Homeರಾಜಕೀಯಬ್ರೆಜಿಲ್ ಚುನಾವಣೆ ಮತ್ತು ಪಾಶ್ಚಾತ್ಯ ಪ್ರಜಾತಂತ್ರದ ಅನಾವರಣ

ಬ್ರೆಜಿಲ್ ಚುನಾವಣೆ ಮತ್ತು ಪಾಶ್ಚಾತ್ಯ ಪ್ರಜಾತಂತ್ರದ ಅನಾವರಣ

- Advertisement -
- Advertisement -

ಬ್ರೆಜಿಲ್ ದೇಶವೆಂದರೆ ನಮ್ಮ ಜನಪ್ರಿಯ ಕಲ್ಪನೆಯಲ್ಲಿ ಫುಟ್‌ಬಾಲ್, ಪೆಲೆ, ಅಮೆಜಾನ್, ಸುಂದರ ಕಡಲತೀರದ ದೃಶ್ಯಗಳು ಹಾದುಹೋಗುತ್ತವೆ. ವಾಸ್ತವದಲ್ಲಿ ಬ್ರೆಜಿಲ್ ಒಂದು ಬಹುಜನಾಂಗೀಯ ಬಹುತ್ವವುಳ್ಳ ದಕ್ಷಿಣ ಅಮೆರಿಕಾದಲ್ಲೇ ಅತ್ಯಂತ ದೊಡ್ಡ ಆರ್ಥಿಕ ವ್ಯವಸ್ಥೆಯುಳ್ಳ ದೇಶ. ಇದರ ಇತಿಹಾಸ ಮತ್ತು ವರ್ತಮಾನ ಎಲ್ಲಾ ಜಾಗತಿಕ ದಕ್ಷಿಣದ ದೇಶಗಳಂತೆ ವಸಾಹತುಶಾಹಿ ಆಳ್ವಿಕೆ, ಗುಲಾಮರ ವ್ಯಾಪಾರ, ಪ್ರಜಾಪ್ರಭುತ್ವದ ಸಂಕ್ರಮಣ, ಉಳ್ಳವರ ಕೊಳ್ಳೆ, ನಿಲ್ಲದೆ ಮುಂದುವರೆಯುತ್ತಿರುವ ನೈಸರ್ಗಿಕ ಸಂಪನ್ಮೂಲಗಳ ಲೂಟಿ, ಆರ್ಥಿಕ ಅಸಮಾನತೆ ಮತ್ತು ಮುಂದುವರೆಯುತ್ತಿರುವ ನಿರಂತರ ವರ್ಗ ಸಂಘರ್ಷದಿಂದ ಕೂಡಿದೆ. ಇವೆಲ್ಲಕ್ಕಿಂತ ಮುಖ್ಯವಾಗಿ ನಮ್ಮ ಪರಿಸರದ ದೃಷ್ಟಿಯಿಂದ ಪ್ರಪಂಚದಲ್ಲೇ ಅತ್ಯಂತ ದೊಡ್ಡ ಉಷ್ಣವಲಯದ ಅಮಜಾನ್ ಮಳೆಗಾಡಿನ ಬಹುತೇಕ ಭಾಗ ಬ್ರೆಜಿಲ್‌ನಲ್ಲಿದೆ. ಅನೇಕಾನೇಕ ಪ್ರಾಣಿಪಕ್ಷಿಗಳು ಜೊತೆಗೆ 400 ರಿಂದ 500 ಬುಡಕಟ್ಟು ಜನಾಂಗಗಳು ಈ ಕಾಡುಗಳಲ್ಲಿ ವಾಸಿಸುತ್ತಾರೆ. ಕೆಲವು ಬುಡಕಟ್ಟು ಜನಾಂಗಗಳು ಇನ್ನೂ ಆಧುನಿಕ ಮನುಷ್ಯನ ಸಂಪರ್ಕದಿಂದ ದೂರ ಉಳಿದಿದ್ದಾರೆ. ಪ್ರಪಂಚದ ಬಹುತೇಕ ಜೀವಿಗಳು ಮತ್ತು ನಾವು ಉಸಿರಾಡುವ 20% ಆಮ್ಲಜನಕ ಅಮೆಜಾನ್ ದಟ್ಟಕಾಡುಗಳಿಂದ ಉತ್ಪಾದನೆಯಾಗುತ್ತದೆ. ಇದರಿಂದ ಕೆಲವು ಪರಿಸವಾದಿಗಳು ಅಮೆಜಾನನ್ನು ನಮ್ಮ ಗ್ರಹದ ಶ್ವಾಸಕೋಶಗಳು ಅಥವಾ ಕ್ಲೋರೋಫಿಲ್ ಎಂದು ಕರೆಯುತ್ತಾರೆ. ಅತ್ಯಂತ ಧ್ರುವೀಕರಣಗೊಂಡ ಆಕ್ಟೋಬರ್ 28ರಂದು ನಡೆದ ಬ್ರೆಜಿಲ್ ಚುನಾವಣೆಯ ಫಲಿತಾಂಶ ಪ್ರಪಂಚದ ಉಸಿರಾಟದ ಕ್ರಿಯೆಗೆ ಕೊಡಲಿ ಪೆಟ್ಟು ಕೊಟ್ಟಿದೆ. ಸುಮಾರು 21 ಕೋಟಿ ಜನಸಂಖ್ಯೆಯುಳ್ಳ ಬ್ರೆಜಿಲ್‌ನಲ್ಲಿ ಅಮೆರಿಕ ಮತ್ತು ಇಸ್ರೇಲ್ ಭಜನೆ ಮಾಡುವ ಮಾಜಿ ಮಿಲಿಟರೀ ಅಧಿಕಾರಿ ಜೈರ್ ಬೊಲ್ಸೊನಾರೊ 55.6% ವೋಟುಗಳನ್ನು ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯುವುದೇ ಅಲ್ಲದೆ, ಬ್ರೆಜಿಲ್ ಸೇರಿ ಒಂದೆರಡು ದಶಕಗಳಿಂದ ದಕ್ಷಿಣ ಅಮೆರಿಕ ದೇಶಗಳಲ್ಲಿ ಅಧಿಕಾರದಲ್ಲಿದ್ದ ಎಡಪಂಥೀಯ ಸರ್ಕಾರಗಳಿಗೆ ನೇರ ಬೆದರಿಕೆಯನ್ನು ಒಡ್ಡಿದ್ದಾನೆ. ಅದಲ್ಲದೆ ಬ್ರೆಜಿಲ್‌ನ ಕರಾಳ ಇತಿಹಾಸದ ಮಿಲಿಟರೀ ಆಡಳಿತವನ್ನು ಮತ್ತೆ ಮತ್ತೆ ವೈಭವೀಕರಿಸುತ್ತಾ ತನ್ನ ಧರ್ಮಾಂಧ, ಮಹಿಳಾವಿರೋಧಿ, ಸಾಮಾಜಿಕ ನ್ಯಾಯ ವಿರೋಧಿ, ಪರಿಸರ ವಿರೋಧಿ ಮತ್ತು ಮಾನವ ವಿರೋಧಿ ಹೇಳಿಕೆಗಳನ್ನು ಹರಿಬಿಡುತ್ತಾ ಜನವರಿ 1 ರಂದು ಅಧಿಕಾರಕ್ಕೇರುತ್ತಿದ್ದಾನೆ. ಇದು ಬ್ರೆಜಿಲ್‌ನ ರಾಜಕೀಯ ಪ್ರಜಾತಂತ್ರವು ಸೈನ್ಯೀಕರಣಗೊಳ್ಳುತ್ತಿರುವ ಮುನ್ಸೂಚನೆ ಎಂದು ಸ್ವಾತಂತ್ರ‍್ಯ ಮತ್ತು ಸಮಾನತೆ ಬಯಸುವ ಎಲ್ಲಾ ಪ್ರಜ್ಞಾವಂತ ಜನತೆ ತಿಳಿದುಕೊಳ್ಳಬೇಕಿದೆ.
ಚುನಾವಣೆಗೂ ಮುಂಚೆಯೇ ಇದನ್ನು ‘ಪಾಶ್ಚಾತ್ಯ ಮತ್ತು ಜಾಗತಿಕ ದಕ್ಷಿಣದ ಭವಿಷ್ಯವನ್ನು ನಿರ್ಧರಿಸುವ ಪಾಶ್ಚಾತ್ಯ ಪ್ರಜಾತಂತ್ರದ ಅನಾವರಣ’ ಹಾಗೂ ‘21ನೇ ಶತಮಾನದ ಪ್ರಜಾತಂತ್ರ ಮತ್ತು ನಾಗರಿಕತೆಯ ವಿರುದ್ದ ನವಸರ್ವಾಧಿಕಾರ/ ಅನಾಗರಿಕತೆಯ ಸಂಘರ್ಷ’ ಎಂದು ವಿಶ್ಲೇಷಿಸಲಾಗಿತ್ತು. ಪ್ರಪಂಚದಾದ್ಯಂತ ಬಲಪಂಥೀಯ ರಾಜಕೀಯ ಬುಗ್ಗೆಗಳೇಳುತ್ತಿರುವ ಸಮಯದಲ್ಲಿ ಈ ಸರ್ವಾಧಿಕಾರದ ಗೆಲುವನ್ನು ವಿಶ್ಲೇಷಿಸಲು ಹೋದರೆ ಅದರಲ್ಲಿ ಅಮೆರಿಕಾದ ಸರ್ವಾಧಿಕಾರದ ಅತ್ಯಾಧುನಿಕ, ಮನೋವೈಜ್ಞಾನಿಕ ಯುದ್ದತಂತ್ರಗಳು ನೋಡ ಸಿಗುತ್ತವೆ. ಅಮೆರಿಕಾದ ಬೇಹುಗಾರಿಕೆ ಸಂಸ್ಥೆ ಎನ್.ಎಸ್.ಎ ನ ಮಾಜಿ ಉದ್ಯೋಗಿ ಎಡ್ವರ್ಡ್ ಸ್ನೋಡನ್ 2013ರಲ್ಲೇ 2000 ದಿಂದ ಬ್ರೆಜಿಲ್ ದೇಶ ಅತ್ಯಂತ ಬೇಹುಗಾರಿಕೆಗೆ ಒಳಪಟ್ಟಿರುವ ದೇಶ ಎಂದು ಬಹಿರಂಗಪಡಿಸಿದ್ದರು. ಅದಕ್ಕೆ ಕೆಲವು ಕಾರಣಗಳು ಇವೆ. ತನ್ನ ಸಾಮ್ರಾಜ್ಯಶಾಹಿ ಧೋರಣೆಯಿಂದ ದಕ್ಷಿಣ ಅಮೆರಿಕಾದ ದೇಶಗಳ ಸರ್ಕಾರಗಳನ್ನು ಕ್ಷಿಪ್ರ ಕ್ರಾಂತಿ, ರಾಜಕೀಯ ಹತ್ಯೆ, ನಾಯಕತ್ವ ಬದಲಾವಣೆ, ರಾಜಕೀಯ ಹಸ್ತಕ್ಷೇಪಗಳಿಂದ ತನ್ನಿಚ್ಛೆಗೆ ತಕ್ಕಂತೆ ಬದಲಿಸುತ್ತಾ ಕೆಲವೊಮ್ಮೆ ನೇರ ಮಿಲಿಟರೀ ಆಡಳಿತವನ್ನು ಅಮೆರಿಕವು ಹೇರುತ್ತಾ ಬಂದಿತ್ತು. 1964ರಲ್ಲಿ ಮಧ್ಯ ಎಡಕ್ಕೆ ಸೇರುವ ಸುಧಾರಣಾವಾದಿ ಬ್ರೆಜಿಲ್ ಲೇಬರ್ ಪಕ್ಷದ ಮಾರ್ಕುಎಸ್ ಗೌಲಾರ್ಟ್.ರನ್ನು ಕ್ಷಿಪ್ರ ಕ್ರಾಂತಿ ಮೂಲಕ ಕಿತ್ತು ಹಾಕಿ 1985ರ ವರೆಗೂ ಮಿಲಿಟರಿ ಸರ್ವಾಧಿಕಾರವನ್ನು ಸ್ಥಾಪಿಸಿದ್ದರು. ಇದರ ಹಿಂದೆ ಅಮೆರಿಕಾದ ಬೆಂಬಲಿತ ಸ್ಥಳೀಯ ಕೃಷಿ ವ್ಯವಹಾರದ ಭೂಮಾಲೀಕರು, ಬಹುರಾಷ್ಟಿçÃಯ ಕಂಪನಿಗಳು, ಇವ್ಯಾಂಜೆಲಿಕಲ್ ಕ್ರೈಸ್ತ ಲಾಬೀ ಇದ್ದದ್ಡೇ ಅಲ್ಲದೆ, ಅದರ ಪ್ರಭಾವ ಸಮಾಜದಲ್ಲಿ ಬೆಳೆಯುತ್ತಾ ಹೋಯಿತು. ಈ ನಡೆ ದಕ್ಷಿಣ ಅಮೆರಿಕ ರಾಷ್ಟ್ರಗಳಲ್ಲಿ ಮುಂದೆ ಆದ ರಾಜಕೀಯ ಹತ್ಯೆಗಳು, ಎಡಪಂಥೀಯ ಸರ್ಕಾರಗಳ ವಿರುದ್ದ ಮಿಲಿಟರೀ ಕ್ಷಿಪ್ರ ಕ್ರಾಂತಿ, ನಾಯಕತ್ವ ಬದಲಾವಣೆಗಳಿಗೆ ಆಳುವ ವರ್ಗದ ನೀಲಿನಕ್ಷೆಯಾಯಿತು. ತಮ್ಮ ವಿರುದ್ದವಿದ್ದ ಪರಿಸರವಾದಿಗಳು, ಮಾನವ ಹಕ್ಕುಗಳ ಹೋರಾಟಗಾರರು, ಕಾರ್ಮಿಕ ಸಂಘಟನೆಗಳ ಮುಖಂಡರ ಅಪಹರಣಗಳು, ಚಿತ್ರಹಿಂಸೆ, ಜೈಲುವಾಸ ಮತ್ತು ಕೊಲೆಗಳು ನಡೆದವು. ತೊಂಬತ್ತರ ದಶಕದ ಮಧ್ಯಭಾಗದಲ್ಲಿ ಇದರ ವಿರುದ್ಧ ಪ್ರತಿರೋಧದ ಅಲೆಯೆದ್ದು(ಗುಲಾಬಿ ಅಲೆ) ಬದಲಾವಣೆಯ ಗಾಳಿ ಬೀಸತೊಡಗಿತು. ದಕ್ಷಿಣ ಅಮೆರಿಕಾದಲ್ಲಿ ಒಂದರ ಮೇಲೆ ಒಂದು ದೇಶ ಪ್ರಗತಿಪರ, ಎಡಪಂಥೀಯ ಸರ್ಕಾರಗಳ ರಚನೆಯತ್ತ ಮುಖ ಮಾಡಿತ್ತು. ಜನರನ್ನು ಸಂಘಟಿಸಿ, ಸರ್ವಾಧಿಕಾರದ ಅನ್ಯಾಯಗಳ ವಿರುದ್ಧ ದ್ವನಿಯೆತ್ತಿ ಚಿತ್ರಹಿಂಸೆಗೆ ಒಳಪಟ್ಟಿದ್ದ ಕಾರ್ಮಿಕ ಪಕ್ಷದ ಸಹ ಸಂಸ್ಥಾಪಕ ಲೂಇಸ್ ಇನಾಸಿಯೋ ಲೂಲಾ ದ ಸಿಲ್ವ 2003ರಲ್ಲಿ ಅಧಿಕಾರ ಹಿಡಿದಿದ್ದರು. ಬ್ರೆಜಿಲ್‌ನಲ್ಲಿ ಜನಪ್ರಿಯವಾಗಿ “ಲೂಲಾ” ಎಂದು ಪ್ರಸಿದ್ದಿಯಾಗಿದ್ದ ಅವರು ತಮ್ಮ 10 ವರ್ಷದ ಅವಧಿಯಲ್ಲಿ ನಾನಾರೀತಿಯ ಜನ ಕಲ್ಯಾಣ ಯೋಜನೆಗಳನ್ನು ರೂಪಿಸಿದ್ದರು. 3 ಕೋಟಿಗೂ ಹೆಚ್ಚು ಬ್ರೆಜಿಲ್ ಜನತೆಯನ್ನು ಬಡತನದಿಂದ ಮೇಲೆತ್ತಿದರು. ತಮ್ಮ ವಿಶೇಷ ಯೋಜನೆಗಳಾದ “ಬೊಳ್ಸಾ ಕುಟುಂಬ” ಪಿಂಚಣಿ ವ್ಯವಸ್ಥೆ ಮತ್ತು `ಫೊಮೆ ಝೀರೊ’ (ಶೂನ್ಯ ಹಸಿವು) ಕಾರ್ಯಕ್ರಮಗಳು ಪ್ರಪಂಚದಾದ್ಯಂತ ಮೆಚ್ಚುಗೆ ಗಳಿಸಿತ್ತು.
ಇದು ಬ್ರೆಜಿಲ್‌ನಲ್ಲಿ ಅಸ್ತಿತ್ವಕ್ಕೆ ಬರುತ್ತಿರುವ ಸರಣಿ ಬರಹಗಳ ಎರಡನೇ ಭಾಗ.. ಮುಂದುವರೆಯುವುದು..

– ಭರತ್ ಹೆಬ್ಬಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...