Homeಅಂತರಾಷ್ಟ್ರೀಯಬ್ರೆಜಿಲ್: ಅಮೆಜಾನ್ ಹೋರಾಟಗಾರ್ತಿಗೆ ಪರಿಸರ ಖಾತೆ - ಲುಲಾ ಕ್ಯಾಬಿನೆಟ್‌ನಲ್ಲಿ ದಾಖಲೆಯ 11 ಮಹಿಳಾ ಸಚಿವರು

ಬ್ರೆಜಿಲ್: ಅಮೆಜಾನ್ ಹೋರಾಟಗಾರ್ತಿಗೆ ಪರಿಸರ ಖಾತೆ – ಲುಲಾ ಕ್ಯಾಬಿನೆಟ್‌ನಲ್ಲಿ ದಾಖಲೆಯ 11 ಮಹಿಳಾ ಸಚಿವರು

- Advertisement -
- Advertisement -

ಬ್ರೆಜಿಲ್‌ನ ಅಧ್ಯಕ್ಷರಾಗಿ ಲೂಯಿಝ್‌ ಇನಾಸಿಯೊ ಲುಲಾ ಡಾ ಸಿಲ್ವಾ ಅವರು 2023ರ ಜನವರಿ 1ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಮೆಜಾನ್ ಉಳಿಸಿ ಕಾರ್ಯಕರ್ತೆ ಮರೀನಾ ಸಿಲ್ವಾ ಅವರು ದೇಶದ ಮುಂದಿನ ಪರಿಸರ ಸಚಿವರಾಗಲಿದ್ದಾರೆ ಎಂದು ಲುಲಾ ಡಾ ಸಿಲ್ವಾ ಗುರುವಾರ ಘೋಷಿಸಿದ್ದಾರೆ.

37 ಜನ ಸಚಿವರ ಪಟ್ಟಿ ಮಾಡಲಾಗಿದ್ದು ಅದರಲ್ಲಿ ಮೊದಲ ಬಾರಿಗೆ ದಾಖಲೆಯ 11 ಜನ ಮಹಿಳೆಯರಿಗೆ ಸ್ಥಾನ ನೀಡಲಾಗಿದೆ ಎಂದು ತಿಳಿದುಬಂದಿದೆ. ಬ್ರೆಜಿಲ್‌ನ ಮೂಲನಿವಾಸಿ ಜನರ ಮಂತ್ರಿಯಾಗಿ ಸೋನಿಯಾ ಗುಜಜಾರಾರನ್ನು ಆಯ್ಕೆ ಮಾಡಿದರೆ ಸೋಯಾಬೀನ್ ಉತ್ಪಾದಕ ಕಾರ್ಲೋಸ್ ಫವಾರೊ ಅವರನ್ನು ಕೃಷಿ ಮಂತ್ರಿಯಾಗಿ ಲುಲಾ ಹೆಸರಿಸಿದ್ದಾರೆ.

ಅಮೆಜಾನ್ ಮಳೆಕಾಡಿನ ನಾಶದ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿದ್ದ ಮರೀನಾ ಸಿಲ್ವಾ ಅವರು ನೂತನ ಪರಿಸರ ಸಚಿವರಾಗಲಿದ್ದಾರೆ. ಹೊಸ ಆಡಳಿತವು ಪ್ರಬಲವಾದ ಕೃಷಿ ವ್ಯವಹಾರದ ಹಿತಾಸಕ್ತಿಗಳಿಂದ ದೂರವಿದ್ದರೂ ಸಹ ಕಾಡಿನಲ್ಲಿ ಅಕ್ರಮ ಅರಣ್ಯನಾಶವನ್ನು ಹತ್ತಿಕ್ಕಲು ಆದ್ಯತೆ ನೀಡುತ್ತದೆ ಎಂದು ಲುಲಾ ಘೋಷಿಸಿದ್ದಾರೆ.

ಈಜಿಪ್ಟ್‌ನಲ್ಲಿ ಇತ್ತೀಚೆಗೆ ನಡೆದ ಯುಎನ್ ಹವಾಮಾನ ಸಮ್ಮೇಳನದಲ್ಲಿ ಲುಲಾ ಮತ್ತು ಮರೀನಾ ಸಿಲ್ವಾ ಭಾಗವಹಿಸಿದ್ದರು. 2030 ರ ವೇಳೆಗೆ ವಿಶ್ವದ ಅತಿ ದೊಡ್ಡ ಮಳೆಕಾಡು ಮತ್ತು ಹವಾಮಾನ ಬದಲಾವಣೆಯ ವಿರುದ್ಧ ಹೋರಾಡುವ ಪ್ರಮುಖ ಕಾಡಾದ ಅಮೆಜಾನ್‌ ಅನ್ನು ಸಂಪೂರ್ಣವಾಗಿ ರಕ್ಷಿಸಲಾಗುವುದು ಎಂದು ಭರವಸೆ ನೀಡಲಾಗಿದೆ.

ಸಿಲ್ವಾ ಅವರು ನೇತೃತ್ವದ ಸಚಿವಾಲಯದ ಹೆಸರನ್ನು ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಎಂದು ಬದಲಾಯಿಸಲಾಗುವುದು ಎನ್ನಲಾಗಿದೆ.

ಮರೀಯಾ ಸಿಲ್ವಾ

ಮರೀಯಾ ಸಿಲ್ವಾ ಅಮೆಜಾನ್‌ನಲ್ಲಿ ಜನಿಸಿದರು ಮತ್ತು ಆರಂಭದಲ್ಲಿ ರಬ್ಬರ್ ಟ್ಯಾಪರ್ ಆಗಿ ಕೆಲಸ ಮಾಡಿದರು. ಆನಂತರ ಲುಲಾ ಅವರ ಅಧ್ಯಕ್ಷರಾಗಿದ್ದ ಮೊದಲ ಅವಧಿಯಲ್ಲಿ ಪರಿಸರ ಮಂತ್ರಿಯಾಗಿ ಅವರು ಹಲವಾರು ಸಂರಕ್ಷಣಾ ಪ್ರದೇಶಗಳ ರಚನೆ ಮತ್ತು ಪರಿಸರ ಅಪರಾಧಿಗಳ ವಿರುದ್ಧ ಪ್ರಮುಖ ಕಾರ್ಯಾಚರಣೆಗಳನ್ನು ನಡೆಸಿದ್ದಾರೆ. ಹೊಸ ಉಪಗ್ರಹ ಕಣ್ಗಾವಲುಗಳೊಂದಿಗೆ ಅರಣ್ಯನಾಶದ ವಿರುದ್ಧ ಅತ್ಯಾಧುನಿಕ ಕಾರ್ಯತಂತ್ರವನ್ನು ಮೇಲ್ವಿಚಾರಣೆ ಮಾಡಿದ್ದ ಹಿರಿಮೆ ಅವರದ್ದಾಗಿದೆ.

ಹೆಚ್ಚಾಗಿ ನಾರ್ವೆ ಬೆಂಬಲಿತ ಅಮೆಜಾನ್ ದೇಣಿಗೆ ಪಡೆದು ಮಳೆಕಾಡುಗಳನ್ನು ಸಂರಕ್ಷಿಸುವ ಅತಿದೊಡ್ಡ ಅಂತರರಾಷ್ಟ್ರೀಯ ಪ್ರಯತ್ನವನ್ನು ಅವರು ನಡೆಸಿದ್ದರು. ಆದರೆ ಆನಂತರ ಲುಲಾ ಕೃಷಿಕರ ಪರ ನಿಂತಾಗ ಮರೀಯಾ ಸಿಲ್ವಾ ರಾಜೀನಾಮೆ ನೀಡಿದ್ದರು.

ಈಗ ಮತ್ತೆ ಲುಲಾ ಅವರು ಮರೀನಾ ಅವರನ್ನು ಮನವೊಲಿಸಿದ್ದಾರೆ ಎನ್ನಲಾಗಿದ್ದು ಅದಕ್ಕಾಗಿ ಅವರು ಪರಿಸರ ಖಾತೆಯ ಸಚಿವರಾಗಲು ಒಪ್ಪಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬ್ರೆಜಿಲ್, ಲುಲಾ ಮತ್ತು ಗುಲಾಬಿ ಅಲೆ 2.0; ಕತ್ತಿಯಂಚಿನ ನಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...