Homeರಾಜಕೀಯಬ್ರೆಜಿಲ್ ಚುನಾವಣೆ ಮತ್ತು ಪಾಶ್ಚಾತ್ಯ ಪ್ರಜಾತಂತ್ರದ ಅನಾವರಣ

ಬ್ರೆಜಿಲ್ ಚುನಾವಣೆ ಮತ್ತು ಪಾಶ್ಚಾತ್ಯ ಪ್ರಜಾತಂತ್ರದ ಅನಾವರಣ

- Advertisement -
- Advertisement -

ಬ್ರೆಜಿಲ್ ದೇಶವೆಂದರೆ ನಮ್ಮ ಜನಪ್ರಿಯ ಕಲ್ಪನೆಯಲ್ಲಿ ಫುಟ್‌ಬಾಲ್, ಪೆಲೆ, ಅಮೆಜಾನ್, ಸುಂದರ ಕಡಲತೀರದ ದೃಶ್ಯಗಳು ಹಾದುಹೋಗುತ್ತವೆ. ವಾಸ್ತವದಲ್ಲಿ ಬ್ರೆಜಿಲ್ ಒಂದು ಬಹುಜನಾಂಗೀಯ ಬಹುತ್ವವುಳ್ಳ ದಕ್ಷಿಣ ಅಮೆರಿಕಾದಲ್ಲೇ ಅತ್ಯಂತ ದೊಡ್ಡ ಆರ್ಥಿಕ ವ್ಯವಸ್ಥೆಯುಳ್ಳ ದೇಶ. ಇದರ ಇತಿಹಾಸ ಮತ್ತು ವರ್ತಮಾನ ಎಲ್ಲಾ ಜಾಗತಿಕ ದಕ್ಷಿಣದ ದೇಶಗಳಂತೆ ವಸಾಹತುಶಾಹಿ ಆಳ್ವಿಕೆ, ಗುಲಾಮರ ವ್ಯಾಪಾರ, ಪ್ರಜಾಪ್ರಭುತ್ವದ ಸಂಕ್ರಮಣ, ಉಳ್ಳವರ ಕೊಳ್ಳೆ, ನಿಲ್ಲದೆ ಮುಂದುವರೆಯುತ್ತಿರುವ ನೈಸರ್ಗಿಕ ಸಂಪನ್ಮೂಲಗಳ ಲೂಟಿ, ಆರ್ಥಿಕ ಅಸಮಾನತೆ ಮತ್ತು ಮುಂದುವರೆಯುತ್ತಿರುವ ನಿರಂತರ ವರ್ಗ ಸಂಘರ್ಷದಿಂದ ಕೂಡಿದೆ. ಇವೆಲ್ಲಕ್ಕಿಂತ ಮುಖ್ಯವಾಗಿ ನಮ್ಮ ಪರಿಸರದ ದೃಷ್ಟಿಯಿಂದ ಪ್ರಪಂಚದಲ್ಲೇ ಅತ್ಯಂತ ದೊಡ್ಡ ಉಷ್ಣವಲಯದ ಅಮಜಾನ್ ಮಳೆಗಾಡಿನ ಬಹುತೇಕ ಭಾಗ ಬ್ರೆಜಿಲ್‌ನಲ್ಲಿದೆ. ಅನೇಕಾನೇಕ ಪ್ರಾಣಿಪಕ್ಷಿಗಳು ಜೊತೆಗೆ 400 ರಿಂದ 500 ಬುಡಕಟ್ಟು ಜನಾಂಗಗಳು ಈ ಕಾಡುಗಳಲ್ಲಿ ವಾಸಿಸುತ್ತಾರೆ. ಕೆಲವು ಬುಡಕಟ್ಟು ಜನಾಂಗಗಳು ಇನ್ನೂ ಆಧುನಿಕ ಮನುಷ್ಯನ ಸಂಪರ್ಕದಿಂದ ದೂರ ಉಳಿದಿದ್ದಾರೆ. ಪ್ರಪಂಚದ ಬಹುತೇಕ ಜೀವಿಗಳು ಮತ್ತು ನಾವು ಉಸಿರಾಡುವ 20% ಆಮ್ಲಜನಕ ಅಮೆಜಾನ್ ದಟ್ಟಕಾಡುಗಳಿಂದ ಉತ್ಪಾದನೆಯಾಗುತ್ತದೆ. ಇದರಿಂದ ಕೆಲವು ಪರಿಸವಾದಿಗಳು ಅಮೆಜಾನನ್ನು ನಮ್ಮ ಗ್ರಹದ ಶ್ವಾಸಕೋಶಗಳು ಅಥವಾ ಕ್ಲೋರೋಫಿಲ್ ಎಂದು ಕರೆಯುತ್ತಾರೆ. ಅತ್ಯಂತ ಧ್ರುವೀಕರಣಗೊಂಡ ಆಕ್ಟೋಬರ್ 28ರಂದು ನಡೆದ ಬ್ರೆಜಿಲ್ ಚುನಾವಣೆಯ ಫಲಿತಾಂಶ ಪ್ರಪಂಚದ ಉಸಿರಾಟದ ಕ್ರಿಯೆಗೆ ಕೊಡಲಿ ಪೆಟ್ಟು ಕೊಟ್ಟಿದೆ. ಸುಮಾರು 21 ಕೋಟಿ ಜನಸಂಖ್ಯೆಯುಳ್ಳ ಬ್ರೆಜಿಲ್‌ನಲ್ಲಿ ಅಮೆರಿಕ ಮತ್ತು ಇಸ್ರೇಲ್ ಭಜನೆ ಮಾಡುವ ಮಾಜಿ ಮಿಲಿಟರೀ ಅಧಿಕಾರಿ ಜೈರ್ ಬೊಲ್ಸೊನಾರೊ 55.6% ವೋಟುಗಳನ್ನು ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯುವುದೇ ಅಲ್ಲದೆ, ಬ್ರೆಜಿಲ್ ಸೇರಿ ಒಂದೆರಡು ದಶಕಗಳಿಂದ ದಕ್ಷಿಣ ಅಮೆರಿಕ ದೇಶಗಳಲ್ಲಿ ಅಧಿಕಾರದಲ್ಲಿದ್ದ ಎಡಪಂಥೀಯ ಸರ್ಕಾರಗಳಿಗೆ ನೇರ ಬೆದರಿಕೆಯನ್ನು ಒಡ್ಡಿದ್ದಾನೆ. ಅದಲ್ಲದೆ ಬ್ರೆಜಿಲ್‌ನ ಕರಾಳ ಇತಿಹಾಸದ ಮಿಲಿಟರೀ ಆಡಳಿತವನ್ನು ಮತ್ತೆ ಮತ್ತೆ ವೈಭವೀಕರಿಸುತ್ತಾ ತನ್ನ ಧರ್ಮಾಂಧ, ಮಹಿಳಾವಿರೋಧಿ, ಸಾಮಾಜಿಕ ನ್ಯಾಯ ವಿರೋಧಿ, ಪರಿಸರ ವಿರೋಧಿ ಮತ್ತು ಮಾನವ ವಿರೋಧಿ ಹೇಳಿಕೆಗಳನ್ನು ಹರಿಬಿಡುತ್ತಾ ಜನವರಿ 1 ರಂದು ಅಧಿಕಾರಕ್ಕೇರುತ್ತಿದ್ದಾನೆ. ಇದು ಬ್ರೆಜಿಲ್‌ನ ರಾಜಕೀಯ ಪ್ರಜಾತಂತ್ರವು ಸೈನ್ಯೀಕರಣಗೊಳ್ಳುತ್ತಿರುವ ಮುನ್ಸೂಚನೆ ಎಂದು ಸ್ವಾತಂತ್ರ‍್ಯ ಮತ್ತು ಸಮಾನತೆ ಬಯಸುವ ಎಲ್ಲಾ ಪ್ರಜ್ಞಾವಂತ ಜನತೆ ತಿಳಿದುಕೊಳ್ಳಬೇಕಿದೆ.
ಚುನಾವಣೆಗೂ ಮುಂಚೆಯೇ ಇದನ್ನು ‘ಪಾಶ್ಚಾತ್ಯ ಮತ್ತು ಜಾಗತಿಕ ದಕ್ಷಿಣದ ಭವಿಷ್ಯವನ್ನು ನಿರ್ಧರಿಸುವ ಪಾಶ್ಚಾತ್ಯ ಪ್ರಜಾತಂತ್ರದ ಅನಾವರಣ’ ಹಾಗೂ ‘21ನೇ ಶತಮಾನದ ಪ್ರಜಾತಂತ್ರ ಮತ್ತು ನಾಗರಿಕತೆಯ ವಿರುದ್ದ ನವಸರ್ವಾಧಿಕಾರ/ ಅನಾಗರಿಕತೆಯ ಸಂಘರ್ಷ’ ಎಂದು ವಿಶ್ಲೇಷಿಸಲಾಗಿತ್ತು. ಪ್ರಪಂಚದಾದ್ಯಂತ ಬಲಪಂಥೀಯ ರಾಜಕೀಯ ಬುಗ್ಗೆಗಳೇಳುತ್ತಿರುವ ಸಮಯದಲ್ಲಿ ಈ ಸರ್ವಾಧಿಕಾರದ ಗೆಲುವನ್ನು ವಿಶ್ಲೇಷಿಸಲು ಹೋದರೆ ಅದರಲ್ಲಿ ಅಮೆರಿಕಾದ ಸರ್ವಾಧಿಕಾರದ ಅತ್ಯಾಧುನಿಕ, ಮನೋವೈಜ್ಞಾನಿಕ ಯುದ್ದತಂತ್ರಗಳು ನೋಡ ಸಿಗುತ್ತವೆ. ಅಮೆರಿಕಾದ ಬೇಹುಗಾರಿಕೆ ಸಂಸ್ಥೆ ಎನ್.ಎಸ್.ಎ ನ ಮಾಜಿ ಉದ್ಯೋಗಿ ಎಡ್ವರ್ಡ್ ಸ್ನೋಡನ್ 2013ರಲ್ಲೇ 2000 ದಿಂದ ಬ್ರೆಜಿಲ್ ದೇಶ ಅತ್ಯಂತ ಬೇಹುಗಾರಿಕೆಗೆ ಒಳಪಟ್ಟಿರುವ ದೇಶ ಎಂದು ಬಹಿರಂಗಪಡಿಸಿದ್ದರು. ಅದಕ್ಕೆ ಕೆಲವು ಕಾರಣಗಳು ಇವೆ. ತನ್ನ ಸಾಮ್ರಾಜ್ಯಶಾಹಿ ಧೋರಣೆಯಿಂದ ದಕ್ಷಿಣ ಅಮೆರಿಕಾದ ದೇಶಗಳ ಸರ್ಕಾರಗಳನ್ನು ಕ್ಷಿಪ್ರ ಕ್ರಾಂತಿ, ರಾಜಕೀಯ ಹತ್ಯೆ, ನಾಯಕತ್ವ ಬದಲಾವಣೆ, ರಾಜಕೀಯ ಹಸ್ತಕ್ಷೇಪಗಳಿಂದ ತನ್ನಿಚ್ಛೆಗೆ ತಕ್ಕಂತೆ ಬದಲಿಸುತ್ತಾ ಕೆಲವೊಮ್ಮೆ ನೇರ ಮಿಲಿಟರೀ ಆಡಳಿತವನ್ನು ಅಮೆರಿಕವು ಹೇರುತ್ತಾ ಬಂದಿತ್ತು. 1964ರಲ್ಲಿ ಮಧ್ಯ ಎಡಕ್ಕೆ ಸೇರುವ ಸುಧಾರಣಾವಾದಿ ಬ್ರೆಜಿಲ್ ಲೇಬರ್ ಪಕ್ಷದ ಮಾರ್ಕುಎಸ್ ಗೌಲಾರ್ಟ್.ರನ್ನು ಕ್ಷಿಪ್ರ ಕ್ರಾಂತಿ ಮೂಲಕ ಕಿತ್ತು ಹಾಕಿ 1985ರ ವರೆಗೂ ಮಿಲಿಟರಿ ಸರ್ವಾಧಿಕಾರವನ್ನು ಸ್ಥಾಪಿಸಿದ್ದರು. ಇದರ ಹಿಂದೆ ಅಮೆರಿಕಾದ ಬೆಂಬಲಿತ ಸ್ಥಳೀಯ ಕೃಷಿ ವ್ಯವಹಾರದ ಭೂಮಾಲೀಕರು, ಬಹುರಾಷ್ಟಿçÃಯ ಕಂಪನಿಗಳು, ಇವ್ಯಾಂಜೆಲಿಕಲ್ ಕ್ರೈಸ್ತ ಲಾಬೀ ಇದ್ದದ್ಡೇ ಅಲ್ಲದೆ, ಅದರ ಪ್ರಭಾವ ಸಮಾಜದಲ್ಲಿ ಬೆಳೆಯುತ್ತಾ ಹೋಯಿತು. ಈ ನಡೆ ದಕ್ಷಿಣ ಅಮೆರಿಕ ರಾಷ್ಟ್ರಗಳಲ್ಲಿ ಮುಂದೆ ಆದ ರಾಜಕೀಯ ಹತ್ಯೆಗಳು, ಎಡಪಂಥೀಯ ಸರ್ಕಾರಗಳ ವಿರುದ್ದ ಮಿಲಿಟರೀ ಕ್ಷಿಪ್ರ ಕ್ರಾಂತಿ, ನಾಯಕತ್ವ ಬದಲಾವಣೆಗಳಿಗೆ ಆಳುವ ವರ್ಗದ ನೀಲಿನಕ್ಷೆಯಾಯಿತು. ತಮ್ಮ ವಿರುದ್ದವಿದ್ದ ಪರಿಸರವಾದಿಗಳು, ಮಾನವ ಹಕ್ಕುಗಳ ಹೋರಾಟಗಾರರು, ಕಾರ್ಮಿಕ ಸಂಘಟನೆಗಳ ಮುಖಂಡರ ಅಪಹರಣಗಳು, ಚಿತ್ರಹಿಂಸೆ, ಜೈಲುವಾಸ ಮತ್ತು ಕೊಲೆಗಳು ನಡೆದವು. ತೊಂಬತ್ತರ ದಶಕದ ಮಧ್ಯಭಾಗದಲ್ಲಿ ಇದರ ವಿರುದ್ಧ ಪ್ರತಿರೋಧದ ಅಲೆಯೆದ್ದು(ಗುಲಾಬಿ ಅಲೆ) ಬದಲಾವಣೆಯ ಗಾಳಿ ಬೀಸತೊಡಗಿತು. ದಕ್ಷಿಣ ಅಮೆರಿಕಾದಲ್ಲಿ ಒಂದರ ಮೇಲೆ ಒಂದು ದೇಶ ಪ್ರಗತಿಪರ, ಎಡಪಂಥೀಯ ಸರ್ಕಾರಗಳ ರಚನೆಯತ್ತ ಮುಖ ಮಾಡಿತ್ತು. ಜನರನ್ನು ಸಂಘಟಿಸಿ, ಸರ್ವಾಧಿಕಾರದ ಅನ್ಯಾಯಗಳ ವಿರುದ್ಧ ದ್ವನಿಯೆತ್ತಿ ಚಿತ್ರಹಿಂಸೆಗೆ ಒಳಪಟ್ಟಿದ್ದ ಕಾರ್ಮಿಕ ಪಕ್ಷದ ಸಹ ಸಂಸ್ಥಾಪಕ ಲೂಇಸ್ ಇನಾಸಿಯೋ ಲೂಲಾ ದ ಸಿಲ್ವ 2003ರಲ್ಲಿ ಅಧಿಕಾರ ಹಿಡಿದಿದ್ದರು. ಬ್ರೆಜಿಲ್‌ನಲ್ಲಿ ಜನಪ್ರಿಯವಾಗಿ “ಲೂಲಾ” ಎಂದು ಪ್ರಸಿದ್ದಿಯಾಗಿದ್ದ ಅವರು ತಮ್ಮ 10 ವರ್ಷದ ಅವಧಿಯಲ್ಲಿ ನಾನಾರೀತಿಯ ಜನ ಕಲ್ಯಾಣ ಯೋಜನೆಗಳನ್ನು ರೂಪಿಸಿದ್ದರು. 3 ಕೋಟಿಗೂ ಹೆಚ್ಚು ಬ್ರೆಜಿಲ್ ಜನತೆಯನ್ನು ಬಡತನದಿಂದ ಮೇಲೆತ್ತಿದರು. ತಮ್ಮ ವಿಶೇಷ ಯೋಜನೆಗಳಾದ “ಬೊಳ್ಸಾ ಕುಟುಂಬ” ಪಿಂಚಣಿ ವ್ಯವಸ್ಥೆ ಮತ್ತು `ಫೊಮೆ ಝೀರೊ’ (ಶೂನ್ಯ ಹಸಿವು) ಕಾರ್ಯಕ್ರಮಗಳು ಪ್ರಪಂಚದಾದ್ಯಂತ ಮೆಚ್ಚುಗೆ ಗಳಿಸಿತ್ತು.
ಇದು ಬ್ರೆಜಿಲ್‌ನಲ್ಲಿ ಅಸ್ತಿತ್ವಕ್ಕೆ ಬರುತ್ತಿರುವ ಸರಣಿ ಬರಹಗಳ ಎರಡನೇ ಭಾಗ.. ಮುಂದುವರೆಯುವುದು..

– ಭರತ್ ಹೆಬ್ಬಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...