Homeಮುಖಪುಟಇರಾನ್‌ ಮಹಿಳೆಯರ ದಿಟ್ಟ ಹೋರಾಟ: ಮೊರಾಲಿಟಿ ಪೊಲೀಸ್‌ ವ್ಯವಸ್ಥೆ ರದ್ದು

ಇರಾನ್‌ ಮಹಿಳೆಯರ ದಿಟ್ಟ ಹೋರಾಟ: ಮೊರಾಲಿಟಿ ಪೊಲೀಸ್‌ ವ್ಯವಸ್ಥೆ ರದ್ದು

- Advertisement -
- Advertisement -

ಇರಾನ್‌ ದೇಶದ ಕಟ್ಟುನಿಟ್ಟಾದ ಮಹಿಳಾ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸಿದ ಆರೋಪದ ಮೇಲೆ ಬಂಧನದ ಸಮಯದಲ್ಲಿ ಮಹ್ಸಾ ಅಮಿನಿ ಎಂಬ ಮಹಿಳೆ ಸಾವಿಗೀಡಾದ ಬಳಿಕ ಸ್ಫೋಟಿಸಿದ ಮಹಿಳಾ ಹೋರಾಟಕ್ಕೆ ಆರಂಭಿಕ ಜಯ ಸಿಕ್ಕಿದೆ. ಎರಡು ತಿಂಗಳಿಗಿಂತ ಹೆಚ್ಚು ಕಾಲ ಪ್ರತಿಭಟನೆಗಳು ನಡೆದ ನಂತರ ಇರಾನ್ ಸರ್ಕಾರ ತನ್ನ ಮೊರಾಲಿಟಿ (ನೈತಿಕ) ಪೊಲೀಸ್ ಘಟಕಗಳನ್ನು ರದ್ದುಗೊಳಿಸಿದೆ.

ಇರಾನ್‌ನ ಪ್ರಾಸಿಕ್ಯೂಟರ್ ಜನರಲ್ ಮೊಹಮದ್ ಜಾಫರ್ ಮೊಂಟಜೆರಿ, “ಮೊರಾಲಿಟಿ ಪೊಲೀಸ್‌ ವ್ಯವಸ್ಥೆಯನ್ನು ರದ್ದುಗೊಳಿಸಲಾಗಿದೆ” ಎಂದು ಹೇಳಿರುವುದಾಗಿ ಶನಿವಾರ IRNA ವರದಿ ಪ್ರಕಟಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸ್ ಪಡೆಯ ಸ್ಥಿತಿಯ ಬಗ್ಗೆ ಹೆಚ್ಚಿನ ವಿವರಗಳನ್ನು ಒದಗಿಸಿಲ್ಲ. “ನ್ಯಾಯಾಂಗವು ಸಮುದಾಯದ ಮಟ್ಟದಲ್ಲಿ ನಡವಳಿಕೆಯ ಕ್ರಮಗಳನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರೆಸುತ್ತದೆ” ಎಂದು ಮೊಂಟಜೆರಿ ಹೇಳಿರುವುದಾಗಿ ಸುದ್ದಿಸಂಸ್ಥೆ ಎಪಿ ವರದಿ ಮಾಡಿದೆ.

ಇರಾನ್‌ನ ಪ್ರತಿಗಾಮಿ ನೀತಿಗಳು ಮತ್ತು ಪ್ರತಿಭಟನಾಕಾರರನ್ನು ಹತ್ತಿಕ್ಕಲು ಪ್ರತಿ-ಆಕ್ರಮಣಕಾರಿ ವಿಧಾನವನ್ನು ಅನುಸರಿಸುತ್ತಿರುವುದನ್ನು ವ್ಯಾಪಕವಾಗಿ ಖಂಡಿಸಿದ ಬಳಿಕ ಈ ಘೋಷಣೆ ಹೊರಬಿದ್ದಿದೆ.

ದೇಶದ ಇಸ್ಲಾಮಿಕ್ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸುವ ಜನರನ್ನು ಬಂಧಿಸುವ ಕಾರ್ಯಕ್ಕೆ 2005 ರಲ್ಲಿ ಇರಾನ್‌ನ ಮೊರಾಲಿಟಿ ಪೊಲೀಸ್‌ ಗುಂಪನ್ನು ಸ್ಥಾಪಿಸಲಾಯಿತು. ಆದರೆ ಕಳೆದ ಸೆಪ್ಟೆಂಬರ್‌ನಲ್ಲಿ ಪ್ರತಿಭಟನೆ ತೀವ್ರವಾಯಿತು. ಡ್ರೆಸ್ ಕೋಡ್ ಉಲ್ಲಂಘಿಸಿದ ಆರೋಪದಲ್ಲಿ ಬಂಧನಕ್ಕೊಳಗಾದ ಮಹ್ಸಾ ಅಮಿನಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

1979ರ ಇಸ್ಲಾಮಿಕ್ ಕ್ರಾಂತಿಯ ನಂತರದ ದಿಟ್ಟ ಸವಾಲುಗಳಲ್ಲಿ ಒಂದೆಂದು ಪರಿಗಣಿಸಲಾದ ರಾಷ್ಟ್ರವ್ಯಾಪಿ ಪ್ರತಿಭಟನೆಗಳಿಂದಾಗಿ ಇರಾನ್ ಗಮನ ಸೆಳೆಯಿತು. ಸೆಪ್ಟೆಂಬರ್‌ನಿಂದ ನಿರಂತರ ಹೋರಾಟಗಳು ನಡೆದವು. 22 ವರ್ಷದ ಕುರ್ದಿಶ್ ಮಹಿಳೆಯ ಸಾವು ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳನ್ನು ಹುಟ್ಟುಹಾಕಿತು ಮತ್ತು ಪ್ರಪಂಚದಾದ್ಯಂತ ಬೆಂಬಲವನ್ನು ಪಡೆಯಿತು.

ತಲೆಗೆ ಹಾಕುವ ಸ್ಕಾರ್ಫ್‌ಗಳನ್ನು ಮಹಿಳೆಯರು ಪ್ರತಿಭಟನೆಯಲ್ಲಿ ಸುಟ್ಟು ಹಾಕಿದರು. ಕೂದಲುಗಳನ್ನು ಕತ್ತರಿಸಿ ಆಕ್ರೋಶ ಹೊರಹಾಕಿದರು. ಕಲಾವಿದರು ಮತ್ತು ರಾಷ್ಟ್ರೀಯ ಕ್ರೀಡಾಪಟುಗಳು ಕೂಡ ಚಳವಳಿಗೆ ಬೆಂಬಲ ವ್ಯಕ್ತಪಡಿಸಿದರು.

ಅನಧಿಕೃತ ಅಂದಾಜಿನ ಪ್ರಕಾರ, ಪ್ರತಿಭಟನೆಗಳನ್ನು ನಿಗ್ರಹಿಸಲು ಇರಾನ್‌ನ ಮೊರಾಲಿಟಿ ಪೊಲೀಸರು ಪ್ರತಿ-ಆಕ್ರಮಣಕಾರಿ ಕ್ರಮಗಳನ್ನು ತೆಗೆದುಕೊಂಡರು. ಹೀಗಾಗಿ ನೂರಾರು ಜನರ ಸಾವುಗಳು ಸಂಭವಿಸಿದವು. ನವೆಂಬರ್ 29ರಂದು ನಡೆದ ರಾಷ್ಟ್ರವ್ಯಾಪಿ ಪ್ರತಿಭಟನೆಯ ಅಶಾಂತಿಯಲ್ಲಿ 300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಇರಾನಿನ ಜನರಲ್ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿರಿ: ಇರಾನ್: ವಸ್ತ್ರಸಂಹಿತೆ ವಿರುದ್ಧ ಮುಂದುವರಿದ ಹೋರಾಟ; 19 ಮಕ್ಕಳು ಸೇರಿ 185 ಮಂದಿ ಸಾವು- ವರದಿ

ಇರಾನ್ ತನ್ನ ಪ್ರತಿಭಟನಾಕಾರರನ್ನು ಕ್ರೂರವಾಗಿ ನಡೆಸಿಕೊಂಡಿರುವುದು ವಿಶ್ವದ ನಾಯಕರು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ಟೀಕೆಗೆ ಗುರಿಯಾಗಿದೆ. ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸದಂತೆ ವಿಶ್ವಸಂಸ್ಥೆಯ ತಜ್ಞರು ಕರೆ ನೀಡಿದ್ದಾರೆ.

ಆದಾಗ್ಯೂ, ಪಾಶ್ಚಿಮಾತ್ಯ ದೇಶಗಳು ಅಶಾಂತಿಗೆ ಪ್ರೋತ್ಸಾಹಿಸುತ್ತಿವೆ ಎಂದು ಇರಾನ್ ಆರೋಪಿಸಿದೆ. ಜನಾಂಗೀಯ ಅಲ್ಪಸಂಖ್ಯಾತ ಪ್ರದೇಶಗಳಲ್ಲಿನ ಪ್ರತಿಭಟನಾಕಾರರು ಪ್ರತ್ಯೇಕತಾವಾದಿ ಗುಂಪುಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇರಾನ್ ಮಹಿಳೆಯರ ಹೋರಾಟ ನಿಜಕ್ಕೂ ಮೈನವಿರೇಳಿಸುವ ಹೋರಾಟ! ಅವರ ಜಯ, ಖುಷಿ ತಂದಿದೆ. ಇದು, ನಮ್ಮಲ್ಲಿ ಇರುವ ನೈತಿಕ ಪೋಲೀಸ್ ಗಿರಿಯ ಅಂತ್ಯಕ್ಕೆ ದಾರಿ ದೀಪ ಆಗಬಹುದೆ?!?

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...