Homeಕರ್ನಾಟಕಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ...

ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ ಆಕ್ರೋಶ

ಅಧಿಕಾರಿಗಳ ವಿರುದ್ದ ಪ್ರತಿಭಟನೆ ನಡೆಸಿದ ದಾಸರಹಳ್ಳಿ ಜೆಡಿಎಸ್‌ ಶಾಸಕ ಸೇರಿದಂತೆ ಹೋರಾಟ ಸಮಿತಿಯ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ

- Advertisement -
- Advertisement -

‘ಶಿವರಾಮ ಕಾರಂತ ಬಡಾವಣೆ’ ಅಭಿವೃದ್ದಿಗಾಗಿ ಸೋಮಶೆಟ್ಟಿಹಳ್ಳಿ ಹಾಗೂ ಗಾಣಿಗರಹಳ್ಳಿಯ ಸುಮಾರು 142 ಮನೆ ಮತ್ತು ಕಟ್ಟಡಗಳನ್ನು ಕೆಡವಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಧಸಿದೆ. ಇದಕ್ಕಾಗಿ ಸುಮಾರು ಹತ್ತಕ್ಕೂ ಹೆಚ್ಚು ಹಿಟಾಚಿಯೊಂದಿಗೆ ತೆರಳಿದ್ದ ಅಧಿಕಾರಿಗಳ ವಿರುದ್ದ ದಾಸರಹಳ್ಳಿಯ ಜೆಡಿಎಸ್‌ ಶಾಸಕ ಸೇರಿದಂತೆ ಹೋರಾಟ ಸಮಿತಿಯ ಮುಖಂಡರು ಸೋಮಶೆಟ್ಟಿಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದು, ಪೊಲೀಸರು ಅವರನ್ನು ಬಂಧಿಸಿ, ಬಿಡುಗಡೆ ಮಾಡಿರುವ ಘಟನೆ ಸೋಮವಾರ ನಡೆದಿದೆ. ಇದಾಗಿಯು ಪ್ರಾಧಿಕಾರವು ಸುಮಾರು ಆರು ಮನೆಗಳನ್ನು ಒಡೆದಿದೆ ಎಂದು ಹೋರಾಟಗಾರರು ಹೇಳಿದ್ದಾರೆ.

ಬೆಂಗಳೂರು ಅಭಿವೃದ್ದಿಯ ಹೆಸರು ಹೇಳಿ, ರಾಮಗೊಂಡನ ಹಳ್ಳಿಯ ಸುತ್ತಲಿನ 17 ಹಳ್ಳಿಗಳಲ್ಲಿ ಬಿಡಿಎ ‘ಶಿವರಾಮ ಕಾರಂತ ಬಡಾವಣೆ’ ಎಂಬ ವಸತಿ ಸೌಕರ್ಯವನ್ನು ನಿರ್ಮಿಸಲು ಹೊರಟಿದೆ. ಇಂದು ಸೋಮಶೆಟ್ಟಿಹಳ್ಳಿ ಹಾಗೂ ಗಾಣಿಗರಹಳ್ಳಿಯ ಒಟ್ಟು 142 ಕಟ್ಟಡಗಳು 2018ರ ಬಳಿಕ ನಿರ್ಮಾಣವಾಗಿವೆ ಎಂದು ಅದನ್ನು ಒಡೆಯಲು ಮುಂದಾಗಿದೆ. ಆದರೆ ಎಲ್ಲಾ ಮನೆ ಹಾಗೂ ಕಟ್ಟಡಗಳನ್ನು ಎನ್‌ಒಸಿ ಪಡೆದೇ ನಿರ್ಮಾಣ ಮಾಡಲಾಗಿದೆ ಎಂದು ಹೋರಾಟಗಾರರು ಹೇಳಿದ್ದಾರೆ.

ಇದನ್ನೂ ಓದಿ: ಶಿವರಾಮ ಕಾರಂತ್ ಬಡಾವಣೆ ಎಂಬ ‘ಅಭಿವೃದ್ಧಿ’ ಯೋಜನೆ; ದಲಿತರು-ಬಡಬಗ್ಗರ ಮೇಲೆ ಪ್ರಹಾರ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಸಂಘರ್ಷ ಸಮಿತಿ ಮುಖಂಡ ಎಂ. ರಮೇಶ್‌, “ಬಿಡಿಎ ಅಧಿಕಾರಿಗಳು ಯಾವುದೆ ಮುನ್ಸೂಚನೆ ನೀಡದೆ ಸೋಮಶೆಟ್ಟಿಹಳ್ಳಿಯ ಮನೆಗಳನ್ನು ಒಡೆದಿದ್ದಾರೆ. ಬಿಡಿಎ ಅಧಿಕಾರಿಗಳು ಮಾತೆತ್ತಿದರೆ ಸುಪ್ರೀಂಕೋರ್ಟ್ ಆದೇಶ ಎಂದು ಹೇಳುತ್ತಿದ್ದಾರೆ. ಆದರೆ ಸುಪ್ರೀಂಕೋರ್ಟ್ ಕಟ್ಟಡಗಳನ್ನು ಕೆಡವುವ ಬಗ್ಗೆ ಎಲ್ಲೂ ಹೇಳಿಲ್ಲ. ಇಲ್ಲಿ ಏನು ನಡೀತಿದೆ ಎಂದು ಕೂಡಾ ನಮಗೆ ಅರ್ಥವಾಗುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇಲ್ಲಿರುವಂತಹ ಮನೆಗಳನ್ನು ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಕೊಡುವಂತಹದ್ದು ಯಾವ ನ್ಯಾಯ. ಇದು ನಮ್ಮ ದೇಶದ ನ್ಯಾಯಕ್ಕೆ ವಿರುದ್ದವಾದುದು. ಇದನ್ನು ನಾವು ಖಂಡಿಸುತ್ತೇವೆ. ನಾವು ಪ್ರತಿಭಟನೆ ನಡೆಸಲು ಮುಂದಾದಾಗ ನಮ್ಮನ್ನು ಬಂಧಿಸಲಾಗಿದೆ. ಇಂದು ಎಂಟು ಮನೆಗಳನ್ನು ಒಡೆಯಲಿದ್ದಾರೆ ಎಂಬ ಮಾಹಿತಿಯಿದೆ” ಎಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ

ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡಾ ಆಕ್ರೊಶ ವ್ಯಕ್ತಪಡಿಸಿದ್ದು ತಮ್ಮ ಪಕ್ಷದ ಶಾಸಕನ ಬಂಧನವನ್ನು ಖಂಡಿಸಿದ್ದಾರೆ. “ಈ ಬಡಾವಣೆಯ ಜನರ ಸಂಕಷ್ಟಕ್ಕೆ ಸಂಬಂಧಿಸಿ ಹೋರಾಟಗಾರರು, ಸ್ಥಳೀಯ ನಿವಾಸಿಗಳನ್ನು ಒಳಗೊಂಡಂತೆ ಒಂದು ಸಭೆ ಕರೆಯಿರಿ, ನಾನೂ ಬರುತ್ತೇನೆ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೆ. ಆದರೆ, ಸಭೆಗೆ ಕಾಲಾವಕಾಶವವನ್ನೇ ನೀಡದೇ ಈಗ ಏಕಾಎಕಿ ಮನೆಗಳನ್ನು ಒಡೆಸುತ್ತಿರುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಶಿವರಾಮ ಕಾರಂತ ಬಡಾವಣೆ’ ವಿವಾದ – ಸಮಸ್ಯೆ ಪರಿಹರಿಸುವಂತೆ 17 ಹಳ್ಳಿಗಳಿಂದ ಬೃಹತ್ ಪ್ರತಿಭಟನೆ

“ಜನ ಸಾಲ ಮಾಡಿ ಮನೆಗಳನ್ನು ಕಟ್ಟಿದ್ದಾರೆ. ಈ ಬಡಾವಣೆ ನಿರ್ಮಾಣ ಆದಾಗ ಆರಂಭಿಕ ಹಂತದಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿ ನೋಟಿಫಿಕೇಶ್‌ ಮಾಡಿ, ಆಮೇಲೆ ಕೆಲ ಕಡೆ ಡಿನೋಟಿಫಿಕೇಷನ್‌ ಮಾಡಿ ಎನ್‌ಒಸಿಗಳನ್ನೂ ಕೊಟ್ಟು ಬಿಡಿಎ ಆಯುಕ್ತರು, ಅಧಿಕಾರಿಗಳು ಹಣ ಲೂಟಿ ಹೊಡೆಯುವ ಕೆಲಸ ಮಾಡಿದ್ದಾರೆ. ಮುಖ್ಯಮಂತ್ರಿಗಳ ನಿರ್ದೇಶನದಂತೆ ಇದೆಲ್ಲವನ್ನೂ ಅಧಿಕಾರಿಗಳು ಮಾಡಿದ್ದಾರೆ” ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

 

“ನ್ಯಾಯಾಲಯದಲ್ಲಿ ಸರಿಯಾಗಿ ವಾದ ಮಂಡನೆ ಮಾಡದೇ, ಸಮರ್ಪಕ ಮಾಹಿತಿಯನ್ನೂ ನೀಡದೇ ಅಧಿಕಾರಿಗಳು ಮತ್ತು ಸರಕಾರ ಅಮಾಯಕರ ಜೀವನದ ಜತೆ ಚೆಲ್ಲಾಟ ಆಡಿದ್ದಾರೆ. ಬಿಡಿಎಯ ಈಗಿನ ಅಧ್ಯಕ್ಷ ಎಸ್.‌ಆರ್.‌ವಿಶ್ವನಾಥ್‌ ಅವರೇ ಈ ಜನರ ಪರ ಹೋರಾಟ ಮಾಡಿದ್ದರು. ಈಗ ನೋಡಿದರೆ ಅವರೇ ಮನೆಗಳನ್ನು ನೆಲಸಮ ಮಾಡಿಸುತ್ತಿದ್ದಾರೆ.

ನಾನು ಹದಿನಾಲ್ಕು ತಿಂಗಳು ಅಧಿಕಾರದಲ್ಲಿದ್ದಾಗ ಈ ಮನೆಗಳನ್ನು ಒಡೆಯಲು ಬಿಟ್ಟಿರಲಿಲ್ಲ, ಈ ಸರಕಾರ ನಿಜಕ್ಕೂ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ. ಇವರೇ ಒಂದು ಕಡೆ ದುಡ್ಡು ಹೊಡೆಯೋದು. ಇನ್ನೊಂದು ಕಡೆ ಇವರೇ ಕಟ್ಟಡ ಒಡೆಸೋದು. ಜನರನ್ನು ಈಗ ಬೀದಿಗೆ ತಂದು ನಿಲ್ಲಿಸಿದ್ದಾರೆ. ಮುಖ್ಯಮಂತ್ರಿಗೆ ಜವಾಬ್ದಾರಿ ಎನ್ನುವುದು ಇದ್ದಿದ್ದರೆ ಕೂತು ಚರ್ಚೆ ಮಾಡಿ ಕಾನೂನು ರೀತಿಯಲ್ಲಿ ಆ ಜನರಿಗೆ ರಕ್ಷಣೆ ನೀಡಬೇಕಾಗಿತ್ತು” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಬಡಾವಣೆ ನಿರ್ಮಾಣವಾಗಲಿರುವ 17 ಹಳ್ಳಿಗಳ ನಿವಾಸಿಗಳು, ರೈತರು ಬಡಾವಣೆ ನಿರ್ಮಾಣದ ವಿರುದ್ದ ನಿರಂತವಾಗಿ ಪ್ರತಿಭಟನೆ ನಡೆಸುತ್ತಾ ಬರುತ್ತಿದ್ದಾರೆ. ಈ ಹಿಂದೆ ಇವರ ಪರವಾಗಿದ್ದ ಸ್ಥಳೀಯ ಬಿಜೆಪಿ ಶಾಸಕ ವಿಶ್ವನಾಥ್ ಇದೀಗ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ಆದರೆ ಈಗ ಅವರು ಜನರ ವಿರುದ್ದವಾಗಿ ನಿಂತಿದ್ದು ‘ಶಿವರಾಮ ಕಾರಂತ ಬಡಾವಣೆ’ ನಿರ್ಮಾಣದ ಪರವಾಗಿದ್ದಾರೆ.

ಇದನ್ನೂ ಓದಿ: ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Planned layouts ಮಾಡದಿದ್ದರೆ ಅಡ್ಡಾದಿಡ್ಡಿ ಬೆಳವಣಿಗೆ ಆಗುತ್ರದೆ.
    ಸರಿಯಾಗಿ ದಾರಿ,ಕರೆಂಟ್ ಕಂಬಹಾಕಲು ತೊಡಕು.
    ಇನ್ನು ಎಲ್ಲರಿಗೂ ಬೇಕಾದ ಆಟದಬಯಲು,ಪಾರ್ಕ್ ,ಅಗಲದಾರಿಗಳು ಮುಂದೆ ಅಲ್ಲಿ ಉಂಟಾಗುವ ತಗಾದೆಗಳಿಗೆ ಎಡೆಕೊಡುವುದಿಲ್ಲ
    ೩೦ ವರುಶಗಳ ಹಿಂದೆ ನೆಲದೊಡೆಯರು ಈ ಬಗೆಯ ಬಡಾವಣೆಮಾಡಲು ಎದುರು ಹೇಳುತ್ತಿರಲ್ಲಿಲ್ಲ.
    ಈಗ ಬೆಳೆಬೆಳೆಯಲು ಕೊಟ್ಟಿದ್ದ ಹೊಲಗಳನ್ನು ರಿಯಲ್ ಎಸ್ಟೇಟ್ ಗೆ ಬಳಸಿ ಹೆಚ್ಚು ಹಣಗಳಿಸುವ ಗೀಳಿಗೆ ಬಿದ್ದಿದ್ದಾರೆ.
    Planned growthನಿಂದಾಗುವ ಒಳಿತುಗಳ ಬಗೆಗೆ ಮೀಡಿಯಾಗಳು ಮಂದಿಗೆ ತಿಳಿವಳಿಕೆ ನೀಡಬೇಕು.

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...