Homeಅಂತರಾಷ್ಟ್ರೀಯಬ್ರೆಜಿಲ್: ಅಮೆಜಾನ್ ಹೋರಾಟಗಾರ್ತಿಗೆ ಪರಿಸರ ಖಾತೆ - ಲುಲಾ ಕ್ಯಾಬಿನೆಟ್‌ನಲ್ಲಿ ದಾಖಲೆಯ 11 ಮಹಿಳಾ ಸಚಿವರು

ಬ್ರೆಜಿಲ್: ಅಮೆಜಾನ್ ಹೋರಾಟಗಾರ್ತಿಗೆ ಪರಿಸರ ಖಾತೆ – ಲುಲಾ ಕ್ಯಾಬಿನೆಟ್‌ನಲ್ಲಿ ದಾಖಲೆಯ 11 ಮಹಿಳಾ ಸಚಿವರು

- Advertisement -
- Advertisement -

ಬ್ರೆಜಿಲ್‌ನ ಅಧ್ಯಕ್ಷರಾಗಿ ಲೂಯಿಝ್‌ ಇನಾಸಿಯೊ ಲುಲಾ ಡಾ ಸಿಲ್ವಾ ಅವರು 2023ರ ಜನವರಿ 1ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಮೆಜಾನ್ ಉಳಿಸಿ ಕಾರ್ಯಕರ್ತೆ ಮರೀನಾ ಸಿಲ್ವಾ ಅವರು ದೇಶದ ಮುಂದಿನ ಪರಿಸರ ಸಚಿವರಾಗಲಿದ್ದಾರೆ ಎಂದು ಲುಲಾ ಡಾ ಸಿಲ್ವಾ ಗುರುವಾರ ಘೋಷಿಸಿದ್ದಾರೆ.

37 ಜನ ಸಚಿವರ ಪಟ್ಟಿ ಮಾಡಲಾಗಿದ್ದು ಅದರಲ್ಲಿ ಮೊದಲ ಬಾರಿಗೆ ದಾಖಲೆಯ 11 ಜನ ಮಹಿಳೆಯರಿಗೆ ಸ್ಥಾನ ನೀಡಲಾಗಿದೆ ಎಂದು ತಿಳಿದುಬಂದಿದೆ. ಬ್ರೆಜಿಲ್‌ನ ಮೂಲನಿವಾಸಿ ಜನರ ಮಂತ್ರಿಯಾಗಿ ಸೋನಿಯಾ ಗುಜಜಾರಾರನ್ನು ಆಯ್ಕೆ ಮಾಡಿದರೆ ಸೋಯಾಬೀನ್ ಉತ್ಪಾದಕ ಕಾರ್ಲೋಸ್ ಫವಾರೊ ಅವರನ್ನು ಕೃಷಿ ಮಂತ್ರಿಯಾಗಿ ಲುಲಾ ಹೆಸರಿಸಿದ್ದಾರೆ.

ಅಮೆಜಾನ್ ಮಳೆಕಾಡಿನ ನಾಶದ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿದ್ದ ಮರೀನಾ ಸಿಲ್ವಾ ಅವರು ನೂತನ ಪರಿಸರ ಸಚಿವರಾಗಲಿದ್ದಾರೆ. ಹೊಸ ಆಡಳಿತವು ಪ್ರಬಲವಾದ ಕೃಷಿ ವ್ಯವಹಾರದ ಹಿತಾಸಕ್ತಿಗಳಿಂದ ದೂರವಿದ್ದರೂ ಸಹ ಕಾಡಿನಲ್ಲಿ ಅಕ್ರಮ ಅರಣ್ಯನಾಶವನ್ನು ಹತ್ತಿಕ್ಕಲು ಆದ್ಯತೆ ನೀಡುತ್ತದೆ ಎಂದು ಲುಲಾ ಘೋಷಿಸಿದ್ದಾರೆ.

ಈಜಿಪ್ಟ್‌ನಲ್ಲಿ ಇತ್ತೀಚೆಗೆ ನಡೆದ ಯುಎನ್ ಹವಾಮಾನ ಸಮ್ಮೇಳನದಲ್ಲಿ ಲುಲಾ ಮತ್ತು ಮರೀನಾ ಸಿಲ್ವಾ ಭಾಗವಹಿಸಿದ್ದರು. 2030 ರ ವೇಳೆಗೆ ವಿಶ್ವದ ಅತಿ ದೊಡ್ಡ ಮಳೆಕಾಡು ಮತ್ತು ಹವಾಮಾನ ಬದಲಾವಣೆಯ ವಿರುದ್ಧ ಹೋರಾಡುವ ಪ್ರಮುಖ ಕಾಡಾದ ಅಮೆಜಾನ್‌ ಅನ್ನು ಸಂಪೂರ್ಣವಾಗಿ ರಕ್ಷಿಸಲಾಗುವುದು ಎಂದು ಭರವಸೆ ನೀಡಲಾಗಿದೆ.

ಸಿಲ್ವಾ ಅವರು ನೇತೃತ್ವದ ಸಚಿವಾಲಯದ ಹೆಸರನ್ನು ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಎಂದು ಬದಲಾಯಿಸಲಾಗುವುದು ಎನ್ನಲಾಗಿದೆ.

ಮರೀಯಾ ಸಿಲ್ವಾ

ಮರೀಯಾ ಸಿಲ್ವಾ ಅಮೆಜಾನ್‌ನಲ್ಲಿ ಜನಿಸಿದರು ಮತ್ತು ಆರಂಭದಲ್ಲಿ ರಬ್ಬರ್ ಟ್ಯಾಪರ್ ಆಗಿ ಕೆಲಸ ಮಾಡಿದರು. ಆನಂತರ ಲುಲಾ ಅವರ ಅಧ್ಯಕ್ಷರಾಗಿದ್ದ ಮೊದಲ ಅವಧಿಯಲ್ಲಿ ಪರಿಸರ ಮಂತ್ರಿಯಾಗಿ ಅವರು ಹಲವಾರು ಸಂರಕ್ಷಣಾ ಪ್ರದೇಶಗಳ ರಚನೆ ಮತ್ತು ಪರಿಸರ ಅಪರಾಧಿಗಳ ವಿರುದ್ಧ ಪ್ರಮುಖ ಕಾರ್ಯಾಚರಣೆಗಳನ್ನು ನಡೆಸಿದ್ದಾರೆ. ಹೊಸ ಉಪಗ್ರಹ ಕಣ್ಗಾವಲುಗಳೊಂದಿಗೆ ಅರಣ್ಯನಾಶದ ವಿರುದ್ಧ ಅತ್ಯಾಧುನಿಕ ಕಾರ್ಯತಂತ್ರವನ್ನು ಮೇಲ್ವಿಚಾರಣೆ ಮಾಡಿದ್ದ ಹಿರಿಮೆ ಅವರದ್ದಾಗಿದೆ.

ಹೆಚ್ಚಾಗಿ ನಾರ್ವೆ ಬೆಂಬಲಿತ ಅಮೆಜಾನ್ ದೇಣಿಗೆ ಪಡೆದು ಮಳೆಕಾಡುಗಳನ್ನು ಸಂರಕ್ಷಿಸುವ ಅತಿದೊಡ್ಡ ಅಂತರರಾಷ್ಟ್ರೀಯ ಪ್ರಯತ್ನವನ್ನು ಅವರು ನಡೆಸಿದ್ದರು. ಆದರೆ ಆನಂತರ ಲುಲಾ ಕೃಷಿಕರ ಪರ ನಿಂತಾಗ ಮರೀಯಾ ಸಿಲ್ವಾ ರಾಜೀನಾಮೆ ನೀಡಿದ್ದರು.

ಈಗ ಮತ್ತೆ ಲುಲಾ ಅವರು ಮರೀನಾ ಅವರನ್ನು ಮನವೊಲಿಸಿದ್ದಾರೆ ಎನ್ನಲಾಗಿದ್ದು ಅದಕ್ಕಾಗಿ ಅವರು ಪರಿಸರ ಖಾತೆಯ ಸಚಿವರಾಗಲು ಒಪ್ಪಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬ್ರೆಜಿಲ್, ಲುಲಾ ಮತ್ತು ಗುಲಾಬಿ ಅಲೆ 2.0; ಕತ್ತಿಯಂಚಿನ ನಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...