಲಾವಿದರು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ.

ನೂರಕ್ಕು ಹೆಚ್ಚು ಕಲಾವಿದರು ಲೋಹದ ಕುಸುರಿ ಕಲೆಗಾರಿಕೆಯಲ್ಲಿಯೇ ತೊಡಗಿಕೊಂಡಿದ್ದಾರೆ. ಹಿತ್ತಾಳೆಯ ಕಲಾಕೃತಿಗಳ ತಯಾರಿಕೆಯಲ್ಲಿಯೇ ಜೀವನ ಆಧರಿಸಿದ್ದಾರೆ. ಅವರಿಗೆ ಸದ್ಯದಲ್ಲಿ ಯಾವ ಆದಾಯವೂ ಇಲ್ಲವಾಗಿದೆ ಎಂದು ಒನಪೆಂಟಾ ಲೋಹ ಕಲಾವಿದರ ಸಹಕಾರಿ ಸಂಘದ ಅಧ್ಯಕ್ಷ ಎಫ್.ಎಮ್‌ ಇಸ್ಮಾಯಿಲ್‌ ತಿಳಿಸಿದ್ದಾರೆ.

ಕೊರೋನಾ ಸಾಂಕ್ರಾಮಿಕ ಆರಂಭವಾದಾಗಿನಿಂದ ವ್ಯಾಪರ ನೆಲ ಕಚ್ಚಿದೆ. ಬೇರೆ ಬೇರೆ ಊರುಗಳಿಂದ ವ್ಯಾಪಾರಿಗಳು ಬರುತ್ತಿಲ್ಲ. ಸರ್ಕಾರ ಸಾಂಪ್ರದಾಯಿಕ ಕಲೆಯಲ್ಲಿ ತೊಡಗಿರುವ ಕಲಾವಿದರ ಸಹಾಯಕ್ಕೆ ನಿಲ್ಲಬೇಕಿದೆ. ಒಂದಷ್ಟು ಪರಿಹಾರದ ರೀತಿಯಲ್ಲಿ ಸಹಾಯವನ್ನು, ಸಬ್ಸಿಡಿಯನ್ನು ನೀಡಬೇಕು ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ : ರಾಜ್ಯಕ್ಕೆ ಹೆಚ್ಚಿನ ಲಸಿಕೆ ನೀಡುವಂತೆ ಆಗ್ರಹಿಸಿ ಪ್ರಧಾನಿ ಭೇಟಿಗೆ ಸಜ್ಜಾದ ತಮಿಳುನಾಡು ಸಿಎಂ ಸ್ಟಾಲಿನ್

ಕಳೆದ ಅನೇಕ ಶತಮಾನಗಳಿಂದ ತಲೆ ಮಾರುಗಳಿಂದ ತಲೆ ಮಾರುಗಳಿಗೆ ಈ ಕಂಚಿನ, ಹಿತ್ತಾಳೆಯ ಮೇಲೆ ಚಿತ್ತಾರ ಮೂಡಿಸುವ ಕಲೆ ಹರಿದು ಬಂದಿದೆ. ಇಷ್ಟು ವರ್ಷದಲ್ಲಿ ಹಿಂದೆ ಎಂದೂ ಇಂತಹ ವಿಪತ್ತುಗಳು ಬಂದಿರಲಿಲ್ಲ. ಜಿಲ್ಲಾ ಕೇಂದ್ರದಿಂದ 43 ಕಿಲೋ ಮೀಟರ್‌ ದೂರವಿರುವ ಒನಿಪೆಂಟಾ ಹಳ್ಳಿಯಲ್ಲಿ ಇಂದು ವಿಶೇಷವಾದ ಲೋಹದ ಕಲೆ ಅಳಿವಿನ ಅಂಚಿಗೆ ಬಂದು ತಲುಪಿದೆ. 13 ನೇ ಶತಮಾನದ ಜನಮೇಜಯಡು ಎಂಬ ರಾಜನ ಕಾಲದಿಂದ ಆರಂಭವಾದ ಲೋಹದ ಚಿತ್ತಾರ ಕಲೆ ಆ ಕಾಲದಲ್ಲಿ ಪೋಥುಲುರಿ ವೀರ ಬ್ರಹ್ಮೇಂದ್ರ ಸ್ವಾಮಿ ಎಂಬ ಕಲಾವಿದನಿಂದ ವಿಶ್ವಪ್ರಸಿದ್ಧವಾಯಿತು.

ಆರಂಭದಲ್ಲಿ ಈ ಊರನ್ನು ಕಾಮಸಲಿವನಿಪೆಂಟಾ ಎಂದು ಕರೆಯಲಾಗುತ್ತಿತ್ತು. ಕ್ರಮೇಣ ಊರಿನ ಹೆಸರು ಒನಿಪೆಂಟಾ ಎಂದಾಯಿತು. ಈ ಊರಿನಲ್ಲಿ ಸಧ್ಯ 500 ಕ್ಕೂ ಹೆಚ್ಚು ಕುಟುಂಬಗಳು ಹಿತ್ತಾಳೆಯ ಕರ ಕುಶಲ ವಸ್ತುಗಳ ತಯಾರಿಕೆಯಲ್ಲಿ ತೊಡಗಿದ್ದಾರೆ. ಭಿನ್ನ ಭಿನ್ನ ಶೈಲಿಯ ದೀಪಗಳು, ಚಿತ್ತಾರದ ಪಾತ್ರೆಗಳು, ವಿಭಿನ್ನ ಕಲಾಕೃತಿಗಳು ಒನಿಪೆಂಟಾ ಕಲಾವಿದರ ಕೈಯಲ್ಲಿ ತಯಾರಾಗಿ ಬಾಂಬೆ, ಹೈದ್ರಾಬಾದ್‌, ಬೆಂಗಳೂರು, ಚೆನ್ನೈಗೆ ಹೋಗುತ್ತಿದ್ದವು. ಹಾಗೇ ಕಚ್ಚಾ ಲೋಹಗಳು ಹೈದ್ರಾಬಾದ್‌, ಬೆಂಗಳೂರು, ಚೆನ್ನೈ, ಹೈದ್ರಾಬಾದ್‌ ನಗರಗಳಿಂದ ಒನಿಪೆಂಟಾ ಊರಿಗೆ ಬರುತ್ತವೆ. ಹಿತ್ತಾಳೆಯನ್ನು ಬಳಸಿಕೊಂಡು ಒನಿಪೆಂಟಾದ ಕಲಾವಿದರು, ಅಡಿಗೆ ಮನೆ ಪಾತ್ರೆ, ಪಗಡೆಗಳು, ಚಿತ್ರಗಳು, ದೇವ – ದೇವತೆಯ ವಿಗ್ರಹಗಳು, ಹಂಡೆಗಳು, ಸುಂದರ ಅಲಂಕಾರಿಕ ವಸ್ತುಗಳನ್ನು ತಯಾರಿಸುತ್ತಾರೆ. ಒನಿಪೆಂಟಾದ ವಿಶೇಷ ಶೈಲಿಯ ಕುಸುರಿಯಿಂದ ಅಲಂಕೃತವಾದ ಯಾವುದೇ ಲೋಹವಿರಲಿ ಅದು ಮನೆಗೆ ಮೆರಗು ಕೊಡುತ್ತದೆ ಎಂದು ಸ್ಥಳೀಯರು ಹೇಳುತ್ತಾರೆ.

ಮದುವೆಗಳಲ್ಲಿ ವಧುವಿಗೆ ಹಿತ್ತಾಳೆಯ ಪಾತ್ರೆ ಪಗಡೆಗಳನ್ನು ಕೊಟ್ಟು ಕಳುಹಿಸುವ ಸಂಪ್ರದಾಯವಿದೆ. ಹಾಗೇ ದೇವಸ್ಥಾನಗಳ ಧ್ವಜಸ್ಥಂಭ, ದೇವರ ವಿಗ್ರಹಗಳು, ಹಿತ್ತಾಳೆ ದೀಪಗಳು, ಗೋಪುರದ ಕಳಶ, ಗೋಡೆಗಳಿಗೆ ಲೇಪನ ಹೀಗೆ ವರ್ಷವಿಡಿ ಒಂದಿಲ್ಲೊಂದು ದೇವಸ್ಥಾನಗಳಲ್ಲಿ ಇಲ್ಲಿನ ಕಲಾವಿದರಿಗೆ ಕೆಲಸವಿರುತ್ತಿತ್ತು. ಆದರೆ ಕೊರೋನಾ ಕಾರಣದಿಂದ ಎಲ್ಲಿಂದಲೂ ಈ ಕಲಾವಿದರಿಗೆ ಕೆಲಸ ಬರುತ್ತಿಲ್ಲ. ಹಾಗಾಗಿ ಹಿತ್ತಾಳೆ ಮತ್ತು ಲೋಹದ ಕೆಲಸ ಮಾಡುತ್ತಿದ್ದ 500 ಕುಟುಂಬಗಳಲ್ಲಿ ಈಗ ಕೇವಲ 222 ಕುಟುಂಬಗಳು ಮಾತ್ರ ತಮ್ಮ ಸಾಂಪ್ರದಾಯಿಕ ಕಸುಬಿನಲ್ಲಿ ಉಳಿದಿವೆ. 100 ಕುಟುಂಬಗಳು ಚೆನ್ನೈ, ಹೈದ್ರಾಬಾದ್‌, ಬೆಂಗಳೂರಿನಂತಹ  ನಗರಗಳಿಗೆ ಬದುಕು ಅರಸಿ ವಲಸೆ ಹೋಗಿವೆ. ಉಳಿದ ಕೆಲವೇ ಕೆಲವರು ಇರುವ ಕೆಲಸವನ್ನೇ ನಂಬಿ ಜೀವ ಸಾಗಿಸುತ್ತಿದ್ದಾರೆ.

ನಮಗೆ ಬೇರೆ ಕೆಲಸ ಗೊತ್ತಿಲ್ಲ. ನಾವು ಹಿತ್ತಾಳೆಯ ಕುಸುರಿ ವೃತ್ತಿಯನ್ನು ಬಿಟ್ಟು ಬಿಡಲು ಸಾದ್ಯವಿಲ್ಲ. ನಮ್ಮ ತಲತಲಾಂತರದಿಂದ ನಡೆಸಿಕೋಂಡು ಬಂದಿದ್ದೇವೆ. ಈ ಕಾಲ ಸರಿದು ಮುಂದೆ ನಮಗೂ ಒಳ್ಳೆಯ ದಿನಗಳು ಬರಬಹುದು.‌ ಹಿತ್ತಾಳೆಯೂ ಹೊಳೆಯಬಹುದು ಎನ್ನುತ್ತಾರೆ ಮೋರ್ ವಿರೋಜಿ ಮತ್ತು ಮುಕ್ತಿಯಾ ಭಾಷಾ ಎಂಬ ಒನಿಪೆಂಟಾದ ಕಲಾವಿದರು.

ಕೊರೋನಾ ಸಾಂಕ್ರಾಮಿಕ ಕಳೆದು ಒನಿಪೆಂಟಾ ಕಲಾವಿದರಿಗೆ ಒಂದಷ್ಟು ನೆಮ್ಮದಿಯ ಉಸಿರಾಡುವ ಕಾಲ ಬರಲಿ. ತಲ ತಲಾಂತರದಿಂದ ಕಾಪಾಡಿಕೊಂಡು ಬಂದಿರುವ ಒನಿಪೆಂಟಾದ ದೇಸೀ ಸಂಸ್ಕೃತಿ ಮತ್ತು ಕಲೆಯನ್ನು ಉಳಿಸಲು ಸರ್ಕಾರಗಳೂ ಒಂದಷ್ಟು ಪ್ರಯತ್ನ ಪಡಬೇಕು. ಒನಿಪೆಂಟಾದ ಕಲಾವಿದರಿಗೆ  ಸರ್ಕಾರಗಳು ಆರ್ಥಿಕವಾಗಿ ಸಹಾಯ ಮಾಡಿ ಅವರನ್ನು ಮೇಲೆತ್ತಬೇಕು.


ಇದನ್ನೂ ಓದಿ :ಗೋಹತ್ಯೆ ತಡೆ ಕಾನೂನಿನ ದುರ್ಬಳಕೆ: ಪೊಲೀಸರ ವಿರುದ್ಧ ಅಲಹಾಬಾದ್ ಹೈಕೋರ್ಟ್ ಗರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...