Homeಮುಖಪುಟಮಕ್ಕಳಿಗೆ ಬೆಳಗಿನ ಉಪಹಾರ ಯೋಜನೆ: ಕೇಂದ್ರದ ಆರ್ಥಿಕ ಬಿಕ್ಕಟ್ಟಿನಿಂದ ವಿಳಂಬ

ಮಕ್ಕಳಿಗೆ ಬೆಳಗಿನ ಉಪಹಾರ ಯೋಜನೆ: ಕೇಂದ್ರದ ಆರ್ಥಿಕ ಬಿಕ್ಕಟ್ಟಿನಿಂದ ವಿಳಂಬ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಈ ಕ್ರಮವನ್ನು 2021ರ ಏಪ್ರಿಲ್ ತಿಂಗಳಿನಿಂದ ಪ್ರಾರಂಭಿಸಬೇಕಾಗಿತ್ತು.  ಆದರೆ ಕೇಂದ್ರ ಸರ್ಕಾರ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟಿನ ಕಾರಣಕ್ಕಾಗಿ ವಿಳಂಬವಾಗುತ್ತಿದೆ.

- Advertisement -
- Advertisement -

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ (ಎನ್‌ಇಪಿ) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೆಳಗಿನ ಉಪಹಾರವನ್ನು ಒದಗಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ ಕೇಂದ್ರ ಸರ್ಕಾರ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟಿನ ಕಾರಣಕ್ಕಾಗಿ ಈ ನಿರ್ಧಾರವು ವಿಳಂಬವಾಗುತ್ತಿದೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಈ ಕ್ರಮವನ್ನು 2021ರ ಏಪ್ರಿಲ್ ತಿಂಗಳಿನಿಂದ ಪ್ರಾರಂಭಿಸಬೇಕಾಗಿತ್ತು. ಅಂದಾಜಿನ ಪ್ರಕಾರ, ಉಚಿತ ಬೆಳಗಿನ ಉಪಹಾರಕ್ಕಾಗಿ ಹೆಚ್ಚುವರಿ 4,000 ಕೋಟಿ ರೂ. ಮತ್ತು ಪ್ರಸಕ್ತ ಹಣಕಾಸು ವರ್ಷದ ಬಜೆಟ್‌ನಲ್ಲಿ ಸುಮಾರು 5,000 ಕೋಟಿಯನ್ನು ಶಿಕ್ಷಣ ಇಲಾಖೆಯು ಅಪೇಕ್ಷಿಸಿತ್ತು.

ದೇಶದಾದ್ಯಂತ ಇರುವ 11.8 ಕೋಟಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟಕ್ಕಾಗಿ ಖರ್ಚು ಮಾಡುತ್ತಿರುವ ಹಣ 11,000 ಕೊಟಿ ರೂ. ಆಗಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಆದರೆ ಮುಂಬರುವ ಹಣಕಾಸು ವರ್ಷದಲ್ಲಿ ಶಿಕ್ಷಣ ಇಲಾಖೆಯ ಬಜೆಟ್ ಹಂಚಿಕೆಯನ್ನು 8% ರಷ್ಟು ಕಡಿತಗೊಳಿಸಲಾಗಿದ್ದು, 2020-21ರಲ್ಲಿ 59,845 ಕೋಟಿ ರೂ.ಗಳಿಂದ 2021-22ರಲ್ಲಿ 54,873 ಕೋಟಿ ರೂ.ಗೆ ಇಳಿಸಲಾಗಿದೆ.

ಕಳೆದ ಒಂದು ವರ್ಷದಲ್ಲಿ, ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಸುಮಾರು ಒಂಬತ್ತು ತಿಂಗಳು ಶಾಲೆಗಳನ್ನು ಮುಚ್ಚಲಾಗಿದ್ದರೂ, ಮಾರ್ಪಾಡುಗಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಮುಂದುವರೆದಿತ್ತು. ಅಂದರೆ ವಿದ್ಯಾರ್ಥಿಗಳಿಗೆ ಶಾಲಾ ಆವರಣದಲ್ಲಿ ಬಡಿಸುವ ಮಧ್ಯಾಹ್ನದ ಊಟಕ್ಕೆ ಬದಲಾಗಿ ಶುಷ್ಕ ಪಡಿತರ ಅಥವಾ ಹಣವನ್ನು (ನೇರ ಲಾಭ ವರ್ಗಾವಣೆ) ನೀಡಲಾಗಿತ್ತು.

ಇದನ್ನೂ ಓದಿ: 5 ತಿಂಗಳಿಂದ ಬಾರದ ಗೌರವಧನ: ವೇತನ ಕೇಳಿದ ಬಿಸಿಯೂಟ ನೌಕರರ ಬಂಧನ

ಈ ಯೋಜನೆಗೆ ಬಜೆಟ್‌ನಲ್ಲಿ ನಿಗದಿಪಡಿಸಿದ ಮೊತ್ತ 11,000 ಕೋಟಿ ರೂ.ಗಳು. ಆದರೆ ತಗಲುವ ವೆಚ್ಚ 12,900 ಕೋಟಿ ರೂ.ಗಳು ಎಂದು ಇಲಾಖೆ ಹೇಳಿದೆ. ಆದರೆ, ಸಾಂಕ್ರಾಮಿಕ ರೋಗದಿಂದಾಗಿ ಉಂಟಾದ ಆರ್ಥಿಕ ಬಿಕ್ಕಟ್ಟಿನ ಕಾರಣದಿಂದ ಕೇವಲ 11,500 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ.

ಆದರೂ, ಮಾರ್ಚ್ 9 ರಂದು ಲೋಕಸಭೆಯಲ್ಲಿ ತನ್ನ ವರದಿಯನ್ನು ಸಲ್ಲಿಸಿದ ಶಿಕ್ಷಣದ ಸಂಸದೀಯ ಸ್ಥಾಯಿ ಸಮಿತಿ, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಬೆಳಗಿನ ಉಪಾಹಾರವನ್ನು ಒದಗಿಸುವಂತೆ ಶಿಫಾರಸು ಮಾಡಿದ್ದು, ಮಧ್ಯಾಹ್ನದ ಬಿಸಿಯೂಟ ಯೋಜನೆಯ ವ್ಯಾಪ್ತಿಯನ್ನು ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು ಎಂದು ಹೇಳಿದೆ. ಪ್ರಸ್ತುತ ಈ ಯೋಜನೆ 1-8ನೇ ತರಗತಿಯವರೆಗೆ ಮಾತ್ರ ಅನ್ವಯವಾಗುತ್ತಿತ್ತು. ಆದರೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಅದನ್ನು ಪೂರ್ವ ಪ್ರಾಥಮಿಕ ಶಾಲೆಗಳಿಗೂ ವಿಸ್ತರಿಸಬೇಕು ಎಂಬುದನ್ನು ಸಮಿತಿಯು ಉಲ್ಲೇಖಿಸಿದೆ.

ಎನ್‌ಇಪಿಯ ಶಿಫಾರಸುಗಳಿಗೆ ಅನುಗುಣವಾಗಿ ಮಧ್ಯಾಹ್ನದ ಊಟದ ಜೊತೆಗೆ ಬೆಳಗಿನ ಉಪಾಹಾರವನ್ನೂ ಪೂರಕವಾಗಿ ನೀಡಬೇಕು ಎಂಬ ನಿರ್ಧಾರವನ್ನು ಕೇಂದ್ರ ಕ್ಯಾಬಿನೆಟ್ 2020 ರ ಆಗಸ್ಟ್‌ನಲ್ಲಿ ಅಂಗೀಕರಿಸಿತ್ತು. ವಿದ್ಯಾರ್ಥಿಗಳಿಗೆ ಪೌಷ್ಠಿಕಾಂಶಯುತ ಆಹಾರ ನೀಡುವುದರ ಜೊತೆಗೆ ಅವರ ಕಲಿಕೆಯ ಮಟ್ಟವನ್ನು ಹೆಚ್ಚಿಸುವುದೇ ಇದರ ಉದ್ದೇಶವಾಗಿತ್ತು.

ಸಂಶೋಧನೆಯ ಪ್ರಕಾರ, “ಮಧ್ಯಾಹ್ನದ ಊಟಕ್ಕೆ ಮೊದಲು ಸರಳ ಮತ್ತು ಪೌಷ್ಠಿಕಾಂಶಯುತ ಆಹಾರವನ್ನು ನೀಡುವುದರಿಂದ ಬೆಳಿಗ್ಗೆ-ಮಧ್ಯಾಹ್ನದ ನಡುವಿನ ಸಮಯದಲ್ಲಿ ಮಕ್ಕಳು ಹೆಚ್ಚು ಕ್ರಿಯಾತ್ಮಕವಾಗಿರುತ್ತಾರೆ” ಎಂದು ರಾಷ್ಟ್ರೀಯ ಶಿಕ್ಷಣ ನೀತಿಯು ಹೇಳುತ್ತದೆ.

ಸರ್ಕಾರ ಹಣಕಾಸಿನ ಸ್ಥಿತಿ ಸುಧಾರಿಸಿದರೆ ಈ ಯೋಜನೆಯನ್ನು ಅನುಷ್ಠಾನಗೊಳಿಸುವ ನಿರೀಕ್ಷೆಯಿದೆ ಎಂದು ಇಲಾಖೆಯ ಅಧಿಕಾರಿಗಳು ಆಶಯ ವ್ಯಕ್ತಪಡಿಸಿದ್ದಾರೆ


ಇದನ್ನೂ ಓದಿ: ಅಕ್ಷಯಪಾತ್ರ (ಇಸ್ಕಾನ್‌)ಗೆ ಹೊರಗುತ್ತಿಗೆಗೆ ವಿರೋಧ: ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...