Homeಮುಖಪುಟಇರಾನ್‌ ಮಹಿಳೆಯರ ದಿಟ್ಟ ಹೋರಾಟ: ಮೊರಾಲಿಟಿ ಪೊಲೀಸ್‌ ವ್ಯವಸ್ಥೆ ರದ್ದು

ಇರಾನ್‌ ಮಹಿಳೆಯರ ದಿಟ್ಟ ಹೋರಾಟ: ಮೊರಾಲಿಟಿ ಪೊಲೀಸ್‌ ವ್ಯವಸ್ಥೆ ರದ್ದು

- Advertisement -
- Advertisement -

ಇರಾನ್‌ ದೇಶದ ಕಟ್ಟುನಿಟ್ಟಾದ ಮಹಿಳಾ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸಿದ ಆರೋಪದ ಮೇಲೆ ಬಂಧನದ ಸಮಯದಲ್ಲಿ ಮಹ್ಸಾ ಅಮಿನಿ ಎಂಬ ಮಹಿಳೆ ಸಾವಿಗೀಡಾದ ಬಳಿಕ ಸ್ಫೋಟಿಸಿದ ಮಹಿಳಾ ಹೋರಾಟಕ್ಕೆ ಆರಂಭಿಕ ಜಯ ಸಿಕ್ಕಿದೆ. ಎರಡು ತಿಂಗಳಿಗಿಂತ ಹೆಚ್ಚು ಕಾಲ ಪ್ರತಿಭಟನೆಗಳು ನಡೆದ ನಂತರ ಇರಾನ್ ಸರ್ಕಾರ ತನ್ನ ಮೊರಾಲಿಟಿ (ನೈತಿಕ) ಪೊಲೀಸ್ ಘಟಕಗಳನ್ನು ರದ್ದುಗೊಳಿಸಿದೆ.

ಇರಾನ್‌ನ ಪ್ರಾಸಿಕ್ಯೂಟರ್ ಜನರಲ್ ಮೊಹಮದ್ ಜಾಫರ್ ಮೊಂಟಜೆರಿ, “ಮೊರಾಲಿಟಿ ಪೊಲೀಸ್‌ ವ್ಯವಸ್ಥೆಯನ್ನು ರದ್ದುಗೊಳಿಸಲಾಗಿದೆ” ಎಂದು ಹೇಳಿರುವುದಾಗಿ ಶನಿವಾರ IRNA ವರದಿ ಪ್ರಕಟಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸ್ ಪಡೆಯ ಸ್ಥಿತಿಯ ಬಗ್ಗೆ ಹೆಚ್ಚಿನ ವಿವರಗಳನ್ನು ಒದಗಿಸಿಲ್ಲ. “ನ್ಯಾಯಾಂಗವು ಸಮುದಾಯದ ಮಟ್ಟದಲ್ಲಿ ನಡವಳಿಕೆಯ ಕ್ರಮಗಳನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರೆಸುತ್ತದೆ” ಎಂದು ಮೊಂಟಜೆರಿ ಹೇಳಿರುವುದಾಗಿ ಸುದ್ದಿಸಂಸ್ಥೆ ಎಪಿ ವರದಿ ಮಾಡಿದೆ.

ಇರಾನ್‌ನ ಪ್ರತಿಗಾಮಿ ನೀತಿಗಳು ಮತ್ತು ಪ್ರತಿಭಟನಾಕಾರರನ್ನು ಹತ್ತಿಕ್ಕಲು ಪ್ರತಿ-ಆಕ್ರಮಣಕಾರಿ ವಿಧಾನವನ್ನು ಅನುಸರಿಸುತ್ತಿರುವುದನ್ನು ವ್ಯಾಪಕವಾಗಿ ಖಂಡಿಸಿದ ಬಳಿಕ ಈ ಘೋಷಣೆ ಹೊರಬಿದ್ದಿದೆ.

ದೇಶದ ಇಸ್ಲಾಮಿಕ್ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸುವ ಜನರನ್ನು ಬಂಧಿಸುವ ಕಾರ್ಯಕ್ಕೆ 2005 ರಲ್ಲಿ ಇರಾನ್‌ನ ಮೊರಾಲಿಟಿ ಪೊಲೀಸ್‌ ಗುಂಪನ್ನು ಸ್ಥಾಪಿಸಲಾಯಿತು. ಆದರೆ ಕಳೆದ ಸೆಪ್ಟೆಂಬರ್‌ನಲ್ಲಿ ಪ್ರತಿಭಟನೆ ತೀವ್ರವಾಯಿತು. ಡ್ರೆಸ್ ಕೋಡ್ ಉಲ್ಲಂಘಿಸಿದ ಆರೋಪದಲ್ಲಿ ಬಂಧನಕ್ಕೊಳಗಾದ ಮಹ್ಸಾ ಅಮಿನಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

1979ರ ಇಸ್ಲಾಮಿಕ್ ಕ್ರಾಂತಿಯ ನಂತರದ ದಿಟ್ಟ ಸವಾಲುಗಳಲ್ಲಿ ಒಂದೆಂದು ಪರಿಗಣಿಸಲಾದ ರಾಷ್ಟ್ರವ್ಯಾಪಿ ಪ್ರತಿಭಟನೆಗಳಿಂದಾಗಿ ಇರಾನ್ ಗಮನ ಸೆಳೆಯಿತು. ಸೆಪ್ಟೆಂಬರ್‌ನಿಂದ ನಿರಂತರ ಹೋರಾಟಗಳು ನಡೆದವು. 22 ವರ್ಷದ ಕುರ್ದಿಶ್ ಮಹಿಳೆಯ ಸಾವು ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳನ್ನು ಹುಟ್ಟುಹಾಕಿತು ಮತ್ತು ಪ್ರಪಂಚದಾದ್ಯಂತ ಬೆಂಬಲವನ್ನು ಪಡೆಯಿತು.

ತಲೆಗೆ ಹಾಕುವ ಸ್ಕಾರ್ಫ್‌ಗಳನ್ನು ಮಹಿಳೆಯರು ಪ್ರತಿಭಟನೆಯಲ್ಲಿ ಸುಟ್ಟು ಹಾಕಿದರು. ಕೂದಲುಗಳನ್ನು ಕತ್ತರಿಸಿ ಆಕ್ರೋಶ ಹೊರಹಾಕಿದರು. ಕಲಾವಿದರು ಮತ್ತು ರಾಷ್ಟ್ರೀಯ ಕ್ರೀಡಾಪಟುಗಳು ಕೂಡ ಚಳವಳಿಗೆ ಬೆಂಬಲ ವ್ಯಕ್ತಪಡಿಸಿದರು.

ಅನಧಿಕೃತ ಅಂದಾಜಿನ ಪ್ರಕಾರ, ಪ್ರತಿಭಟನೆಗಳನ್ನು ನಿಗ್ರಹಿಸಲು ಇರಾನ್‌ನ ಮೊರಾಲಿಟಿ ಪೊಲೀಸರು ಪ್ರತಿ-ಆಕ್ರಮಣಕಾರಿ ಕ್ರಮಗಳನ್ನು ತೆಗೆದುಕೊಂಡರು. ಹೀಗಾಗಿ ನೂರಾರು ಜನರ ಸಾವುಗಳು ಸಂಭವಿಸಿದವು. ನವೆಂಬರ್ 29ರಂದು ನಡೆದ ರಾಷ್ಟ್ರವ್ಯಾಪಿ ಪ್ರತಿಭಟನೆಯ ಅಶಾಂತಿಯಲ್ಲಿ 300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಇರಾನಿನ ಜನರಲ್ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿರಿ: ಇರಾನ್: ವಸ್ತ್ರಸಂಹಿತೆ ವಿರುದ್ಧ ಮುಂದುವರಿದ ಹೋರಾಟ; 19 ಮಕ್ಕಳು ಸೇರಿ 185 ಮಂದಿ ಸಾವು- ವರದಿ

ಇರಾನ್ ತನ್ನ ಪ್ರತಿಭಟನಾಕಾರರನ್ನು ಕ್ರೂರವಾಗಿ ನಡೆಸಿಕೊಂಡಿರುವುದು ವಿಶ್ವದ ನಾಯಕರು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ಟೀಕೆಗೆ ಗುರಿಯಾಗಿದೆ. ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸದಂತೆ ವಿಶ್ವಸಂಸ್ಥೆಯ ತಜ್ಞರು ಕರೆ ನೀಡಿದ್ದಾರೆ.

ಆದಾಗ್ಯೂ, ಪಾಶ್ಚಿಮಾತ್ಯ ದೇಶಗಳು ಅಶಾಂತಿಗೆ ಪ್ರೋತ್ಸಾಹಿಸುತ್ತಿವೆ ಎಂದು ಇರಾನ್ ಆರೋಪಿಸಿದೆ. ಜನಾಂಗೀಯ ಅಲ್ಪಸಂಖ್ಯಾತ ಪ್ರದೇಶಗಳಲ್ಲಿನ ಪ್ರತಿಭಟನಾಕಾರರು ಪ್ರತ್ಯೇಕತಾವಾದಿ ಗುಂಪುಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇರಾನ್ ಮಹಿಳೆಯರ ಹೋರಾಟ ನಿಜಕ್ಕೂ ಮೈನವಿರೇಳಿಸುವ ಹೋರಾಟ! ಅವರ ಜಯ, ಖುಷಿ ತಂದಿದೆ. ಇದು, ನಮ್ಮಲ್ಲಿ ಇರುವ ನೈತಿಕ ಪೋಲೀಸ್ ಗಿರಿಯ ಅಂತ್ಯಕ್ಕೆ ದಾರಿ ದೀಪ ಆಗಬಹುದೆ?!?

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...