Homeಕರ್ನಾಟಕBIG BREAKING: ಧರ್ಮಸ್ಥಳ ಪ್ರಕರಣ: ಹೊಸ ತಿರುವು; ಎಸ್‌ಐಟಿ ಎದುರು ಪ್ರತ್ಯಕ್ಷನಾದ ಮತ್ತೋರ್ವ ದೂರುದಾರ-video

BIG BREAKING: ಧರ್ಮಸ್ಥಳ ಪ್ರಕರಣ: ಹೊಸ ತಿರುವು; ಎಸ್‌ಐಟಿ ಎದುರು ಪ್ರತ್ಯಕ್ಷನಾದ ಮತ್ತೋರ್ವ ದೂರುದಾರ-video

- Advertisement -
- Advertisement -

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ವ್ಯಕ್ತಿಯೊಬ್ಬ ನೀಡಿದ ದೂರಿನ ಬೆನ್ನಲ್ಲೇ ಈ ಪ್ರಕರಣ ಇದೀಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಮುಂದೆ ಮತ್ತೊಬ್ಬ ದೂರುದಾರರಾದ ಜಯಂತ ಶೆಟ್ಟಿ ಹಾಜರಾಗಿದ್ದು, ಕೆಲವು ಪ್ರಮುಖ ಸಾಕ್ಷ್ಯಗಳನ್ನು ನೀಡಲು ಸಿದ್ಧರಾಗಿದ್ದಾರೆ.

ಸುಮಾರು ಇಪ್ಪತ್ತು ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ಘಟನೆಗಳಿಗೆ ಸಂಬಂಧಿಸಿದಂತೆ, ಜಯಂತ ಶೆಟ್ಟಿ ಅವರು ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ತಡರಾತ್ರಿ ಆಗಮಿಸಿದ್ದರು. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಯಂತ ಶೆಟ್ಟಿ, ಹಲವು ವರ್ಷಗಳ ಹಿಂದೆಯೇ ಧರ್ಮಸ್ಥಳದಲ್ಲಿ ಹಲವು ಕೊಲೆಗಳಾಗಿವೆ ಎಂದು ಸಾರ್ವಜನಿಕವಾಗಿ ಹೇಳಿದ್ದೆ ಎಂದರು. ಅಲ್ಲದೇ, ಈ ವಿಚಾರಗಳ ಬಗ್ಗೆ ಅನೇಕ ವೇದಿಕೆಗಳಲ್ಲಿ ಮಾತನಾಡಿದ್ದಾಗಿ ತಿಳಿಸಿದರು.

ಈ ವಿಷಯದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿಯನ್ನು ರಚಿಸಿದ್ದು ಉತ್ತಮ ಬೆಳವಣಿಗೆ ಎಂದು ಜಯಂತ ಶೆಟ್ಟಿ ಶ್ಲಾಘಿಸಿದರು. ತನಿಖಾ ತಂಡದ ಅಧಿಕಾರಿಗಳು ಭಾನುವಾರ ರಜೆ ಇರುವ ಕಾರಣ, ಸೋಮವಾರ ಬರುವಂತೆ ಸೂಚಿಸಿದ್ದು, ಆ ದಿನ ಎಲ್ಲ ಮಾಹಿತಿಯನ್ನು ಅವರಿಗೆ ನೀಡುತ್ತೇನೆ ಎಂದು ಶೆಟ್ಟಿ ಹೇಳಿದರು.

‘ಕೊಲೆಗಳ ಬಗ್ಗೆ ಎಲ್ಲರಿಗೂ ತಿಳಿದಿತ್ತು’

ಜಯಂತ ಶೆಟ್ಟಿ ಅವರ ಪ್ರಕಾರ, ಆ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ನಡೆದಿದ್ದ ಕೊಲೆಗಳ ಬಗ್ಗೆ ಸ್ಥಳೀಯರಿಗೆಲ್ಲ ತಿಳಿದಿತ್ತು. ಆದರೆ, ‘ಭಯದಿಂದ ಯಾರೂ ಬಾಯಿ ಬಿಡುತ್ತಿರಲಿಲ್ಲ’ ಎಂದಿದ್ದಾರೆ. ಈಗ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿರುವುದರಿಂದ ಆ ಭಯ ದೂರವಾಗಿದೆ. ಹೀಗಾಗಿ, ತಾನು ದೂರು ನೀಡಲು ಮುಂದೆ ಬಂದಿರುವುದಾಗಿ ಅವರು ತಿಳಿಸಿದ್ದಾರೆ.

ತಮ್ಮ ಜೊತೆ ಇನ್ನೂ ಐದಾರು ಜನ ಸಾಕ್ಷಿಗಳು ಮುಂದೆ ಬರುವುದಾಗಿ ಹೇಳಿದ್ದಾರೆ ಎಂದು ಶೆಟ್ಟಿ ಬಹಿರಂಗಪಡಿಸಿದ್ದಾರೆ. ಮೃತದೇಹಗಳನ್ನು ಕಂಡಿದ್ದ ಸಾಕ್ಷ್ಯವನ್ನೂ ಅವರು ಹೇಳಿಕೊಂಡಿದ್ದಾರೆ. ‘ಮರಣೋತ್ತರ ಪರೀಕ್ಷೆ ಮಾಡಿಸದೇ, ಎಫ್‌ಐಆರ್ ದಾಖಲಿಸದೇ ಮೃತದೇಹಗಳನ್ನು ಹೂತಿದ್ದಾರೆ’ ಎಂದು ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ.

ಬಾಲಕಿಯೊಬ್ಬಳ ಮೃತದೇಹ ವಾರಗಟ್ಟಲೆ ಹಾಗೆಯೇ ಬಿದ್ದಿದ್ದರೂ, ಪೊಲೀಸರಿಗೆ ಮಾಹಿತಿ ನೀಡದೆ ಹೂತುಹಾಕಿದ್ದನ್ನು ತಾನು ಕಣ್ಣಾರೆ ನೋಡಿದ್ದಾಗಿ ಅವರು ಹೇಳಿಕೊಂಡಿದ್ದಾರೆ. ಈ ಬಗ್ಗೆ ಆ ಸಮಯದಲ್ಲಿ ಯಾಕೆ ಧ್ವನಿ ಎತ್ತಲಿಲ್ಲ ಎಂದು ಮಾಧ್ಯಮಗಳು ಪ್ರಶ್ನಿಸಿದಾಗ, ‘ಅಂದು ಬಾಯಿಬಿಡುವ ಪರಿಸ್ಥಿತಿ ಇರಲಿಲ್ಲ’ ಎಂದು ಜಯಂತ ಶೆಟ್ಟಿ ತಿಳಿಸಿದ್ದಾರೆ. ಜೊತೆಗೆ, ‘ನನ್ನ ಕುಟುಂಬದ ಹೆಣ್ಣುಮಗಳಾದ ಪದ್ಮಲತಾ ಪ್ರಕರಣಕ್ಕೂ ಏನಾಯಿತು ಎಂಬುದನ್ನು ಎಸ್‌ಐಟಿಗೆ ತಿಳಿಸುವವರೂ ಇದ್ದಾರೆ’ ಎಂದು ಹೇಳಿದರು.

ಈ ಕುರಿತು ಎಸ್‌ಐಟಿ ತಂಡ ಯಾವ ರೀತಿ ತನಿಖೆ ನಡೆಸಿ, ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕು.

ಧರ್ಮಸ್ಥಳ ಪ್ರಕರಣದ ದೂರುದಾರನಿಗೆ ಬೆದರಿಕೆ, ಕೇಸ್ ವಾಪಸ್ ಪಡೆಯಲು ಒತ್ತಡ: ಎಸ್‌ಐಟಿ ಅಧಿಕಾರಿ ವಿರುದ್ಧ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...