Homeಅಂತರಾಷ್ಟ್ರೀಯBreaking: ಸುಯೆಜ್ ಕಾಲುವೆಯಲ್ಲಿ ಸಿಲುಕಿದ್ದ ಬೃಹತ್ ಹಡಗು ಈಗ ಚಲಿಸುತ್ತಿದೆ

Breaking: ಸುಯೆಜ್ ಕಾಲುವೆಯಲ್ಲಿ ಸಿಲುಕಿದ್ದ ಬೃಹತ್ ಹಡಗು ಈಗ ಚಲಿಸುತ್ತಿದೆ

- Advertisement -
- Advertisement -

ಕಳೆದ ಒಂದು ವಾರದಿಂದ ಈಜಿಪ್ಟ್‌ನ ಸುಯೆಜ್ ಕಾಲುವೆಯಲ್ಲಿ ಸಿಲುಕಿದ್ದ 400 ಮೀಟರ್ ಉದ್ದದ ಬೃಹತ್ ಸರಕು ಹಡಗು ‘ಎವರ್‌ ಗಿವೆನ್’ ಈಗ ಚಲಿಸುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ರೆಡ್ ಸೀ ಮುಖಾಂತರ ಕಡಿದಾದ ಕಾಲುವೆಯಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡ ಜಪಾನ್ ದೇಶದ ಈ ದೈತ್ಯ ಹಡಗಿನಿಂದಾಗಿ ಜಾಗತಿಕ ಜಲಮಾರ್ಗ ವ್ಯಾಪಾರ ವಹಿವಾಟಿನ ಮೇಲೆ ತೀವ್ರ ಪರಿಣಾಮ ಬೀರಿದ್ದು, ಬಿಲಿಯನ್‌ಗಟ್ಟಲೆ ಡಾಲರ್ ನಷ್ಟ ಉಂಟಾಗುತ್ತಿದೆ. ಈ ಹಡಗನ್ನು ಆ ಸ್ಥಳದಿಂದ ಬಂದರಿಗೆ ಸಾಗಿಸುವುದು ಹರಸಾಹಸದ ಕೆಲಸ ಎಂದು ಹೇಳಲಾಗಿತ್ತು. ಆದರೆ ಈಗ ಈ ಎಲ್ಲಾ ಅಡೆತಡೆಗಳನ್ನು ದಾಟಿ ಹಡಗು ಮುಂದೆ ಚಲಿಸುತ್ತಿದೆ.

ಈ ಕೆಲಸ ಪೂರ್ಣಗೊಳಿಸಲು ಕೆಲವು ವಾರಗಳೇ ಬೇಕಾಗಬಹುದು ಎಂದು ಎವರ್ ಗಿವನ್ ಹಡಗನ್ನು ಅಲ್ಲಿಂದ ಸಾಗಿಸಲು ಜವಾಬ್ದಾರಿ ನೀಡಲಾಗಿರುವ ಎರಡು ಸಂಸ್ಥೆಗಳ ಪೈಕಿ ಒಂದಾಗಿರುವ ಡೆನ್ಮಾರ್ಕ್‍ನ ಬೊಸ್ಲಾಲಿಸ್ ಸಂಸ್ಥೆಯ ಸಿಒಇಒ ಪೀಟರ್ ಬೆರ್ಡೊವೊಸ್ಕಿ ಹೇಳಿದ್ದರು.

ಇದನ್ನೂ ಓದಿ: ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

ನಂತರ ಸುಯೆಜ್ ಕಾಲುವೆ ಪ್ರಾಧಿಕಾರ ಈ ಅತ್ಯಂತ ಮಹತ್ವದ ಕಾಲುವೆ ಮುಖಾಂತರ ಎಲ್ಲಾ ಸಂಚಾರ ನಿಲ್ಲಿಸಿತ್ತು. ಪ್ರತಿ ದಿನ ಈ ಕಾಲುವೆ ಮೂಲಕ ಸುಮಾರು 50 ಸರಕು ಹಡಗುಗಳು ಹಾದು ಹೋಗುತ್ತವೆ ಹಾಗೂ ಸರಾಸರಿ ಜಾಗತಿಕ ಹಡಗು ಸಂಚಾರದ ಶೇ 30ರಷ್ಟು ಹಡಗುಗಳು ವಾರ್ಷಿಕವಾಗಿ ಈ ಕಾಲುವೆ ಮೂಲಕ ಸಾಗುತ್ತವೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು.

ಈಗಾಗಲೇ ಸುಯೆಜ್ ಕಾಲುವೆ ಬಂದ್ ಆಗಿದ್ದರಿಂದ ಗಂಟೆಗೆ ಸುಮಾರು 400 ಮಿಲಿಯನ್ ಡಾಲರ್ ನಷ್ಟ ಉಂಟಾಗಿತ್ತು. ಈ ದೈತ್ಯ ಹಡಗು 2.20 ಲಕ್ಷ ಟನ್ ಭಾರವಿದ್ದು, 193.3 ಕಿಮೀ ಉದ್ದವಿರುವ ಕಿರಿದಾದ ಸುಯೆಜ್ ಕಾಲುವೆಯನ್ನು ವಸ್ತುಶಃ ಬ್ಲಾಕ್ ಮಾಡಿತ್ತು. ಈ ಹಾದಿಯಲ್ಲಿ ಸಾಮಾನ್ಯವಾಗಿ ಸಾಗುವ ಸರಕು ನೌಕೆಗಳು ಹೆಚ್ಚಾಗಿ ತೈಲ, ಸಂಸ್ಕರಿತ ತೈಲ, ಆಹಾರ ಧಾನ್ಯ ಸಾಗಿಸುತ್ತವೆಯಲ್ಲದೆ ಪೂರ್ವ ಮತ್ತು ಪಾಶ್ಚಿಮಾತ್ಯ ದೇಶಗಳ ನಡುವೆ ವ್ಯಾಪಾರ ವಹಿವಾಟಿಗೆ ಮಹತ್ವದ ಕೊಂಡಿಯಾಗಿದೆ.


ಇದನ್ನೂ ಓದಿ: ಬಾಂಗ್ಲಾದೇಶಕ್ಕಾಗಿ ಹೋರಾಡಿ ಜೈಲು ಸೇರಿದ್ದ ಪ್ರಧಾನಿ: RTI ಅಡಿಯಲ್ಲಿ ಮಾಹಿತಿ ಕೋರಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...