Homeಕರ್ನಾಟಕಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ...

ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ ಆಕ್ರೋಶ

ಅಧಿಕಾರಿಗಳ ವಿರುದ್ದ ಪ್ರತಿಭಟನೆ ನಡೆಸಿದ ದಾಸರಹಳ್ಳಿ ಜೆಡಿಎಸ್‌ ಶಾಸಕ ಸೇರಿದಂತೆ ಹೋರಾಟ ಸಮಿತಿಯ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ

- Advertisement -
- Advertisement -

‘ಶಿವರಾಮ ಕಾರಂತ ಬಡಾವಣೆ’ ಅಭಿವೃದ್ದಿಗಾಗಿ ಸೋಮಶೆಟ್ಟಿಹಳ್ಳಿ ಹಾಗೂ ಗಾಣಿಗರಹಳ್ಳಿಯ ಸುಮಾರು 142 ಮನೆ ಮತ್ತು ಕಟ್ಟಡಗಳನ್ನು ಕೆಡವಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಧಸಿದೆ. ಇದಕ್ಕಾಗಿ ಸುಮಾರು ಹತ್ತಕ್ಕೂ ಹೆಚ್ಚು ಹಿಟಾಚಿಯೊಂದಿಗೆ ತೆರಳಿದ್ದ ಅಧಿಕಾರಿಗಳ ವಿರುದ್ದ ದಾಸರಹಳ್ಳಿಯ ಜೆಡಿಎಸ್‌ ಶಾಸಕ ಸೇರಿದಂತೆ ಹೋರಾಟ ಸಮಿತಿಯ ಮುಖಂಡರು ಸೋಮಶೆಟ್ಟಿಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದು, ಪೊಲೀಸರು ಅವರನ್ನು ಬಂಧಿಸಿ, ಬಿಡುಗಡೆ ಮಾಡಿರುವ ಘಟನೆ ಸೋಮವಾರ ನಡೆದಿದೆ. ಇದಾಗಿಯು ಪ್ರಾಧಿಕಾರವು ಸುಮಾರು ಆರು ಮನೆಗಳನ್ನು ಒಡೆದಿದೆ ಎಂದು ಹೋರಾಟಗಾರರು ಹೇಳಿದ್ದಾರೆ.

ಬೆಂಗಳೂರು ಅಭಿವೃದ್ದಿಯ ಹೆಸರು ಹೇಳಿ, ರಾಮಗೊಂಡನ ಹಳ್ಳಿಯ ಸುತ್ತಲಿನ 17 ಹಳ್ಳಿಗಳಲ್ಲಿ ಬಿಡಿಎ ‘ಶಿವರಾಮ ಕಾರಂತ ಬಡಾವಣೆ’ ಎಂಬ ವಸತಿ ಸೌಕರ್ಯವನ್ನು ನಿರ್ಮಿಸಲು ಹೊರಟಿದೆ. ಇಂದು ಸೋಮಶೆಟ್ಟಿಹಳ್ಳಿ ಹಾಗೂ ಗಾಣಿಗರಹಳ್ಳಿಯ ಒಟ್ಟು 142 ಕಟ್ಟಡಗಳು 2018ರ ಬಳಿಕ ನಿರ್ಮಾಣವಾಗಿವೆ ಎಂದು ಅದನ್ನು ಒಡೆಯಲು ಮುಂದಾಗಿದೆ. ಆದರೆ ಎಲ್ಲಾ ಮನೆ ಹಾಗೂ ಕಟ್ಟಡಗಳನ್ನು ಎನ್‌ಒಸಿ ಪಡೆದೇ ನಿರ್ಮಾಣ ಮಾಡಲಾಗಿದೆ ಎಂದು ಹೋರಾಟಗಾರರು ಹೇಳಿದ್ದಾರೆ.

ಇದನ್ನೂ ಓದಿ: ಶಿವರಾಮ ಕಾರಂತ್ ಬಡಾವಣೆ ಎಂಬ ‘ಅಭಿವೃದ್ಧಿ’ ಯೋಜನೆ; ದಲಿತರು-ಬಡಬಗ್ಗರ ಮೇಲೆ ಪ್ರಹಾರ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಸಂಘರ್ಷ ಸಮಿತಿ ಮುಖಂಡ ಎಂ. ರಮೇಶ್‌, “ಬಿಡಿಎ ಅಧಿಕಾರಿಗಳು ಯಾವುದೆ ಮುನ್ಸೂಚನೆ ನೀಡದೆ ಸೋಮಶೆಟ್ಟಿಹಳ್ಳಿಯ ಮನೆಗಳನ್ನು ಒಡೆದಿದ್ದಾರೆ. ಬಿಡಿಎ ಅಧಿಕಾರಿಗಳು ಮಾತೆತ್ತಿದರೆ ಸುಪ್ರೀಂಕೋರ್ಟ್ ಆದೇಶ ಎಂದು ಹೇಳುತ್ತಿದ್ದಾರೆ. ಆದರೆ ಸುಪ್ರೀಂಕೋರ್ಟ್ ಕಟ್ಟಡಗಳನ್ನು ಕೆಡವುವ ಬಗ್ಗೆ ಎಲ್ಲೂ ಹೇಳಿಲ್ಲ. ಇಲ್ಲಿ ಏನು ನಡೀತಿದೆ ಎಂದು ಕೂಡಾ ನಮಗೆ ಅರ್ಥವಾಗುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇಲ್ಲಿರುವಂತಹ ಮನೆಗಳನ್ನು ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಕೊಡುವಂತಹದ್ದು ಯಾವ ನ್ಯಾಯ. ಇದು ನಮ್ಮ ದೇಶದ ನ್ಯಾಯಕ್ಕೆ ವಿರುದ್ದವಾದುದು. ಇದನ್ನು ನಾವು ಖಂಡಿಸುತ್ತೇವೆ. ನಾವು ಪ್ರತಿಭಟನೆ ನಡೆಸಲು ಮುಂದಾದಾಗ ನಮ್ಮನ್ನು ಬಂಧಿಸಲಾಗಿದೆ. ಇಂದು ಎಂಟು ಮನೆಗಳನ್ನು ಒಡೆಯಲಿದ್ದಾರೆ ಎಂಬ ಮಾಹಿತಿಯಿದೆ” ಎಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ

ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡಾ ಆಕ್ರೊಶ ವ್ಯಕ್ತಪಡಿಸಿದ್ದು ತಮ್ಮ ಪಕ್ಷದ ಶಾಸಕನ ಬಂಧನವನ್ನು ಖಂಡಿಸಿದ್ದಾರೆ. “ಈ ಬಡಾವಣೆಯ ಜನರ ಸಂಕಷ್ಟಕ್ಕೆ ಸಂಬಂಧಿಸಿ ಹೋರಾಟಗಾರರು, ಸ್ಥಳೀಯ ನಿವಾಸಿಗಳನ್ನು ಒಳಗೊಂಡಂತೆ ಒಂದು ಸಭೆ ಕರೆಯಿರಿ, ನಾನೂ ಬರುತ್ತೇನೆ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೆ. ಆದರೆ, ಸಭೆಗೆ ಕಾಲಾವಕಾಶವವನ್ನೇ ನೀಡದೇ ಈಗ ಏಕಾಎಕಿ ಮನೆಗಳನ್ನು ಒಡೆಸುತ್ತಿರುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಶಿವರಾಮ ಕಾರಂತ ಬಡಾವಣೆ’ ವಿವಾದ – ಸಮಸ್ಯೆ ಪರಿಹರಿಸುವಂತೆ 17 ಹಳ್ಳಿಗಳಿಂದ ಬೃಹತ್ ಪ್ರತಿಭಟನೆ

“ಜನ ಸಾಲ ಮಾಡಿ ಮನೆಗಳನ್ನು ಕಟ್ಟಿದ್ದಾರೆ. ಈ ಬಡಾವಣೆ ನಿರ್ಮಾಣ ಆದಾಗ ಆರಂಭಿಕ ಹಂತದಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿ ನೋಟಿಫಿಕೇಶ್‌ ಮಾಡಿ, ಆಮೇಲೆ ಕೆಲ ಕಡೆ ಡಿನೋಟಿಫಿಕೇಷನ್‌ ಮಾಡಿ ಎನ್‌ಒಸಿಗಳನ್ನೂ ಕೊಟ್ಟು ಬಿಡಿಎ ಆಯುಕ್ತರು, ಅಧಿಕಾರಿಗಳು ಹಣ ಲೂಟಿ ಹೊಡೆಯುವ ಕೆಲಸ ಮಾಡಿದ್ದಾರೆ. ಮುಖ್ಯಮಂತ್ರಿಗಳ ನಿರ್ದೇಶನದಂತೆ ಇದೆಲ್ಲವನ್ನೂ ಅಧಿಕಾರಿಗಳು ಮಾಡಿದ್ದಾರೆ” ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

 

“ನ್ಯಾಯಾಲಯದಲ್ಲಿ ಸರಿಯಾಗಿ ವಾದ ಮಂಡನೆ ಮಾಡದೇ, ಸಮರ್ಪಕ ಮಾಹಿತಿಯನ್ನೂ ನೀಡದೇ ಅಧಿಕಾರಿಗಳು ಮತ್ತು ಸರಕಾರ ಅಮಾಯಕರ ಜೀವನದ ಜತೆ ಚೆಲ್ಲಾಟ ಆಡಿದ್ದಾರೆ. ಬಿಡಿಎಯ ಈಗಿನ ಅಧ್ಯಕ್ಷ ಎಸ್.‌ಆರ್.‌ವಿಶ್ವನಾಥ್‌ ಅವರೇ ಈ ಜನರ ಪರ ಹೋರಾಟ ಮಾಡಿದ್ದರು. ಈಗ ನೋಡಿದರೆ ಅವರೇ ಮನೆಗಳನ್ನು ನೆಲಸಮ ಮಾಡಿಸುತ್ತಿದ್ದಾರೆ.

ನಾನು ಹದಿನಾಲ್ಕು ತಿಂಗಳು ಅಧಿಕಾರದಲ್ಲಿದ್ದಾಗ ಈ ಮನೆಗಳನ್ನು ಒಡೆಯಲು ಬಿಟ್ಟಿರಲಿಲ್ಲ, ಈ ಸರಕಾರ ನಿಜಕ್ಕೂ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ. ಇವರೇ ಒಂದು ಕಡೆ ದುಡ್ಡು ಹೊಡೆಯೋದು. ಇನ್ನೊಂದು ಕಡೆ ಇವರೇ ಕಟ್ಟಡ ಒಡೆಸೋದು. ಜನರನ್ನು ಈಗ ಬೀದಿಗೆ ತಂದು ನಿಲ್ಲಿಸಿದ್ದಾರೆ. ಮುಖ್ಯಮಂತ್ರಿಗೆ ಜವಾಬ್ದಾರಿ ಎನ್ನುವುದು ಇದ್ದಿದ್ದರೆ ಕೂತು ಚರ್ಚೆ ಮಾಡಿ ಕಾನೂನು ರೀತಿಯಲ್ಲಿ ಆ ಜನರಿಗೆ ರಕ್ಷಣೆ ನೀಡಬೇಕಾಗಿತ್ತು” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಬಡಾವಣೆ ನಿರ್ಮಾಣವಾಗಲಿರುವ 17 ಹಳ್ಳಿಗಳ ನಿವಾಸಿಗಳು, ರೈತರು ಬಡಾವಣೆ ನಿರ್ಮಾಣದ ವಿರುದ್ದ ನಿರಂತವಾಗಿ ಪ್ರತಿಭಟನೆ ನಡೆಸುತ್ತಾ ಬರುತ್ತಿದ್ದಾರೆ. ಈ ಹಿಂದೆ ಇವರ ಪರವಾಗಿದ್ದ ಸ್ಥಳೀಯ ಬಿಜೆಪಿ ಶಾಸಕ ವಿಶ್ವನಾಥ್ ಇದೀಗ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ಆದರೆ ಈಗ ಅವರು ಜನರ ವಿರುದ್ದವಾಗಿ ನಿಂತಿದ್ದು ‘ಶಿವರಾಮ ಕಾರಂತ ಬಡಾವಣೆ’ ನಿರ್ಮಾಣದ ಪರವಾಗಿದ್ದಾರೆ.

ಇದನ್ನೂ ಓದಿ: ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Planned layouts ಮಾಡದಿದ್ದರೆ ಅಡ್ಡಾದಿಡ್ಡಿ ಬೆಳವಣಿಗೆ ಆಗುತ್ರದೆ.
    ಸರಿಯಾಗಿ ದಾರಿ,ಕರೆಂಟ್ ಕಂಬಹಾಕಲು ತೊಡಕು.
    ಇನ್ನು ಎಲ್ಲರಿಗೂ ಬೇಕಾದ ಆಟದಬಯಲು,ಪಾರ್ಕ್ ,ಅಗಲದಾರಿಗಳು ಮುಂದೆ ಅಲ್ಲಿ ಉಂಟಾಗುವ ತಗಾದೆಗಳಿಗೆ ಎಡೆಕೊಡುವುದಿಲ್ಲ
    ೩೦ ವರುಶಗಳ ಹಿಂದೆ ನೆಲದೊಡೆಯರು ಈ ಬಗೆಯ ಬಡಾವಣೆಮಾಡಲು ಎದುರು ಹೇಳುತ್ತಿರಲ್ಲಿಲ್ಲ.
    ಈಗ ಬೆಳೆಬೆಳೆಯಲು ಕೊಟ್ಟಿದ್ದ ಹೊಲಗಳನ್ನು ರಿಯಲ್ ಎಸ್ಟೇಟ್ ಗೆ ಬಳಸಿ ಹೆಚ್ಚು ಹಣಗಳಿಸುವ ಗೀಳಿಗೆ ಬಿದ್ದಿದ್ದಾರೆ.
    Planned growthನಿಂದಾಗುವ ಒಳಿತುಗಳ ಬಗೆಗೆ ಮೀಡಿಯಾಗಳು ಮಂದಿಗೆ ತಿಳಿವಳಿಕೆ ನೀಡಬೇಕು.

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...