Homeಕರ್ನಾಟಕಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ...

ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ ಆಕ್ರೋಶ

ಅಧಿಕಾರಿಗಳ ವಿರುದ್ದ ಪ್ರತಿಭಟನೆ ನಡೆಸಿದ ದಾಸರಹಳ್ಳಿ ಜೆಡಿಎಸ್‌ ಶಾಸಕ ಸೇರಿದಂತೆ ಹೋರಾಟ ಸಮಿತಿಯ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ

- Advertisement -
- Advertisement -

‘ಶಿವರಾಮ ಕಾರಂತ ಬಡಾವಣೆ’ ಅಭಿವೃದ್ದಿಗಾಗಿ ಸೋಮಶೆಟ್ಟಿಹಳ್ಳಿ ಹಾಗೂ ಗಾಣಿಗರಹಳ್ಳಿಯ ಸುಮಾರು 142 ಮನೆ ಮತ್ತು ಕಟ್ಟಡಗಳನ್ನು ಕೆಡವಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಧಸಿದೆ. ಇದಕ್ಕಾಗಿ ಸುಮಾರು ಹತ್ತಕ್ಕೂ ಹೆಚ್ಚು ಹಿಟಾಚಿಯೊಂದಿಗೆ ತೆರಳಿದ್ದ ಅಧಿಕಾರಿಗಳ ವಿರುದ್ದ ದಾಸರಹಳ್ಳಿಯ ಜೆಡಿಎಸ್‌ ಶಾಸಕ ಸೇರಿದಂತೆ ಹೋರಾಟ ಸಮಿತಿಯ ಮುಖಂಡರು ಸೋಮಶೆಟ್ಟಿಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದು, ಪೊಲೀಸರು ಅವರನ್ನು ಬಂಧಿಸಿ, ಬಿಡುಗಡೆ ಮಾಡಿರುವ ಘಟನೆ ಸೋಮವಾರ ನಡೆದಿದೆ. ಇದಾಗಿಯು ಪ್ರಾಧಿಕಾರವು ಸುಮಾರು ಆರು ಮನೆಗಳನ್ನು ಒಡೆದಿದೆ ಎಂದು ಹೋರಾಟಗಾರರು ಹೇಳಿದ್ದಾರೆ.

ಬೆಂಗಳೂರು ಅಭಿವೃದ್ದಿಯ ಹೆಸರು ಹೇಳಿ, ರಾಮಗೊಂಡನ ಹಳ್ಳಿಯ ಸುತ್ತಲಿನ 17 ಹಳ್ಳಿಗಳಲ್ಲಿ ಬಿಡಿಎ ‘ಶಿವರಾಮ ಕಾರಂತ ಬಡಾವಣೆ’ ಎಂಬ ವಸತಿ ಸೌಕರ್ಯವನ್ನು ನಿರ್ಮಿಸಲು ಹೊರಟಿದೆ. ಇಂದು ಸೋಮಶೆಟ್ಟಿಹಳ್ಳಿ ಹಾಗೂ ಗಾಣಿಗರಹಳ್ಳಿಯ ಒಟ್ಟು 142 ಕಟ್ಟಡಗಳು 2018ರ ಬಳಿಕ ನಿರ್ಮಾಣವಾಗಿವೆ ಎಂದು ಅದನ್ನು ಒಡೆಯಲು ಮುಂದಾಗಿದೆ. ಆದರೆ ಎಲ್ಲಾ ಮನೆ ಹಾಗೂ ಕಟ್ಟಡಗಳನ್ನು ಎನ್‌ಒಸಿ ಪಡೆದೇ ನಿರ್ಮಾಣ ಮಾಡಲಾಗಿದೆ ಎಂದು ಹೋರಾಟಗಾರರು ಹೇಳಿದ್ದಾರೆ.

ಇದನ್ನೂ ಓದಿ: ಶಿವರಾಮ ಕಾರಂತ್ ಬಡಾವಣೆ ಎಂಬ ‘ಅಭಿವೃದ್ಧಿ’ ಯೋಜನೆ; ದಲಿತರು-ಬಡಬಗ್ಗರ ಮೇಲೆ ಪ್ರಹಾರ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಸಂಘರ್ಷ ಸಮಿತಿ ಮುಖಂಡ ಎಂ. ರಮೇಶ್‌, “ಬಿಡಿಎ ಅಧಿಕಾರಿಗಳು ಯಾವುದೆ ಮುನ್ಸೂಚನೆ ನೀಡದೆ ಸೋಮಶೆಟ್ಟಿಹಳ್ಳಿಯ ಮನೆಗಳನ್ನು ಒಡೆದಿದ್ದಾರೆ. ಬಿಡಿಎ ಅಧಿಕಾರಿಗಳು ಮಾತೆತ್ತಿದರೆ ಸುಪ್ರೀಂಕೋರ್ಟ್ ಆದೇಶ ಎಂದು ಹೇಳುತ್ತಿದ್ದಾರೆ. ಆದರೆ ಸುಪ್ರೀಂಕೋರ್ಟ್ ಕಟ್ಟಡಗಳನ್ನು ಕೆಡವುವ ಬಗ್ಗೆ ಎಲ್ಲೂ ಹೇಳಿಲ್ಲ. ಇಲ್ಲಿ ಏನು ನಡೀತಿದೆ ಎಂದು ಕೂಡಾ ನಮಗೆ ಅರ್ಥವಾಗುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇಲ್ಲಿರುವಂತಹ ಮನೆಗಳನ್ನು ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಕೊಡುವಂತಹದ್ದು ಯಾವ ನ್ಯಾಯ. ಇದು ನಮ್ಮ ದೇಶದ ನ್ಯಾಯಕ್ಕೆ ವಿರುದ್ದವಾದುದು. ಇದನ್ನು ನಾವು ಖಂಡಿಸುತ್ತೇವೆ. ನಾವು ಪ್ರತಿಭಟನೆ ನಡೆಸಲು ಮುಂದಾದಾಗ ನಮ್ಮನ್ನು ಬಂಧಿಸಲಾಗಿದೆ. ಇಂದು ಎಂಟು ಮನೆಗಳನ್ನು ಒಡೆಯಲಿದ್ದಾರೆ ಎಂಬ ಮಾಹಿತಿಯಿದೆ” ಎಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ

ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡಾ ಆಕ್ರೊಶ ವ್ಯಕ್ತಪಡಿಸಿದ್ದು ತಮ್ಮ ಪಕ್ಷದ ಶಾಸಕನ ಬಂಧನವನ್ನು ಖಂಡಿಸಿದ್ದಾರೆ. “ಈ ಬಡಾವಣೆಯ ಜನರ ಸಂಕಷ್ಟಕ್ಕೆ ಸಂಬಂಧಿಸಿ ಹೋರಾಟಗಾರರು, ಸ್ಥಳೀಯ ನಿವಾಸಿಗಳನ್ನು ಒಳಗೊಂಡಂತೆ ಒಂದು ಸಭೆ ಕರೆಯಿರಿ, ನಾನೂ ಬರುತ್ತೇನೆ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೆ. ಆದರೆ, ಸಭೆಗೆ ಕಾಲಾವಕಾಶವವನ್ನೇ ನೀಡದೇ ಈಗ ಏಕಾಎಕಿ ಮನೆಗಳನ್ನು ಒಡೆಸುತ್ತಿರುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಶಿವರಾಮ ಕಾರಂತ ಬಡಾವಣೆ’ ವಿವಾದ – ಸಮಸ್ಯೆ ಪರಿಹರಿಸುವಂತೆ 17 ಹಳ್ಳಿಗಳಿಂದ ಬೃಹತ್ ಪ್ರತಿಭಟನೆ

“ಜನ ಸಾಲ ಮಾಡಿ ಮನೆಗಳನ್ನು ಕಟ್ಟಿದ್ದಾರೆ. ಈ ಬಡಾವಣೆ ನಿರ್ಮಾಣ ಆದಾಗ ಆರಂಭಿಕ ಹಂತದಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿ ನೋಟಿಫಿಕೇಶ್‌ ಮಾಡಿ, ಆಮೇಲೆ ಕೆಲ ಕಡೆ ಡಿನೋಟಿಫಿಕೇಷನ್‌ ಮಾಡಿ ಎನ್‌ಒಸಿಗಳನ್ನೂ ಕೊಟ್ಟು ಬಿಡಿಎ ಆಯುಕ್ತರು, ಅಧಿಕಾರಿಗಳು ಹಣ ಲೂಟಿ ಹೊಡೆಯುವ ಕೆಲಸ ಮಾಡಿದ್ದಾರೆ. ಮುಖ್ಯಮಂತ್ರಿಗಳ ನಿರ್ದೇಶನದಂತೆ ಇದೆಲ್ಲವನ್ನೂ ಅಧಿಕಾರಿಗಳು ಮಾಡಿದ್ದಾರೆ” ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

 

“ನ್ಯಾಯಾಲಯದಲ್ಲಿ ಸರಿಯಾಗಿ ವಾದ ಮಂಡನೆ ಮಾಡದೇ, ಸಮರ್ಪಕ ಮಾಹಿತಿಯನ್ನೂ ನೀಡದೇ ಅಧಿಕಾರಿಗಳು ಮತ್ತು ಸರಕಾರ ಅಮಾಯಕರ ಜೀವನದ ಜತೆ ಚೆಲ್ಲಾಟ ಆಡಿದ್ದಾರೆ. ಬಿಡಿಎಯ ಈಗಿನ ಅಧ್ಯಕ್ಷ ಎಸ್.‌ಆರ್.‌ವಿಶ್ವನಾಥ್‌ ಅವರೇ ಈ ಜನರ ಪರ ಹೋರಾಟ ಮಾಡಿದ್ದರು. ಈಗ ನೋಡಿದರೆ ಅವರೇ ಮನೆಗಳನ್ನು ನೆಲಸಮ ಮಾಡಿಸುತ್ತಿದ್ದಾರೆ.

ನಾನು ಹದಿನಾಲ್ಕು ತಿಂಗಳು ಅಧಿಕಾರದಲ್ಲಿದ್ದಾಗ ಈ ಮನೆಗಳನ್ನು ಒಡೆಯಲು ಬಿಟ್ಟಿರಲಿಲ್ಲ, ಈ ಸರಕಾರ ನಿಜಕ್ಕೂ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ. ಇವರೇ ಒಂದು ಕಡೆ ದುಡ್ಡು ಹೊಡೆಯೋದು. ಇನ್ನೊಂದು ಕಡೆ ಇವರೇ ಕಟ್ಟಡ ಒಡೆಸೋದು. ಜನರನ್ನು ಈಗ ಬೀದಿಗೆ ತಂದು ನಿಲ್ಲಿಸಿದ್ದಾರೆ. ಮುಖ್ಯಮಂತ್ರಿಗೆ ಜವಾಬ್ದಾರಿ ಎನ್ನುವುದು ಇದ್ದಿದ್ದರೆ ಕೂತು ಚರ್ಚೆ ಮಾಡಿ ಕಾನೂನು ರೀತಿಯಲ್ಲಿ ಆ ಜನರಿಗೆ ರಕ್ಷಣೆ ನೀಡಬೇಕಾಗಿತ್ತು” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಬಡಾವಣೆ ನಿರ್ಮಾಣವಾಗಲಿರುವ 17 ಹಳ್ಳಿಗಳ ನಿವಾಸಿಗಳು, ರೈತರು ಬಡಾವಣೆ ನಿರ್ಮಾಣದ ವಿರುದ್ದ ನಿರಂತವಾಗಿ ಪ್ರತಿಭಟನೆ ನಡೆಸುತ್ತಾ ಬರುತ್ತಿದ್ದಾರೆ. ಈ ಹಿಂದೆ ಇವರ ಪರವಾಗಿದ್ದ ಸ್ಥಳೀಯ ಬಿಜೆಪಿ ಶಾಸಕ ವಿಶ್ವನಾಥ್ ಇದೀಗ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ಆದರೆ ಈಗ ಅವರು ಜನರ ವಿರುದ್ದವಾಗಿ ನಿಂತಿದ್ದು ‘ಶಿವರಾಮ ಕಾರಂತ ಬಡಾವಣೆ’ ನಿರ್ಮಾಣದ ಪರವಾಗಿದ್ದಾರೆ.

ಇದನ್ನೂ ಓದಿ: ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Planned layouts ಮಾಡದಿದ್ದರೆ ಅಡ್ಡಾದಿಡ್ಡಿ ಬೆಳವಣಿಗೆ ಆಗುತ್ರದೆ.
    ಸರಿಯಾಗಿ ದಾರಿ,ಕರೆಂಟ್ ಕಂಬಹಾಕಲು ತೊಡಕು.
    ಇನ್ನು ಎಲ್ಲರಿಗೂ ಬೇಕಾದ ಆಟದಬಯಲು,ಪಾರ್ಕ್ ,ಅಗಲದಾರಿಗಳು ಮುಂದೆ ಅಲ್ಲಿ ಉಂಟಾಗುವ ತಗಾದೆಗಳಿಗೆ ಎಡೆಕೊಡುವುದಿಲ್ಲ
    ೩೦ ವರುಶಗಳ ಹಿಂದೆ ನೆಲದೊಡೆಯರು ಈ ಬಗೆಯ ಬಡಾವಣೆಮಾಡಲು ಎದುರು ಹೇಳುತ್ತಿರಲ್ಲಿಲ್ಲ.
    ಈಗ ಬೆಳೆಬೆಳೆಯಲು ಕೊಟ್ಟಿದ್ದ ಹೊಲಗಳನ್ನು ರಿಯಲ್ ಎಸ್ಟೇಟ್ ಗೆ ಬಳಸಿ ಹೆಚ್ಚು ಹಣಗಳಿಸುವ ಗೀಳಿಗೆ ಬಿದ್ದಿದ್ದಾರೆ.
    Planned growthನಿಂದಾಗುವ ಒಳಿತುಗಳ ಬಗೆಗೆ ಮೀಡಿಯಾಗಳು ಮಂದಿಗೆ ತಿಳಿವಳಿಕೆ ನೀಡಬೇಕು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...