Homeಮುಖಪುಟರಫೇಲ್ ಒಪ್ಪಂದಕ್ಕಾಗಿ ಲಂಚ ಆರೋಪ: ಬಿಜೆಪಿ ಕಾಂಗ್ರೆಸ್ ನಡುವೆ ವಾಗ್ವಾದ

ರಫೇಲ್ ಒಪ್ಪಂದಕ್ಕಾಗಿ ಲಂಚ ಆರೋಪ: ಬಿಜೆಪಿ ಕಾಂಗ್ರೆಸ್ ನಡುವೆ ವಾಗ್ವಾದ

- Advertisement -
- Advertisement -

ರಫೇಲ್ ಯುದ್ಧ ವಿಮಾನ ತಯಾರಕರಾದ ಡಸಾಲ್ಟ್ ಕಂಪನಿಯು 36 ರಫೇಲ್‌ ವಿಮಾನಗಳನ್ನು ಭಾರತಕ್ಕೆ ಮಾರುವುದಕ್ಕಾಗಿ ಭಾರತದ ಮಧ್ಯವರ್ತಿಯೊಬ್ಬರಿಗೆ 7.5 ಮಿಲಿಯನ್ ಯೂರೋ (65 ಕೋಟಿ ರೂ) ಲಂಚ ನೀಡಿದೆ ಎಂದು ಫ್ರೆಂಚ್ ಪತ್ರಿಕೆ ‘ಮೀಡಿಯಾಪಾರ್ಟ್; ಆರೋಪಿಸಿದೆ. ಈ ಕುರಿತು ಸ್ಪಷ್ಟ ದಾಖಲೆಗಳಿದ್ದರೂ ಸಹ CBI ತನಿಖೆ ಮಾಡಲು ವಿಫಲವಾಗಿದೆ ಎಂದು ಅದು ಹೇಳಿದ ಬೆನ್ನಲ್ಲೆ ಭಾರತದಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ವಾಗ್ವಾದ ಆರಂಭಗೊಂಡಿದೆ.

59,000 ಕೋಟಿ ರೂಗಳ ರಫೇಲ್ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮೀಡಿಯಾಪಾರ್ಟ್ 2013 ಕ್ಕೆ ಮುಂಚೆಯೇ ಕಂಪನಿಯು ಮಧ್ಯವರ್ತಿಗೆ ಹಣ ನೀಡಿದೆ ಎಂದು ಹೇಳಿದೆ. ಅಂದರೆ ಈ ಭ್ರಷ್ಟಾಚಾರವು ಬಿಜೆಪಿ 2014ರಲ್ಲಿ ಅಧಿಕಾರಕ್ಕೆ ಬರುವ ಮುನ್ನವೇ ನಡೆದಿದೆ, ಇದು ಕಾಂಗ್ರೆಸ್‌ ಮಾಡಿರುವುದು ಎಂದು ಬಿಜೆಪಿ ಆರೋಪಿಸಿದೆ. ಅದೇ ಸಮಯದಲ್ಲಿ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

‘INC (Indian National Congress) ಎಂದರೆ I need Commission (ನನಗೆ ಕಮಿಷನ್ ಬೇಕು)’ ಎಂದರ್ಥ ಎಂದು ಕಾಂಗ್ರೆಸ್‌ ಪಕ್ಷದ ಸಂಕ್ಷಿಪ್ತ ರೂಪದ ಕುರಿತು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ವ್ಯಂಗ್ಯವಾಡಿದ್ದಾರೆ. ಯುಪಿಎ ಸರ್ಕಾರವು ಪ್ರತಿ ಒಪ್ಪಂದದೊಳಗೆ ಒಪ್ಪಂದ ಮಾಡಿಕೊಳ್ಳುತ್ತದೆ, ಹಾಗಾಗಿ ರಫೇಲ್ ಹಗರಣದಲ್ಲಿಯೂ ಲಂಚ ಪಡೆದಿರಬಹುದು ಎಂದು ಅವರು ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಇಟಲಿಯಿಂದ ಉತ್ತರಿಸಲಿ. ಇಷ್ಟು ವರ್ಷ ನೀವು ಮತ್ತು ನಿಮ್ಮ ಪಕ್ಷದವರು ರಫೇಲ್ ಬಗ್ಗೆ ಸುಳ್ಳು ಪ್ರಚಾರ ಮಾಡಲು ಏಕೆ ಪ್ರಯತ್ನಿಸಿದ್ದೀರಿ? 2007 ರಿಂದ 2012 ರವರೆಗೆ ಅವರದೇ ಸರ್ಕಾರ ಅಧಿಕಾರದಲ್ಲಿದ್ದಾಗ ಕಮಿಷನ್ ಪಾವತಿಸಲಾಗಿದೆ ಎಂಬುದು ಈಗ ಬಹಿರಂಗವಾಗಿದೆ, ಇದರಲ್ಲಿ ಮಧ್ಯವರ್ತಿಯ ಹೆಸರೂ ಬಂದಿದೆ ಎಂದು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ತಮ್ಮ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಮತ್ತು ರಫೇಲ್ ಹಗರಣವನ್ನು ಮುಚ್ಚಿಹಾಕಲು ಮೋದಿ ಸರ್ಕಾರ-ಸಿಬಿಐ-ಜಾರಿ ನಿರ್ದೇಶನಾಲಯದ ನಡುವಿನ ಸಂಶಯಾಸ್ಪದ ಸಂಬಂಧವನ್ನು ಮೀಡಿಯಾ ಪಾರ್ಟ್ ಬಹಿರಂಗಪಡಿಸಿದೆ” ಎಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಪ್ರತಿ ಹೆಜ್ಜೆಯಲ್ಲೂ ಸತ್ಯ ನಿಮ್ಮೊಂದಿಗಿರುವಾಗ, ತಡವೇಕೆ? ನನ್ನ ಕಾಂಗ್ರೆಸ್ ಸಂಗಾತಿಗಳೆ, ಭ್ರಷ್ಟ ಕೇಂದ್ರ ಸರ್ಕಾರದ ವಿರುದ್ಧ ಇದೇ ರೀತಿ ಹೋರಾಟ ಮುಂದುವರಿಸಿ. ಕಾಯಬೇಡಿ, ಆಯಾಸಗೊಳ್ಳಬೇಡಿ, ಭಯಪಡಬೇಡಿ” ಎಂದು ತಿಳಿಸಿದ್ದಾರೆ.

ತಮ್ಮ ಟ್ವೀಟ್‌ನೊಂದಿಗೆ ಹಿಂದಿ ಪತ್ರಿಕೆಯ ತುಣುಕೊಂದನ್ನು ರಾಹುಲ್ ಗಾಂಧಿ ಲಗತ್ತಿಸಿದ್ದಾರೆ. “ರಫೇಲ್ ಡೀಲ್‌ನಲ್ಲಿ ನಕಲಿ ರಶೀದಿಗಳನ್ನು ಬಳಸಿ ಮಧ್ಯವರ್ತಿಗಳಿಗೆ ಕಮಿಷನ್ ನೀಡಲಾಗಿದೆ. ಈ ದಾಖಲೆಗಳಿದ್ದರೂ ಭಾರತೀಯ ತನಿಖಾ ಸಂಸ್ಥೆಗಳು ಪ್ರಕರಣವನ್ನು ಮುಂದುವರಿಸಲಿಲ್ಲ ಎಂದು ಫ್ರೆಂಚ್ ನಿಯತಕಾಲಿಕ ಆರೋಪಿಸಿದೆ” ಎಂದು ಅದರಲ್ಲಿ ಬರೆಯಲಾಗಿದೆ.

ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ ಎಂದು ಪತ್ರಿಕೆ ದೂರಿದೆ. ಅಗುಸ್ಟಾವೆಸ್ಟ್‌ಲ್ಯಾಂಡ್ ಪ್ರಕರಣದಲ್ಲಿ ವಿ.ವಿ.ಐ.ಪಿ ಹೆಲಿಕ್ಯಾಪ್ಟರ್‌ಗಳ ಒಪ್ಪಂದದಲ್ಲಿ ಭಾರತದಲ್ಲಿ ಕಿಕ್‌ಬ್ಯಾಕ್‌ ಪಡೆದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಸುಶೇನ್ ಗುಪ್ತಾ ಮೇಲೆ ಈ ಪ್ರಕರಣದಲ್ಲಿ ಏಕೆ ತನಿಖೆಯಿಲ್ಲ ಎಂದು ಅದು ಪ್ರಶ್ನಿಸಿದೆ.

ಮೀಡಿಯಾ ಪಾರ್ಟ್ ಪತ್ರಿಕೆಯೂ ರಾಫೇಲ್ ಹಗರಣದ ದಾಖಲೆಗಳ ತನಿಖೆಯ ಕುರಿತು ಸರಣಿ ಲೇಖನಗಳನ್ನು ಪ್ರಕಟಿಸಿದೆ. ಇದು ರಾಫೇಲ್ ಭ್ರಷ್ಟಾಚಾರದ ಕುರಿತು ಫ್ರಾನ್ಸ್‌ನಲ್ಲಿ ನ್ಯಾಯಾಂಗ ತನಿಖೆಗೆ ಕಾರಣವಾಗಿದೆ.


ಇದನ್ನೂ ಓದಿ: ರಫೇಲ್ ಹಗರಣ: ಸತ್ಯ ನಿಮ್ಮೊಂದಿಗೆ, ಭಯವಿಲ್ಲದೆ ಹೋರಾಡಿ – ಕಾಂಗ್ರೆಸ್ಸಿಗರಿಗೆ ರಾಹುಲ್ ಗಾಂಧಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...