Homeಅಂತರಾಷ್ಟ್ರೀಯಅಮೆಜಾನ್ ಅರಣ್ಯನಾಶ ತಡೆಯಲು ಸೈನ್ಯ ಕಳುಹಿಸಲು ಮುಂದಾದ ಬ್ರೆಜಿಲ್

ಅಮೆಜಾನ್ ಅರಣ್ಯನಾಶ ತಡೆಯಲು ಸೈನ್ಯ ಕಳುಹಿಸಲು ಮುಂದಾದ ಬ್ರೆಜಿಲ್

- Advertisement -
- Advertisement -

ಜಗತ್ತಿನ ಆಕ್ಸಿಜನ್ ತೊಟ್ಟಿಲು ಎಂದು ಕರೆಯಲ್ಪಡುವ ದಕ್ಷಿಣ ಅಮೆರಿಕಾದ ಅಮೆಜಾನ್ ಕಾಡುಗಳು ಒತ್ತುವರಿಯಾಗುತ್ತಿವೆ, ನಾಶವಾಗುತ್ತಿವೆ ಎಂಬ ಕೂಗು ಕಳೆದ ಹಲವಾರು ವರ್ಷಗಳಿಂದ ಕೇಳಿಬರುತ್ತಿದೆ. ಅಮೆಜಾನ್ ಉಳಿಸಿ ಅಭಿಯಾನ ಕೂಡ ನಡೆಯುತ್ತಿದೆ. ವಿವಿಧ ಪರಿಸರ ಸಂಘಟನೆಗಳು ಅಮೆಜಾನ್ ಉಳಿಸುವ ಹೋರಾಟದಲ್ಲಿ ತೊಡಗಿಸಿಕೊಂಡಿವೆ. ಬ್ರೆಜಿಲ್ ಸರ್ಕಾರ ಮಾತ್ರ ಅಮೆಜಾನ್ ಉಳಿಸಲು ಇದುವರೆಗೆ ಹೆಚ್ಚಿನ ಪ್ರಯತ್ನ ಮಾಡಿರಲಿಲ್ಲ. ಬದಲಾಗಿ 2018 ರ ತಮ್ಮ ಚುನಾವಣಾ ಪ್ರಚಾರದಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸಾನೇರೋ ಅಮೆಜಾನ್ ಅಭಿವೃದ್ಧಿ ಮಾಡುವುದಾಗಿ ಭರವಸೆ ನೀಡಿದ್ದರು.

ಅಮೆರಿಕಾ ಮೂಲದ ಜಾಗತಿಕ ಕಂಪನಿಗಳು ಅಮೆಜಾನ್ ಅರಣ್ಯ ವಲಯದಲ್ಲಿ ಫಾರ್ಮಿಂಗ್, ಕೃಷಿ ಸೇರಿದಂತೆ ವಿವಿಧ ರೀತಿಯ ಉದ್ಯಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವು. ಬ್ರೆಜಿಲ್ ಸರ್ಕಾರ ಬಹುರಾಷ್ಟ್ರೀಯ ಕಂಪನಿಗಳಿಗೆ ನೆರವಾಗುವಂತಹ ಕಾನೂನುಗಳನ್ನು ಜಾರಿಗೆ ತಂದಿತ್ತು. ಜೊತೆಗೆ ಸ್ಥಳೀಯ ನಿವಾಸಿಗಳು ಕೂಡ ಕಾಡಿಗೆ ಬೆಂಕಿ ಹಚ್ಚಿ ತಮ್ಮ ಕೃಷಿ ಜಮೀನನ್ನು ವಿಸ್ತರಿಸಿಕೊಳ್ಳುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಇದೆಲ್ಲದರಿಂದ ಜಗತ್ತಿನ ಹಸಿರು ತೊಟ್ಟಿಲು ಅಮೆಜಾನ್ ಕಾಡಿಗೆ ಧಕ್ಕೆಯಾಗಿದೆ. ಈಗ ಬ್ರೆಜಿಲ್ ಸರ್ಕಾರ ಎಚ್ಚೆತ್ತುಕೊಂಡು ಅಮೆಜಾನ್ ಕಾಡುಗಳನ್ನು ಉಳಿಸುವ ಪ್ರಯತ್ನಕ್ಕೆ ಮುಂದಾಗಿದೆ.

ನಿನ್ನೆ ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಿಸಲು ಸೈನ್ಯವನ್ನು ಕಳುಹಿಸುವುದಾಗಿ ಗ್ಯಾಝೆಟ್ ನೋಟಿಫಿಕೇಶನ್ ಹೊರಡಿಸಿದ್ದು ಎಷ್ಟು ಪ್ರಮಾಣದ ಸೈನ್ಯವನ್ನು ಅಮೆಜಾನ್ ಕಾಡುಗಳಿಗೆ ಬ್ರೆಜಿಲ್ ಸರ್ಕಾರ ಕಳುಹಿಸಿಕೊಡಲಿದೆ ಎಂಬುದು ಇದುವರೆಗೆ ಸ್ಪಷ್ಟವಾಗಿಲ್ಲ. ಆಗಸ್ಟ್ ಅಂತ್ಯದ ವೇಳೆಗೆ ಅಮೆಜಾನ್ ವಲಯದ ಪಾರಾ, ಅಮೆಜೊನಸ್, ಮಾಟೊ ಗ್ರೋಸೊ, ರೊಂಡೆನಿಯಾ ರಾಜ್ಯಗಳಿಗೆ ಆಗಸ್ಟ್ ಅಂತ್ಯದ ವೇಳೆಗೆ ಸೈನ್ಯವನ್ನು ಕಳುಹಿಸುವುದಾಗಿ ಬ್ರೆಜಿಲ್ ಸರ್ಕಾರ ಅಧಿಕೃತವಾಗಿ ಹೇಳಿದೆ.

ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರ ಒತ್ತಡದ ಕಾರಣದಿಂದ ಬ್ರೆಜಿಲ್ ಸರ್ಕಾರ ಈ ಕ್ರಮಗಳನ್ನು ಕೈಗೊಳ್ಳುತ್ತಿದೆ. 2020ರಲ್ಲಿ ಬ್ರೆಜಿಲ್‌ನಲ್ಲಿ ವ್ಯಾಪಕವಾದ ಅರಣ್ಯ ನಾಶ ನಡೆದಿರುವ ಸುದ್ದಿ ಜಗತ್ತಿನಾದ್ಯಂತ ಹರಡಿತ್ತು. ಉಪಗ್ರಹ ಚಿತ್ರಗಳು ಕೂಡ ಅಮೆಜಾನ್ ಕಾಡುಗಳಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಿಕೆಗಳನ್ನು ಬಹಿರಂಗಗೊಳಿಸಿದ್ದವು. ಅಕ್ರಮ ಟಿಂಬರ್ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಆರೋಪವನ್ನು ಎದುರಿಸಿತ್ತಿದ್ದ ಜೂನ್ 23 ರಂದು ಬ್ರೆಜಿಲ್‌ನ ಪರಿಸರ ಮಂತ್ರಿ ರಿಕಾರ್ಡೋ ಸೆಲ್ಲಾಸ್ ಇದೇ ವಿಷಯಕ್ಕೆ ರಾಜೀನಾಮೆಯನ್ನು ನೀಡಿದ್ದರು. ಇದರಿಂದ ಬ್ರೆಜಿಲ್ ಮತ್ತು ಅಮೆಜಾನ್ ಕಾಡು ನಾಶದ ವಿಷಯ ಮತ್ತೊಮ್ಮೆ ಚರ್ಚೆಗೆ ಬಂದಿದೆ.

ಅಮೆಜಾನ್ ಕಾಡುಗಳ ರಕ್ಷಣೆಗೆ ಸಂಬಂಧಿಸಿದಂತೆ ವ್ಯಾಪಕ ಕ್ರಮ ಕೈಗೊಳ್ಳಲು ತನ್ನ ಬಳಿ ಆರ್ಥಿಕ ಸಂಪನ್ಮೂಲಗಳು ಇಲ್ಲವೆಂದು ಬ್ರೆಜಿಲ್ ಹೇಳಿತ್ತು. ಬ್ರೆಜಿಲ್ ಅಮೆಜಾನ್ ರಕ್ಷಣೆಗೆ ಕ್ರಮ ಕೈಗೊಳ್ಳುವವರೆಗೆ ಯಾವುದೇ ಆರ್ಥಿಕ ಸಹಾಯ ಮಾಡುವುದಿಲ್ಲವೆಂದು ಅಮೆರಿಕಾ ಹೇಳಿದೆ. ಜಾಗತಿಕ ತಾಪಮಾನ ಏರಿಕೆ ಸಮಸ್ಯೆಗೆ ಅಮೆರಿಕಾ ಕ್ರಮ ಕೈಗೊಳ್ಳುವ ಸಲುವಾಗಿ ಅದು ಒತ್ತಡ ಹೇರುತ್ತಿದೆ. ಅಮೆರಿಕಾ ಒತ್ತಡದ ಪರಿಣಾಮವಾಗಿ ಬ್ರೆಜಿಲ್ ಸೈನ್ಯವನ್ನು ಕಳುಹಿಸಲು ಮುಂದಾಗಿದೆ ಎಂದು ಬ್ರೆಜಿಲ್‌ನ ಪರಿಸರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಣೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಅರಣ್ಯ ನಾಶ ಮಾಡುವವರು ಮತ್ತು ಅಕ್ರಮ ಚಟುವಟಿಕೆ ನಡೆಸುವವರಿಗೆ ದಂಡ ವಿಧಿಸುವ ಕಾನೂನನ್ನು ರದ್ದುಗೊಳಿಸಿದೆ ಎಂದು ಪರಿಸರ ಹೋರಾಟಗಾರ ಮಾರ್ಸಿಯೋ ಆಸ್ಟಿನಿ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.

ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಣೆಗೆ ಸೈನ್ಯವನ್ನು ಕಳುಹಿಸಿಕೊಡುತ್ತಿರುವದು ಇದು 3 ನೇ ಬಾರಿ. ಇದುವರೆಗೆ ಅಲ್ಫಾವಧಿಗೆ ಸೈನ್ಯವನ್ನು ಕಳುಹಿಸಿ ಮತ್ತೆ ಮರಳಿ ಕರೆಸಿಕೊಂಡಿದೆ. ಬ್ರೆಜಿಲ್ ಸರ್ಕಾರದ ಕೈಗೊಂಡಿರುವ ಕ್ರಮಗಳು ಅಮೆಜಾನ್ ಅರಣ್ಯ ರಕ್ಷಣೆಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಜಗತ್ತಿನ ಹಸಿರಿನ ತೊಟ್ಟಿಲು ಅಮೆಜಾನ್ ಕಾಡುಗಳು ನಾಶವಾದಂತೆಲ್ಲ ಜಗತ್ತಿನಲ್ಲಿ ಪರಿಸರ ಸಮಸ್ಯೆಗಳು ತಲೆದೋರುತ್ತಿವೆ. ನೀರ್ಗಲ್ಲುಗಳು ಕರಗಿ ಸಮುದ್ರದ ಮಟ್ಟದಲ್ಲಿ ಹೆಚ್ಚಳವಾಗುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ  ಮುಂದೊಂದು  ದಿನ ನ್ಯೂಯಾರ್ಕ, ಲಂಡನ್, ಮುಂಬೈ ಸೇರಿದಂತೆ ಸಮುದ್ರದಂಚಿನ ನಗರಗಳು ನೀರಿನಲ್ಲಿ ಮುಳುಗಡೆಯಾಗುವ ದಿನಗಳು ದೂರದಲ್ಲಿಲ್ಲ.


ಇದನ್ನೂ ಓದಿ : ಎಲ್ಲರೂ ಜೊತೆಗೂಡಿ ಆರಿಸಬೇಕಾದ ಅಮೆಜಾನ್ ಕಾಡಿನ ಬೆಂಕಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...