Homeಕರ್ನಾಟಕಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ...

ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ ಆಕ್ರೋಶ

ಅಧಿಕಾರಿಗಳ ವಿರುದ್ದ ಪ್ರತಿಭಟನೆ ನಡೆಸಿದ ದಾಸರಹಳ್ಳಿ ಜೆಡಿಎಸ್‌ ಶಾಸಕ ಸೇರಿದಂತೆ ಹೋರಾಟ ಸಮಿತಿಯ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ

- Advertisement -
- Advertisement -

‘ಶಿವರಾಮ ಕಾರಂತ ಬಡಾವಣೆ’ ಅಭಿವೃದ್ದಿಗಾಗಿ ಸೋಮಶೆಟ್ಟಿಹಳ್ಳಿ ಹಾಗೂ ಗಾಣಿಗರಹಳ್ಳಿಯ ಸುಮಾರು 142 ಮನೆ ಮತ್ತು ಕಟ್ಟಡಗಳನ್ನು ಕೆಡವಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಧಸಿದೆ. ಇದಕ್ಕಾಗಿ ಸುಮಾರು ಹತ್ತಕ್ಕೂ ಹೆಚ್ಚು ಹಿಟಾಚಿಯೊಂದಿಗೆ ತೆರಳಿದ್ದ ಅಧಿಕಾರಿಗಳ ವಿರುದ್ದ ದಾಸರಹಳ್ಳಿಯ ಜೆಡಿಎಸ್‌ ಶಾಸಕ ಸೇರಿದಂತೆ ಹೋರಾಟ ಸಮಿತಿಯ ಮುಖಂಡರು ಸೋಮಶೆಟ್ಟಿಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದು, ಪೊಲೀಸರು ಅವರನ್ನು ಬಂಧಿಸಿ, ಬಿಡುಗಡೆ ಮಾಡಿರುವ ಘಟನೆ ಸೋಮವಾರ ನಡೆದಿದೆ. ಇದಾಗಿಯು ಪ್ರಾಧಿಕಾರವು ಸುಮಾರು ಆರು ಮನೆಗಳನ್ನು ಒಡೆದಿದೆ ಎಂದು ಹೋರಾಟಗಾರರು ಹೇಳಿದ್ದಾರೆ.

ಬೆಂಗಳೂರು ಅಭಿವೃದ್ದಿಯ ಹೆಸರು ಹೇಳಿ, ರಾಮಗೊಂಡನ ಹಳ್ಳಿಯ ಸುತ್ತಲಿನ 17 ಹಳ್ಳಿಗಳಲ್ಲಿ ಬಿಡಿಎ ‘ಶಿವರಾಮ ಕಾರಂತ ಬಡಾವಣೆ’ ಎಂಬ ವಸತಿ ಸೌಕರ್ಯವನ್ನು ನಿರ್ಮಿಸಲು ಹೊರಟಿದೆ. ಇಂದು ಸೋಮಶೆಟ್ಟಿಹಳ್ಳಿ ಹಾಗೂ ಗಾಣಿಗರಹಳ್ಳಿಯ ಒಟ್ಟು 142 ಕಟ್ಟಡಗಳು 2018ರ ಬಳಿಕ ನಿರ್ಮಾಣವಾಗಿವೆ ಎಂದು ಅದನ್ನು ಒಡೆಯಲು ಮುಂದಾಗಿದೆ. ಆದರೆ ಎಲ್ಲಾ ಮನೆ ಹಾಗೂ ಕಟ್ಟಡಗಳನ್ನು ಎನ್‌ಒಸಿ ಪಡೆದೇ ನಿರ್ಮಾಣ ಮಾಡಲಾಗಿದೆ ಎಂದು ಹೋರಾಟಗಾರರು ಹೇಳಿದ್ದಾರೆ.

ಇದನ್ನೂ ಓದಿ: ಶಿವರಾಮ ಕಾರಂತ್ ಬಡಾವಣೆ ಎಂಬ ‘ಅಭಿವೃದ್ಧಿ’ ಯೋಜನೆ; ದಲಿತರು-ಬಡಬಗ್ಗರ ಮೇಲೆ ಪ್ರಹಾರ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಸಂಘರ್ಷ ಸಮಿತಿ ಮುಖಂಡ ಎಂ. ರಮೇಶ್‌, “ಬಿಡಿಎ ಅಧಿಕಾರಿಗಳು ಯಾವುದೆ ಮುನ್ಸೂಚನೆ ನೀಡದೆ ಸೋಮಶೆಟ್ಟಿಹಳ್ಳಿಯ ಮನೆಗಳನ್ನು ಒಡೆದಿದ್ದಾರೆ. ಬಿಡಿಎ ಅಧಿಕಾರಿಗಳು ಮಾತೆತ್ತಿದರೆ ಸುಪ್ರೀಂಕೋರ್ಟ್ ಆದೇಶ ಎಂದು ಹೇಳುತ್ತಿದ್ದಾರೆ. ಆದರೆ ಸುಪ್ರೀಂಕೋರ್ಟ್ ಕಟ್ಟಡಗಳನ್ನು ಕೆಡವುವ ಬಗ್ಗೆ ಎಲ್ಲೂ ಹೇಳಿಲ್ಲ. ಇಲ್ಲಿ ಏನು ನಡೀತಿದೆ ಎಂದು ಕೂಡಾ ನಮಗೆ ಅರ್ಥವಾಗುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇಲ್ಲಿರುವಂತಹ ಮನೆಗಳನ್ನು ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಕೊಡುವಂತಹದ್ದು ಯಾವ ನ್ಯಾಯ. ಇದು ನಮ್ಮ ದೇಶದ ನ್ಯಾಯಕ್ಕೆ ವಿರುದ್ದವಾದುದು. ಇದನ್ನು ನಾವು ಖಂಡಿಸುತ್ತೇವೆ. ನಾವು ಪ್ರತಿಭಟನೆ ನಡೆಸಲು ಮುಂದಾದಾಗ ನಮ್ಮನ್ನು ಬಂಧಿಸಲಾಗಿದೆ. ಇಂದು ಎಂಟು ಮನೆಗಳನ್ನು ಒಡೆಯಲಿದ್ದಾರೆ ಎಂಬ ಮಾಹಿತಿಯಿದೆ” ಎಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ

ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡಾ ಆಕ್ರೊಶ ವ್ಯಕ್ತಪಡಿಸಿದ್ದು ತಮ್ಮ ಪಕ್ಷದ ಶಾಸಕನ ಬಂಧನವನ್ನು ಖಂಡಿಸಿದ್ದಾರೆ. “ಈ ಬಡಾವಣೆಯ ಜನರ ಸಂಕಷ್ಟಕ್ಕೆ ಸಂಬಂಧಿಸಿ ಹೋರಾಟಗಾರರು, ಸ್ಥಳೀಯ ನಿವಾಸಿಗಳನ್ನು ಒಳಗೊಂಡಂತೆ ಒಂದು ಸಭೆ ಕರೆಯಿರಿ, ನಾನೂ ಬರುತ್ತೇನೆ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೆ. ಆದರೆ, ಸಭೆಗೆ ಕಾಲಾವಕಾಶವವನ್ನೇ ನೀಡದೇ ಈಗ ಏಕಾಎಕಿ ಮನೆಗಳನ್ನು ಒಡೆಸುತ್ತಿರುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಶಿವರಾಮ ಕಾರಂತ ಬಡಾವಣೆ’ ವಿವಾದ – ಸಮಸ್ಯೆ ಪರಿಹರಿಸುವಂತೆ 17 ಹಳ್ಳಿಗಳಿಂದ ಬೃಹತ್ ಪ್ರತಿಭಟನೆ

“ಜನ ಸಾಲ ಮಾಡಿ ಮನೆಗಳನ್ನು ಕಟ್ಟಿದ್ದಾರೆ. ಈ ಬಡಾವಣೆ ನಿರ್ಮಾಣ ಆದಾಗ ಆರಂಭಿಕ ಹಂತದಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿ ನೋಟಿಫಿಕೇಶ್‌ ಮಾಡಿ, ಆಮೇಲೆ ಕೆಲ ಕಡೆ ಡಿನೋಟಿಫಿಕೇಷನ್‌ ಮಾಡಿ ಎನ್‌ಒಸಿಗಳನ್ನೂ ಕೊಟ್ಟು ಬಿಡಿಎ ಆಯುಕ್ತರು, ಅಧಿಕಾರಿಗಳು ಹಣ ಲೂಟಿ ಹೊಡೆಯುವ ಕೆಲಸ ಮಾಡಿದ್ದಾರೆ. ಮುಖ್ಯಮಂತ್ರಿಗಳ ನಿರ್ದೇಶನದಂತೆ ಇದೆಲ್ಲವನ್ನೂ ಅಧಿಕಾರಿಗಳು ಮಾಡಿದ್ದಾರೆ” ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

 

“ನ್ಯಾಯಾಲಯದಲ್ಲಿ ಸರಿಯಾಗಿ ವಾದ ಮಂಡನೆ ಮಾಡದೇ, ಸಮರ್ಪಕ ಮಾಹಿತಿಯನ್ನೂ ನೀಡದೇ ಅಧಿಕಾರಿಗಳು ಮತ್ತು ಸರಕಾರ ಅಮಾಯಕರ ಜೀವನದ ಜತೆ ಚೆಲ್ಲಾಟ ಆಡಿದ್ದಾರೆ. ಬಿಡಿಎಯ ಈಗಿನ ಅಧ್ಯಕ್ಷ ಎಸ್.‌ಆರ್.‌ವಿಶ್ವನಾಥ್‌ ಅವರೇ ಈ ಜನರ ಪರ ಹೋರಾಟ ಮಾಡಿದ್ದರು. ಈಗ ನೋಡಿದರೆ ಅವರೇ ಮನೆಗಳನ್ನು ನೆಲಸಮ ಮಾಡಿಸುತ್ತಿದ್ದಾರೆ.

ನಾನು ಹದಿನಾಲ್ಕು ತಿಂಗಳು ಅಧಿಕಾರದಲ್ಲಿದ್ದಾಗ ಈ ಮನೆಗಳನ್ನು ಒಡೆಯಲು ಬಿಟ್ಟಿರಲಿಲ್ಲ, ಈ ಸರಕಾರ ನಿಜಕ್ಕೂ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ. ಇವರೇ ಒಂದು ಕಡೆ ದುಡ್ಡು ಹೊಡೆಯೋದು. ಇನ್ನೊಂದು ಕಡೆ ಇವರೇ ಕಟ್ಟಡ ಒಡೆಸೋದು. ಜನರನ್ನು ಈಗ ಬೀದಿಗೆ ತಂದು ನಿಲ್ಲಿಸಿದ್ದಾರೆ. ಮುಖ್ಯಮಂತ್ರಿಗೆ ಜವಾಬ್ದಾರಿ ಎನ್ನುವುದು ಇದ್ದಿದ್ದರೆ ಕೂತು ಚರ್ಚೆ ಮಾಡಿ ಕಾನೂನು ರೀತಿಯಲ್ಲಿ ಆ ಜನರಿಗೆ ರಕ್ಷಣೆ ನೀಡಬೇಕಾಗಿತ್ತು” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಬಡಾವಣೆ ನಿರ್ಮಾಣವಾಗಲಿರುವ 17 ಹಳ್ಳಿಗಳ ನಿವಾಸಿಗಳು, ರೈತರು ಬಡಾವಣೆ ನಿರ್ಮಾಣದ ವಿರುದ್ದ ನಿರಂತವಾಗಿ ಪ್ರತಿಭಟನೆ ನಡೆಸುತ್ತಾ ಬರುತ್ತಿದ್ದಾರೆ. ಈ ಹಿಂದೆ ಇವರ ಪರವಾಗಿದ್ದ ಸ್ಥಳೀಯ ಬಿಜೆಪಿ ಶಾಸಕ ವಿಶ್ವನಾಥ್ ಇದೀಗ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ಆದರೆ ಈಗ ಅವರು ಜನರ ವಿರುದ್ದವಾಗಿ ನಿಂತಿದ್ದು ‘ಶಿವರಾಮ ಕಾರಂತ ಬಡಾವಣೆ’ ನಿರ್ಮಾಣದ ಪರವಾಗಿದ್ದಾರೆ.

ಇದನ್ನೂ ಓದಿ: ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Planned layouts ಮಾಡದಿದ್ದರೆ ಅಡ್ಡಾದಿಡ್ಡಿ ಬೆಳವಣಿಗೆ ಆಗುತ್ರದೆ.
    ಸರಿಯಾಗಿ ದಾರಿ,ಕರೆಂಟ್ ಕಂಬಹಾಕಲು ತೊಡಕು.
    ಇನ್ನು ಎಲ್ಲರಿಗೂ ಬೇಕಾದ ಆಟದಬಯಲು,ಪಾರ್ಕ್ ,ಅಗಲದಾರಿಗಳು ಮುಂದೆ ಅಲ್ಲಿ ಉಂಟಾಗುವ ತಗಾದೆಗಳಿಗೆ ಎಡೆಕೊಡುವುದಿಲ್ಲ
    ೩೦ ವರುಶಗಳ ಹಿಂದೆ ನೆಲದೊಡೆಯರು ಈ ಬಗೆಯ ಬಡಾವಣೆಮಾಡಲು ಎದುರು ಹೇಳುತ್ತಿರಲ್ಲಿಲ್ಲ.
    ಈಗ ಬೆಳೆಬೆಳೆಯಲು ಕೊಟ್ಟಿದ್ದ ಹೊಲಗಳನ್ನು ರಿಯಲ್ ಎಸ್ಟೇಟ್ ಗೆ ಬಳಸಿ ಹೆಚ್ಚು ಹಣಗಳಿಸುವ ಗೀಳಿಗೆ ಬಿದ್ದಿದ್ದಾರೆ.
    Planned growthನಿಂದಾಗುವ ಒಳಿತುಗಳ ಬಗೆಗೆ ಮೀಡಿಯಾಗಳು ಮಂದಿಗೆ ತಿಳಿವಳಿಕೆ ನೀಡಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...