Homeಅಂತರಾಷ್ಟ್ರೀಯಬ್ರೆಜಿಲ್: ಅಮೆಜಾನ್ ಹೋರಾಟಗಾರ್ತಿಗೆ ಪರಿಸರ ಖಾತೆ - ಲುಲಾ ಕ್ಯಾಬಿನೆಟ್‌ನಲ್ಲಿ ದಾಖಲೆಯ 11 ಮಹಿಳಾ ಸಚಿವರು

ಬ್ರೆಜಿಲ್: ಅಮೆಜಾನ್ ಹೋರಾಟಗಾರ್ತಿಗೆ ಪರಿಸರ ಖಾತೆ – ಲುಲಾ ಕ್ಯಾಬಿನೆಟ್‌ನಲ್ಲಿ ದಾಖಲೆಯ 11 ಮಹಿಳಾ ಸಚಿವರು

- Advertisement -
- Advertisement -

ಬ್ರೆಜಿಲ್‌ನ ಅಧ್ಯಕ್ಷರಾಗಿ ಲೂಯಿಝ್‌ ಇನಾಸಿಯೊ ಲುಲಾ ಡಾ ಸಿಲ್ವಾ ಅವರು 2023ರ ಜನವರಿ 1ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಮೆಜಾನ್ ಉಳಿಸಿ ಕಾರ್ಯಕರ್ತೆ ಮರೀನಾ ಸಿಲ್ವಾ ಅವರು ದೇಶದ ಮುಂದಿನ ಪರಿಸರ ಸಚಿವರಾಗಲಿದ್ದಾರೆ ಎಂದು ಲುಲಾ ಡಾ ಸಿಲ್ವಾ ಗುರುವಾರ ಘೋಷಿಸಿದ್ದಾರೆ.

37 ಜನ ಸಚಿವರ ಪಟ್ಟಿ ಮಾಡಲಾಗಿದ್ದು ಅದರಲ್ಲಿ ಮೊದಲ ಬಾರಿಗೆ ದಾಖಲೆಯ 11 ಜನ ಮಹಿಳೆಯರಿಗೆ ಸ್ಥಾನ ನೀಡಲಾಗಿದೆ ಎಂದು ತಿಳಿದುಬಂದಿದೆ. ಬ್ರೆಜಿಲ್‌ನ ಮೂಲನಿವಾಸಿ ಜನರ ಮಂತ್ರಿಯಾಗಿ ಸೋನಿಯಾ ಗುಜಜಾರಾರನ್ನು ಆಯ್ಕೆ ಮಾಡಿದರೆ ಸೋಯಾಬೀನ್ ಉತ್ಪಾದಕ ಕಾರ್ಲೋಸ್ ಫವಾರೊ ಅವರನ್ನು ಕೃಷಿ ಮಂತ್ರಿಯಾಗಿ ಲುಲಾ ಹೆಸರಿಸಿದ್ದಾರೆ.

ಅಮೆಜಾನ್ ಮಳೆಕಾಡಿನ ನಾಶದ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿದ್ದ ಮರೀನಾ ಸಿಲ್ವಾ ಅವರು ನೂತನ ಪರಿಸರ ಸಚಿವರಾಗಲಿದ್ದಾರೆ. ಹೊಸ ಆಡಳಿತವು ಪ್ರಬಲವಾದ ಕೃಷಿ ವ್ಯವಹಾರದ ಹಿತಾಸಕ್ತಿಗಳಿಂದ ದೂರವಿದ್ದರೂ ಸಹ ಕಾಡಿನಲ್ಲಿ ಅಕ್ರಮ ಅರಣ್ಯನಾಶವನ್ನು ಹತ್ತಿಕ್ಕಲು ಆದ್ಯತೆ ನೀಡುತ್ತದೆ ಎಂದು ಲುಲಾ ಘೋಷಿಸಿದ್ದಾರೆ.

ಈಜಿಪ್ಟ್‌ನಲ್ಲಿ ಇತ್ತೀಚೆಗೆ ನಡೆದ ಯುಎನ್ ಹವಾಮಾನ ಸಮ್ಮೇಳನದಲ್ಲಿ ಲುಲಾ ಮತ್ತು ಮರೀನಾ ಸಿಲ್ವಾ ಭಾಗವಹಿಸಿದ್ದರು. 2030 ರ ವೇಳೆಗೆ ವಿಶ್ವದ ಅತಿ ದೊಡ್ಡ ಮಳೆಕಾಡು ಮತ್ತು ಹವಾಮಾನ ಬದಲಾವಣೆಯ ವಿರುದ್ಧ ಹೋರಾಡುವ ಪ್ರಮುಖ ಕಾಡಾದ ಅಮೆಜಾನ್‌ ಅನ್ನು ಸಂಪೂರ್ಣವಾಗಿ ರಕ್ಷಿಸಲಾಗುವುದು ಎಂದು ಭರವಸೆ ನೀಡಲಾಗಿದೆ.

ಸಿಲ್ವಾ ಅವರು ನೇತೃತ್ವದ ಸಚಿವಾಲಯದ ಹೆಸರನ್ನು ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಎಂದು ಬದಲಾಯಿಸಲಾಗುವುದು ಎನ್ನಲಾಗಿದೆ.

ಮರೀಯಾ ಸಿಲ್ವಾ

ಮರೀಯಾ ಸಿಲ್ವಾ ಅಮೆಜಾನ್‌ನಲ್ಲಿ ಜನಿಸಿದರು ಮತ್ತು ಆರಂಭದಲ್ಲಿ ರಬ್ಬರ್ ಟ್ಯಾಪರ್ ಆಗಿ ಕೆಲಸ ಮಾಡಿದರು. ಆನಂತರ ಲುಲಾ ಅವರ ಅಧ್ಯಕ್ಷರಾಗಿದ್ದ ಮೊದಲ ಅವಧಿಯಲ್ಲಿ ಪರಿಸರ ಮಂತ್ರಿಯಾಗಿ ಅವರು ಹಲವಾರು ಸಂರಕ್ಷಣಾ ಪ್ರದೇಶಗಳ ರಚನೆ ಮತ್ತು ಪರಿಸರ ಅಪರಾಧಿಗಳ ವಿರುದ್ಧ ಪ್ರಮುಖ ಕಾರ್ಯಾಚರಣೆಗಳನ್ನು ನಡೆಸಿದ್ದಾರೆ. ಹೊಸ ಉಪಗ್ರಹ ಕಣ್ಗಾವಲುಗಳೊಂದಿಗೆ ಅರಣ್ಯನಾಶದ ವಿರುದ್ಧ ಅತ್ಯಾಧುನಿಕ ಕಾರ್ಯತಂತ್ರವನ್ನು ಮೇಲ್ವಿಚಾರಣೆ ಮಾಡಿದ್ದ ಹಿರಿಮೆ ಅವರದ್ದಾಗಿದೆ.

ಹೆಚ್ಚಾಗಿ ನಾರ್ವೆ ಬೆಂಬಲಿತ ಅಮೆಜಾನ್ ದೇಣಿಗೆ ಪಡೆದು ಮಳೆಕಾಡುಗಳನ್ನು ಸಂರಕ್ಷಿಸುವ ಅತಿದೊಡ್ಡ ಅಂತರರಾಷ್ಟ್ರೀಯ ಪ್ರಯತ್ನವನ್ನು ಅವರು ನಡೆಸಿದ್ದರು. ಆದರೆ ಆನಂತರ ಲುಲಾ ಕೃಷಿಕರ ಪರ ನಿಂತಾಗ ಮರೀಯಾ ಸಿಲ್ವಾ ರಾಜೀನಾಮೆ ನೀಡಿದ್ದರು.

ಈಗ ಮತ್ತೆ ಲುಲಾ ಅವರು ಮರೀನಾ ಅವರನ್ನು ಮನವೊಲಿಸಿದ್ದಾರೆ ಎನ್ನಲಾಗಿದ್ದು ಅದಕ್ಕಾಗಿ ಅವರು ಪರಿಸರ ಖಾತೆಯ ಸಚಿವರಾಗಲು ಒಪ್ಪಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬ್ರೆಜಿಲ್, ಲುಲಾ ಮತ್ತು ಗುಲಾಬಿ ಅಲೆ 2.0; ಕತ್ತಿಯಂಚಿನ ನಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...