Homeಮುಖಪುಟಇರಾನ್‌ ಮಹಿಳೆಯರ ದಿಟ್ಟ ಹೋರಾಟ: ಮೊರಾಲಿಟಿ ಪೊಲೀಸ್‌ ವ್ಯವಸ್ಥೆ ರದ್ದು

ಇರಾನ್‌ ಮಹಿಳೆಯರ ದಿಟ್ಟ ಹೋರಾಟ: ಮೊರಾಲಿಟಿ ಪೊಲೀಸ್‌ ವ್ಯವಸ್ಥೆ ರದ್ದು

- Advertisement -
- Advertisement -

ಇರಾನ್‌ ದೇಶದ ಕಟ್ಟುನಿಟ್ಟಾದ ಮಹಿಳಾ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸಿದ ಆರೋಪದ ಮೇಲೆ ಬಂಧನದ ಸಮಯದಲ್ಲಿ ಮಹ್ಸಾ ಅಮಿನಿ ಎಂಬ ಮಹಿಳೆ ಸಾವಿಗೀಡಾದ ಬಳಿಕ ಸ್ಫೋಟಿಸಿದ ಮಹಿಳಾ ಹೋರಾಟಕ್ಕೆ ಆರಂಭಿಕ ಜಯ ಸಿಕ್ಕಿದೆ. ಎರಡು ತಿಂಗಳಿಗಿಂತ ಹೆಚ್ಚು ಕಾಲ ಪ್ರತಿಭಟನೆಗಳು ನಡೆದ ನಂತರ ಇರಾನ್ ಸರ್ಕಾರ ತನ್ನ ಮೊರಾಲಿಟಿ (ನೈತಿಕ) ಪೊಲೀಸ್ ಘಟಕಗಳನ್ನು ರದ್ದುಗೊಳಿಸಿದೆ.

ಇರಾನ್‌ನ ಪ್ರಾಸಿಕ್ಯೂಟರ್ ಜನರಲ್ ಮೊಹಮದ್ ಜಾಫರ್ ಮೊಂಟಜೆರಿ, “ಮೊರಾಲಿಟಿ ಪೊಲೀಸ್‌ ವ್ಯವಸ್ಥೆಯನ್ನು ರದ್ದುಗೊಳಿಸಲಾಗಿದೆ” ಎಂದು ಹೇಳಿರುವುದಾಗಿ ಶನಿವಾರ IRNA ವರದಿ ಪ್ರಕಟಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸ್ ಪಡೆಯ ಸ್ಥಿತಿಯ ಬಗ್ಗೆ ಹೆಚ್ಚಿನ ವಿವರಗಳನ್ನು ಒದಗಿಸಿಲ್ಲ. “ನ್ಯಾಯಾಂಗವು ಸಮುದಾಯದ ಮಟ್ಟದಲ್ಲಿ ನಡವಳಿಕೆಯ ಕ್ರಮಗಳನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರೆಸುತ್ತದೆ” ಎಂದು ಮೊಂಟಜೆರಿ ಹೇಳಿರುವುದಾಗಿ ಸುದ್ದಿಸಂಸ್ಥೆ ಎಪಿ ವರದಿ ಮಾಡಿದೆ.

ಇರಾನ್‌ನ ಪ್ರತಿಗಾಮಿ ನೀತಿಗಳು ಮತ್ತು ಪ್ರತಿಭಟನಾಕಾರರನ್ನು ಹತ್ತಿಕ್ಕಲು ಪ್ರತಿ-ಆಕ್ರಮಣಕಾರಿ ವಿಧಾನವನ್ನು ಅನುಸರಿಸುತ್ತಿರುವುದನ್ನು ವ್ಯಾಪಕವಾಗಿ ಖಂಡಿಸಿದ ಬಳಿಕ ಈ ಘೋಷಣೆ ಹೊರಬಿದ್ದಿದೆ.

ದೇಶದ ಇಸ್ಲಾಮಿಕ್ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸುವ ಜನರನ್ನು ಬಂಧಿಸುವ ಕಾರ್ಯಕ್ಕೆ 2005 ರಲ್ಲಿ ಇರಾನ್‌ನ ಮೊರಾಲಿಟಿ ಪೊಲೀಸ್‌ ಗುಂಪನ್ನು ಸ್ಥಾಪಿಸಲಾಯಿತು. ಆದರೆ ಕಳೆದ ಸೆಪ್ಟೆಂಬರ್‌ನಲ್ಲಿ ಪ್ರತಿಭಟನೆ ತೀವ್ರವಾಯಿತು. ಡ್ರೆಸ್ ಕೋಡ್ ಉಲ್ಲಂಘಿಸಿದ ಆರೋಪದಲ್ಲಿ ಬಂಧನಕ್ಕೊಳಗಾದ ಮಹ್ಸಾ ಅಮಿನಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

1979ರ ಇಸ್ಲಾಮಿಕ್ ಕ್ರಾಂತಿಯ ನಂತರದ ದಿಟ್ಟ ಸವಾಲುಗಳಲ್ಲಿ ಒಂದೆಂದು ಪರಿಗಣಿಸಲಾದ ರಾಷ್ಟ್ರವ್ಯಾಪಿ ಪ್ರತಿಭಟನೆಗಳಿಂದಾಗಿ ಇರಾನ್ ಗಮನ ಸೆಳೆಯಿತು. ಸೆಪ್ಟೆಂಬರ್‌ನಿಂದ ನಿರಂತರ ಹೋರಾಟಗಳು ನಡೆದವು. 22 ವರ್ಷದ ಕುರ್ದಿಶ್ ಮಹಿಳೆಯ ಸಾವು ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳನ್ನು ಹುಟ್ಟುಹಾಕಿತು ಮತ್ತು ಪ್ರಪಂಚದಾದ್ಯಂತ ಬೆಂಬಲವನ್ನು ಪಡೆಯಿತು.

ತಲೆಗೆ ಹಾಕುವ ಸ್ಕಾರ್ಫ್‌ಗಳನ್ನು ಮಹಿಳೆಯರು ಪ್ರತಿಭಟನೆಯಲ್ಲಿ ಸುಟ್ಟು ಹಾಕಿದರು. ಕೂದಲುಗಳನ್ನು ಕತ್ತರಿಸಿ ಆಕ್ರೋಶ ಹೊರಹಾಕಿದರು. ಕಲಾವಿದರು ಮತ್ತು ರಾಷ್ಟ್ರೀಯ ಕ್ರೀಡಾಪಟುಗಳು ಕೂಡ ಚಳವಳಿಗೆ ಬೆಂಬಲ ವ್ಯಕ್ತಪಡಿಸಿದರು.

ಅನಧಿಕೃತ ಅಂದಾಜಿನ ಪ್ರಕಾರ, ಪ್ರತಿಭಟನೆಗಳನ್ನು ನಿಗ್ರಹಿಸಲು ಇರಾನ್‌ನ ಮೊರಾಲಿಟಿ ಪೊಲೀಸರು ಪ್ರತಿ-ಆಕ್ರಮಣಕಾರಿ ಕ್ರಮಗಳನ್ನು ತೆಗೆದುಕೊಂಡರು. ಹೀಗಾಗಿ ನೂರಾರು ಜನರ ಸಾವುಗಳು ಸಂಭವಿಸಿದವು. ನವೆಂಬರ್ 29ರಂದು ನಡೆದ ರಾಷ್ಟ್ರವ್ಯಾಪಿ ಪ್ರತಿಭಟನೆಯ ಅಶಾಂತಿಯಲ್ಲಿ 300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಇರಾನಿನ ಜನರಲ್ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿರಿ: ಇರಾನ್: ವಸ್ತ್ರಸಂಹಿತೆ ವಿರುದ್ಧ ಮುಂದುವರಿದ ಹೋರಾಟ; 19 ಮಕ್ಕಳು ಸೇರಿ 185 ಮಂದಿ ಸಾವು- ವರದಿ

ಇರಾನ್ ತನ್ನ ಪ್ರತಿಭಟನಾಕಾರರನ್ನು ಕ್ರೂರವಾಗಿ ನಡೆಸಿಕೊಂಡಿರುವುದು ವಿಶ್ವದ ನಾಯಕರು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ಟೀಕೆಗೆ ಗುರಿಯಾಗಿದೆ. ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸದಂತೆ ವಿಶ್ವಸಂಸ್ಥೆಯ ತಜ್ಞರು ಕರೆ ನೀಡಿದ್ದಾರೆ.

ಆದಾಗ್ಯೂ, ಪಾಶ್ಚಿಮಾತ್ಯ ದೇಶಗಳು ಅಶಾಂತಿಗೆ ಪ್ರೋತ್ಸಾಹಿಸುತ್ತಿವೆ ಎಂದು ಇರಾನ್ ಆರೋಪಿಸಿದೆ. ಜನಾಂಗೀಯ ಅಲ್ಪಸಂಖ್ಯಾತ ಪ್ರದೇಶಗಳಲ್ಲಿನ ಪ್ರತಿಭಟನಾಕಾರರು ಪ್ರತ್ಯೇಕತಾವಾದಿ ಗುಂಪುಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇರಾನ್ ಮಹಿಳೆಯರ ಹೋರಾಟ ನಿಜಕ್ಕೂ ಮೈನವಿರೇಳಿಸುವ ಹೋರಾಟ! ಅವರ ಜಯ, ಖುಷಿ ತಂದಿದೆ. ಇದು, ನಮ್ಮಲ್ಲಿ ಇರುವ ನೈತಿಕ ಪೋಲೀಸ್ ಗಿರಿಯ ಅಂತ್ಯಕ್ಕೆ ದಾರಿ ದೀಪ ಆಗಬಹುದೆ?!?

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...