Homeಕರ್ನಾಟಕಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ...

ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ ಆಕ್ರೋಶ

ಅಧಿಕಾರಿಗಳ ವಿರುದ್ದ ಪ್ರತಿಭಟನೆ ನಡೆಸಿದ ದಾಸರಹಳ್ಳಿ ಜೆಡಿಎಸ್‌ ಶಾಸಕ ಸೇರಿದಂತೆ ಹೋರಾಟ ಸಮಿತಿಯ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ

- Advertisement -
- Advertisement -

‘ಶಿವರಾಮ ಕಾರಂತ ಬಡಾವಣೆ’ ಅಭಿವೃದ್ದಿಗಾಗಿ ಸೋಮಶೆಟ್ಟಿಹಳ್ಳಿ ಹಾಗೂ ಗಾಣಿಗರಹಳ್ಳಿಯ ಸುಮಾರು 142 ಮನೆ ಮತ್ತು ಕಟ್ಟಡಗಳನ್ನು ಕೆಡವಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಧಸಿದೆ. ಇದಕ್ಕಾಗಿ ಸುಮಾರು ಹತ್ತಕ್ಕೂ ಹೆಚ್ಚು ಹಿಟಾಚಿಯೊಂದಿಗೆ ತೆರಳಿದ್ದ ಅಧಿಕಾರಿಗಳ ವಿರುದ್ದ ದಾಸರಹಳ್ಳಿಯ ಜೆಡಿಎಸ್‌ ಶಾಸಕ ಸೇರಿದಂತೆ ಹೋರಾಟ ಸಮಿತಿಯ ಮುಖಂಡರು ಸೋಮಶೆಟ್ಟಿಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದು, ಪೊಲೀಸರು ಅವರನ್ನು ಬಂಧಿಸಿ, ಬಿಡುಗಡೆ ಮಾಡಿರುವ ಘಟನೆ ಸೋಮವಾರ ನಡೆದಿದೆ. ಇದಾಗಿಯು ಪ್ರಾಧಿಕಾರವು ಸುಮಾರು ಆರು ಮನೆಗಳನ್ನು ಒಡೆದಿದೆ ಎಂದು ಹೋರಾಟಗಾರರು ಹೇಳಿದ್ದಾರೆ.

ಬೆಂಗಳೂರು ಅಭಿವೃದ್ದಿಯ ಹೆಸರು ಹೇಳಿ, ರಾಮಗೊಂಡನ ಹಳ್ಳಿಯ ಸುತ್ತಲಿನ 17 ಹಳ್ಳಿಗಳಲ್ಲಿ ಬಿಡಿಎ ‘ಶಿವರಾಮ ಕಾರಂತ ಬಡಾವಣೆ’ ಎಂಬ ವಸತಿ ಸೌಕರ್ಯವನ್ನು ನಿರ್ಮಿಸಲು ಹೊರಟಿದೆ. ಇಂದು ಸೋಮಶೆಟ್ಟಿಹಳ್ಳಿ ಹಾಗೂ ಗಾಣಿಗರಹಳ್ಳಿಯ ಒಟ್ಟು 142 ಕಟ್ಟಡಗಳು 2018ರ ಬಳಿಕ ನಿರ್ಮಾಣವಾಗಿವೆ ಎಂದು ಅದನ್ನು ಒಡೆಯಲು ಮುಂದಾಗಿದೆ. ಆದರೆ ಎಲ್ಲಾ ಮನೆ ಹಾಗೂ ಕಟ್ಟಡಗಳನ್ನು ಎನ್‌ಒಸಿ ಪಡೆದೇ ನಿರ್ಮಾಣ ಮಾಡಲಾಗಿದೆ ಎಂದು ಹೋರಾಟಗಾರರು ಹೇಳಿದ್ದಾರೆ.

ಇದನ್ನೂ ಓದಿ: ಶಿವರಾಮ ಕಾರಂತ್ ಬಡಾವಣೆ ಎಂಬ ‘ಅಭಿವೃದ್ಧಿ’ ಯೋಜನೆ; ದಲಿತರು-ಬಡಬಗ್ಗರ ಮೇಲೆ ಪ್ರಹಾರ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಸಂಘರ್ಷ ಸಮಿತಿ ಮುಖಂಡ ಎಂ. ರಮೇಶ್‌, “ಬಿಡಿಎ ಅಧಿಕಾರಿಗಳು ಯಾವುದೆ ಮುನ್ಸೂಚನೆ ನೀಡದೆ ಸೋಮಶೆಟ್ಟಿಹಳ್ಳಿಯ ಮನೆಗಳನ್ನು ಒಡೆದಿದ್ದಾರೆ. ಬಿಡಿಎ ಅಧಿಕಾರಿಗಳು ಮಾತೆತ್ತಿದರೆ ಸುಪ್ರೀಂಕೋರ್ಟ್ ಆದೇಶ ಎಂದು ಹೇಳುತ್ತಿದ್ದಾರೆ. ಆದರೆ ಸುಪ್ರೀಂಕೋರ್ಟ್ ಕಟ್ಟಡಗಳನ್ನು ಕೆಡವುವ ಬಗ್ಗೆ ಎಲ್ಲೂ ಹೇಳಿಲ್ಲ. ಇಲ್ಲಿ ಏನು ನಡೀತಿದೆ ಎಂದು ಕೂಡಾ ನಮಗೆ ಅರ್ಥವಾಗುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇಲ್ಲಿರುವಂತಹ ಮನೆಗಳನ್ನು ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಕೊಡುವಂತಹದ್ದು ಯಾವ ನ್ಯಾಯ. ಇದು ನಮ್ಮ ದೇಶದ ನ್ಯಾಯಕ್ಕೆ ವಿರುದ್ದವಾದುದು. ಇದನ್ನು ನಾವು ಖಂಡಿಸುತ್ತೇವೆ. ನಾವು ಪ್ರತಿಭಟನೆ ನಡೆಸಲು ಮುಂದಾದಾಗ ನಮ್ಮನ್ನು ಬಂಧಿಸಲಾಗಿದೆ. ಇಂದು ಎಂಟು ಮನೆಗಳನ್ನು ಒಡೆಯಲಿದ್ದಾರೆ ಎಂಬ ಮಾಹಿತಿಯಿದೆ” ಎಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ

ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡಾ ಆಕ್ರೊಶ ವ್ಯಕ್ತಪಡಿಸಿದ್ದು ತಮ್ಮ ಪಕ್ಷದ ಶಾಸಕನ ಬಂಧನವನ್ನು ಖಂಡಿಸಿದ್ದಾರೆ. “ಈ ಬಡಾವಣೆಯ ಜನರ ಸಂಕಷ್ಟಕ್ಕೆ ಸಂಬಂಧಿಸಿ ಹೋರಾಟಗಾರರು, ಸ್ಥಳೀಯ ನಿವಾಸಿಗಳನ್ನು ಒಳಗೊಂಡಂತೆ ಒಂದು ಸಭೆ ಕರೆಯಿರಿ, ನಾನೂ ಬರುತ್ತೇನೆ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೆ. ಆದರೆ, ಸಭೆಗೆ ಕಾಲಾವಕಾಶವವನ್ನೇ ನೀಡದೇ ಈಗ ಏಕಾಎಕಿ ಮನೆಗಳನ್ನು ಒಡೆಸುತ್ತಿರುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಶಿವರಾಮ ಕಾರಂತ ಬಡಾವಣೆ’ ವಿವಾದ – ಸಮಸ್ಯೆ ಪರಿಹರಿಸುವಂತೆ 17 ಹಳ್ಳಿಗಳಿಂದ ಬೃಹತ್ ಪ್ರತಿಭಟನೆ

“ಜನ ಸಾಲ ಮಾಡಿ ಮನೆಗಳನ್ನು ಕಟ್ಟಿದ್ದಾರೆ. ಈ ಬಡಾವಣೆ ನಿರ್ಮಾಣ ಆದಾಗ ಆರಂಭಿಕ ಹಂತದಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿ ನೋಟಿಫಿಕೇಶ್‌ ಮಾಡಿ, ಆಮೇಲೆ ಕೆಲ ಕಡೆ ಡಿನೋಟಿಫಿಕೇಷನ್‌ ಮಾಡಿ ಎನ್‌ಒಸಿಗಳನ್ನೂ ಕೊಟ್ಟು ಬಿಡಿಎ ಆಯುಕ್ತರು, ಅಧಿಕಾರಿಗಳು ಹಣ ಲೂಟಿ ಹೊಡೆಯುವ ಕೆಲಸ ಮಾಡಿದ್ದಾರೆ. ಮುಖ್ಯಮಂತ್ರಿಗಳ ನಿರ್ದೇಶನದಂತೆ ಇದೆಲ್ಲವನ್ನೂ ಅಧಿಕಾರಿಗಳು ಮಾಡಿದ್ದಾರೆ” ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

 

“ನ್ಯಾಯಾಲಯದಲ್ಲಿ ಸರಿಯಾಗಿ ವಾದ ಮಂಡನೆ ಮಾಡದೇ, ಸಮರ್ಪಕ ಮಾಹಿತಿಯನ್ನೂ ನೀಡದೇ ಅಧಿಕಾರಿಗಳು ಮತ್ತು ಸರಕಾರ ಅಮಾಯಕರ ಜೀವನದ ಜತೆ ಚೆಲ್ಲಾಟ ಆಡಿದ್ದಾರೆ. ಬಿಡಿಎಯ ಈಗಿನ ಅಧ್ಯಕ್ಷ ಎಸ್.‌ಆರ್.‌ವಿಶ್ವನಾಥ್‌ ಅವರೇ ಈ ಜನರ ಪರ ಹೋರಾಟ ಮಾಡಿದ್ದರು. ಈಗ ನೋಡಿದರೆ ಅವರೇ ಮನೆಗಳನ್ನು ನೆಲಸಮ ಮಾಡಿಸುತ್ತಿದ್ದಾರೆ.

ನಾನು ಹದಿನಾಲ್ಕು ತಿಂಗಳು ಅಧಿಕಾರದಲ್ಲಿದ್ದಾಗ ಈ ಮನೆಗಳನ್ನು ಒಡೆಯಲು ಬಿಟ್ಟಿರಲಿಲ್ಲ, ಈ ಸರಕಾರ ನಿಜಕ್ಕೂ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ. ಇವರೇ ಒಂದು ಕಡೆ ದುಡ್ಡು ಹೊಡೆಯೋದು. ಇನ್ನೊಂದು ಕಡೆ ಇವರೇ ಕಟ್ಟಡ ಒಡೆಸೋದು. ಜನರನ್ನು ಈಗ ಬೀದಿಗೆ ತಂದು ನಿಲ್ಲಿಸಿದ್ದಾರೆ. ಮುಖ್ಯಮಂತ್ರಿಗೆ ಜವಾಬ್ದಾರಿ ಎನ್ನುವುದು ಇದ್ದಿದ್ದರೆ ಕೂತು ಚರ್ಚೆ ಮಾಡಿ ಕಾನೂನು ರೀತಿಯಲ್ಲಿ ಆ ಜನರಿಗೆ ರಕ್ಷಣೆ ನೀಡಬೇಕಾಗಿತ್ತು” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಬಡಾವಣೆ ನಿರ್ಮಾಣವಾಗಲಿರುವ 17 ಹಳ್ಳಿಗಳ ನಿವಾಸಿಗಳು, ರೈತರು ಬಡಾವಣೆ ನಿರ್ಮಾಣದ ವಿರುದ್ದ ನಿರಂತವಾಗಿ ಪ್ರತಿಭಟನೆ ನಡೆಸುತ್ತಾ ಬರುತ್ತಿದ್ದಾರೆ. ಈ ಹಿಂದೆ ಇವರ ಪರವಾಗಿದ್ದ ಸ್ಥಳೀಯ ಬಿಜೆಪಿ ಶಾಸಕ ವಿಶ್ವನಾಥ್ ಇದೀಗ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ಆದರೆ ಈಗ ಅವರು ಜನರ ವಿರುದ್ದವಾಗಿ ನಿಂತಿದ್ದು ‘ಶಿವರಾಮ ಕಾರಂತ ಬಡಾವಣೆ’ ನಿರ್ಮಾಣದ ಪರವಾಗಿದ್ದಾರೆ.

ಇದನ್ನೂ ಓದಿ: ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Planned layouts ಮಾಡದಿದ್ದರೆ ಅಡ್ಡಾದಿಡ್ಡಿ ಬೆಳವಣಿಗೆ ಆಗುತ್ರದೆ.
    ಸರಿಯಾಗಿ ದಾರಿ,ಕರೆಂಟ್ ಕಂಬಹಾಕಲು ತೊಡಕು.
    ಇನ್ನು ಎಲ್ಲರಿಗೂ ಬೇಕಾದ ಆಟದಬಯಲು,ಪಾರ್ಕ್ ,ಅಗಲದಾರಿಗಳು ಮುಂದೆ ಅಲ್ಲಿ ಉಂಟಾಗುವ ತಗಾದೆಗಳಿಗೆ ಎಡೆಕೊಡುವುದಿಲ್ಲ
    ೩೦ ವರುಶಗಳ ಹಿಂದೆ ನೆಲದೊಡೆಯರು ಈ ಬಗೆಯ ಬಡಾವಣೆಮಾಡಲು ಎದುರು ಹೇಳುತ್ತಿರಲ್ಲಿಲ್ಲ.
    ಈಗ ಬೆಳೆಬೆಳೆಯಲು ಕೊಟ್ಟಿದ್ದ ಹೊಲಗಳನ್ನು ರಿಯಲ್ ಎಸ್ಟೇಟ್ ಗೆ ಬಳಸಿ ಹೆಚ್ಚು ಹಣಗಳಿಸುವ ಗೀಳಿಗೆ ಬಿದ್ದಿದ್ದಾರೆ.
    Planned growthನಿಂದಾಗುವ ಒಳಿತುಗಳ ಬಗೆಗೆ ಮೀಡಿಯಾಗಳು ಮಂದಿಗೆ ತಿಳಿವಳಿಕೆ ನೀಡಬೇಕು.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...