Homeಕರೋನಾ ತಲ್ಲಣಬೀದಿಗೆ ಬಿದ್ದ ಲೋಹದ ಮೇಲೆ ಚಿತ್ತಾರ ಮೂಡಿಸುವ ಒನಿಪೆಂಟಾದ ಕಲಾವಿದರ ಬದುಕು

ಬೀದಿಗೆ ಬಿದ್ದ ಲೋಹದ ಮೇಲೆ ಚಿತ್ತಾರ ಮೂಡಿಸುವ ಒನಿಪೆಂಟಾದ ಕಲಾವಿದರ ಬದುಕು

- Advertisement -
- Advertisement -

ಒನಿಪೆಂಟಾ ಆಂಧ್ರಪ್ರದೇಶದ ಒಂದು ಚಿಕ್ಕ ಹಳ್ಳಿ. ಹಿತ್ತಾಳೆ, ಕಂಚಿನ ಮೇಲೆ ಕುಸುರಿ ಕಲೆಗಾಗಿ ಜಗತ್‌ಪ್ರಸಿದ್ದವಾಗಿದ್ದ ಊರು. ದೇಶದ ಮೂಲೆ ಮೂಲೆಯಿಂದ, ಜಗತ್ತಿನ ನಾನಾ ದೇಶಗಳಿಂದ ಬರುವ ಪ್ರವಾಸಿಗಳಿಂದ ಒನಿಪೆಂಟಾ ಹಳ್ಳಿ ಒಂದು ಕಾಲದಲ್ಲಿ ತುಂಬಿರುತ್ತಿತ್ತು. ಬೇರೆ ಬೇರೆ ಭಾಷೆಯ ಜನರ ಮಾತಿನ ಕಲರವ ಕೇಳುತ್ತಿತ್ತು.  ಚೌಕಾಸಿಯ ವ್ಯಾಪಾರಗಳು ನಡೆಯುತ್ತಿತ್ತು. ಇಂದು ಒನಿಪೆಂಟಾದಲ್ಲಿ ಹೇಳಲಿಕ್ಕೆ ಏನೂ ಇಲ್ಲ. ಪ್ರವಾಸಿಗಳಿಲ್ಲ. ಕಲಾವಿದರೂ ಊರು ಬಿಡುವ ಹಂತಕ್ಕೆ ತಲುಪಿದ್ದಾರೆ. ಕೊರೋನಾ ಸಾಂಕ್ರಾಮಿಕದ ಆರ್ಥಿಕ ಹೊಡೆತಕ್ಕೆ ದೇಶದಲ್ಲಿ ನೂರಾರು ಕಸುಬುಗಳು ನಾಶವಾಗಿವೆ. ಅದರೆ ನಡುವೆ ಒನಿಪೆಂಟಾದ ಹಿತ್ತಾಳೆಯ ಕಲಾವಿದರ ಬದುಕು ಇನ್ನಷ್ಟು ದುಸ್ತರವಾಗಿದೆ.

ಕಳೆದ 15 ತಿಂಗಳುಗಳಿಂದ ಹಿತ್ತಾಳೆಯ ಕಲೆಯನ್ನೇ ನಂಬಿ, ಲೋಹದಲ್ಲಿ ಜೀವ ಹಿಡಿದು ಬದುಕುತ್ತಿದ್ದ ಒನಿಪೆಂಟಾ ಕಲಾವಿದರು ಕೆಲಸವಿಲ್ಲದೇ ನಿರುದ್ಯೋಗಿಗಳಾಗಿದ್ದಾರೆ. ದೇವಸ್ಥಾನಗಳು, ಶಾಲೆ – ಕಾಲೇಜುಗಳು, ಮಾರುಕಟ್ಟೆಗಳು ಕೊರೋನಾ ಕಾರಣಕ್ಕೆ ಬಂದ್‌ ಆಗಿರುವುದರಿಂದ ಹಿತ್ತಾಳೆ ಕಂಚುಗಳ ಮೇಲೆ ಚಿತ್ತಾರ ಮೂಡಿಸುತ್ತಿದ್ದ ಕಲಾವಿದರು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ.

ನೂರಕ್ಕು ಹೆಚ್ಚು ಕಲಾವಿದರು ಲೋಹದ ಕುಸುರಿ ಕಲೆಗಾರಿಕೆಯಲ್ಲಿಯೇ ತೊಡಗಿಕೊಂಡಿದ್ದಾರೆ. ಹಿತ್ತಾಳೆಯ ಕಲಾಕೃತಿಗಳ ತಯಾರಿಕೆಯಲ್ಲಿಯೇ ಜೀವನ ಆಧರಿಸಿದ್ದಾರೆ. ಅವರಿಗೆ ಸದ್ಯದಲ್ಲಿ ಯಾವ ಆದಾಯವೂ ಇಲ್ಲವಾಗಿದೆ ಎಂದು ಒನಪೆಂಟಾ ಲೋಹ ಕಲಾವಿದರ ಸಹಕಾರಿ ಸಂಘದ ಅಧ್ಯಕ್ಷ ಎಫ್.ಎಮ್‌ ಇಸ್ಮಾಯಿಲ್‌ ತಿಳಿಸಿದ್ದಾರೆ.

ಕೊರೋನಾ ಸಾಂಕ್ರಾಮಿಕ ಆರಂಭವಾದಾಗಿನಿಂದ ವ್ಯಾಪರ ನೆಲ ಕಚ್ಚಿದೆ. ಬೇರೆ ಬೇರೆ ಊರುಗಳಿಂದ ವ್ಯಾಪಾರಿಗಳು ಬರುತ್ತಿಲ್ಲ. ಸರ್ಕಾರ ಸಾಂಪ್ರದಾಯಿಕ ಕಲೆಯಲ್ಲಿ ತೊಡಗಿರುವ ಕಲಾವಿದರ ಸಹಾಯಕ್ಕೆ ನಿಲ್ಲಬೇಕಿದೆ. ಒಂದಷ್ಟು ಪರಿಹಾರದ ರೀತಿಯಲ್ಲಿ ಸಹಾಯವನ್ನು, ಸಬ್ಸಿಡಿಯನ್ನು ನೀಡಬೇಕು ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ : ರಾಜ್ಯಕ್ಕೆ ಹೆಚ್ಚಿನ ಲಸಿಕೆ ನೀಡುವಂತೆ ಆಗ್ರಹಿಸಿ ಪ್ರಧಾನಿ ಭೇಟಿಗೆ ಸಜ್ಜಾದ ತಮಿಳುನಾಡು ಸಿಎಂ ಸ್ಟಾಲಿನ್

ಕಳೆದ ಅನೇಕ ಶತಮಾನಗಳಿಂದ ತಲೆ ಮಾರುಗಳಿಂದ ತಲೆ ಮಾರುಗಳಿಗೆ ಈ ಕಂಚಿನ, ಹಿತ್ತಾಳೆಯ ಮೇಲೆ ಚಿತ್ತಾರ ಮೂಡಿಸುವ ಕಲೆ ಹರಿದು ಬಂದಿದೆ. ಇಷ್ಟು ವರ್ಷದಲ್ಲಿ ಹಿಂದೆ ಎಂದೂ ಇಂತಹ ವಿಪತ್ತುಗಳು ಬಂದಿರಲಿಲ್ಲ. ಜಿಲ್ಲಾ ಕೇಂದ್ರದಿಂದ 43 ಕಿಲೋ ಮೀಟರ್‌ ದೂರವಿರುವ ಒನಿಪೆಂಟಾ ಹಳ್ಳಿಯಲ್ಲಿ ಇಂದು ವಿಶೇಷವಾದ ಲೋಹದ ಕಲೆ ಅಳಿವಿನ ಅಂಚಿಗೆ ಬಂದು ತಲುಪಿದೆ. 13 ನೇ ಶತಮಾನದ ಜನಮೇಜಯಡು ಎಂಬ ರಾಜನ ಕಾಲದಿಂದ ಆರಂಭವಾದ ಲೋಹದ ಚಿತ್ತಾರ ಕಲೆ ಆ ಕಾಲದಲ್ಲಿ ಪೋಥುಲುರಿ ವೀರ ಬ್ರಹ್ಮೇಂದ್ರ ಸ್ವಾಮಿ ಎಂಬ ಕಲಾವಿದನಿಂದ ವಿಶ್ವಪ್ರಸಿದ್ಧವಾಯಿತು.

ಆರಂಭದಲ್ಲಿ ಈ ಊರನ್ನು ಕಾಮಸಲಿವನಿಪೆಂಟಾ ಎಂದು ಕರೆಯಲಾಗುತ್ತಿತ್ತು. ಕ್ರಮೇಣ ಊರಿನ ಹೆಸರು ಒನಿಪೆಂಟಾ ಎಂದಾಯಿತು. ಈ ಊರಿನಲ್ಲಿ ಸಧ್ಯ 500 ಕ್ಕೂ ಹೆಚ್ಚು ಕುಟುಂಬಗಳು ಹಿತ್ತಾಳೆಯ ಕರ ಕುಶಲ ವಸ್ತುಗಳ ತಯಾರಿಕೆಯಲ್ಲಿ ತೊಡಗಿದ್ದಾರೆ. ಭಿನ್ನ ಭಿನ್ನ ಶೈಲಿಯ ದೀಪಗಳು, ಚಿತ್ತಾರದ ಪಾತ್ರೆಗಳು, ವಿಭಿನ್ನ ಕಲಾಕೃತಿಗಳು ಒನಿಪೆಂಟಾ ಕಲಾವಿದರ ಕೈಯಲ್ಲಿ ತಯಾರಾಗಿ ಬಾಂಬೆ, ಹೈದ್ರಾಬಾದ್‌, ಬೆಂಗಳೂರು, ಚೆನ್ನೈಗೆ ಹೋಗುತ್ತಿದ್ದವು. ಹಾಗೇ ಕಚ್ಚಾ ಲೋಹಗಳು ಹೈದ್ರಾಬಾದ್‌, ಬೆಂಗಳೂರು, ಚೆನ್ನೈ, ಹೈದ್ರಾಬಾದ್‌ ನಗರಗಳಿಂದ ಒನಿಪೆಂಟಾ ಊರಿಗೆ ಬರುತ್ತವೆ. ಹಿತ್ತಾಳೆಯನ್ನು ಬಳಸಿಕೊಂಡು ಒನಿಪೆಂಟಾದ ಕಲಾವಿದರು, ಅಡಿಗೆ ಮನೆ ಪಾತ್ರೆ, ಪಗಡೆಗಳು, ಚಿತ್ರಗಳು, ದೇವ – ದೇವತೆಯ ವಿಗ್ರಹಗಳು, ಹಂಡೆಗಳು, ಸುಂದರ ಅಲಂಕಾರಿಕ ವಸ್ತುಗಳನ್ನು ತಯಾರಿಸುತ್ತಾರೆ. ಒನಿಪೆಂಟಾದ ವಿಶೇಷ ಶೈಲಿಯ ಕುಸುರಿಯಿಂದ ಅಲಂಕೃತವಾದ ಯಾವುದೇ ಲೋಹವಿರಲಿ ಅದು ಮನೆಗೆ ಮೆರಗು ಕೊಡುತ್ತದೆ ಎಂದು ಸ್ಥಳೀಯರು ಹೇಳುತ್ತಾರೆ.

ಮದುವೆಗಳಲ್ಲಿ ವಧುವಿಗೆ ಹಿತ್ತಾಳೆಯ ಪಾತ್ರೆ ಪಗಡೆಗಳನ್ನು ಕೊಟ್ಟು ಕಳುಹಿಸುವ ಸಂಪ್ರದಾಯವಿದೆ. ಹಾಗೇ ದೇವಸ್ಥಾನಗಳ ಧ್ವಜಸ್ಥಂಭ, ದೇವರ ವಿಗ್ರಹಗಳು, ಹಿತ್ತಾಳೆ ದೀಪಗಳು, ಗೋಪುರದ ಕಳಶ, ಗೋಡೆಗಳಿಗೆ ಲೇಪನ ಹೀಗೆ ವರ್ಷವಿಡಿ ಒಂದಿಲ್ಲೊಂದು ದೇವಸ್ಥಾನಗಳಲ್ಲಿ ಇಲ್ಲಿನ ಕಲಾವಿದರಿಗೆ ಕೆಲಸವಿರುತ್ತಿತ್ತು. ಆದರೆ ಕೊರೋನಾ ಕಾರಣದಿಂದ ಎಲ್ಲಿಂದಲೂ ಈ ಕಲಾವಿದರಿಗೆ ಕೆಲಸ ಬರುತ್ತಿಲ್ಲ. ಹಾಗಾಗಿ ಹಿತ್ತಾಳೆ ಮತ್ತು ಲೋಹದ ಕೆಲಸ ಮಾಡುತ್ತಿದ್ದ 500 ಕುಟುಂಬಗಳಲ್ಲಿ ಈಗ ಕೇವಲ 222 ಕುಟುಂಬಗಳು ಮಾತ್ರ ತಮ್ಮ ಸಾಂಪ್ರದಾಯಿಕ ಕಸುಬಿನಲ್ಲಿ ಉಳಿದಿವೆ. 100 ಕುಟುಂಬಗಳು ಚೆನ್ನೈ, ಹೈದ್ರಾಬಾದ್‌, ಬೆಂಗಳೂರಿನಂತಹ  ನಗರಗಳಿಗೆ ಬದುಕು ಅರಸಿ ವಲಸೆ ಹೋಗಿವೆ. ಉಳಿದ ಕೆಲವೇ ಕೆಲವರು ಇರುವ ಕೆಲಸವನ್ನೇ ನಂಬಿ ಜೀವ ಸಾಗಿಸುತ್ತಿದ್ದಾರೆ.

ನಮಗೆ ಬೇರೆ ಕೆಲಸ ಗೊತ್ತಿಲ್ಲ. ನಾವು ಹಿತ್ತಾಳೆಯ ಕುಸುರಿ ವೃತ್ತಿಯನ್ನು ಬಿಟ್ಟು ಬಿಡಲು ಸಾದ್ಯವಿಲ್ಲ. ನಮ್ಮ ತಲತಲಾಂತರದಿಂದ ನಡೆಸಿಕೋಂಡು ಬಂದಿದ್ದೇವೆ. ಈ ಕಾಲ ಸರಿದು ಮುಂದೆ ನಮಗೂ ಒಳ್ಳೆಯ ದಿನಗಳು ಬರಬಹುದು.‌ ಹಿತ್ತಾಳೆಯೂ ಹೊಳೆಯಬಹುದು ಎನ್ನುತ್ತಾರೆ ಮೋರ್ ವಿರೋಜಿ ಮತ್ತು ಮುಕ್ತಿಯಾ ಭಾಷಾ ಎಂಬ ಒನಿಪೆಂಟಾದ ಕಲಾವಿದರು.

ಕೊರೋನಾ ಸಾಂಕ್ರಾಮಿಕ ಕಳೆದು ಒನಿಪೆಂಟಾ ಕಲಾವಿದರಿಗೆ ಒಂದಷ್ಟು ನೆಮ್ಮದಿಯ ಉಸಿರಾಡುವ ಕಾಲ ಬರಲಿ. ತಲ ತಲಾಂತರದಿಂದ ಕಾಪಾಡಿಕೊಂಡು ಬಂದಿರುವ ಒನಿಪೆಂಟಾದ ದೇಸೀ ಸಂಸ್ಕೃತಿ ಮತ್ತು ಕಲೆಯನ್ನು ಉಳಿಸಲು ಸರ್ಕಾರಗಳೂ ಒಂದಷ್ಟು ಪ್ರಯತ್ನ ಪಡಬೇಕು. ಒನಿಪೆಂಟಾದ ಕಲಾವಿದರಿಗೆ  ಸರ್ಕಾರಗಳು ಆರ್ಥಿಕವಾಗಿ ಸಹಾಯ ಮಾಡಿ ಅವರನ್ನು ಮೇಲೆತ್ತಬೇಕು.


ಇದನ್ನೂ ಓದಿ :ಗೋಹತ್ಯೆ ತಡೆ ಕಾನೂನಿನ ದುರ್ಬಳಕೆ: ಪೊಲೀಸರ ವಿರುದ್ಧ ಅಲಹಾಬಾದ್ ಹೈಕೋರ್ಟ್ ಗರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...