Homeಅಂತರಾಷ್ಟ್ರೀಯಬ್ರೆಜಿಲ್: ಅಮೆಜಾನ್ ಹೋರಾಟಗಾರ್ತಿಗೆ ಪರಿಸರ ಖಾತೆ - ಲುಲಾ ಕ್ಯಾಬಿನೆಟ್‌ನಲ್ಲಿ ದಾಖಲೆಯ 11 ಮಹಿಳಾ ಸಚಿವರು

ಬ್ರೆಜಿಲ್: ಅಮೆಜಾನ್ ಹೋರಾಟಗಾರ್ತಿಗೆ ಪರಿಸರ ಖಾತೆ – ಲುಲಾ ಕ್ಯಾಬಿನೆಟ್‌ನಲ್ಲಿ ದಾಖಲೆಯ 11 ಮಹಿಳಾ ಸಚಿವರು

- Advertisement -
- Advertisement -

ಬ್ರೆಜಿಲ್‌ನ ಅಧ್ಯಕ್ಷರಾಗಿ ಲೂಯಿಝ್‌ ಇನಾಸಿಯೊ ಲುಲಾ ಡಾ ಸಿಲ್ವಾ ಅವರು 2023ರ ಜನವರಿ 1ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಮೆಜಾನ್ ಉಳಿಸಿ ಕಾರ್ಯಕರ್ತೆ ಮರೀನಾ ಸಿಲ್ವಾ ಅವರು ದೇಶದ ಮುಂದಿನ ಪರಿಸರ ಸಚಿವರಾಗಲಿದ್ದಾರೆ ಎಂದು ಲುಲಾ ಡಾ ಸಿಲ್ವಾ ಗುರುವಾರ ಘೋಷಿಸಿದ್ದಾರೆ.

37 ಜನ ಸಚಿವರ ಪಟ್ಟಿ ಮಾಡಲಾಗಿದ್ದು ಅದರಲ್ಲಿ ಮೊದಲ ಬಾರಿಗೆ ದಾಖಲೆಯ 11 ಜನ ಮಹಿಳೆಯರಿಗೆ ಸ್ಥಾನ ನೀಡಲಾಗಿದೆ ಎಂದು ತಿಳಿದುಬಂದಿದೆ. ಬ್ರೆಜಿಲ್‌ನ ಮೂಲನಿವಾಸಿ ಜನರ ಮಂತ್ರಿಯಾಗಿ ಸೋನಿಯಾ ಗುಜಜಾರಾರನ್ನು ಆಯ್ಕೆ ಮಾಡಿದರೆ ಸೋಯಾಬೀನ್ ಉತ್ಪಾದಕ ಕಾರ್ಲೋಸ್ ಫವಾರೊ ಅವರನ್ನು ಕೃಷಿ ಮಂತ್ರಿಯಾಗಿ ಲುಲಾ ಹೆಸರಿಸಿದ್ದಾರೆ.

ಅಮೆಜಾನ್ ಮಳೆಕಾಡಿನ ನಾಶದ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿದ್ದ ಮರೀನಾ ಸಿಲ್ವಾ ಅವರು ನೂತನ ಪರಿಸರ ಸಚಿವರಾಗಲಿದ್ದಾರೆ. ಹೊಸ ಆಡಳಿತವು ಪ್ರಬಲವಾದ ಕೃಷಿ ವ್ಯವಹಾರದ ಹಿತಾಸಕ್ತಿಗಳಿಂದ ದೂರವಿದ್ದರೂ ಸಹ ಕಾಡಿನಲ್ಲಿ ಅಕ್ರಮ ಅರಣ್ಯನಾಶವನ್ನು ಹತ್ತಿಕ್ಕಲು ಆದ್ಯತೆ ನೀಡುತ್ತದೆ ಎಂದು ಲುಲಾ ಘೋಷಿಸಿದ್ದಾರೆ.

ಈಜಿಪ್ಟ್‌ನಲ್ಲಿ ಇತ್ತೀಚೆಗೆ ನಡೆದ ಯುಎನ್ ಹವಾಮಾನ ಸಮ್ಮೇಳನದಲ್ಲಿ ಲುಲಾ ಮತ್ತು ಮರೀನಾ ಸಿಲ್ವಾ ಭಾಗವಹಿಸಿದ್ದರು. 2030 ರ ವೇಳೆಗೆ ವಿಶ್ವದ ಅತಿ ದೊಡ್ಡ ಮಳೆಕಾಡು ಮತ್ತು ಹವಾಮಾನ ಬದಲಾವಣೆಯ ವಿರುದ್ಧ ಹೋರಾಡುವ ಪ್ರಮುಖ ಕಾಡಾದ ಅಮೆಜಾನ್‌ ಅನ್ನು ಸಂಪೂರ್ಣವಾಗಿ ರಕ್ಷಿಸಲಾಗುವುದು ಎಂದು ಭರವಸೆ ನೀಡಲಾಗಿದೆ.

ಸಿಲ್ವಾ ಅವರು ನೇತೃತ್ವದ ಸಚಿವಾಲಯದ ಹೆಸರನ್ನು ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಎಂದು ಬದಲಾಯಿಸಲಾಗುವುದು ಎನ್ನಲಾಗಿದೆ.

ಮರೀಯಾ ಸಿಲ್ವಾ

ಮರೀಯಾ ಸಿಲ್ವಾ ಅಮೆಜಾನ್‌ನಲ್ಲಿ ಜನಿಸಿದರು ಮತ್ತು ಆರಂಭದಲ್ಲಿ ರಬ್ಬರ್ ಟ್ಯಾಪರ್ ಆಗಿ ಕೆಲಸ ಮಾಡಿದರು. ಆನಂತರ ಲುಲಾ ಅವರ ಅಧ್ಯಕ್ಷರಾಗಿದ್ದ ಮೊದಲ ಅವಧಿಯಲ್ಲಿ ಪರಿಸರ ಮಂತ್ರಿಯಾಗಿ ಅವರು ಹಲವಾರು ಸಂರಕ್ಷಣಾ ಪ್ರದೇಶಗಳ ರಚನೆ ಮತ್ತು ಪರಿಸರ ಅಪರಾಧಿಗಳ ವಿರುದ್ಧ ಪ್ರಮುಖ ಕಾರ್ಯಾಚರಣೆಗಳನ್ನು ನಡೆಸಿದ್ದಾರೆ. ಹೊಸ ಉಪಗ್ರಹ ಕಣ್ಗಾವಲುಗಳೊಂದಿಗೆ ಅರಣ್ಯನಾಶದ ವಿರುದ್ಧ ಅತ್ಯಾಧುನಿಕ ಕಾರ್ಯತಂತ್ರವನ್ನು ಮೇಲ್ವಿಚಾರಣೆ ಮಾಡಿದ್ದ ಹಿರಿಮೆ ಅವರದ್ದಾಗಿದೆ.

ಹೆಚ್ಚಾಗಿ ನಾರ್ವೆ ಬೆಂಬಲಿತ ಅಮೆಜಾನ್ ದೇಣಿಗೆ ಪಡೆದು ಮಳೆಕಾಡುಗಳನ್ನು ಸಂರಕ್ಷಿಸುವ ಅತಿದೊಡ್ಡ ಅಂತರರಾಷ್ಟ್ರೀಯ ಪ್ರಯತ್ನವನ್ನು ಅವರು ನಡೆಸಿದ್ದರು. ಆದರೆ ಆನಂತರ ಲುಲಾ ಕೃಷಿಕರ ಪರ ನಿಂತಾಗ ಮರೀಯಾ ಸಿಲ್ವಾ ರಾಜೀನಾಮೆ ನೀಡಿದ್ದರು.

ಈಗ ಮತ್ತೆ ಲುಲಾ ಅವರು ಮರೀನಾ ಅವರನ್ನು ಮನವೊಲಿಸಿದ್ದಾರೆ ಎನ್ನಲಾಗಿದ್ದು ಅದಕ್ಕಾಗಿ ಅವರು ಪರಿಸರ ಖಾತೆಯ ಸಚಿವರಾಗಲು ಒಪ್ಪಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬ್ರೆಜಿಲ್, ಲುಲಾ ಮತ್ತು ಗುಲಾಬಿ ಅಲೆ 2.0; ಕತ್ತಿಯಂಚಿನ ನಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...