Homeಮುಖಪುಟಇರಾನ್‌ ಮಹಿಳೆಯರ ದಿಟ್ಟ ಹೋರಾಟ: ಮೊರಾಲಿಟಿ ಪೊಲೀಸ್‌ ವ್ಯವಸ್ಥೆ ರದ್ದು

ಇರಾನ್‌ ಮಹಿಳೆಯರ ದಿಟ್ಟ ಹೋರಾಟ: ಮೊರಾಲಿಟಿ ಪೊಲೀಸ್‌ ವ್ಯವಸ್ಥೆ ರದ್ದು

- Advertisement -
- Advertisement -

ಇರಾನ್‌ ದೇಶದ ಕಟ್ಟುನಿಟ್ಟಾದ ಮಹಿಳಾ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸಿದ ಆರೋಪದ ಮೇಲೆ ಬಂಧನದ ಸಮಯದಲ್ಲಿ ಮಹ್ಸಾ ಅಮಿನಿ ಎಂಬ ಮಹಿಳೆ ಸಾವಿಗೀಡಾದ ಬಳಿಕ ಸ್ಫೋಟಿಸಿದ ಮಹಿಳಾ ಹೋರಾಟಕ್ಕೆ ಆರಂಭಿಕ ಜಯ ಸಿಕ್ಕಿದೆ. ಎರಡು ತಿಂಗಳಿಗಿಂತ ಹೆಚ್ಚು ಕಾಲ ಪ್ರತಿಭಟನೆಗಳು ನಡೆದ ನಂತರ ಇರಾನ್ ಸರ್ಕಾರ ತನ್ನ ಮೊರಾಲಿಟಿ (ನೈತಿಕ) ಪೊಲೀಸ್ ಘಟಕಗಳನ್ನು ರದ್ದುಗೊಳಿಸಿದೆ.

ಇರಾನ್‌ನ ಪ್ರಾಸಿಕ್ಯೂಟರ್ ಜನರಲ್ ಮೊಹಮದ್ ಜಾಫರ್ ಮೊಂಟಜೆರಿ, “ಮೊರಾಲಿಟಿ ಪೊಲೀಸ್‌ ವ್ಯವಸ್ಥೆಯನ್ನು ರದ್ದುಗೊಳಿಸಲಾಗಿದೆ” ಎಂದು ಹೇಳಿರುವುದಾಗಿ ಶನಿವಾರ IRNA ವರದಿ ಪ್ರಕಟಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸ್ ಪಡೆಯ ಸ್ಥಿತಿಯ ಬಗ್ಗೆ ಹೆಚ್ಚಿನ ವಿವರಗಳನ್ನು ಒದಗಿಸಿಲ್ಲ. “ನ್ಯಾಯಾಂಗವು ಸಮುದಾಯದ ಮಟ್ಟದಲ್ಲಿ ನಡವಳಿಕೆಯ ಕ್ರಮಗಳನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರೆಸುತ್ತದೆ” ಎಂದು ಮೊಂಟಜೆರಿ ಹೇಳಿರುವುದಾಗಿ ಸುದ್ದಿಸಂಸ್ಥೆ ಎಪಿ ವರದಿ ಮಾಡಿದೆ.

ಇರಾನ್‌ನ ಪ್ರತಿಗಾಮಿ ನೀತಿಗಳು ಮತ್ತು ಪ್ರತಿಭಟನಾಕಾರರನ್ನು ಹತ್ತಿಕ್ಕಲು ಪ್ರತಿ-ಆಕ್ರಮಣಕಾರಿ ವಿಧಾನವನ್ನು ಅನುಸರಿಸುತ್ತಿರುವುದನ್ನು ವ್ಯಾಪಕವಾಗಿ ಖಂಡಿಸಿದ ಬಳಿಕ ಈ ಘೋಷಣೆ ಹೊರಬಿದ್ದಿದೆ.

ದೇಶದ ಇಸ್ಲಾಮಿಕ್ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸುವ ಜನರನ್ನು ಬಂಧಿಸುವ ಕಾರ್ಯಕ್ಕೆ 2005 ರಲ್ಲಿ ಇರಾನ್‌ನ ಮೊರಾಲಿಟಿ ಪೊಲೀಸ್‌ ಗುಂಪನ್ನು ಸ್ಥಾಪಿಸಲಾಯಿತು. ಆದರೆ ಕಳೆದ ಸೆಪ್ಟೆಂಬರ್‌ನಲ್ಲಿ ಪ್ರತಿಭಟನೆ ತೀವ್ರವಾಯಿತು. ಡ್ರೆಸ್ ಕೋಡ್ ಉಲ್ಲಂಘಿಸಿದ ಆರೋಪದಲ್ಲಿ ಬಂಧನಕ್ಕೊಳಗಾದ ಮಹ್ಸಾ ಅಮಿನಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

1979ರ ಇಸ್ಲಾಮಿಕ್ ಕ್ರಾಂತಿಯ ನಂತರದ ದಿಟ್ಟ ಸವಾಲುಗಳಲ್ಲಿ ಒಂದೆಂದು ಪರಿಗಣಿಸಲಾದ ರಾಷ್ಟ್ರವ್ಯಾಪಿ ಪ್ರತಿಭಟನೆಗಳಿಂದಾಗಿ ಇರಾನ್ ಗಮನ ಸೆಳೆಯಿತು. ಸೆಪ್ಟೆಂಬರ್‌ನಿಂದ ನಿರಂತರ ಹೋರಾಟಗಳು ನಡೆದವು. 22 ವರ್ಷದ ಕುರ್ದಿಶ್ ಮಹಿಳೆಯ ಸಾವು ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳನ್ನು ಹುಟ್ಟುಹಾಕಿತು ಮತ್ತು ಪ್ರಪಂಚದಾದ್ಯಂತ ಬೆಂಬಲವನ್ನು ಪಡೆಯಿತು.

ತಲೆಗೆ ಹಾಕುವ ಸ್ಕಾರ್ಫ್‌ಗಳನ್ನು ಮಹಿಳೆಯರು ಪ್ರತಿಭಟನೆಯಲ್ಲಿ ಸುಟ್ಟು ಹಾಕಿದರು. ಕೂದಲುಗಳನ್ನು ಕತ್ತರಿಸಿ ಆಕ್ರೋಶ ಹೊರಹಾಕಿದರು. ಕಲಾವಿದರು ಮತ್ತು ರಾಷ್ಟ್ರೀಯ ಕ್ರೀಡಾಪಟುಗಳು ಕೂಡ ಚಳವಳಿಗೆ ಬೆಂಬಲ ವ್ಯಕ್ತಪಡಿಸಿದರು.

ಅನಧಿಕೃತ ಅಂದಾಜಿನ ಪ್ರಕಾರ, ಪ್ರತಿಭಟನೆಗಳನ್ನು ನಿಗ್ರಹಿಸಲು ಇರಾನ್‌ನ ಮೊರಾಲಿಟಿ ಪೊಲೀಸರು ಪ್ರತಿ-ಆಕ್ರಮಣಕಾರಿ ಕ್ರಮಗಳನ್ನು ತೆಗೆದುಕೊಂಡರು. ಹೀಗಾಗಿ ನೂರಾರು ಜನರ ಸಾವುಗಳು ಸಂಭವಿಸಿದವು. ನವೆಂಬರ್ 29ರಂದು ನಡೆದ ರಾಷ್ಟ್ರವ್ಯಾಪಿ ಪ್ರತಿಭಟನೆಯ ಅಶಾಂತಿಯಲ್ಲಿ 300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಇರಾನಿನ ಜನರಲ್ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿರಿ: ಇರಾನ್: ವಸ್ತ್ರಸಂಹಿತೆ ವಿರುದ್ಧ ಮುಂದುವರಿದ ಹೋರಾಟ; 19 ಮಕ್ಕಳು ಸೇರಿ 185 ಮಂದಿ ಸಾವು- ವರದಿ

ಇರಾನ್ ತನ್ನ ಪ್ರತಿಭಟನಾಕಾರರನ್ನು ಕ್ರೂರವಾಗಿ ನಡೆಸಿಕೊಂಡಿರುವುದು ವಿಶ್ವದ ನಾಯಕರು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ಟೀಕೆಗೆ ಗುರಿಯಾಗಿದೆ. ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸದಂತೆ ವಿಶ್ವಸಂಸ್ಥೆಯ ತಜ್ಞರು ಕರೆ ನೀಡಿದ್ದಾರೆ.

ಆದಾಗ್ಯೂ, ಪಾಶ್ಚಿಮಾತ್ಯ ದೇಶಗಳು ಅಶಾಂತಿಗೆ ಪ್ರೋತ್ಸಾಹಿಸುತ್ತಿವೆ ಎಂದು ಇರಾನ್ ಆರೋಪಿಸಿದೆ. ಜನಾಂಗೀಯ ಅಲ್ಪಸಂಖ್ಯಾತ ಪ್ರದೇಶಗಳಲ್ಲಿನ ಪ್ರತಿಭಟನಾಕಾರರು ಪ್ರತ್ಯೇಕತಾವಾದಿ ಗುಂಪುಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇರಾನ್ ಮಹಿಳೆಯರ ಹೋರಾಟ ನಿಜಕ್ಕೂ ಮೈನವಿರೇಳಿಸುವ ಹೋರಾಟ! ಅವರ ಜಯ, ಖುಷಿ ತಂದಿದೆ. ಇದು, ನಮ್ಮಲ್ಲಿ ಇರುವ ನೈತಿಕ ಪೋಲೀಸ್ ಗಿರಿಯ ಅಂತ್ಯಕ್ಕೆ ದಾರಿ ದೀಪ ಆಗಬಹುದೆ?!?

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...