Homeಅಂತರಾಷ್ಟ್ರೀಯಅಮೆಜಾನ್ ಅರಣ್ಯನಾಶ ತಡೆಯಲು ಸೈನ್ಯ ಕಳುಹಿಸಲು ಮುಂದಾದ ಬ್ರೆಜಿಲ್

ಅಮೆಜಾನ್ ಅರಣ್ಯನಾಶ ತಡೆಯಲು ಸೈನ್ಯ ಕಳುಹಿಸಲು ಮುಂದಾದ ಬ್ರೆಜಿಲ್

- Advertisement -
- Advertisement -

ಜಗತ್ತಿನ ಆಕ್ಸಿಜನ್ ತೊಟ್ಟಿಲು ಎಂದು ಕರೆಯಲ್ಪಡುವ ದಕ್ಷಿಣ ಅಮೆರಿಕಾದ ಅಮೆಜಾನ್ ಕಾಡುಗಳು ಒತ್ತುವರಿಯಾಗುತ್ತಿವೆ, ನಾಶವಾಗುತ್ತಿವೆ ಎಂಬ ಕೂಗು ಕಳೆದ ಹಲವಾರು ವರ್ಷಗಳಿಂದ ಕೇಳಿಬರುತ್ತಿದೆ. ಅಮೆಜಾನ್ ಉಳಿಸಿ ಅಭಿಯಾನ ಕೂಡ ನಡೆಯುತ್ತಿದೆ. ವಿವಿಧ ಪರಿಸರ ಸಂಘಟನೆಗಳು ಅಮೆಜಾನ್ ಉಳಿಸುವ ಹೋರಾಟದಲ್ಲಿ ತೊಡಗಿಸಿಕೊಂಡಿವೆ. ಬ್ರೆಜಿಲ್ ಸರ್ಕಾರ ಮಾತ್ರ ಅಮೆಜಾನ್ ಉಳಿಸಲು ಇದುವರೆಗೆ ಹೆಚ್ಚಿನ ಪ್ರಯತ್ನ ಮಾಡಿರಲಿಲ್ಲ. ಬದಲಾಗಿ 2018 ರ ತಮ್ಮ ಚುನಾವಣಾ ಪ್ರಚಾರದಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸಾನೇರೋ ಅಮೆಜಾನ್ ಅಭಿವೃದ್ಧಿ ಮಾಡುವುದಾಗಿ ಭರವಸೆ ನೀಡಿದ್ದರು.

ಅಮೆರಿಕಾ ಮೂಲದ ಜಾಗತಿಕ ಕಂಪನಿಗಳು ಅಮೆಜಾನ್ ಅರಣ್ಯ ವಲಯದಲ್ಲಿ ಫಾರ್ಮಿಂಗ್, ಕೃಷಿ ಸೇರಿದಂತೆ ವಿವಿಧ ರೀತಿಯ ಉದ್ಯಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವು. ಬ್ರೆಜಿಲ್ ಸರ್ಕಾರ ಬಹುರಾಷ್ಟ್ರೀಯ ಕಂಪನಿಗಳಿಗೆ ನೆರವಾಗುವಂತಹ ಕಾನೂನುಗಳನ್ನು ಜಾರಿಗೆ ತಂದಿತ್ತು. ಜೊತೆಗೆ ಸ್ಥಳೀಯ ನಿವಾಸಿಗಳು ಕೂಡ ಕಾಡಿಗೆ ಬೆಂಕಿ ಹಚ್ಚಿ ತಮ್ಮ ಕೃಷಿ ಜಮೀನನ್ನು ವಿಸ್ತರಿಸಿಕೊಳ್ಳುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಇದೆಲ್ಲದರಿಂದ ಜಗತ್ತಿನ ಹಸಿರು ತೊಟ್ಟಿಲು ಅಮೆಜಾನ್ ಕಾಡಿಗೆ ಧಕ್ಕೆಯಾಗಿದೆ. ಈಗ ಬ್ರೆಜಿಲ್ ಸರ್ಕಾರ ಎಚ್ಚೆತ್ತುಕೊಂಡು ಅಮೆಜಾನ್ ಕಾಡುಗಳನ್ನು ಉಳಿಸುವ ಪ್ರಯತ್ನಕ್ಕೆ ಮುಂದಾಗಿದೆ.

ನಿನ್ನೆ ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಿಸಲು ಸೈನ್ಯವನ್ನು ಕಳುಹಿಸುವುದಾಗಿ ಗ್ಯಾಝೆಟ್ ನೋಟಿಫಿಕೇಶನ್ ಹೊರಡಿಸಿದ್ದು ಎಷ್ಟು ಪ್ರಮಾಣದ ಸೈನ್ಯವನ್ನು ಅಮೆಜಾನ್ ಕಾಡುಗಳಿಗೆ ಬ್ರೆಜಿಲ್ ಸರ್ಕಾರ ಕಳುಹಿಸಿಕೊಡಲಿದೆ ಎಂಬುದು ಇದುವರೆಗೆ ಸ್ಪಷ್ಟವಾಗಿಲ್ಲ. ಆಗಸ್ಟ್ ಅಂತ್ಯದ ವೇಳೆಗೆ ಅಮೆಜಾನ್ ವಲಯದ ಪಾರಾ, ಅಮೆಜೊನಸ್, ಮಾಟೊ ಗ್ರೋಸೊ, ರೊಂಡೆನಿಯಾ ರಾಜ್ಯಗಳಿಗೆ ಆಗಸ್ಟ್ ಅಂತ್ಯದ ವೇಳೆಗೆ ಸೈನ್ಯವನ್ನು ಕಳುಹಿಸುವುದಾಗಿ ಬ್ರೆಜಿಲ್ ಸರ್ಕಾರ ಅಧಿಕೃತವಾಗಿ ಹೇಳಿದೆ.

ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರ ಒತ್ತಡದ ಕಾರಣದಿಂದ ಬ್ರೆಜಿಲ್ ಸರ್ಕಾರ ಈ ಕ್ರಮಗಳನ್ನು ಕೈಗೊಳ್ಳುತ್ತಿದೆ. 2020ರಲ್ಲಿ ಬ್ರೆಜಿಲ್‌ನಲ್ಲಿ ವ್ಯಾಪಕವಾದ ಅರಣ್ಯ ನಾಶ ನಡೆದಿರುವ ಸುದ್ದಿ ಜಗತ್ತಿನಾದ್ಯಂತ ಹರಡಿತ್ತು. ಉಪಗ್ರಹ ಚಿತ್ರಗಳು ಕೂಡ ಅಮೆಜಾನ್ ಕಾಡುಗಳಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಿಕೆಗಳನ್ನು ಬಹಿರಂಗಗೊಳಿಸಿದ್ದವು. ಅಕ್ರಮ ಟಿಂಬರ್ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಆರೋಪವನ್ನು ಎದುರಿಸಿತ್ತಿದ್ದ ಜೂನ್ 23 ರಂದು ಬ್ರೆಜಿಲ್‌ನ ಪರಿಸರ ಮಂತ್ರಿ ರಿಕಾರ್ಡೋ ಸೆಲ್ಲಾಸ್ ಇದೇ ವಿಷಯಕ್ಕೆ ರಾಜೀನಾಮೆಯನ್ನು ನೀಡಿದ್ದರು. ಇದರಿಂದ ಬ್ರೆಜಿಲ್ ಮತ್ತು ಅಮೆಜಾನ್ ಕಾಡು ನಾಶದ ವಿಷಯ ಮತ್ತೊಮ್ಮೆ ಚರ್ಚೆಗೆ ಬಂದಿದೆ.

ಅಮೆಜಾನ್ ಕಾಡುಗಳ ರಕ್ಷಣೆಗೆ ಸಂಬಂಧಿಸಿದಂತೆ ವ್ಯಾಪಕ ಕ್ರಮ ಕೈಗೊಳ್ಳಲು ತನ್ನ ಬಳಿ ಆರ್ಥಿಕ ಸಂಪನ್ಮೂಲಗಳು ಇಲ್ಲವೆಂದು ಬ್ರೆಜಿಲ್ ಹೇಳಿತ್ತು. ಬ್ರೆಜಿಲ್ ಅಮೆಜಾನ್ ರಕ್ಷಣೆಗೆ ಕ್ರಮ ಕೈಗೊಳ್ಳುವವರೆಗೆ ಯಾವುದೇ ಆರ್ಥಿಕ ಸಹಾಯ ಮಾಡುವುದಿಲ್ಲವೆಂದು ಅಮೆರಿಕಾ ಹೇಳಿದೆ. ಜಾಗತಿಕ ತಾಪಮಾನ ಏರಿಕೆ ಸಮಸ್ಯೆಗೆ ಅಮೆರಿಕಾ ಕ್ರಮ ಕೈಗೊಳ್ಳುವ ಸಲುವಾಗಿ ಅದು ಒತ್ತಡ ಹೇರುತ್ತಿದೆ. ಅಮೆರಿಕಾ ಒತ್ತಡದ ಪರಿಣಾಮವಾಗಿ ಬ್ರೆಜಿಲ್ ಸೈನ್ಯವನ್ನು ಕಳುಹಿಸಲು ಮುಂದಾಗಿದೆ ಎಂದು ಬ್ರೆಜಿಲ್‌ನ ಪರಿಸರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಣೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಅರಣ್ಯ ನಾಶ ಮಾಡುವವರು ಮತ್ತು ಅಕ್ರಮ ಚಟುವಟಿಕೆ ನಡೆಸುವವರಿಗೆ ದಂಡ ವಿಧಿಸುವ ಕಾನೂನನ್ನು ರದ್ದುಗೊಳಿಸಿದೆ ಎಂದು ಪರಿಸರ ಹೋರಾಟಗಾರ ಮಾರ್ಸಿಯೋ ಆಸ್ಟಿನಿ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.

ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಣೆಗೆ ಸೈನ್ಯವನ್ನು ಕಳುಹಿಸಿಕೊಡುತ್ತಿರುವದು ಇದು 3 ನೇ ಬಾರಿ. ಇದುವರೆಗೆ ಅಲ್ಫಾವಧಿಗೆ ಸೈನ್ಯವನ್ನು ಕಳುಹಿಸಿ ಮತ್ತೆ ಮರಳಿ ಕರೆಸಿಕೊಂಡಿದೆ. ಬ್ರೆಜಿಲ್ ಸರ್ಕಾರದ ಕೈಗೊಂಡಿರುವ ಕ್ರಮಗಳು ಅಮೆಜಾನ್ ಅರಣ್ಯ ರಕ್ಷಣೆಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಜಗತ್ತಿನ ಹಸಿರಿನ ತೊಟ್ಟಿಲು ಅಮೆಜಾನ್ ಕಾಡುಗಳು ನಾಶವಾದಂತೆಲ್ಲ ಜಗತ್ತಿನಲ್ಲಿ ಪರಿಸರ ಸಮಸ್ಯೆಗಳು ತಲೆದೋರುತ್ತಿವೆ. ನೀರ್ಗಲ್ಲುಗಳು ಕರಗಿ ಸಮುದ್ರದ ಮಟ್ಟದಲ್ಲಿ ಹೆಚ್ಚಳವಾಗುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ  ಮುಂದೊಂದು  ದಿನ ನ್ಯೂಯಾರ್ಕ, ಲಂಡನ್, ಮುಂಬೈ ಸೇರಿದಂತೆ ಸಮುದ್ರದಂಚಿನ ನಗರಗಳು ನೀರಿನಲ್ಲಿ ಮುಳುಗಡೆಯಾಗುವ ದಿನಗಳು ದೂರದಲ್ಲಿಲ್ಲ.


ಇದನ್ನೂ ಓದಿ : ಎಲ್ಲರೂ ಜೊತೆಗೂಡಿ ಆರಿಸಬೇಕಾದ ಅಮೆಜಾನ್ ಕಾಡಿನ ಬೆಂಕಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...