Homeರಾಜಕೀಯಬ್ರೆಜಿಲ್ ಚುನಾವಣೆ ಮತ್ತು ಪಾಶ್ಚಾತ್ಯ ಪ್ರಜಾತಂತ್ರದ ಅನಾವರಣ

ಬ್ರೆಜಿಲ್ ಚುನಾವಣೆ ಮತ್ತು ಪಾಶ್ಚಾತ್ಯ ಪ್ರಜಾತಂತ್ರದ ಅನಾವರಣ

- Advertisement -
- Advertisement -

ಬ್ರೆಜಿಲ್ ದೇಶವೆಂದರೆ ನಮ್ಮ ಜನಪ್ರಿಯ ಕಲ್ಪನೆಯಲ್ಲಿ ಫುಟ್‌ಬಾಲ್, ಪೆಲೆ, ಅಮೆಜಾನ್, ಸುಂದರ ಕಡಲತೀರದ ದೃಶ್ಯಗಳು ಹಾದುಹೋಗುತ್ತವೆ. ವಾಸ್ತವದಲ್ಲಿ ಬ್ರೆಜಿಲ್ ಒಂದು ಬಹುಜನಾಂಗೀಯ ಬಹುತ್ವವುಳ್ಳ ದಕ್ಷಿಣ ಅಮೆರಿಕಾದಲ್ಲೇ ಅತ್ಯಂತ ದೊಡ್ಡ ಆರ್ಥಿಕ ವ್ಯವಸ್ಥೆಯುಳ್ಳ ದೇಶ. ಇದರ ಇತಿಹಾಸ ಮತ್ತು ವರ್ತಮಾನ ಎಲ್ಲಾ ಜಾಗತಿಕ ದಕ್ಷಿಣದ ದೇಶಗಳಂತೆ ವಸಾಹತುಶಾಹಿ ಆಳ್ವಿಕೆ, ಗುಲಾಮರ ವ್ಯಾಪಾರ, ಪ್ರಜಾಪ್ರಭುತ್ವದ ಸಂಕ್ರಮಣ, ಉಳ್ಳವರ ಕೊಳ್ಳೆ, ನಿಲ್ಲದೆ ಮುಂದುವರೆಯುತ್ತಿರುವ ನೈಸರ್ಗಿಕ ಸಂಪನ್ಮೂಲಗಳ ಲೂಟಿ, ಆರ್ಥಿಕ ಅಸಮಾನತೆ ಮತ್ತು ಮುಂದುವರೆಯುತ್ತಿರುವ ನಿರಂತರ ವರ್ಗ ಸಂಘರ್ಷದಿಂದ ಕೂಡಿದೆ. ಇವೆಲ್ಲಕ್ಕಿಂತ ಮುಖ್ಯವಾಗಿ ನಮ್ಮ ಪರಿಸರದ ದೃಷ್ಟಿಯಿಂದ ಪ್ರಪಂಚದಲ್ಲೇ ಅತ್ಯಂತ ದೊಡ್ಡ ಉಷ್ಣವಲಯದ ಅಮಜಾನ್ ಮಳೆಗಾಡಿನ ಬಹುತೇಕ ಭಾಗ ಬ್ರೆಜಿಲ್‌ನಲ್ಲಿದೆ. ಅನೇಕಾನೇಕ ಪ್ರಾಣಿಪಕ್ಷಿಗಳು ಜೊತೆಗೆ 400 ರಿಂದ 500 ಬುಡಕಟ್ಟು ಜನಾಂಗಗಳು ಈ ಕಾಡುಗಳಲ್ಲಿ ವಾಸಿಸುತ್ತಾರೆ. ಕೆಲವು ಬುಡಕಟ್ಟು ಜನಾಂಗಗಳು ಇನ್ನೂ ಆಧುನಿಕ ಮನುಷ್ಯನ ಸಂಪರ್ಕದಿಂದ ದೂರ ಉಳಿದಿದ್ದಾರೆ. ಪ್ರಪಂಚದ ಬಹುತೇಕ ಜೀವಿಗಳು ಮತ್ತು ನಾವು ಉಸಿರಾಡುವ 20% ಆಮ್ಲಜನಕ ಅಮೆಜಾನ್ ದಟ್ಟಕಾಡುಗಳಿಂದ ಉತ್ಪಾದನೆಯಾಗುತ್ತದೆ. ಇದರಿಂದ ಕೆಲವು ಪರಿಸವಾದಿಗಳು ಅಮೆಜಾನನ್ನು ನಮ್ಮ ಗ್ರಹದ ಶ್ವಾಸಕೋಶಗಳು ಅಥವಾ ಕ್ಲೋರೋಫಿಲ್ ಎಂದು ಕರೆಯುತ್ತಾರೆ. ಅತ್ಯಂತ ಧ್ರುವೀಕರಣಗೊಂಡ ಆಕ್ಟೋಬರ್ 28ರಂದು ನಡೆದ ಬ್ರೆಜಿಲ್ ಚುನಾವಣೆಯ ಫಲಿತಾಂಶ ಪ್ರಪಂಚದ ಉಸಿರಾಟದ ಕ್ರಿಯೆಗೆ ಕೊಡಲಿ ಪೆಟ್ಟು ಕೊಟ್ಟಿದೆ. ಸುಮಾರು 21 ಕೋಟಿ ಜನಸಂಖ್ಯೆಯುಳ್ಳ ಬ್ರೆಜಿಲ್‌ನಲ್ಲಿ ಅಮೆರಿಕ ಮತ್ತು ಇಸ್ರೇಲ್ ಭಜನೆ ಮಾಡುವ ಮಾಜಿ ಮಿಲಿಟರೀ ಅಧಿಕಾರಿ ಜೈರ್ ಬೊಲ್ಸೊನಾರೊ 55.6% ವೋಟುಗಳನ್ನು ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯುವುದೇ ಅಲ್ಲದೆ, ಬ್ರೆಜಿಲ್ ಸೇರಿ ಒಂದೆರಡು ದಶಕಗಳಿಂದ ದಕ್ಷಿಣ ಅಮೆರಿಕ ದೇಶಗಳಲ್ಲಿ ಅಧಿಕಾರದಲ್ಲಿದ್ದ ಎಡಪಂಥೀಯ ಸರ್ಕಾರಗಳಿಗೆ ನೇರ ಬೆದರಿಕೆಯನ್ನು ಒಡ್ಡಿದ್ದಾನೆ. ಅದಲ್ಲದೆ ಬ್ರೆಜಿಲ್‌ನ ಕರಾಳ ಇತಿಹಾಸದ ಮಿಲಿಟರೀ ಆಡಳಿತವನ್ನು ಮತ್ತೆ ಮತ್ತೆ ವೈಭವೀಕರಿಸುತ್ತಾ ತನ್ನ ಧರ್ಮಾಂಧ, ಮಹಿಳಾವಿರೋಧಿ, ಸಾಮಾಜಿಕ ನ್ಯಾಯ ವಿರೋಧಿ, ಪರಿಸರ ವಿರೋಧಿ ಮತ್ತು ಮಾನವ ವಿರೋಧಿ ಹೇಳಿಕೆಗಳನ್ನು ಹರಿಬಿಡುತ್ತಾ ಜನವರಿ 1 ರಂದು ಅಧಿಕಾರಕ್ಕೇರುತ್ತಿದ್ದಾನೆ. ಇದು ಬ್ರೆಜಿಲ್‌ನ ರಾಜಕೀಯ ಪ್ರಜಾತಂತ್ರವು ಸೈನ್ಯೀಕರಣಗೊಳ್ಳುತ್ತಿರುವ ಮುನ್ಸೂಚನೆ ಎಂದು ಸ್ವಾತಂತ್ರ‍್ಯ ಮತ್ತು ಸಮಾನತೆ ಬಯಸುವ ಎಲ್ಲಾ ಪ್ರಜ್ಞಾವಂತ ಜನತೆ ತಿಳಿದುಕೊಳ್ಳಬೇಕಿದೆ.
ಚುನಾವಣೆಗೂ ಮುಂಚೆಯೇ ಇದನ್ನು ‘ಪಾಶ್ಚಾತ್ಯ ಮತ್ತು ಜಾಗತಿಕ ದಕ್ಷಿಣದ ಭವಿಷ್ಯವನ್ನು ನಿರ್ಧರಿಸುವ ಪಾಶ್ಚಾತ್ಯ ಪ್ರಜಾತಂತ್ರದ ಅನಾವರಣ’ ಹಾಗೂ ‘21ನೇ ಶತಮಾನದ ಪ್ರಜಾತಂತ್ರ ಮತ್ತು ನಾಗರಿಕತೆಯ ವಿರುದ್ದ ನವಸರ್ವಾಧಿಕಾರ/ ಅನಾಗರಿಕತೆಯ ಸಂಘರ್ಷ’ ಎಂದು ವಿಶ್ಲೇಷಿಸಲಾಗಿತ್ತು. ಪ್ರಪಂಚದಾದ್ಯಂತ ಬಲಪಂಥೀಯ ರಾಜಕೀಯ ಬುಗ್ಗೆಗಳೇಳುತ್ತಿರುವ ಸಮಯದಲ್ಲಿ ಈ ಸರ್ವಾಧಿಕಾರದ ಗೆಲುವನ್ನು ವಿಶ್ಲೇಷಿಸಲು ಹೋದರೆ ಅದರಲ್ಲಿ ಅಮೆರಿಕಾದ ಸರ್ವಾಧಿಕಾರದ ಅತ್ಯಾಧುನಿಕ, ಮನೋವೈಜ್ಞಾನಿಕ ಯುದ್ದತಂತ್ರಗಳು ನೋಡ ಸಿಗುತ್ತವೆ. ಅಮೆರಿಕಾದ ಬೇಹುಗಾರಿಕೆ ಸಂಸ್ಥೆ ಎನ್.ಎಸ್.ಎ ನ ಮಾಜಿ ಉದ್ಯೋಗಿ ಎಡ್ವರ್ಡ್ ಸ್ನೋಡನ್ 2013ರಲ್ಲೇ 2000 ದಿಂದ ಬ್ರೆಜಿಲ್ ದೇಶ ಅತ್ಯಂತ ಬೇಹುಗಾರಿಕೆಗೆ ಒಳಪಟ್ಟಿರುವ ದೇಶ ಎಂದು ಬಹಿರಂಗಪಡಿಸಿದ್ದರು. ಅದಕ್ಕೆ ಕೆಲವು ಕಾರಣಗಳು ಇವೆ. ತನ್ನ ಸಾಮ್ರಾಜ್ಯಶಾಹಿ ಧೋರಣೆಯಿಂದ ದಕ್ಷಿಣ ಅಮೆರಿಕಾದ ದೇಶಗಳ ಸರ್ಕಾರಗಳನ್ನು ಕ್ಷಿಪ್ರ ಕ್ರಾಂತಿ, ರಾಜಕೀಯ ಹತ್ಯೆ, ನಾಯಕತ್ವ ಬದಲಾವಣೆ, ರಾಜಕೀಯ ಹಸ್ತಕ್ಷೇಪಗಳಿಂದ ತನ್ನಿಚ್ಛೆಗೆ ತಕ್ಕಂತೆ ಬದಲಿಸುತ್ತಾ ಕೆಲವೊಮ್ಮೆ ನೇರ ಮಿಲಿಟರೀ ಆಡಳಿತವನ್ನು ಅಮೆರಿಕವು ಹೇರುತ್ತಾ ಬಂದಿತ್ತು. 1964ರಲ್ಲಿ ಮಧ್ಯ ಎಡಕ್ಕೆ ಸೇರುವ ಸುಧಾರಣಾವಾದಿ ಬ್ರೆಜಿಲ್ ಲೇಬರ್ ಪಕ್ಷದ ಮಾರ್ಕುಎಸ್ ಗೌಲಾರ್ಟ್.ರನ್ನು ಕ್ಷಿಪ್ರ ಕ್ರಾಂತಿ ಮೂಲಕ ಕಿತ್ತು ಹಾಕಿ 1985ರ ವರೆಗೂ ಮಿಲಿಟರಿ ಸರ್ವಾಧಿಕಾರವನ್ನು ಸ್ಥಾಪಿಸಿದ್ದರು. ಇದರ ಹಿಂದೆ ಅಮೆರಿಕಾದ ಬೆಂಬಲಿತ ಸ್ಥಳೀಯ ಕೃಷಿ ವ್ಯವಹಾರದ ಭೂಮಾಲೀಕರು, ಬಹುರಾಷ್ಟಿçÃಯ ಕಂಪನಿಗಳು, ಇವ್ಯಾಂಜೆಲಿಕಲ್ ಕ್ರೈಸ್ತ ಲಾಬೀ ಇದ್ದದ್ಡೇ ಅಲ್ಲದೆ, ಅದರ ಪ್ರಭಾವ ಸಮಾಜದಲ್ಲಿ ಬೆಳೆಯುತ್ತಾ ಹೋಯಿತು. ಈ ನಡೆ ದಕ್ಷಿಣ ಅಮೆರಿಕ ರಾಷ್ಟ್ರಗಳಲ್ಲಿ ಮುಂದೆ ಆದ ರಾಜಕೀಯ ಹತ್ಯೆಗಳು, ಎಡಪಂಥೀಯ ಸರ್ಕಾರಗಳ ವಿರುದ್ದ ಮಿಲಿಟರೀ ಕ್ಷಿಪ್ರ ಕ್ರಾಂತಿ, ನಾಯಕತ್ವ ಬದಲಾವಣೆಗಳಿಗೆ ಆಳುವ ವರ್ಗದ ನೀಲಿನಕ್ಷೆಯಾಯಿತು. ತಮ್ಮ ವಿರುದ್ದವಿದ್ದ ಪರಿಸರವಾದಿಗಳು, ಮಾನವ ಹಕ್ಕುಗಳ ಹೋರಾಟಗಾರರು, ಕಾರ್ಮಿಕ ಸಂಘಟನೆಗಳ ಮುಖಂಡರ ಅಪಹರಣಗಳು, ಚಿತ್ರಹಿಂಸೆ, ಜೈಲುವಾಸ ಮತ್ತು ಕೊಲೆಗಳು ನಡೆದವು. ತೊಂಬತ್ತರ ದಶಕದ ಮಧ್ಯಭಾಗದಲ್ಲಿ ಇದರ ವಿರುದ್ಧ ಪ್ರತಿರೋಧದ ಅಲೆಯೆದ್ದು(ಗುಲಾಬಿ ಅಲೆ) ಬದಲಾವಣೆಯ ಗಾಳಿ ಬೀಸತೊಡಗಿತು. ದಕ್ಷಿಣ ಅಮೆರಿಕಾದಲ್ಲಿ ಒಂದರ ಮೇಲೆ ಒಂದು ದೇಶ ಪ್ರಗತಿಪರ, ಎಡಪಂಥೀಯ ಸರ್ಕಾರಗಳ ರಚನೆಯತ್ತ ಮುಖ ಮಾಡಿತ್ತು. ಜನರನ್ನು ಸಂಘಟಿಸಿ, ಸರ್ವಾಧಿಕಾರದ ಅನ್ಯಾಯಗಳ ವಿರುದ್ಧ ದ್ವನಿಯೆತ್ತಿ ಚಿತ್ರಹಿಂಸೆಗೆ ಒಳಪಟ್ಟಿದ್ದ ಕಾರ್ಮಿಕ ಪಕ್ಷದ ಸಹ ಸಂಸ್ಥಾಪಕ ಲೂಇಸ್ ಇನಾಸಿಯೋ ಲೂಲಾ ದ ಸಿಲ್ವ 2003ರಲ್ಲಿ ಅಧಿಕಾರ ಹಿಡಿದಿದ್ದರು. ಬ್ರೆಜಿಲ್‌ನಲ್ಲಿ ಜನಪ್ರಿಯವಾಗಿ “ಲೂಲಾ” ಎಂದು ಪ್ರಸಿದ್ದಿಯಾಗಿದ್ದ ಅವರು ತಮ್ಮ 10 ವರ್ಷದ ಅವಧಿಯಲ್ಲಿ ನಾನಾರೀತಿಯ ಜನ ಕಲ್ಯಾಣ ಯೋಜನೆಗಳನ್ನು ರೂಪಿಸಿದ್ದರು. 3 ಕೋಟಿಗೂ ಹೆಚ್ಚು ಬ್ರೆಜಿಲ್ ಜನತೆಯನ್ನು ಬಡತನದಿಂದ ಮೇಲೆತ್ತಿದರು. ತಮ್ಮ ವಿಶೇಷ ಯೋಜನೆಗಳಾದ “ಬೊಳ್ಸಾ ಕುಟುಂಬ” ಪಿಂಚಣಿ ವ್ಯವಸ್ಥೆ ಮತ್ತು `ಫೊಮೆ ಝೀರೊ’ (ಶೂನ್ಯ ಹಸಿವು) ಕಾರ್ಯಕ್ರಮಗಳು ಪ್ರಪಂಚದಾದ್ಯಂತ ಮೆಚ್ಚುಗೆ ಗಳಿಸಿತ್ತು.
ಇದು ಬ್ರೆಜಿಲ್‌ನಲ್ಲಿ ಅಸ್ತಿತ್ವಕ್ಕೆ ಬರುತ್ತಿರುವ ಸರಣಿ ಬರಹಗಳ ಎರಡನೇ ಭಾಗ.. ಮುಂದುವರೆಯುವುದು..

– ಭರತ್ ಹೆಬ್ಬಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...