Homeಅಂತರಾಷ್ಟ್ರೀಯಅಮೆಜಾನ್ ಅರಣ್ಯನಾಶ ತಡೆಯಲು ಸೈನ್ಯ ಕಳುಹಿಸಲು ಮುಂದಾದ ಬ್ರೆಜಿಲ್

ಅಮೆಜಾನ್ ಅರಣ್ಯನಾಶ ತಡೆಯಲು ಸೈನ್ಯ ಕಳುಹಿಸಲು ಮುಂದಾದ ಬ್ರೆಜಿಲ್

- Advertisement -
- Advertisement -

ಜಗತ್ತಿನ ಆಕ್ಸಿಜನ್ ತೊಟ್ಟಿಲು ಎಂದು ಕರೆಯಲ್ಪಡುವ ದಕ್ಷಿಣ ಅಮೆರಿಕಾದ ಅಮೆಜಾನ್ ಕಾಡುಗಳು ಒತ್ತುವರಿಯಾಗುತ್ತಿವೆ, ನಾಶವಾಗುತ್ತಿವೆ ಎಂಬ ಕೂಗು ಕಳೆದ ಹಲವಾರು ವರ್ಷಗಳಿಂದ ಕೇಳಿಬರುತ್ತಿದೆ. ಅಮೆಜಾನ್ ಉಳಿಸಿ ಅಭಿಯಾನ ಕೂಡ ನಡೆಯುತ್ತಿದೆ. ವಿವಿಧ ಪರಿಸರ ಸಂಘಟನೆಗಳು ಅಮೆಜಾನ್ ಉಳಿಸುವ ಹೋರಾಟದಲ್ಲಿ ತೊಡಗಿಸಿಕೊಂಡಿವೆ. ಬ್ರೆಜಿಲ್ ಸರ್ಕಾರ ಮಾತ್ರ ಅಮೆಜಾನ್ ಉಳಿಸಲು ಇದುವರೆಗೆ ಹೆಚ್ಚಿನ ಪ್ರಯತ್ನ ಮಾಡಿರಲಿಲ್ಲ. ಬದಲಾಗಿ 2018 ರ ತಮ್ಮ ಚುನಾವಣಾ ಪ್ರಚಾರದಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸಾನೇರೋ ಅಮೆಜಾನ್ ಅಭಿವೃದ್ಧಿ ಮಾಡುವುದಾಗಿ ಭರವಸೆ ನೀಡಿದ್ದರು.

ಅಮೆರಿಕಾ ಮೂಲದ ಜಾಗತಿಕ ಕಂಪನಿಗಳು ಅಮೆಜಾನ್ ಅರಣ್ಯ ವಲಯದಲ್ಲಿ ಫಾರ್ಮಿಂಗ್, ಕೃಷಿ ಸೇರಿದಂತೆ ವಿವಿಧ ರೀತಿಯ ಉದ್ಯಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವು. ಬ್ರೆಜಿಲ್ ಸರ್ಕಾರ ಬಹುರಾಷ್ಟ್ರೀಯ ಕಂಪನಿಗಳಿಗೆ ನೆರವಾಗುವಂತಹ ಕಾನೂನುಗಳನ್ನು ಜಾರಿಗೆ ತಂದಿತ್ತು. ಜೊತೆಗೆ ಸ್ಥಳೀಯ ನಿವಾಸಿಗಳು ಕೂಡ ಕಾಡಿಗೆ ಬೆಂಕಿ ಹಚ್ಚಿ ತಮ್ಮ ಕೃಷಿ ಜಮೀನನ್ನು ವಿಸ್ತರಿಸಿಕೊಳ್ಳುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಇದೆಲ್ಲದರಿಂದ ಜಗತ್ತಿನ ಹಸಿರು ತೊಟ್ಟಿಲು ಅಮೆಜಾನ್ ಕಾಡಿಗೆ ಧಕ್ಕೆಯಾಗಿದೆ. ಈಗ ಬ್ರೆಜಿಲ್ ಸರ್ಕಾರ ಎಚ್ಚೆತ್ತುಕೊಂಡು ಅಮೆಜಾನ್ ಕಾಡುಗಳನ್ನು ಉಳಿಸುವ ಪ್ರಯತ್ನಕ್ಕೆ ಮುಂದಾಗಿದೆ.

ನಿನ್ನೆ ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಿಸಲು ಸೈನ್ಯವನ್ನು ಕಳುಹಿಸುವುದಾಗಿ ಗ್ಯಾಝೆಟ್ ನೋಟಿಫಿಕೇಶನ್ ಹೊರಡಿಸಿದ್ದು ಎಷ್ಟು ಪ್ರಮಾಣದ ಸೈನ್ಯವನ್ನು ಅಮೆಜಾನ್ ಕಾಡುಗಳಿಗೆ ಬ್ರೆಜಿಲ್ ಸರ್ಕಾರ ಕಳುಹಿಸಿಕೊಡಲಿದೆ ಎಂಬುದು ಇದುವರೆಗೆ ಸ್ಪಷ್ಟವಾಗಿಲ್ಲ. ಆಗಸ್ಟ್ ಅಂತ್ಯದ ವೇಳೆಗೆ ಅಮೆಜಾನ್ ವಲಯದ ಪಾರಾ, ಅಮೆಜೊನಸ್, ಮಾಟೊ ಗ್ರೋಸೊ, ರೊಂಡೆನಿಯಾ ರಾಜ್ಯಗಳಿಗೆ ಆಗಸ್ಟ್ ಅಂತ್ಯದ ವೇಳೆಗೆ ಸೈನ್ಯವನ್ನು ಕಳುಹಿಸುವುದಾಗಿ ಬ್ರೆಜಿಲ್ ಸರ್ಕಾರ ಅಧಿಕೃತವಾಗಿ ಹೇಳಿದೆ.

ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರ ಒತ್ತಡದ ಕಾರಣದಿಂದ ಬ್ರೆಜಿಲ್ ಸರ್ಕಾರ ಈ ಕ್ರಮಗಳನ್ನು ಕೈಗೊಳ್ಳುತ್ತಿದೆ. 2020ರಲ್ಲಿ ಬ್ರೆಜಿಲ್‌ನಲ್ಲಿ ವ್ಯಾಪಕವಾದ ಅರಣ್ಯ ನಾಶ ನಡೆದಿರುವ ಸುದ್ದಿ ಜಗತ್ತಿನಾದ್ಯಂತ ಹರಡಿತ್ತು. ಉಪಗ್ರಹ ಚಿತ್ರಗಳು ಕೂಡ ಅಮೆಜಾನ್ ಕಾಡುಗಳಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಿಕೆಗಳನ್ನು ಬಹಿರಂಗಗೊಳಿಸಿದ್ದವು. ಅಕ್ರಮ ಟಿಂಬರ್ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಆರೋಪವನ್ನು ಎದುರಿಸಿತ್ತಿದ್ದ ಜೂನ್ 23 ರಂದು ಬ್ರೆಜಿಲ್‌ನ ಪರಿಸರ ಮಂತ್ರಿ ರಿಕಾರ್ಡೋ ಸೆಲ್ಲಾಸ್ ಇದೇ ವಿಷಯಕ್ಕೆ ರಾಜೀನಾಮೆಯನ್ನು ನೀಡಿದ್ದರು. ಇದರಿಂದ ಬ್ರೆಜಿಲ್ ಮತ್ತು ಅಮೆಜಾನ್ ಕಾಡು ನಾಶದ ವಿಷಯ ಮತ್ತೊಮ್ಮೆ ಚರ್ಚೆಗೆ ಬಂದಿದೆ.

ಅಮೆಜಾನ್ ಕಾಡುಗಳ ರಕ್ಷಣೆಗೆ ಸಂಬಂಧಿಸಿದಂತೆ ವ್ಯಾಪಕ ಕ್ರಮ ಕೈಗೊಳ್ಳಲು ತನ್ನ ಬಳಿ ಆರ್ಥಿಕ ಸಂಪನ್ಮೂಲಗಳು ಇಲ್ಲವೆಂದು ಬ್ರೆಜಿಲ್ ಹೇಳಿತ್ತು. ಬ್ರೆಜಿಲ್ ಅಮೆಜಾನ್ ರಕ್ಷಣೆಗೆ ಕ್ರಮ ಕೈಗೊಳ್ಳುವವರೆಗೆ ಯಾವುದೇ ಆರ್ಥಿಕ ಸಹಾಯ ಮಾಡುವುದಿಲ್ಲವೆಂದು ಅಮೆರಿಕಾ ಹೇಳಿದೆ. ಜಾಗತಿಕ ತಾಪಮಾನ ಏರಿಕೆ ಸಮಸ್ಯೆಗೆ ಅಮೆರಿಕಾ ಕ್ರಮ ಕೈಗೊಳ್ಳುವ ಸಲುವಾಗಿ ಅದು ಒತ್ತಡ ಹೇರುತ್ತಿದೆ. ಅಮೆರಿಕಾ ಒತ್ತಡದ ಪರಿಣಾಮವಾಗಿ ಬ್ರೆಜಿಲ್ ಸೈನ್ಯವನ್ನು ಕಳುಹಿಸಲು ಮುಂದಾಗಿದೆ ಎಂದು ಬ್ರೆಜಿಲ್‌ನ ಪರಿಸರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಣೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಅರಣ್ಯ ನಾಶ ಮಾಡುವವರು ಮತ್ತು ಅಕ್ರಮ ಚಟುವಟಿಕೆ ನಡೆಸುವವರಿಗೆ ದಂಡ ವಿಧಿಸುವ ಕಾನೂನನ್ನು ರದ್ದುಗೊಳಿಸಿದೆ ಎಂದು ಪರಿಸರ ಹೋರಾಟಗಾರ ಮಾರ್ಸಿಯೋ ಆಸ್ಟಿನಿ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.

ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಣೆಗೆ ಸೈನ್ಯವನ್ನು ಕಳುಹಿಸಿಕೊಡುತ್ತಿರುವದು ಇದು 3 ನೇ ಬಾರಿ. ಇದುವರೆಗೆ ಅಲ್ಫಾವಧಿಗೆ ಸೈನ್ಯವನ್ನು ಕಳುಹಿಸಿ ಮತ್ತೆ ಮರಳಿ ಕರೆಸಿಕೊಂಡಿದೆ. ಬ್ರೆಜಿಲ್ ಸರ್ಕಾರದ ಕೈಗೊಂಡಿರುವ ಕ್ರಮಗಳು ಅಮೆಜಾನ್ ಅರಣ್ಯ ರಕ್ಷಣೆಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಜಗತ್ತಿನ ಹಸಿರಿನ ತೊಟ್ಟಿಲು ಅಮೆಜಾನ್ ಕಾಡುಗಳು ನಾಶವಾದಂತೆಲ್ಲ ಜಗತ್ತಿನಲ್ಲಿ ಪರಿಸರ ಸಮಸ್ಯೆಗಳು ತಲೆದೋರುತ್ತಿವೆ. ನೀರ್ಗಲ್ಲುಗಳು ಕರಗಿ ಸಮುದ್ರದ ಮಟ್ಟದಲ್ಲಿ ಹೆಚ್ಚಳವಾಗುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ  ಮುಂದೊಂದು  ದಿನ ನ್ಯೂಯಾರ್ಕ, ಲಂಡನ್, ಮುಂಬೈ ಸೇರಿದಂತೆ ಸಮುದ್ರದಂಚಿನ ನಗರಗಳು ನೀರಿನಲ್ಲಿ ಮುಳುಗಡೆಯಾಗುವ ದಿನಗಳು ದೂರದಲ್ಲಿಲ್ಲ.


ಇದನ್ನೂ ಓದಿ : ಎಲ್ಲರೂ ಜೊತೆಗೂಡಿ ಆರಿಸಬೇಕಾದ ಅಮೆಜಾನ್ ಕಾಡಿನ ಬೆಂಕಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...