Homeಕರೋನಾ ತಲ್ಲಣಬೀದಿಗೆ ಬಿದ್ದ ಲೋಹದ ಮೇಲೆ ಚಿತ್ತಾರ ಮೂಡಿಸುವ ಒನಿಪೆಂಟಾದ ಕಲಾವಿದರ ಬದುಕು

ಬೀದಿಗೆ ಬಿದ್ದ ಲೋಹದ ಮೇಲೆ ಚಿತ್ತಾರ ಮೂಡಿಸುವ ಒನಿಪೆಂಟಾದ ಕಲಾವಿದರ ಬದುಕು

- Advertisement -
- Advertisement -

ಒನಿಪೆಂಟಾ ಆಂಧ್ರಪ್ರದೇಶದ ಒಂದು ಚಿಕ್ಕ ಹಳ್ಳಿ. ಹಿತ್ತಾಳೆ, ಕಂಚಿನ ಮೇಲೆ ಕುಸುರಿ ಕಲೆಗಾಗಿ ಜಗತ್‌ಪ್ರಸಿದ್ದವಾಗಿದ್ದ ಊರು. ದೇಶದ ಮೂಲೆ ಮೂಲೆಯಿಂದ, ಜಗತ್ತಿನ ನಾನಾ ದೇಶಗಳಿಂದ ಬರುವ ಪ್ರವಾಸಿಗಳಿಂದ ಒನಿಪೆಂಟಾ ಹಳ್ಳಿ ಒಂದು ಕಾಲದಲ್ಲಿ ತುಂಬಿರುತ್ತಿತ್ತು. ಬೇರೆ ಬೇರೆ ಭಾಷೆಯ ಜನರ ಮಾತಿನ ಕಲರವ ಕೇಳುತ್ತಿತ್ತು.  ಚೌಕಾಸಿಯ ವ್ಯಾಪಾರಗಳು ನಡೆಯುತ್ತಿತ್ತು. ಇಂದು ಒನಿಪೆಂಟಾದಲ್ಲಿ ಹೇಳಲಿಕ್ಕೆ ಏನೂ ಇಲ್ಲ. ಪ್ರವಾಸಿಗಳಿಲ್ಲ. ಕಲಾವಿದರೂ ಊರು ಬಿಡುವ ಹಂತಕ್ಕೆ ತಲುಪಿದ್ದಾರೆ. ಕೊರೋನಾ ಸಾಂಕ್ರಾಮಿಕದ ಆರ್ಥಿಕ ಹೊಡೆತಕ್ಕೆ ದೇಶದಲ್ಲಿ ನೂರಾರು ಕಸುಬುಗಳು ನಾಶವಾಗಿವೆ. ಅದರೆ ನಡುವೆ ಒನಿಪೆಂಟಾದ ಹಿತ್ತಾಳೆಯ ಕಲಾವಿದರ ಬದುಕು ಇನ್ನಷ್ಟು ದುಸ್ತರವಾಗಿದೆ.

ಕಳೆದ 15 ತಿಂಗಳುಗಳಿಂದ ಹಿತ್ತಾಳೆಯ ಕಲೆಯನ್ನೇ ನಂಬಿ, ಲೋಹದಲ್ಲಿ ಜೀವ ಹಿಡಿದು ಬದುಕುತ್ತಿದ್ದ ಒನಿಪೆಂಟಾ ಕಲಾವಿದರು ಕೆಲಸವಿಲ್ಲದೇ ನಿರುದ್ಯೋಗಿಗಳಾಗಿದ್ದಾರೆ. ದೇವಸ್ಥಾನಗಳು, ಶಾಲೆ – ಕಾಲೇಜುಗಳು, ಮಾರುಕಟ್ಟೆಗಳು ಕೊರೋನಾ ಕಾರಣಕ್ಕೆ ಬಂದ್‌ ಆಗಿರುವುದರಿಂದ ಹಿತ್ತಾಳೆ ಕಂಚುಗಳ ಮೇಲೆ ಚಿತ್ತಾರ ಮೂಡಿಸುತ್ತಿದ್ದ ಕಲಾವಿದರು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ.

ನೂರಕ್ಕು ಹೆಚ್ಚು ಕಲಾವಿದರು ಲೋಹದ ಕುಸುರಿ ಕಲೆಗಾರಿಕೆಯಲ್ಲಿಯೇ ತೊಡಗಿಕೊಂಡಿದ್ದಾರೆ. ಹಿತ್ತಾಳೆಯ ಕಲಾಕೃತಿಗಳ ತಯಾರಿಕೆಯಲ್ಲಿಯೇ ಜೀವನ ಆಧರಿಸಿದ್ದಾರೆ. ಅವರಿಗೆ ಸದ್ಯದಲ್ಲಿ ಯಾವ ಆದಾಯವೂ ಇಲ್ಲವಾಗಿದೆ ಎಂದು ಒನಪೆಂಟಾ ಲೋಹ ಕಲಾವಿದರ ಸಹಕಾರಿ ಸಂಘದ ಅಧ್ಯಕ್ಷ ಎಫ್.ಎಮ್‌ ಇಸ್ಮಾಯಿಲ್‌ ತಿಳಿಸಿದ್ದಾರೆ.

ಕೊರೋನಾ ಸಾಂಕ್ರಾಮಿಕ ಆರಂಭವಾದಾಗಿನಿಂದ ವ್ಯಾಪರ ನೆಲ ಕಚ್ಚಿದೆ. ಬೇರೆ ಬೇರೆ ಊರುಗಳಿಂದ ವ್ಯಾಪಾರಿಗಳು ಬರುತ್ತಿಲ್ಲ. ಸರ್ಕಾರ ಸಾಂಪ್ರದಾಯಿಕ ಕಲೆಯಲ್ಲಿ ತೊಡಗಿರುವ ಕಲಾವಿದರ ಸಹಾಯಕ್ಕೆ ನಿಲ್ಲಬೇಕಿದೆ. ಒಂದಷ್ಟು ಪರಿಹಾರದ ರೀತಿಯಲ್ಲಿ ಸಹಾಯವನ್ನು, ಸಬ್ಸಿಡಿಯನ್ನು ನೀಡಬೇಕು ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ : ರಾಜ್ಯಕ್ಕೆ ಹೆಚ್ಚಿನ ಲಸಿಕೆ ನೀಡುವಂತೆ ಆಗ್ರಹಿಸಿ ಪ್ರಧಾನಿ ಭೇಟಿಗೆ ಸಜ್ಜಾದ ತಮಿಳುನಾಡು ಸಿಎಂ ಸ್ಟಾಲಿನ್

ಕಳೆದ ಅನೇಕ ಶತಮಾನಗಳಿಂದ ತಲೆ ಮಾರುಗಳಿಂದ ತಲೆ ಮಾರುಗಳಿಗೆ ಈ ಕಂಚಿನ, ಹಿತ್ತಾಳೆಯ ಮೇಲೆ ಚಿತ್ತಾರ ಮೂಡಿಸುವ ಕಲೆ ಹರಿದು ಬಂದಿದೆ. ಇಷ್ಟು ವರ್ಷದಲ್ಲಿ ಹಿಂದೆ ಎಂದೂ ಇಂತಹ ವಿಪತ್ತುಗಳು ಬಂದಿರಲಿಲ್ಲ. ಜಿಲ್ಲಾ ಕೇಂದ್ರದಿಂದ 43 ಕಿಲೋ ಮೀಟರ್‌ ದೂರವಿರುವ ಒನಿಪೆಂಟಾ ಹಳ್ಳಿಯಲ್ಲಿ ಇಂದು ವಿಶೇಷವಾದ ಲೋಹದ ಕಲೆ ಅಳಿವಿನ ಅಂಚಿಗೆ ಬಂದು ತಲುಪಿದೆ. 13 ನೇ ಶತಮಾನದ ಜನಮೇಜಯಡು ಎಂಬ ರಾಜನ ಕಾಲದಿಂದ ಆರಂಭವಾದ ಲೋಹದ ಚಿತ್ತಾರ ಕಲೆ ಆ ಕಾಲದಲ್ಲಿ ಪೋಥುಲುರಿ ವೀರ ಬ್ರಹ್ಮೇಂದ್ರ ಸ್ವಾಮಿ ಎಂಬ ಕಲಾವಿದನಿಂದ ವಿಶ್ವಪ್ರಸಿದ್ಧವಾಯಿತು.

ಆರಂಭದಲ್ಲಿ ಈ ಊರನ್ನು ಕಾಮಸಲಿವನಿಪೆಂಟಾ ಎಂದು ಕರೆಯಲಾಗುತ್ತಿತ್ತು. ಕ್ರಮೇಣ ಊರಿನ ಹೆಸರು ಒನಿಪೆಂಟಾ ಎಂದಾಯಿತು. ಈ ಊರಿನಲ್ಲಿ ಸಧ್ಯ 500 ಕ್ಕೂ ಹೆಚ್ಚು ಕುಟುಂಬಗಳು ಹಿತ್ತಾಳೆಯ ಕರ ಕುಶಲ ವಸ್ತುಗಳ ತಯಾರಿಕೆಯಲ್ಲಿ ತೊಡಗಿದ್ದಾರೆ. ಭಿನ್ನ ಭಿನ್ನ ಶೈಲಿಯ ದೀಪಗಳು, ಚಿತ್ತಾರದ ಪಾತ್ರೆಗಳು, ವಿಭಿನ್ನ ಕಲಾಕೃತಿಗಳು ಒನಿಪೆಂಟಾ ಕಲಾವಿದರ ಕೈಯಲ್ಲಿ ತಯಾರಾಗಿ ಬಾಂಬೆ, ಹೈದ್ರಾಬಾದ್‌, ಬೆಂಗಳೂರು, ಚೆನ್ನೈಗೆ ಹೋಗುತ್ತಿದ್ದವು. ಹಾಗೇ ಕಚ್ಚಾ ಲೋಹಗಳು ಹೈದ್ರಾಬಾದ್‌, ಬೆಂಗಳೂರು, ಚೆನ್ನೈ, ಹೈದ್ರಾಬಾದ್‌ ನಗರಗಳಿಂದ ಒನಿಪೆಂಟಾ ಊರಿಗೆ ಬರುತ್ತವೆ. ಹಿತ್ತಾಳೆಯನ್ನು ಬಳಸಿಕೊಂಡು ಒನಿಪೆಂಟಾದ ಕಲಾವಿದರು, ಅಡಿಗೆ ಮನೆ ಪಾತ್ರೆ, ಪಗಡೆಗಳು, ಚಿತ್ರಗಳು, ದೇವ – ದೇವತೆಯ ವಿಗ್ರಹಗಳು, ಹಂಡೆಗಳು, ಸುಂದರ ಅಲಂಕಾರಿಕ ವಸ್ತುಗಳನ್ನು ತಯಾರಿಸುತ್ತಾರೆ. ಒನಿಪೆಂಟಾದ ವಿಶೇಷ ಶೈಲಿಯ ಕುಸುರಿಯಿಂದ ಅಲಂಕೃತವಾದ ಯಾವುದೇ ಲೋಹವಿರಲಿ ಅದು ಮನೆಗೆ ಮೆರಗು ಕೊಡುತ್ತದೆ ಎಂದು ಸ್ಥಳೀಯರು ಹೇಳುತ್ತಾರೆ.

ಮದುವೆಗಳಲ್ಲಿ ವಧುವಿಗೆ ಹಿತ್ತಾಳೆಯ ಪಾತ್ರೆ ಪಗಡೆಗಳನ್ನು ಕೊಟ್ಟು ಕಳುಹಿಸುವ ಸಂಪ್ರದಾಯವಿದೆ. ಹಾಗೇ ದೇವಸ್ಥಾನಗಳ ಧ್ವಜಸ್ಥಂಭ, ದೇವರ ವಿಗ್ರಹಗಳು, ಹಿತ್ತಾಳೆ ದೀಪಗಳು, ಗೋಪುರದ ಕಳಶ, ಗೋಡೆಗಳಿಗೆ ಲೇಪನ ಹೀಗೆ ವರ್ಷವಿಡಿ ಒಂದಿಲ್ಲೊಂದು ದೇವಸ್ಥಾನಗಳಲ್ಲಿ ಇಲ್ಲಿನ ಕಲಾವಿದರಿಗೆ ಕೆಲಸವಿರುತ್ತಿತ್ತು. ಆದರೆ ಕೊರೋನಾ ಕಾರಣದಿಂದ ಎಲ್ಲಿಂದಲೂ ಈ ಕಲಾವಿದರಿಗೆ ಕೆಲಸ ಬರುತ್ತಿಲ್ಲ. ಹಾಗಾಗಿ ಹಿತ್ತಾಳೆ ಮತ್ತು ಲೋಹದ ಕೆಲಸ ಮಾಡುತ್ತಿದ್ದ 500 ಕುಟುಂಬಗಳಲ್ಲಿ ಈಗ ಕೇವಲ 222 ಕುಟುಂಬಗಳು ಮಾತ್ರ ತಮ್ಮ ಸಾಂಪ್ರದಾಯಿಕ ಕಸುಬಿನಲ್ಲಿ ಉಳಿದಿವೆ. 100 ಕುಟುಂಬಗಳು ಚೆನ್ನೈ, ಹೈದ್ರಾಬಾದ್‌, ಬೆಂಗಳೂರಿನಂತಹ  ನಗರಗಳಿಗೆ ಬದುಕು ಅರಸಿ ವಲಸೆ ಹೋಗಿವೆ. ಉಳಿದ ಕೆಲವೇ ಕೆಲವರು ಇರುವ ಕೆಲಸವನ್ನೇ ನಂಬಿ ಜೀವ ಸಾಗಿಸುತ್ತಿದ್ದಾರೆ.

ನಮಗೆ ಬೇರೆ ಕೆಲಸ ಗೊತ್ತಿಲ್ಲ. ನಾವು ಹಿತ್ತಾಳೆಯ ಕುಸುರಿ ವೃತ್ತಿಯನ್ನು ಬಿಟ್ಟು ಬಿಡಲು ಸಾದ್ಯವಿಲ್ಲ. ನಮ್ಮ ತಲತಲಾಂತರದಿಂದ ನಡೆಸಿಕೋಂಡು ಬಂದಿದ್ದೇವೆ. ಈ ಕಾಲ ಸರಿದು ಮುಂದೆ ನಮಗೂ ಒಳ್ಳೆಯ ದಿನಗಳು ಬರಬಹುದು.‌ ಹಿತ್ತಾಳೆಯೂ ಹೊಳೆಯಬಹುದು ಎನ್ನುತ್ತಾರೆ ಮೋರ್ ವಿರೋಜಿ ಮತ್ತು ಮುಕ್ತಿಯಾ ಭಾಷಾ ಎಂಬ ಒನಿಪೆಂಟಾದ ಕಲಾವಿದರು.

ಕೊರೋನಾ ಸಾಂಕ್ರಾಮಿಕ ಕಳೆದು ಒನಿಪೆಂಟಾ ಕಲಾವಿದರಿಗೆ ಒಂದಷ್ಟು ನೆಮ್ಮದಿಯ ಉಸಿರಾಡುವ ಕಾಲ ಬರಲಿ. ತಲ ತಲಾಂತರದಿಂದ ಕಾಪಾಡಿಕೊಂಡು ಬಂದಿರುವ ಒನಿಪೆಂಟಾದ ದೇಸೀ ಸಂಸ್ಕೃತಿ ಮತ್ತು ಕಲೆಯನ್ನು ಉಳಿಸಲು ಸರ್ಕಾರಗಳೂ ಒಂದಷ್ಟು ಪ್ರಯತ್ನ ಪಡಬೇಕು. ಒನಿಪೆಂಟಾದ ಕಲಾವಿದರಿಗೆ  ಸರ್ಕಾರಗಳು ಆರ್ಥಿಕವಾಗಿ ಸಹಾಯ ಮಾಡಿ ಅವರನ್ನು ಮೇಲೆತ್ತಬೇಕು.


ಇದನ್ನೂ ಓದಿ :ಗೋಹತ್ಯೆ ತಡೆ ಕಾನೂನಿನ ದುರ್ಬಳಕೆ: ಪೊಲೀಸರ ವಿರುದ್ಧ ಅಲಹಾಬಾದ್ ಹೈಕೋರ್ಟ್ ಗರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...