Homeಮುಖಪುಟ‘ರೈತರ ತಲೆ ಬುರುಡೆ ಒಡೆಯಿರಿ’ - ಪೊಲೀಸರಿಗೆ ಆದೇಶ ನೀಡುತ್ತಿರುವ ಅಧಿಕಾರಿಯ ವಿಡಿಯೊ ವೈರಲ್!

‘ರೈತರ ತಲೆ ಬುರುಡೆ ಒಡೆಯಿರಿ’ – ಪೊಲೀಸರಿಗೆ ಆದೇಶ ನೀಡುತ್ತಿರುವ ಅಧಿಕಾರಿಯ ವಿಡಿಯೊ ವೈರಲ್!

- Advertisement -
- Advertisement -

ಶನಿವಾರದಂದು ಹರಿಯಾಣದ ಕರ್ನಲ್‌ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಅಮಾನುಷವಾಗಿ ಲಾಠಿ ಚಾರ್ಜ್ ನಡೆಸಿದ್ದಾರೆ. ಲಾಠಿ ಚಾರ್ಜ್‌ ಆದ ನಂತರ ವಿಡಿಯೊವೊಂದು ವೈರಲ್‌ ಆಗಿದ್ದು, ಅದರಲ್ಲಿ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆಗಿರುವ ಆಯುಷ್‌ ಸಿನ್ಹಾ “ಪ್ರತಿಭಟನಾಕಾರರ ತಲೆಬುರುಡೆ ಒಡೆಯಲು” ಪೊಲೀಸ್‌ ಸಿಬ್ಬಂದಿಗಳಿಗೆ ಆದೇಶ ನೀಡುತ್ತಿವುದುನ್ನು ಕಾಣಬಹುದಾಗಿದೆ. ಇದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಅವರನ್ನು ತಕ್ಷಣವೇ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ.

ಅಷ್ಟೇ ಅಲ್ಲದೆ, ರೈತರ ವಿರುದ್ದ ಬಲ ಪ್ರಯೋಗ ಮಾಡುವುದಕ್ಕೆ ಲಿಖಿತ ಆದೇಶ ಹೊರಡಿಸುವುದಾಗಿ ಅವರು ಪೊಲೀಸರಿಗೆ ಹೇಳುತ್ತಿರುವುದು ವಿಡಿಯೊದಲ್ಲಿ ಕಂಡುಬಂದಿದೆ.

ಇದನ್ನೂಓದಿ: ಹರಿಯಾಣ: ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್‌; 10 ಜನರಿಗೆ ಗಾಯ

ಹಲವು ಪೊಲೀಸ್‌ ಸಿಬ್ಬಂದಿಗಳ ಮುಂದೆ ನಿಂತು, ಯಾವುದೆ ರೈತ ಬ್ಯಾರಿಕೇಡ್ ದಾಟಬಾರದೆಂದು ಆಯುಷ್‌ ಸಿನ್ಹಾ ಸೂಚನೆ ನೀಡುತ್ತಾರೆ. “ಒಂದು ವೇಳೆ ಯಾರಾದರೂ ಬ್ಯಾರಿಕೇಡ್ ದಾಟಿದರೆ, ಅವರ ತಲೆಗಳನ್ನು ಒಡೆದು ಹಾಕಿ” ಎಂದು ಅವರು ಆದೇಶಿಸುತ್ತಾರೆ. ಈ ಮಾತುಗಳು ವೈರಲ್ ಆಗಿರುವ ವಿಡಿಯೊದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ.

“ಇದು ತುಂಬಾ ಸರಳ ಮತ್ತು ಸ್ಪಷ್ಟವಾಗಿದೆ. ಯಾರು ಎಲ್ಲಿಂದ ಬಂದರೂ, ಯಾರೊಬ್ಬರೂ ಬ್ಯಾರಿಕೇಡ್‌ನಿಂದ ಮುಂದೆ ಹೋಗಬಾರದು. ಒಂದು ವೇಳೆ ಬಂದರೆ ಅವರ ಬುರುಡೆಯನ್ನು ಒಡೆಯಿರಿ. ಯಾವುದೇ ಸೂಚನೆ ಅಥವಾ ನಿರ್ದೇಶನದ ಅಗತ್ಯವಿಲ್ಲ. ನಮ್ಮಲ್ಲಿ ಸಾಕಷ್ಟು ಪೊಲೀಸ್ ಪಡೆಯಿದೆ” ಎಂದು ಕರ್ನಾಲ್‌ನಲ್ಲಿ ಪ್ರತಿಭಟನಾ ನಿರತ ರೈತರನ್ನು ನಿಭಾಯಿಸಲು ನಿಯೋಜಿಸಲಾದ ಪೊಲೀಸರಿಗೆ ಆಯುಷ್ ಸಿನ್ಹಾ ಹೇಳಿದ್ದಾರೆ.

ಇದನ್ನೂಓದಿ: ಹರಿಯಾಣ: 100ಕ್ಕೂ ಹೆಚ್ಚು ರೈತರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದ ಪೊಲೀಸರು

ವಿಡಿಯೊ ವೈರಲ್‌ ಆಗುತ್ತಿದ್ದಂತೆ, ಘಟನೆಯ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಎಸ್‌ಡಿಎಂ ಆಯುಷ್ ಸಿನ್ಹಾ ಅವರನ್ನು ತಕ್ಷಣವೇ ವಜಾಗೊಳಿಸುವಂತೆ ಒತ್ತಾಯಿಸಿದೆ.

ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಹೊರತಾಗಿಯೂ ಲಾಠಿ ಚಾರ್ಜ್‌ನಲ್ಲಿ ಹತ್ತಾರು ರೈತರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರೈತ ಸಂಘಟನೆ ಹೇಳಿಕೊಂಡಿದೆ.

ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಭಾಗವಹಿಸಿದ್ದ ಸಭೆಯನ್ನು ವಿರೋಧಿಸಿ ರೈತರು ಕರ್ನಾಲ್ ಬಳಿಯ ಬಸ್ತಾರಾ ಟೋಲ್ ಪ್ಲಾಜಾದಲ್ಲಿ ಜಮಾಯಿಸಿದ್ದರು. ಈ ವೇಳೆ ಪೊಲೀಸರು ಅವರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ.

ಘಟನೆಯಲ್ಲಿ ಕನಿಷ್ಠ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಶನಿವಾರ ವರದಿಯಾಗಿದೆ. ರಕ್ತಸಿಕ್ತವಾಗಿರುವ ದೇಹಗಳೊಂದಿಗೆ, ಗಂಭೀರ ಗಾಯಗೊಂಡಿರುವ ಹಲವಾರು ರೈತರ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇದನ್ನೂಓದಿ: ಹರಿಯಾಣದಲ್ಲಿ ಬಿಜೆಪಿ ನಾಯಕರಿಗೆ ಮತ್ತೆ ಮುಖಭಂಗ: ಮುಂದುವರೆದ ರೈತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...