Homeಅಂತರಾಷ್ಟ್ರೀಯಅಮೆಜಾನ್ ಅರಣ್ಯನಾಶ ತಡೆಯಲು ಸೈನ್ಯ ಕಳುಹಿಸಲು ಮುಂದಾದ ಬ್ರೆಜಿಲ್

ಅಮೆಜಾನ್ ಅರಣ್ಯನಾಶ ತಡೆಯಲು ಸೈನ್ಯ ಕಳುಹಿಸಲು ಮುಂದಾದ ಬ್ರೆಜಿಲ್

- Advertisement -
- Advertisement -

ಜಗತ್ತಿನ ಆಕ್ಸಿಜನ್ ತೊಟ್ಟಿಲು ಎಂದು ಕರೆಯಲ್ಪಡುವ ದಕ್ಷಿಣ ಅಮೆರಿಕಾದ ಅಮೆಜಾನ್ ಕಾಡುಗಳು ಒತ್ತುವರಿಯಾಗುತ್ತಿವೆ, ನಾಶವಾಗುತ್ತಿವೆ ಎಂಬ ಕೂಗು ಕಳೆದ ಹಲವಾರು ವರ್ಷಗಳಿಂದ ಕೇಳಿಬರುತ್ತಿದೆ. ಅಮೆಜಾನ್ ಉಳಿಸಿ ಅಭಿಯಾನ ಕೂಡ ನಡೆಯುತ್ತಿದೆ. ವಿವಿಧ ಪರಿಸರ ಸಂಘಟನೆಗಳು ಅಮೆಜಾನ್ ಉಳಿಸುವ ಹೋರಾಟದಲ್ಲಿ ತೊಡಗಿಸಿಕೊಂಡಿವೆ. ಬ್ರೆಜಿಲ್ ಸರ್ಕಾರ ಮಾತ್ರ ಅಮೆಜಾನ್ ಉಳಿಸಲು ಇದುವರೆಗೆ ಹೆಚ್ಚಿನ ಪ್ರಯತ್ನ ಮಾಡಿರಲಿಲ್ಲ. ಬದಲಾಗಿ 2018 ರ ತಮ್ಮ ಚುನಾವಣಾ ಪ್ರಚಾರದಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸಾನೇರೋ ಅಮೆಜಾನ್ ಅಭಿವೃದ್ಧಿ ಮಾಡುವುದಾಗಿ ಭರವಸೆ ನೀಡಿದ್ದರು.

ಅಮೆರಿಕಾ ಮೂಲದ ಜಾಗತಿಕ ಕಂಪನಿಗಳು ಅಮೆಜಾನ್ ಅರಣ್ಯ ವಲಯದಲ್ಲಿ ಫಾರ್ಮಿಂಗ್, ಕೃಷಿ ಸೇರಿದಂತೆ ವಿವಿಧ ರೀತಿಯ ಉದ್ಯಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವು. ಬ್ರೆಜಿಲ್ ಸರ್ಕಾರ ಬಹುರಾಷ್ಟ್ರೀಯ ಕಂಪನಿಗಳಿಗೆ ನೆರವಾಗುವಂತಹ ಕಾನೂನುಗಳನ್ನು ಜಾರಿಗೆ ತಂದಿತ್ತು. ಜೊತೆಗೆ ಸ್ಥಳೀಯ ನಿವಾಸಿಗಳು ಕೂಡ ಕಾಡಿಗೆ ಬೆಂಕಿ ಹಚ್ಚಿ ತಮ್ಮ ಕೃಷಿ ಜಮೀನನ್ನು ವಿಸ್ತರಿಸಿಕೊಳ್ಳುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಇದೆಲ್ಲದರಿಂದ ಜಗತ್ತಿನ ಹಸಿರು ತೊಟ್ಟಿಲು ಅಮೆಜಾನ್ ಕಾಡಿಗೆ ಧಕ್ಕೆಯಾಗಿದೆ. ಈಗ ಬ್ರೆಜಿಲ್ ಸರ್ಕಾರ ಎಚ್ಚೆತ್ತುಕೊಂಡು ಅಮೆಜಾನ್ ಕಾಡುಗಳನ್ನು ಉಳಿಸುವ ಪ್ರಯತ್ನಕ್ಕೆ ಮುಂದಾಗಿದೆ.

ನಿನ್ನೆ ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಿಸಲು ಸೈನ್ಯವನ್ನು ಕಳುಹಿಸುವುದಾಗಿ ಗ್ಯಾಝೆಟ್ ನೋಟಿಫಿಕೇಶನ್ ಹೊರಡಿಸಿದ್ದು ಎಷ್ಟು ಪ್ರಮಾಣದ ಸೈನ್ಯವನ್ನು ಅಮೆಜಾನ್ ಕಾಡುಗಳಿಗೆ ಬ್ರೆಜಿಲ್ ಸರ್ಕಾರ ಕಳುಹಿಸಿಕೊಡಲಿದೆ ಎಂಬುದು ಇದುವರೆಗೆ ಸ್ಪಷ್ಟವಾಗಿಲ್ಲ. ಆಗಸ್ಟ್ ಅಂತ್ಯದ ವೇಳೆಗೆ ಅಮೆಜಾನ್ ವಲಯದ ಪಾರಾ, ಅಮೆಜೊನಸ್, ಮಾಟೊ ಗ್ರೋಸೊ, ರೊಂಡೆನಿಯಾ ರಾಜ್ಯಗಳಿಗೆ ಆಗಸ್ಟ್ ಅಂತ್ಯದ ವೇಳೆಗೆ ಸೈನ್ಯವನ್ನು ಕಳುಹಿಸುವುದಾಗಿ ಬ್ರೆಜಿಲ್ ಸರ್ಕಾರ ಅಧಿಕೃತವಾಗಿ ಹೇಳಿದೆ.

ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರ ಒತ್ತಡದ ಕಾರಣದಿಂದ ಬ್ರೆಜಿಲ್ ಸರ್ಕಾರ ಈ ಕ್ರಮಗಳನ್ನು ಕೈಗೊಳ್ಳುತ್ತಿದೆ. 2020ರಲ್ಲಿ ಬ್ರೆಜಿಲ್‌ನಲ್ಲಿ ವ್ಯಾಪಕವಾದ ಅರಣ್ಯ ನಾಶ ನಡೆದಿರುವ ಸುದ್ದಿ ಜಗತ್ತಿನಾದ್ಯಂತ ಹರಡಿತ್ತು. ಉಪಗ್ರಹ ಚಿತ್ರಗಳು ಕೂಡ ಅಮೆಜಾನ್ ಕಾಡುಗಳಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಿಕೆಗಳನ್ನು ಬಹಿರಂಗಗೊಳಿಸಿದ್ದವು. ಅಕ್ರಮ ಟಿಂಬರ್ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಆರೋಪವನ್ನು ಎದುರಿಸಿತ್ತಿದ್ದ ಜೂನ್ 23 ರಂದು ಬ್ರೆಜಿಲ್‌ನ ಪರಿಸರ ಮಂತ್ರಿ ರಿಕಾರ್ಡೋ ಸೆಲ್ಲಾಸ್ ಇದೇ ವಿಷಯಕ್ಕೆ ರಾಜೀನಾಮೆಯನ್ನು ನೀಡಿದ್ದರು. ಇದರಿಂದ ಬ್ರೆಜಿಲ್ ಮತ್ತು ಅಮೆಜಾನ್ ಕಾಡು ನಾಶದ ವಿಷಯ ಮತ್ತೊಮ್ಮೆ ಚರ್ಚೆಗೆ ಬಂದಿದೆ.

ಅಮೆಜಾನ್ ಕಾಡುಗಳ ರಕ್ಷಣೆಗೆ ಸಂಬಂಧಿಸಿದಂತೆ ವ್ಯಾಪಕ ಕ್ರಮ ಕೈಗೊಳ್ಳಲು ತನ್ನ ಬಳಿ ಆರ್ಥಿಕ ಸಂಪನ್ಮೂಲಗಳು ಇಲ್ಲವೆಂದು ಬ್ರೆಜಿಲ್ ಹೇಳಿತ್ತು. ಬ್ರೆಜಿಲ್ ಅಮೆಜಾನ್ ರಕ್ಷಣೆಗೆ ಕ್ರಮ ಕೈಗೊಳ್ಳುವವರೆಗೆ ಯಾವುದೇ ಆರ್ಥಿಕ ಸಹಾಯ ಮಾಡುವುದಿಲ್ಲವೆಂದು ಅಮೆರಿಕಾ ಹೇಳಿದೆ. ಜಾಗತಿಕ ತಾಪಮಾನ ಏರಿಕೆ ಸಮಸ್ಯೆಗೆ ಅಮೆರಿಕಾ ಕ್ರಮ ಕೈಗೊಳ್ಳುವ ಸಲುವಾಗಿ ಅದು ಒತ್ತಡ ಹೇರುತ್ತಿದೆ. ಅಮೆರಿಕಾ ಒತ್ತಡದ ಪರಿಣಾಮವಾಗಿ ಬ್ರೆಜಿಲ್ ಸೈನ್ಯವನ್ನು ಕಳುಹಿಸಲು ಮುಂದಾಗಿದೆ ಎಂದು ಬ್ರೆಜಿಲ್‌ನ ಪರಿಸರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಣೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಅರಣ್ಯ ನಾಶ ಮಾಡುವವರು ಮತ್ತು ಅಕ್ರಮ ಚಟುವಟಿಕೆ ನಡೆಸುವವರಿಗೆ ದಂಡ ವಿಧಿಸುವ ಕಾನೂನನ್ನು ರದ್ದುಗೊಳಿಸಿದೆ ಎಂದು ಪರಿಸರ ಹೋರಾಟಗಾರ ಮಾರ್ಸಿಯೋ ಆಸ್ಟಿನಿ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.

ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಣೆಗೆ ಸೈನ್ಯವನ್ನು ಕಳುಹಿಸಿಕೊಡುತ್ತಿರುವದು ಇದು 3 ನೇ ಬಾರಿ. ಇದುವರೆಗೆ ಅಲ್ಫಾವಧಿಗೆ ಸೈನ್ಯವನ್ನು ಕಳುಹಿಸಿ ಮತ್ತೆ ಮರಳಿ ಕರೆಸಿಕೊಂಡಿದೆ. ಬ್ರೆಜಿಲ್ ಸರ್ಕಾರದ ಕೈಗೊಂಡಿರುವ ಕ್ರಮಗಳು ಅಮೆಜಾನ್ ಅರಣ್ಯ ರಕ್ಷಣೆಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಜಗತ್ತಿನ ಹಸಿರಿನ ತೊಟ್ಟಿಲು ಅಮೆಜಾನ್ ಕಾಡುಗಳು ನಾಶವಾದಂತೆಲ್ಲ ಜಗತ್ತಿನಲ್ಲಿ ಪರಿಸರ ಸಮಸ್ಯೆಗಳು ತಲೆದೋರುತ್ತಿವೆ. ನೀರ್ಗಲ್ಲುಗಳು ಕರಗಿ ಸಮುದ್ರದ ಮಟ್ಟದಲ್ಲಿ ಹೆಚ್ಚಳವಾಗುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ  ಮುಂದೊಂದು  ದಿನ ನ್ಯೂಯಾರ್ಕ, ಲಂಡನ್, ಮುಂಬೈ ಸೇರಿದಂತೆ ಸಮುದ್ರದಂಚಿನ ನಗರಗಳು ನೀರಿನಲ್ಲಿ ಮುಳುಗಡೆಯಾಗುವ ದಿನಗಳು ದೂರದಲ್ಲಿಲ್ಲ.


ಇದನ್ನೂ ಓದಿ : ಎಲ್ಲರೂ ಜೊತೆಗೂಡಿ ಆರಿಸಬೇಕಾದ ಅಮೆಜಾನ್ ಕಾಡಿನ ಬೆಂಕಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...

ಒಡಿಶಾ| ಮೇಕೆ ಕಳ್ಳತನ ಶಂಕೆಯಿಂದ 14 ವರ್ಷದ ಬಾಲಕನನ್ನು ಹೊಡೆದು ಕೊಂದ ಗುಂಪು; 12 ಜನರ ಬಂಧನ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಶಂಕೆಯಿಂದ ಗ್ರಾಮಸ್ಥರು ಥಳಿಸಿದರಿಂದ 14 ವರ್ಷದ ಬಾಲಕನೊಬ್ಬ ಸಾವನ್ನಪ್ಪಿ, ಇನ್ನೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಟಿರಿಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಇಂಡೋಖೋಲಿ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಪಶ್ಚಿಮ ಏಷ್ಯಾದಲ್ಲಿ ಸಿಲುಕಿದ್ದ ಮಹಾರಾಷ್ಟ್ರದ 164 ಪ್ರವಾಸಿಗರು ಮನೆಗೆ ಮರಳಿದ್ದಾರೆ: ಶಿವಸೇನೆ

ಮುಂಬೈ: ಅಮೆರಿಕ-ಇಸ್ರೇಲ್-ಇರಾನ್ ಸಂಘರ್ಷದಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಸಿಲುಕಿಕೊಂಡಿದ್ದ ಮಹಾರಾಷ್ಟ್ರದ ಒಟ್ಟು 164 ಪ್ರವಾಸಿಗರು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ವ್ಯವಸ್ಥೆ ಮಾಡಿದ ಎರಡು ವಿಮಾನಗಳಲ್ಲಿ ಮನೆಗೆ ಮರಳಿದ್ದಾರೆ ಎಂದು ಶಿವಸೇನಾ ಪದಾಧಿಕಾರಿಯೊಬ್ಬರು ಬುಧವಾರ...

‘ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ’: 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ ಇರಾನ್; ಮರುಗಿದ ಮಾನವ ಜಗತ್ತು

ದಕ್ಷಿಣ ಇರಾನ್‌ನ ಮಿನಾಬ್ ನಗರದ ಬಾಲಕಿಯರ ಶಾಲೆಯೊಂದರ ಮೇಲೆ ಶನಿವಾರ (ಫೆ.28) ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ 165 ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯ ಬೃಹತ್ ಅಂತಿಮ ಸಂಸ್ಕಾರ ಮೆರವಣಿಗೆ ಮಂಗಳವಾರ (ಮಾ.3)...

ಖಮೇನಿ ಪುತ್ರ ಮೊಜ್ತಬಾ ಅವರನ್ನು ಸರ್ವೋಚ್ಚ ನಾಯಕನನ್ನಾಗಿ ಹೆಸರಿಸಿದ ಇರಾನ್ ತಜ್ಞರ ಸಭೆ?

ದಿವಂಗತ ಅಯತೊಲ್ಲಾ ಅಲಿ ಖಮೇನಿಯವರ ಪುತ್ರ 56 ವರ್ಷದ ಮೊಜ್ತಬಾ ಖಮೇನಿ ಅವರನ್ನು ತಜ್ಞರ ಸಭೆಯು ಇರಾನ್‌ನ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಇರಾನ್ ಅಂತಾರಾಷ್ಟ್ರೀಯ...

ಲೋಕಸಭೆ ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರ ಆಯ್ಕೆ; ರವಿಶಂಕರ್ ಪ್ರಸಾದ್ ನೇತೃತ್ವ

ಹದಿನೆಂಟನೇ ಲೋಕಸಭೆ ರಚನೆಯಾಗಿ ಸುಮಾರು ಎರಡು ವರ್ಷಗಳ ನಂತರ, ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ (ಮಾ.3) ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಸದನ ಮತ್ತು ಅದರ ಸದಸ್ಯರ ಹಕ್ಕುಚ್ಯುತಿಗೆ...