HomeಮುಖಪುಟBreaking News: ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್‌ ಭೀಕರವಾಗಿ ಡಿಕ್ಕಿ; ಅಪಾರ ಸಾವು, ನೋವು

Breaking News: ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್‌ ಭೀಕರವಾಗಿ ಡಿಕ್ಕಿ; ಅಪಾರ ಸಾವು, ನೋವು

- Advertisement -
- Advertisement -

ಪಶ್ಚಿಮ ಬಂಗಾಳದ ಶಾಲಿಮಾರ್ ನಿಲ್ದಾಣದಿಂದ ತಮಿಳುನಾಡಿನ ಚೆನ್ನೈಗೆ ತೆರಳುವ ಕೋರಮಂಡಲ್ ಎಕ್ಸ್‌ಪ್ರೆಸ್ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಹೀಗಾಗಿ ಕನಿಷ್ಠ 179 ಜನರು ಗಾಯಗೊಂಡಿದ್ದಾರೆ ಎಂದು ಸದ್ಯದ ವರದಿಗಳು ಹೇಳುತ್ತಿವೆ.

ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಅಪಘಾತ ಸಂಭವಿಸಿದ್ದು, ಸೂಪರ್‌ಫಾಸ್ಟ್ ರೈಲಿನ ಪಲ್ಟಿಯಾದ ಕೋಚ್‌ಗಳಲ್ಲಿ ಹೆಚ್ಚಿನವರು ಸಿಕ್ಕಿಹಾಕಿಕೊಂಡಿದ್ದಾರೆ. ಕೋರಮಂಡಲ್‌ ಎಕ್ಸ್‌ಪ್ರೆಸ್ ರೈಲಿನಲ್ಲಿದ್ದ ಹಲವಾರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ‘ಹಿಂದೂಸ್ಥಾನ್ ಟೈಮ್ಸ್‌’ ಸುದ್ದಿಜಾಲತಾಣವು ರಾತ್ರಿ 9.20ಕ್ಕೆ ಅಪ್‌ಡೇಟ್ ಮಾಡಿರುವ ಮಾಹಿತಿಯ ಪ್ರಕಾರ ‘30 ಮಂದಿ ಕೊನೆಯುಸಿರೆಳೆದಿದ್ದಾರೆ’.

ಕೋಲ್ಕತ್ತಾ ಬಳಿಯ ಶಾಲಿಮಾರ್ ನಿಲ್ದಾಣದಿಂದ ಚೆನ್ನೈ ಸೆಂಟ್ರಲ್ ನಿಲ್ದಾಣಕ್ಕೆ ಈ ರೈಲು ತೆರಳುತ್ತಿದ್ದಾಗ ಬಹನಾಗಾ ಬಜಾರ್ ನಿಲ್ದಾಣದ ಬಳಿ ರಾತ್ರಿ 7.20ರ ಸುಮಾರಿಗೆ ಅಪಘಾತ ಸಂಭವಿಸಿದೆ.

ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಎಕ್ಸ್‌ಪ್ರೆಸ್ ರೈಲಿನ ನಾಲ್ಕು ಬೋಗಿಗಳು ಹಳಿ ತಪ್ಪಿವೆ. ಗಾಯಗೊಂಡ ಪ್ರಯಾಣಿಕರನ್ನು ಬಾಲಸೋರ್ ವೈದ್ಯಕೀಯ ಕಾಲೇಜು, ಸೊರೊದಲ್ಲಿನ ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಗೋಪಾಲಪುರ, ಖಾಂತಪಾದದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕರೆದೊಯ್ಯಲಾಗುತ್ತಿದೆ.

ವಿಶೇಷ ಪರಿಹಾರ ಆಯುಕ್ತರ (ಎಸ್‌ಆರ್‌ಸಿ) ಕಚೇರಿಯು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಅಪಘಾತದ ಸ್ಥಳಕ್ಕೆ ತಂಡಗಳನ್ನು ಕಳುಹಿಸಿದೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ಅಗ್ನಿಶಾಮಕ ದಳವನ್ನು ನಿಯೋಜಿಸಿದ್ದಾರೆ. ಎಸ್‌ಆರ್‌ಸಿಯ ಹಿರಿಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ.

ಒಡಿಶಾ ಸರ್ಕಾರವು ಕಾರ್ಯಾಚರಣೆಗೆ ಸಹಾಯ ಮಾಡಲು ಅಪಘಾತ ಸ್ಥಳದಲ್ಲಿ ಜನರೇಟರ್ ಮತ್ತು ಲೈಟ್‌ ವ್ಯವಸ್ಥೆ ಮಾಡಿದೆ.

ರಕ್ಷಣಾ ಕಾರ್ಯಾಚರಣೆಗೆ ನೆರವಾಗಲು ಐದು ಆಂಬ್ಯುಲೆನ್ಸ್‌ಗಳನ್ನು ಕಳುಹಿಸಲಾಗಿದೆ ಎಂದು ಒಡಿಶಾ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಒಡಿಶಾ ರಾಜ್ಯ ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಹೆಚ್ಚುವರಿ ನಿರ್ದೇಶನಾಲಯ ಕೂಡ 15 ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ಕಳುಹಿಸಿದೆ.

ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲು, ಅಪಘಾತ ಸ್ಥಳಕ್ಕೆ ತುರ್ತಾಗಿ ಭೇಟಿ ನೀಡಲು ಮತ್ತು ರಾಜ್ಯ ಮಟ್ಟದಿಂದ ಯಾವುದೇ ಹೆಚ್ಚುವರಿ ಸಹಾಯದ ಅಗತ್ಯವಿದ್ದರೆ ಎಸ್‌ಆರ್‌ಸಿಗೆ ತಿಳಿಸಲು ಬಾಲಸೋರ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಸೂಚಿಸಲಾಗಿದೆ.

ಕೋರಮಂಡಲ್ ಎಕ್ಸ್‌ಪ್ರೆಸ್‌ ಎಂಜಿನ್, ಗೂಡ್ಸ್ ರೈಲಿನ ಮೇಲೆ ಹತ್ತಿರುವುದನ್ನು ಘಟನೆಯ ದೃಶ್ಯಾವಳಿಗಳು ತೋರಿಸಿವೆ. ಪ್ರಾಥಮಿಕ ಮಾಹಿತಿ ಪ್ರಕಾರ ಎರಡೂ ರೈಲುಗಳು ಒಂದೇ ರೈಲು ಹಳಿಯಲ್ಲಿದ್ದವು. ಅಪಘಾತ ಹೇಗೆ ಸಂಭವಿಸಿತು ಎಂಬುದರ ಕುರಿತು ತನಿಖೆ ಆರಂಭಿಸಲಾಗಿದೆ.

ಸಹಾಯವಾಣಿ ಸಂಖ್ಯೆ 06782262286 ತೆರೆಯಲಾಗಿದ್ದು, ತುರ್ತು ಸೇವೆ ಒದಗಿಸಲಾಗಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಪ್ರತಿಕ್ರಿಯಿಸಿದ್ದು, “ಘಟನೆ ತಿಳಿದು ಆಘಾತವಾಗಿದೆ. ಪಶ್ಚಿಮ ಬಂಗಾಳದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಶಾಲಿಮಾರ್-ಕೊರಮಂಡಲ್‌ ಎಕ್ಸ್‌ಪ್ರೆಸ್ ಇಂದು ಸಂಜೆ ಬಾಲಸೋರ್ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಜನರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದು ಆಘಾತವಾಯಿತು” ಎಂದಿದ್ದಾರೆ.

“ನಮ್ಮ ಜನರ ಸಲುವಾಗಿ ನಾವು ಒಡಿಶಾ ಸರ್ಕಾರ ಮತ್ತು ಆಗ್ನೇಯ ರೈಲ್ವೆಯೊಂದಿಗೆ ಸಂಪರ್ಕದಲ್ಲಿದ್ದೇವೆ. ನಮ್ಮ ತುರ್ತು ನಿಯಂತ್ರಣ ಕೊಠಡಿಯನ್ನು (033- 22143526/ 22535185) ಸಕ್ರಿಯಗೊಳಿಸಲಾಗಿದೆ. ಒಡಿಶಾ ಸರ್ಕಾರ ಮತ್ತು ರೈಲ್ವೆ ಅಧಿಕಾರಿಗಳೊಂದಿಗೆ ಸಹಕರಿಸಲು, ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ನಾವು 5- 6 ಸದಸ್ಯರ ತಂಡವನ್ನು ಸ್ಥಳಕ್ಕೆ ಕಳುಹಿಸುತ್ತಿದ್ದೇವೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ” ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...