Homeಮುಖಪುಟಇರಾನ್‌ ಮಹಿಳೆಯರ ದಿಟ್ಟ ಹೋರಾಟ: ಮೊರಾಲಿಟಿ ಪೊಲೀಸ್‌ ವ್ಯವಸ್ಥೆ ರದ್ದು

ಇರಾನ್‌ ಮಹಿಳೆಯರ ದಿಟ್ಟ ಹೋರಾಟ: ಮೊರಾಲಿಟಿ ಪೊಲೀಸ್‌ ವ್ಯವಸ್ಥೆ ರದ್ದು

- Advertisement -
- Advertisement -

ಇರಾನ್‌ ದೇಶದ ಕಟ್ಟುನಿಟ್ಟಾದ ಮಹಿಳಾ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸಿದ ಆರೋಪದ ಮೇಲೆ ಬಂಧನದ ಸಮಯದಲ್ಲಿ ಮಹ್ಸಾ ಅಮಿನಿ ಎಂಬ ಮಹಿಳೆ ಸಾವಿಗೀಡಾದ ಬಳಿಕ ಸ್ಫೋಟಿಸಿದ ಮಹಿಳಾ ಹೋರಾಟಕ್ಕೆ ಆರಂಭಿಕ ಜಯ ಸಿಕ್ಕಿದೆ. ಎರಡು ತಿಂಗಳಿಗಿಂತ ಹೆಚ್ಚು ಕಾಲ ಪ್ರತಿಭಟನೆಗಳು ನಡೆದ ನಂತರ ಇರಾನ್ ಸರ್ಕಾರ ತನ್ನ ಮೊರಾಲಿಟಿ (ನೈತಿಕ) ಪೊಲೀಸ್ ಘಟಕಗಳನ್ನು ರದ್ದುಗೊಳಿಸಿದೆ.

ಇರಾನ್‌ನ ಪ್ರಾಸಿಕ್ಯೂಟರ್ ಜನರಲ್ ಮೊಹಮದ್ ಜಾಫರ್ ಮೊಂಟಜೆರಿ, “ಮೊರಾಲಿಟಿ ಪೊಲೀಸ್‌ ವ್ಯವಸ್ಥೆಯನ್ನು ರದ್ದುಗೊಳಿಸಲಾಗಿದೆ” ಎಂದು ಹೇಳಿರುವುದಾಗಿ ಶನಿವಾರ IRNA ವರದಿ ಪ್ರಕಟಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸ್ ಪಡೆಯ ಸ್ಥಿತಿಯ ಬಗ್ಗೆ ಹೆಚ್ಚಿನ ವಿವರಗಳನ್ನು ಒದಗಿಸಿಲ್ಲ. “ನ್ಯಾಯಾಂಗವು ಸಮುದಾಯದ ಮಟ್ಟದಲ್ಲಿ ನಡವಳಿಕೆಯ ಕ್ರಮಗಳನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರೆಸುತ್ತದೆ” ಎಂದು ಮೊಂಟಜೆರಿ ಹೇಳಿರುವುದಾಗಿ ಸುದ್ದಿಸಂಸ್ಥೆ ಎಪಿ ವರದಿ ಮಾಡಿದೆ.

ಇರಾನ್‌ನ ಪ್ರತಿಗಾಮಿ ನೀತಿಗಳು ಮತ್ತು ಪ್ರತಿಭಟನಾಕಾರರನ್ನು ಹತ್ತಿಕ್ಕಲು ಪ್ರತಿ-ಆಕ್ರಮಣಕಾರಿ ವಿಧಾನವನ್ನು ಅನುಸರಿಸುತ್ತಿರುವುದನ್ನು ವ್ಯಾಪಕವಾಗಿ ಖಂಡಿಸಿದ ಬಳಿಕ ಈ ಘೋಷಣೆ ಹೊರಬಿದ್ದಿದೆ.

ದೇಶದ ಇಸ್ಲಾಮಿಕ್ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸುವ ಜನರನ್ನು ಬಂಧಿಸುವ ಕಾರ್ಯಕ್ಕೆ 2005 ರಲ್ಲಿ ಇರಾನ್‌ನ ಮೊರಾಲಿಟಿ ಪೊಲೀಸ್‌ ಗುಂಪನ್ನು ಸ್ಥಾಪಿಸಲಾಯಿತು. ಆದರೆ ಕಳೆದ ಸೆಪ್ಟೆಂಬರ್‌ನಲ್ಲಿ ಪ್ರತಿಭಟನೆ ತೀವ್ರವಾಯಿತು. ಡ್ರೆಸ್ ಕೋಡ್ ಉಲ್ಲಂಘಿಸಿದ ಆರೋಪದಲ್ಲಿ ಬಂಧನಕ್ಕೊಳಗಾದ ಮಹ್ಸಾ ಅಮಿನಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

1979ರ ಇಸ್ಲಾಮಿಕ್ ಕ್ರಾಂತಿಯ ನಂತರದ ದಿಟ್ಟ ಸವಾಲುಗಳಲ್ಲಿ ಒಂದೆಂದು ಪರಿಗಣಿಸಲಾದ ರಾಷ್ಟ್ರವ್ಯಾಪಿ ಪ್ರತಿಭಟನೆಗಳಿಂದಾಗಿ ಇರಾನ್ ಗಮನ ಸೆಳೆಯಿತು. ಸೆಪ್ಟೆಂಬರ್‌ನಿಂದ ನಿರಂತರ ಹೋರಾಟಗಳು ನಡೆದವು. 22 ವರ್ಷದ ಕುರ್ದಿಶ್ ಮಹಿಳೆಯ ಸಾವು ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳನ್ನು ಹುಟ್ಟುಹಾಕಿತು ಮತ್ತು ಪ್ರಪಂಚದಾದ್ಯಂತ ಬೆಂಬಲವನ್ನು ಪಡೆಯಿತು.

ತಲೆಗೆ ಹಾಕುವ ಸ್ಕಾರ್ಫ್‌ಗಳನ್ನು ಮಹಿಳೆಯರು ಪ್ರತಿಭಟನೆಯಲ್ಲಿ ಸುಟ್ಟು ಹಾಕಿದರು. ಕೂದಲುಗಳನ್ನು ಕತ್ತರಿಸಿ ಆಕ್ರೋಶ ಹೊರಹಾಕಿದರು. ಕಲಾವಿದರು ಮತ್ತು ರಾಷ್ಟ್ರೀಯ ಕ್ರೀಡಾಪಟುಗಳು ಕೂಡ ಚಳವಳಿಗೆ ಬೆಂಬಲ ವ್ಯಕ್ತಪಡಿಸಿದರು.

ಅನಧಿಕೃತ ಅಂದಾಜಿನ ಪ್ರಕಾರ, ಪ್ರತಿಭಟನೆಗಳನ್ನು ನಿಗ್ರಹಿಸಲು ಇರಾನ್‌ನ ಮೊರಾಲಿಟಿ ಪೊಲೀಸರು ಪ್ರತಿ-ಆಕ್ರಮಣಕಾರಿ ಕ್ರಮಗಳನ್ನು ತೆಗೆದುಕೊಂಡರು. ಹೀಗಾಗಿ ನೂರಾರು ಜನರ ಸಾವುಗಳು ಸಂಭವಿಸಿದವು. ನವೆಂಬರ್ 29ರಂದು ನಡೆದ ರಾಷ್ಟ್ರವ್ಯಾಪಿ ಪ್ರತಿಭಟನೆಯ ಅಶಾಂತಿಯಲ್ಲಿ 300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಇರಾನಿನ ಜನರಲ್ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿರಿ: ಇರಾನ್: ವಸ್ತ್ರಸಂಹಿತೆ ವಿರುದ್ಧ ಮುಂದುವರಿದ ಹೋರಾಟ; 19 ಮಕ್ಕಳು ಸೇರಿ 185 ಮಂದಿ ಸಾವು- ವರದಿ

ಇರಾನ್ ತನ್ನ ಪ್ರತಿಭಟನಾಕಾರರನ್ನು ಕ್ರೂರವಾಗಿ ನಡೆಸಿಕೊಂಡಿರುವುದು ವಿಶ್ವದ ನಾಯಕರು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ಟೀಕೆಗೆ ಗುರಿಯಾಗಿದೆ. ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸದಂತೆ ವಿಶ್ವಸಂಸ್ಥೆಯ ತಜ್ಞರು ಕರೆ ನೀಡಿದ್ದಾರೆ.

ಆದಾಗ್ಯೂ, ಪಾಶ್ಚಿಮಾತ್ಯ ದೇಶಗಳು ಅಶಾಂತಿಗೆ ಪ್ರೋತ್ಸಾಹಿಸುತ್ತಿವೆ ಎಂದು ಇರಾನ್ ಆರೋಪಿಸಿದೆ. ಜನಾಂಗೀಯ ಅಲ್ಪಸಂಖ್ಯಾತ ಪ್ರದೇಶಗಳಲ್ಲಿನ ಪ್ರತಿಭಟನಾಕಾರರು ಪ್ರತ್ಯೇಕತಾವಾದಿ ಗುಂಪುಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇರಾನ್ ಮಹಿಳೆಯರ ಹೋರಾಟ ನಿಜಕ್ಕೂ ಮೈನವಿರೇಳಿಸುವ ಹೋರಾಟ! ಅವರ ಜಯ, ಖುಷಿ ತಂದಿದೆ. ಇದು, ನಮ್ಮಲ್ಲಿ ಇರುವ ನೈತಿಕ ಪೋಲೀಸ್ ಗಿರಿಯ ಅಂತ್ಯಕ್ಕೆ ದಾರಿ ದೀಪ ಆಗಬಹುದೆ?!?

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...