Homeಕರ್ನಾಟಕಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ...

ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ ಆಕ್ರೋಶ

ಅಧಿಕಾರಿಗಳ ವಿರುದ್ದ ಪ್ರತಿಭಟನೆ ನಡೆಸಿದ ದಾಸರಹಳ್ಳಿ ಜೆಡಿಎಸ್‌ ಶಾಸಕ ಸೇರಿದಂತೆ ಹೋರಾಟ ಸಮಿತಿಯ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ

- Advertisement -
- Advertisement -

‘ಶಿವರಾಮ ಕಾರಂತ ಬಡಾವಣೆ’ ಅಭಿವೃದ್ದಿಗಾಗಿ ಸೋಮಶೆಟ್ಟಿಹಳ್ಳಿ ಹಾಗೂ ಗಾಣಿಗರಹಳ್ಳಿಯ ಸುಮಾರು 142 ಮನೆ ಮತ್ತು ಕಟ್ಟಡಗಳನ್ನು ಕೆಡವಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಧಸಿದೆ. ಇದಕ್ಕಾಗಿ ಸುಮಾರು ಹತ್ತಕ್ಕೂ ಹೆಚ್ಚು ಹಿಟಾಚಿಯೊಂದಿಗೆ ತೆರಳಿದ್ದ ಅಧಿಕಾರಿಗಳ ವಿರುದ್ದ ದಾಸರಹಳ್ಳಿಯ ಜೆಡಿಎಸ್‌ ಶಾಸಕ ಸೇರಿದಂತೆ ಹೋರಾಟ ಸಮಿತಿಯ ಮುಖಂಡರು ಸೋಮಶೆಟ್ಟಿಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದು, ಪೊಲೀಸರು ಅವರನ್ನು ಬಂಧಿಸಿ, ಬಿಡುಗಡೆ ಮಾಡಿರುವ ಘಟನೆ ಸೋಮವಾರ ನಡೆದಿದೆ. ಇದಾಗಿಯು ಪ್ರಾಧಿಕಾರವು ಸುಮಾರು ಆರು ಮನೆಗಳನ್ನು ಒಡೆದಿದೆ ಎಂದು ಹೋರಾಟಗಾರರು ಹೇಳಿದ್ದಾರೆ.

ಬೆಂಗಳೂರು ಅಭಿವೃದ್ದಿಯ ಹೆಸರು ಹೇಳಿ, ರಾಮಗೊಂಡನ ಹಳ್ಳಿಯ ಸುತ್ತಲಿನ 17 ಹಳ್ಳಿಗಳಲ್ಲಿ ಬಿಡಿಎ ‘ಶಿವರಾಮ ಕಾರಂತ ಬಡಾವಣೆ’ ಎಂಬ ವಸತಿ ಸೌಕರ್ಯವನ್ನು ನಿರ್ಮಿಸಲು ಹೊರಟಿದೆ. ಇಂದು ಸೋಮಶೆಟ್ಟಿಹಳ್ಳಿ ಹಾಗೂ ಗಾಣಿಗರಹಳ್ಳಿಯ ಒಟ್ಟು 142 ಕಟ್ಟಡಗಳು 2018ರ ಬಳಿಕ ನಿರ್ಮಾಣವಾಗಿವೆ ಎಂದು ಅದನ್ನು ಒಡೆಯಲು ಮುಂದಾಗಿದೆ. ಆದರೆ ಎಲ್ಲಾ ಮನೆ ಹಾಗೂ ಕಟ್ಟಡಗಳನ್ನು ಎನ್‌ಒಸಿ ಪಡೆದೇ ನಿರ್ಮಾಣ ಮಾಡಲಾಗಿದೆ ಎಂದು ಹೋರಾಟಗಾರರು ಹೇಳಿದ್ದಾರೆ.

ಇದನ್ನೂ ಓದಿ: ಶಿವರಾಮ ಕಾರಂತ್ ಬಡಾವಣೆ ಎಂಬ ‘ಅಭಿವೃದ್ಧಿ’ ಯೋಜನೆ; ದಲಿತರು-ಬಡಬಗ್ಗರ ಮೇಲೆ ಪ್ರಹಾರ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಸಂಘರ್ಷ ಸಮಿತಿ ಮುಖಂಡ ಎಂ. ರಮೇಶ್‌, “ಬಿಡಿಎ ಅಧಿಕಾರಿಗಳು ಯಾವುದೆ ಮುನ್ಸೂಚನೆ ನೀಡದೆ ಸೋಮಶೆಟ್ಟಿಹಳ್ಳಿಯ ಮನೆಗಳನ್ನು ಒಡೆದಿದ್ದಾರೆ. ಬಿಡಿಎ ಅಧಿಕಾರಿಗಳು ಮಾತೆತ್ತಿದರೆ ಸುಪ್ರೀಂಕೋರ್ಟ್ ಆದೇಶ ಎಂದು ಹೇಳುತ್ತಿದ್ದಾರೆ. ಆದರೆ ಸುಪ್ರೀಂಕೋರ್ಟ್ ಕಟ್ಟಡಗಳನ್ನು ಕೆಡವುವ ಬಗ್ಗೆ ಎಲ್ಲೂ ಹೇಳಿಲ್ಲ. ಇಲ್ಲಿ ಏನು ನಡೀತಿದೆ ಎಂದು ಕೂಡಾ ನಮಗೆ ಅರ್ಥವಾಗುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇಲ್ಲಿರುವಂತಹ ಮನೆಗಳನ್ನು ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಕೊಡುವಂತಹದ್ದು ಯಾವ ನ್ಯಾಯ. ಇದು ನಮ್ಮ ದೇಶದ ನ್ಯಾಯಕ್ಕೆ ವಿರುದ್ದವಾದುದು. ಇದನ್ನು ನಾವು ಖಂಡಿಸುತ್ತೇವೆ. ನಾವು ಪ್ರತಿಭಟನೆ ನಡೆಸಲು ಮುಂದಾದಾಗ ನಮ್ಮನ್ನು ಬಂಧಿಸಲಾಗಿದೆ. ಇಂದು ಎಂಟು ಮನೆಗಳನ್ನು ಒಡೆಯಲಿದ್ದಾರೆ ಎಂಬ ಮಾಹಿತಿಯಿದೆ” ಎಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ

ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡಾ ಆಕ್ರೊಶ ವ್ಯಕ್ತಪಡಿಸಿದ್ದು ತಮ್ಮ ಪಕ್ಷದ ಶಾಸಕನ ಬಂಧನವನ್ನು ಖಂಡಿಸಿದ್ದಾರೆ. “ಈ ಬಡಾವಣೆಯ ಜನರ ಸಂಕಷ್ಟಕ್ಕೆ ಸಂಬಂಧಿಸಿ ಹೋರಾಟಗಾರರು, ಸ್ಥಳೀಯ ನಿವಾಸಿಗಳನ್ನು ಒಳಗೊಂಡಂತೆ ಒಂದು ಸಭೆ ಕರೆಯಿರಿ, ನಾನೂ ಬರುತ್ತೇನೆ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೆ. ಆದರೆ, ಸಭೆಗೆ ಕಾಲಾವಕಾಶವವನ್ನೇ ನೀಡದೇ ಈಗ ಏಕಾಎಕಿ ಮನೆಗಳನ್ನು ಒಡೆಸುತ್ತಿರುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಶಿವರಾಮ ಕಾರಂತ ಬಡಾವಣೆ’ ವಿವಾದ – ಸಮಸ್ಯೆ ಪರಿಹರಿಸುವಂತೆ 17 ಹಳ್ಳಿಗಳಿಂದ ಬೃಹತ್ ಪ್ರತಿಭಟನೆ

“ಜನ ಸಾಲ ಮಾಡಿ ಮನೆಗಳನ್ನು ಕಟ್ಟಿದ್ದಾರೆ. ಈ ಬಡಾವಣೆ ನಿರ್ಮಾಣ ಆದಾಗ ಆರಂಭಿಕ ಹಂತದಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿ ನೋಟಿಫಿಕೇಶ್‌ ಮಾಡಿ, ಆಮೇಲೆ ಕೆಲ ಕಡೆ ಡಿನೋಟಿಫಿಕೇಷನ್‌ ಮಾಡಿ ಎನ್‌ಒಸಿಗಳನ್ನೂ ಕೊಟ್ಟು ಬಿಡಿಎ ಆಯುಕ್ತರು, ಅಧಿಕಾರಿಗಳು ಹಣ ಲೂಟಿ ಹೊಡೆಯುವ ಕೆಲಸ ಮಾಡಿದ್ದಾರೆ. ಮುಖ್ಯಮಂತ್ರಿಗಳ ನಿರ್ದೇಶನದಂತೆ ಇದೆಲ್ಲವನ್ನೂ ಅಧಿಕಾರಿಗಳು ಮಾಡಿದ್ದಾರೆ” ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

 

“ನ್ಯಾಯಾಲಯದಲ್ಲಿ ಸರಿಯಾಗಿ ವಾದ ಮಂಡನೆ ಮಾಡದೇ, ಸಮರ್ಪಕ ಮಾಹಿತಿಯನ್ನೂ ನೀಡದೇ ಅಧಿಕಾರಿಗಳು ಮತ್ತು ಸರಕಾರ ಅಮಾಯಕರ ಜೀವನದ ಜತೆ ಚೆಲ್ಲಾಟ ಆಡಿದ್ದಾರೆ. ಬಿಡಿಎಯ ಈಗಿನ ಅಧ್ಯಕ್ಷ ಎಸ್.‌ಆರ್.‌ವಿಶ್ವನಾಥ್‌ ಅವರೇ ಈ ಜನರ ಪರ ಹೋರಾಟ ಮಾಡಿದ್ದರು. ಈಗ ನೋಡಿದರೆ ಅವರೇ ಮನೆಗಳನ್ನು ನೆಲಸಮ ಮಾಡಿಸುತ್ತಿದ್ದಾರೆ.

ನಾನು ಹದಿನಾಲ್ಕು ತಿಂಗಳು ಅಧಿಕಾರದಲ್ಲಿದ್ದಾಗ ಈ ಮನೆಗಳನ್ನು ಒಡೆಯಲು ಬಿಟ್ಟಿರಲಿಲ್ಲ, ಈ ಸರಕಾರ ನಿಜಕ್ಕೂ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ. ಇವರೇ ಒಂದು ಕಡೆ ದುಡ್ಡು ಹೊಡೆಯೋದು. ಇನ್ನೊಂದು ಕಡೆ ಇವರೇ ಕಟ್ಟಡ ಒಡೆಸೋದು. ಜನರನ್ನು ಈಗ ಬೀದಿಗೆ ತಂದು ನಿಲ್ಲಿಸಿದ್ದಾರೆ. ಮುಖ್ಯಮಂತ್ರಿಗೆ ಜವಾಬ್ದಾರಿ ಎನ್ನುವುದು ಇದ್ದಿದ್ದರೆ ಕೂತು ಚರ್ಚೆ ಮಾಡಿ ಕಾನೂನು ರೀತಿಯಲ್ಲಿ ಆ ಜನರಿಗೆ ರಕ್ಷಣೆ ನೀಡಬೇಕಾಗಿತ್ತು” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಬಡಾವಣೆ ನಿರ್ಮಾಣವಾಗಲಿರುವ 17 ಹಳ್ಳಿಗಳ ನಿವಾಸಿಗಳು, ರೈತರು ಬಡಾವಣೆ ನಿರ್ಮಾಣದ ವಿರುದ್ದ ನಿರಂತವಾಗಿ ಪ್ರತಿಭಟನೆ ನಡೆಸುತ್ತಾ ಬರುತ್ತಿದ್ದಾರೆ. ಈ ಹಿಂದೆ ಇವರ ಪರವಾಗಿದ್ದ ಸ್ಥಳೀಯ ಬಿಜೆಪಿ ಶಾಸಕ ವಿಶ್ವನಾಥ್ ಇದೀಗ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ಆದರೆ ಈಗ ಅವರು ಜನರ ವಿರುದ್ದವಾಗಿ ನಿಂತಿದ್ದು ‘ಶಿವರಾಮ ಕಾರಂತ ಬಡಾವಣೆ’ ನಿರ್ಮಾಣದ ಪರವಾಗಿದ್ದಾರೆ.

ಇದನ್ನೂ ಓದಿ: ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Planned layouts ಮಾಡದಿದ್ದರೆ ಅಡ್ಡಾದಿಡ್ಡಿ ಬೆಳವಣಿಗೆ ಆಗುತ್ರದೆ.
    ಸರಿಯಾಗಿ ದಾರಿ,ಕರೆಂಟ್ ಕಂಬಹಾಕಲು ತೊಡಕು.
    ಇನ್ನು ಎಲ್ಲರಿಗೂ ಬೇಕಾದ ಆಟದಬಯಲು,ಪಾರ್ಕ್ ,ಅಗಲದಾರಿಗಳು ಮುಂದೆ ಅಲ್ಲಿ ಉಂಟಾಗುವ ತಗಾದೆಗಳಿಗೆ ಎಡೆಕೊಡುವುದಿಲ್ಲ
    ೩೦ ವರುಶಗಳ ಹಿಂದೆ ನೆಲದೊಡೆಯರು ಈ ಬಗೆಯ ಬಡಾವಣೆಮಾಡಲು ಎದುರು ಹೇಳುತ್ತಿರಲ್ಲಿಲ್ಲ.
    ಈಗ ಬೆಳೆಬೆಳೆಯಲು ಕೊಟ್ಟಿದ್ದ ಹೊಲಗಳನ್ನು ರಿಯಲ್ ಎಸ್ಟೇಟ್ ಗೆ ಬಳಸಿ ಹೆಚ್ಚು ಹಣಗಳಿಸುವ ಗೀಳಿಗೆ ಬಿದ್ದಿದ್ದಾರೆ.
    Planned growthನಿಂದಾಗುವ ಒಳಿತುಗಳ ಬಗೆಗೆ ಮೀಡಿಯಾಗಳು ಮಂದಿಗೆ ತಿಳಿವಳಿಕೆ ನೀಡಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...