Homeಅಂತರಾಷ್ಟ್ರೀಯಅಮೆಜಾನ್ ಅರಣ್ಯನಾಶ ತಡೆಯಲು ಸೈನ್ಯ ಕಳುಹಿಸಲು ಮುಂದಾದ ಬ್ರೆಜಿಲ್

ಅಮೆಜಾನ್ ಅರಣ್ಯನಾಶ ತಡೆಯಲು ಸೈನ್ಯ ಕಳುಹಿಸಲು ಮುಂದಾದ ಬ್ರೆಜಿಲ್

- Advertisement -
- Advertisement -

ಜಗತ್ತಿನ ಆಕ್ಸಿಜನ್ ತೊಟ್ಟಿಲು ಎಂದು ಕರೆಯಲ್ಪಡುವ ದಕ್ಷಿಣ ಅಮೆರಿಕಾದ ಅಮೆಜಾನ್ ಕಾಡುಗಳು ಒತ್ತುವರಿಯಾಗುತ್ತಿವೆ, ನಾಶವಾಗುತ್ತಿವೆ ಎಂಬ ಕೂಗು ಕಳೆದ ಹಲವಾರು ವರ್ಷಗಳಿಂದ ಕೇಳಿಬರುತ್ತಿದೆ. ಅಮೆಜಾನ್ ಉಳಿಸಿ ಅಭಿಯಾನ ಕೂಡ ನಡೆಯುತ್ತಿದೆ. ವಿವಿಧ ಪರಿಸರ ಸಂಘಟನೆಗಳು ಅಮೆಜಾನ್ ಉಳಿಸುವ ಹೋರಾಟದಲ್ಲಿ ತೊಡಗಿಸಿಕೊಂಡಿವೆ. ಬ್ರೆಜಿಲ್ ಸರ್ಕಾರ ಮಾತ್ರ ಅಮೆಜಾನ್ ಉಳಿಸಲು ಇದುವರೆಗೆ ಹೆಚ್ಚಿನ ಪ್ರಯತ್ನ ಮಾಡಿರಲಿಲ್ಲ. ಬದಲಾಗಿ 2018 ರ ತಮ್ಮ ಚುನಾವಣಾ ಪ್ರಚಾರದಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸಾನೇರೋ ಅಮೆಜಾನ್ ಅಭಿವೃದ್ಧಿ ಮಾಡುವುದಾಗಿ ಭರವಸೆ ನೀಡಿದ್ದರು.

ಅಮೆರಿಕಾ ಮೂಲದ ಜಾಗತಿಕ ಕಂಪನಿಗಳು ಅಮೆಜಾನ್ ಅರಣ್ಯ ವಲಯದಲ್ಲಿ ಫಾರ್ಮಿಂಗ್, ಕೃಷಿ ಸೇರಿದಂತೆ ವಿವಿಧ ರೀತಿಯ ಉದ್ಯಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವು. ಬ್ರೆಜಿಲ್ ಸರ್ಕಾರ ಬಹುರಾಷ್ಟ್ರೀಯ ಕಂಪನಿಗಳಿಗೆ ನೆರವಾಗುವಂತಹ ಕಾನೂನುಗಳನ್ನು ಜಾರಿಗೆ ತಂದಿತ್ತು. ಜೊತೆಗೆ ಸ್ಥಳೀಯ ನಿವಾಸಿಗಳು ಕೂಡ ಕಾಡಿಗೆ ಬೆಂಕಿ ಹಚ್ಚಿ ತಮ್ಮ ಕೃಷಿ ಜಮೀನನ್ನು ವಿಸ್ತರಿಸಿಕೊಳ್ಳುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಇದೆಲ್ಲದರಿಂದ ಜಗತ್ತಿನ ಹಸಿರು ತೊಟ್ಟಿಲು ಅಮೆಜಾನ್ ಕಾಡಿಗೆ ಧಕ್ಕೆಯಾಗಿದೆ. ಈಗ ಬ್ರೆಜಿಲ್ ಸರ್ಕಾರ ಎಚ್ಚೆತ್ತುಕೊಂಡು ಅಮೆಜಾನ್ ಕಾಡುಗಳನ್ನು ಉಳಿಸುವ ಪ್ರಯತ್ನಕ್ಕೆ ಮುಂದಾಗಿದೆ.

ನಿನ್ನೆ ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಿಸಲು ಸೈನ್ಯವನ್ನು ಕಳುಹಿಸುವುದಾಗಿ ಗ್ಯಾಝೆಟ್ ನೋಟಿಫಿಕೇಶನ್ ಹೊರಡಿಸಿದ್ದು ಎಷ್ಟು ಪ್ರಮಾಣದ ಸೈನ್ಯವನ್ನು ಅಮೆಜಾನ್ ಕಾಡುಗಳಿಗೆ ಬ್ರೆಜಿಲ್ ಸರ್ಕಾರ ಕಳುಹಿಸಿಕೊಡಲಿದೆ ಎಂಬುದು ಇದುವರೆಗೆ ಸ್ಪಷ್ಟವಾಗಿಲ್ಲ. ಆಗಸ್ಟ್ ಅಂತ್ಯದ ವೇಳೆಗೆ ಅಮೆಜಾನ್ ವಲಯದ ಪಾರಾ, ಅಮೆಜೊನಸ್, ಮಾಟೊ ಗ್ರೋಸೊ, ರೊಂಡೆನಿಯಾ ರಾಜ್ಯಗಳಿಗೆ ಆಗಸ್ಟ್ ಅಂತ್ಯದ ವೇಳೆಗೆ ಸೈನ್ಯವನ್ನು ಕಳುಹಿಸುವುದಾಗಿ ಬ್ರೆಜಿಲ್ ಸರ್ಕಾರ ಅಧಿಕೃತವಾಗಿ ಹೇಳಿದೆ.

ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರ ಒತ್ತಡದ ಕಾರಣದಿಂದ ಬ್ರೆಜಿಲ್ ಸರ್ಕಾರ ಈ ಕ್ರಮಗಳನ್ನು ಕೈಗೊಳ್ಳುತ್ತಿದೆ. 2020ರಲ್ಲಿ ಬ್ರೆಜಿಲ್‌ನಲ್ಲಿ ವ್ಯಾಪಕವಾದ ಅರಣ್ಯ ನಾಶ ನಡೆದಿರುವ ಸುದ್ದಿ ಜಗತ್ತಿನಾದ್ಯಂತ ಹರಡಿತ್ತು. ಉಪಗ್ರಹ ಚಿತ್ರಗಳು ಕೂಡ ಅಮೆಜಾನ್ ಕಾಡುಗಳಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಿಕೆಗಳನ್ನು ಬಹಿರಂಗಗೊಳಿಸಿದ್ದವು. ಅಕ್ರಮ ಟಿಂಬರ್ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಆರೋಪವನ್ನು ಎದುರಿಸಿತ್ತಿದ್ದ ಜೂನ್ 23 ರಂದು ಬ್ರೆಜಿಲ್‌ನ ಪರಿಸರ ಮಂತ್ರಿ ರಿಕಾರ್ಡೋ ಸೆಲ್ಲಾಸ್ ಇದೇ ವಿಷಯಕ್ಕೆ ರಾಜೀನಾಮೆಯನ್ನು ನೀಡಿದ್ದರು. ಇದರಿಂದ ಬ್ರೆಜಿಲ್ ಮತ್ತು ಅಮೆಜಾನ್ ಕಾಡು ನಾಶದ ವಿಷಯ ಮತ್ತೊಮ್ಮೆ ಚರ್ಚೆಗೆ ಬಂದಿದೆ.

ಅಮೆಜಾನ್ ಕಾಡುಗಳ ರಕ್ಷಣೆಗೆ ಸಂಬಂಧಿಸಿದಂತೆ ವ್ಯಾಪಕ ಕ್ರಮ ಕೈಗೊಳ್ಳಲು ತನ್ನ ಬಳಿ ಆರ್ಥಿಕ ಸಂಪನ್ಮೂಲಗಳು ಇಲ್ಲವೆಂದು ಬ್ರೆಜಿಲ್ ಹೇಳಿತ್ತು. ಬ್ರೆಜಿಲ್ ಅಮೆಜಾನ್ ರಕ್ಷಣೆಗೆ ಕ್ರಮ ಕೈಗೊಳ್ಳುವವರೆಗೆ ಯಾವುದೇ ಆರ್ಥಿಕ ಸಹಾಯ ಮಾಡುವುದಿಲ್ಲವೆಂದು ಅಮೆರಿಕಾ ಹೇಳಿದೆ. ಜಾಗತಿಕ ತಾಪಮಾನ ಏರಿಕೆ ಸಮಸ್ಯೆಗೆ ಅಮೆರಿಕಾ ಕ್ರಮ ಕೈಗೊಳ್ಳುವ ಸಲುವಾಗಿ ಅದು ಒತ್ತಡ ಹೇರುತ್ತಿದೆ. ಅಮೆರಿಕಾ ಒತ್ತಡದ ಪರಿಣಾಮವಾಗಿ ಬ್ರೆಜಿಲ್ ಸೈನ್ಯವನ್ನು ಕಳುಹಿಸಲು ಮುಂದಾಗಿದೆ ಎಂದು ಬ್ರೆಜಿಲ್‌ನ ಪರಿಸರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಣೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಅರಣ್ಯ ನಾಶ ಮಾಡುವವರು ಮತ್ತು ಅಕ್ರಮ ಚಟುವಟಿಕೆ ನಡೆಸುವವರಿಗೆ ದಂಡ ವಿಧಿಸುವ ಕಾನೂನನ್ನು ರದ್ದುಗೊಳಿಸಿದೆ ಎಂದು ಪರಿಸರ ಹೋರಾಟಗಾರ ಮಾರ್ಸಿಯೋ ಆಸ್ಟಿನಿ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.

ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಣೆಗೆ ಸೈನ್ಯವನ್ನು ಕಳುಹಿಸಿಕೊಡುತ್ತಿರುವದು ಇದು 3 ನೇ ಬಾರಿ. ಇದುವರೆಗೆ ಅಲ್ಫಾವಧಿಗೆ ಸೈನ್ಯವನ್ನು ಕಳುಹಿಸಿ ಮತ್ತೆ ಮರಳಿ ಕರೆಸಿಕೊಂಡಿದೆ. ಬ್ರೆಜಿಲ್ ಸರ್ಕಾರದ ಕೈಗೊಂಡಿರುವ ಕ್ರಮಗಳು ಅಮೆಜಾನ್ ಅರಣ್ಯ ರಕ್ಷಣೆಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಜಗತ್ತಿನ ಹಸಿರಿನ ತೊಟ್ಟಿಲು ಅಮೆಜಾನ್ ಕಾಡುಗಳು ನಾಶವಾದಂತೆಲ್ಲ ಜಗತ್ತಿನಲ್ಲಿ ಪರಿಸರ ಸಮಸ್ಯೆಗಳು ತಲೆದೋರುತ್ತಿವೆ. ನೀರ್ಗಲ್ಲುಗಳು ಕರಗಿ ಸಮುದ್ರದ ಮಟ್ಟದಲ್ಲಿ ಹೆಚ್ಚಳವಾಗುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ  ಮುಂದೊಂದು  ದಿನ ನ್ಯೂಯಾರ್ಕ, ಲಂಡನ್, ಮುಂಬೈ ಸೇರಿದಂತೆ ಸಮುದ್ರದಂಚಿನ ನಗರಗಳು ನೀರಿನಲ್ಲಿ ಮುಳುಗಡೆಯಾಗುವ ದಿನಗಳು ದೂರದಲ್ಲಿಲ್ಲ.


ಇದನ್ನೂ ಓದಿ : ಎಲ್ಲರೂ ಜೊತೆಗೂಡಿ ಆರಿಸಬೇಕಾದ ಅಮೆಜಾನ್ ಕಾಡಿನ ಬೆಂಕಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...