Homeಮುಖಪುಟಇರಾನ್‌ ಮಹಿಳೆಯರ ದಿಟ್ಟ ಹೋರಾಟ: ಮೊರಾಲಿಟಿ ಪೊಲೀಸ್‌ ವ್ಯವಸ್ಥೆ ರದ್ದು

ಇರಾನ್‌ ಮಹಿಳೆಯರ ದಿಟ್ಟ ಹೋರಾಟ: ಮೊರಾಲಿಟಿ ಪೊಲೀಸ್‌ ವ್ಯವಸ್ಥೆ ರದ್ದು

- Advertisement -
- Advertisement -

ಇರಾನ್‌ ದೇಶದ ಕಟ್ಟುನಿಟ್ಟಾದ ಮಹಿಳಾ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸಿದ ಆರೋಪದ ಮೇಲೆ ಬಂಧನದ ಸಮಯದಲ್ಲಿ ಮಹ್ಸಾ ಅಮಿನಿ ಎಂಬ ಮಹಿಳೆ ಸಾವಿಗೀಡಾದ ಬಳಿಕ ಸ್ಫೋಟಿಸಿದ ಮಹಿಳಾ ಹೋರಾಟಕ್ಕೆ ಆರಂಭಿಕ ಜಯ ಸಿಕ್ಕಿದೆ. ಎರಡು ತಿಂಗಳಿಗಿಂತ ಹೆಚ್ಚು ಕಾಲ ಪ್ರತಿಭಟನೆಗಳು ನಡೆದ ನಂತರ ಇರಾನ್ ಸರ್ಕಾರ ತನ್ನ ಮೊರಾಲಿಟಿ (ನೈತಿಕ) ಪೊಲೀಸ್ ಘಟಕಗಳನ್ನು ರದ್ದುಗೊಳಿಸಿದೆ.

ಇರಾನ್‌ನ ಪ್ರಾಸಿಕ್ಯೂಟರ್ ಜನರಲ್ ಮೊಹಮದ್ ಜಾಫರ್ ಮೊಂಟಜೆರಿ, “ಮೊರಾಲಿಟಿ ಪೊಲೀಸ್‌ ವ್ಯವಸ್ಥೆಯನ್ನು ರದ್ದುಗೊಳಿಸಲಾಗಿದೆ” ಎಂದು ಹೇಳಿರುವುದಾಗಿ ಶನಿವಾರ IRNA ವರದಿ ಪ್ರಕಟಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸ್ ಪಡೆಯ ಸ್ಥಿತಿಯ ಬಗ್ಗೆ ಹೆಚ್ಚಿನ ವಿವರಗಳನ್ನು ಒದಗಿಸಿಲ್ಲ. “ನ್ಯಾಯಾಂಗವು ಸಮುದಾಯದ ಮಟ್ಟದಲ್ಲಿ ನಡವಳಿಕೆಯ ಕ್ರಮಗಳನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರೆಸುತ್ತದೆ” ಎಂದು ಮೊಂಟಜೆರಿ ಹೇಳಿರುವುದಾಗಿ ಸುದ್ದಿಸಂಸ್ಥೆ ಎಪಿ ವರದಿ ಮಾಡಿದೆ.

ಇರಾನ್‌ನ ಪ್ರತಿಗಾಮಿ ನೀತಿಗಳು ಮತ್ತು ಪ್ರತಿಭಟನಾಕಾರರನ್ನು ಹತ್ತಿಕ್ಕಲು ಪ್ರತಿ-ಆಕ್ರಮಣಕಾರಿ ವಿಧಾನವನ್ನು ಅನುಸರಿಸುತ್ತಿರುವುದನ್ನು ವ್ಯಾಪಕವಾಗಿ ಖಂಡಿಸಿದ ಬಳಿಕ ಈ ಘೋಷಣೆ ಹೊರಬಿದ್ದಿದೆ.

ದೇಶದ ಇಸ್ಲಾಮಿಕ್ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸುವ ಜನರನ್ನು ಬಂಧಿಸುವ ಕಾರ್ಯಕ್ಕೆ 2005 ರಲ್ಲಿ ಇರಾನ್‌ನ ಮೊರಾಲಿಟಿ ಪೊಲೀಸ್‌ ಗುಂಪನ್ನು ಸ್ಥಾಪಿಸಲಾಯಿತು. ಆದರೆ ಕಳೆದ ಸೆಪ್ಟೆಂಬರ್‌ನಲ್ಲಿ ಪ್ರತಿಭಟನೆ ತೀವ್ರವಾಯಿತು. ಡ್ರೆಸ್ ಕೋಡ್ ಉಲ್ಲಂಘಿಸಿದ ಆರೋಪದಲ್ಲಿ ಬಂಧನಕ್ಕೊಳಗಾದ ಮಹ್ಸಾ ಅಮಿನಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

1979ರ ಇಸ್ಲಾಮಿಕ್ ಕ್ರಾಂತಿಯ ನಂತರದ ದಿಟ್ಟ ಸವಾಲುಗಳಲ್ಲಿ ಒಂದೆಂದು ಪರಿಗಣಿಸಲಾದ ರಾಷ್ಟ್ರವ್ಯಾಪಿ ಪ್ರತಿಭಟನೆಗಳಿಂದಾಗಿ ಇರಾನ್ ಗಮನ ಸೆಳೆಯಿತು. ಸೆಪ್ಟೆಂಬರ್‌ನಿಂದ ನಿರಂತರ ಹೋರಾಟಗಳು ನಡೆದವು. 22 ವರ್ಷದ ಕುರ್ದಿಶ್ ಮಹಿಳೆಯ ಸಾವು ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳನ್ನು ಹುಟ್ಟುಹಾಕಿತು ಮತ್ತು ಪ್ರಪಂಚದಾದ್ಯಂತ ಬೆಂಬಲವನ್ನು ಪಡೆಯಿತು.

ತಲೆಗೆ ಹಾಕುವ ಸ್ಕಾರ್ಫ್‌ಗಳನ್ನು ಮಹಿಳೆಯರು ಪ್ರತಿಭಟನೆಯಲ್ಲಿ ಸುಟ್ಟು ಹಾಕಿದರು. ಕೂದಲುಗಳನ್ನು ಕತ್ತರಿಸಿ ಆಕ್ರೋಶ ಹೊರಹಾಕಿದರು. ಕಲಾವಿದರು ಮತ್ತು ರಾಷ್ಟ್ರೀಯ ಕ್ರೀಡಾಪಟುಗಳು ಕೂಡ ಚಳವಳಿಗೆ ಬೆಂಬಲ ವ್ಯಕ್ತಪಡಿಸಿದರು.

ಅನಧಿಕೃತ ಅಂದಾಜಿನ ಪ್ರಕಾರ, ಪ್ರತಿಭಟನೆಗಳನ್ನು ನಿಗ್ರಹಿಸಲು ಇರಾನ್‌ನ ಮೊರಾಲಿಟಿ ಪೊಲೀಸರು ಪ್ರತಿ-ಆಕ್ರಮಣಕಾರಿ ಕ್ರಮಗಳನ್ನು ತೆಗೆದುಕೊಂಡರು. ಹೀಗಾಗಿ ನೂರಾರು ಜನರ ಸಾವುಗಳು ಸಂಭವಿಸಿದವು. ನವೆಂಬರ್ 29ರಂದು ನಡೆದ ರಾಷ್ಟ್ರವ್ಯಾಪಿ ಪ್ರತಿಭಟನೆಯ ಅಶಾಂತಿಯಲ್ಲಿ 300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಇರಾನಿನ ಜನರಲ್ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿರಿ: ಇರಾನ್: ವಸ್ತ್ರಸಂಹಿತೆ ವಿರುದ್ಧ ಮುಂದುವರಿದ ಹೋರಾಟ; 19 ಮಕ್ಕಳು ಸೇರಿ 185 ಮಂದಿ ಸಾವು- ವರದಿ

ಇರಾನ್ ತನ್ನ ಪ್ರತಿಭಟನಾಕಾರರನ್ನು ಕ್ರೂರವಾಗಿ ನಡೆಸಿಕೊಂಡಿರುವುದು ವಿಶ್ವದ ನಾಯಕರು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ಟೀಕೆಗೆ ಗುರಿಯಾಗಿದೆ. ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸದಂತೆ ವಿಶ್ವಸಂಸ್ಥೆಯ ತಜ್ಞರು ಕರೆ ನೀಡಿದ್ದಾರೆ.

ಆದಾಗ್ಯೂ, ಪಾಶ್ಚಿಮಾತ್ಯ ದೇಶಗಳು ಅಶಾಂತಿಗೆ ಪ್ರೋತ್ಸಾಹಿಸುತ್ತಿವೆ ಎಂದು ಇರಾನ್ ಆರೋಪಿಸಿದೆ. ಜನಾಂಗೀಯ ಅಲ್ಪಸಂಖ್ಯಾತ ಪ್ರದೇಶಗಳಲ್ಲಿನ ಪ್ರತಿಭಟನಾಕಾರರು ಪ್ರತ್ಯೇಕತಾವಾದಿ ಗುಂಪುಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇರಾನ್ ಮಹಿಳೆಯರ ಹೋರಾಟ ನಿಜಕ್ಕೂ ಮೈನವಿರೇಳಿಸುವ ಹೋರಾಟ! ಅವರ ಜಯ, ಖುಷಿ ತಂದಿದೆ. ಇದು, ನಮ್ಮಲ್ಲಿ ಇರುವ ನೈತಿಕ ಪೋಲೀಸ್ ಗಿರಿಯ ಅಂತ್ಯಕ್ಕೆ ದಾರಿ ದೀಪ ಆಗಬಹುದೆ?!?

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...