Homeಕರ್ನಾಟಕಸಿಎಂ ಸಿದ್ದರಾಮಯ್ಯ ವಿರುದ್ಧದ ಲಂಚ ಪ್ರಕರಣ: ಮುಕ್ತಾಯ ವರದಿ ಅಂಗೀಕರಿಸಿದ ವಿಶೇಷ ನ್ಯಾಯಾಲಯ

ಸಿಎಂ ಸಿದ್ದರಾಮಯ್ಯ ವಿರುದ್ಧದ ಲಂಚ ಪ್ರಕರಣ: ಮುಕ್ತಾಯ ವರದಿ ಅಂಗೀಕರಿಸಿದ ವಿಶೇಷ ನ್ಯಾಯಾಲಯ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ವಿವೇಕ್‌ ಹೋಟೆಲ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಎಲ್‌. ವಿವೇಕಾನಂದ ಅಲಿಯಾಸ್‌ ಕಿಂಗ್ಸ್‌ ಕೋರ್ಟ್‌ ವಿವೇಕ್‌ ಅವರನ್ನು ಕೋಟ್ಯಾಂತರ ರೂಪಾಯಿ ಲಂಚ ಪಡೆದು ಬೆಂಗಳೂರು ಟರ್ಫ್‌ ಕ್ಲಬ್‌ ಲಿಮಿಟೆಡ್‌ನ (ಬಿಟಿಸಿಎಲ್‌) ಸ್ಟ್ಯುವರ್ಡ್‌ ಆಗಿ ನಾಮನಿರ್ದೇಶನ ಮಾಡಿದ್ದಾರೆ ಎಂದು ಆರೋಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.

ಲೋಕಾಯುಕ್ತ ಪೊಲೀಸರ ಅಂತಿಮ ವರದಿಗೆ ಆಕ್ಷೇಪಿಸಿ, ದೂರುದಾರ ಬೆಂಗಳೂರಿನ ಬಿಜೆಪಿ ಮುಖಂಡ ಎನ್‌. ಆರ್‌ ರಮೇಶ್‌ ಅವರು ಸಲ್ಲಿಸಿದ್ದ ಪ್ರತಿಭಟನಾ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರು ಆದೇಶ ಪ್ರಕಟಿಸಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

“ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ 2024ರ ಸೆಪ್ಟೆಂಬರ್ 12 ಸಲ್ಲಿಸಿರುವ ಅಂತಿಮ ವರದಿಯನ್ನು ಒಪ್ಪಿಕೊಳ್ಳಲಾಗಿದೆ” ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದ್ದಾಗಿ ವರದಿ ತಿಳಿಸಿದೆ.

ಸಿದ್ದರಾಮಯ್ಯ ಅವರು ಲಂಚ ಪಡೆದು ವಿವೇಕಾನಂದ ಅವರನ್ನು ಬಿಟಿಸಿಎಲ್‌ಗೆ ಸ್ಟ್ಯುವರ್ಡ್‌ ಆಗಿ ನೇಮಕ ಮಾಡಿದ್ದಾರೆ ಎಂಬುವುದಕ್ಕೆ ಯಾವುದೇ ದಾಖಲೆಗಳು ಇಲ್ಲ ಎಂದು ಲೋಕಾಯುಕ್ತದ ಪ್ರಾಥಮಿಕ ತನಿಖಾ ವರದಿಯಲ್ಲಿ ಹೇಳಲಾಗಿದೆ. ದೂರುದಾರರು ತನಿಖೆಗೆ ಹಾಜರಾಗದ ಕಾರಣ, ಆರೋಪಿಗಳ ವಿರುದ್ಧ ಮುಂದುವರಿಯಲು ಸೂಕ್ತ ದಾಖಲೆಗಳ ಕೊರತೆಯ ಹಿನ್ನೆಲೆಯಲ್ಲಿ ಪ್ರಕರಣ ಮುಕ್ತಾಯ ವರದಿಯನ್ನು ಸಲ್ಲಿಸಲಾಗಿದೆ ಎಂದು ನ್ಯಾಯಾಲಯದ ಆದೇಶದಲ್ಲಿ ವಿವರಿಸಲಾಗಿದೆ.

“ಲೋಕಾಯುಕ್ತ ಸಲ್ಲಿಸಿರುವ ಮುಕ್ತಾಯ ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದ್ದು, 1998-99ರಲ್ಲಿ ವಿವೇಕಾನಂದ ಅವರು ಮೈಸೂರು ಟರ್ಫ್‌ ಕ್ಲಬ್‌ನ ಸ್ಟ್ಯುವರ್ಡ್‌ ಆಗಿದ್ದರು. 2003-04ರಲ್ಲಿ ಬೆಂಗಳೂರು ಟರ್ಫ್‌ ಕ್ಲಬ್‌ಗೆ (ಬಿಟಿಸಿ) ಸ್ಟ್ಯುವರ್ಡ್‌ ಆಗಿ ನಾಮನಿರ್ದೇಶನ ಮಾಡಲಾಗಿತ್ತು. ಆನಂತರ ಮತ್ತೆ ಬಿಟಿಸಿ ಸ್ಟ್ಯುವರ್ಡ್‌ ಆಗಿ ನಾಮನಿರ್ದೇಶನ ಮಾಡಲಾಗಿತ್ತು. ಈ ಎಲ್ಲಾ ವಿಚಾರಗಳು ಗಮನಿಸಿದರೆ ಸರ್ಕಾರವು ತನಗೆ ದೊರೆತಿರುವ ವಿಶೇಷ ಅಧಿಕಾರವನ್ನು ಸ್ವೇಚ್ಛೆಯಿಂದ ಬಳಸಿ ನೇಮಕ ಮಾಡಬೇಕಾದ ಹೊಸಬರು ವಿವೇಕಾನಂದ ಅವರಲ್ಲ. ಈ ನೆಲೆಯಲ್ಲಿ ಸ್ಟ್ಯುವರ್ಡ್‌ ಆಗಿ ನೇಮಕವಾಗಲು ವಿವೇಕಾನಂದ ಅವರು ಅರ್ಹರಾಗಿದ್ದು, ಸ್ವೇಚ್ಛೆಯ ನಡೆ ಅನುಸರಿಸಬೇಕಿಲ್ಲ. ಇದರಿಂದ ವಿವೇಕಾನಂದ ಅವರ ನೇಮಕಾತಿ ಸಮರ್ಥನೀಯವಾಗಿದೆ” ಎಂದು ನ್ಯಾಯಾಲಯ ಹೇಳಿದೆ.

“ಸಿದ್ದರಾಮಯ್ಯ ಅವರು ಸಲ್ಲಿಸಿರುವ ಆದಾಯ ತೆರಿಗೆ ವರದಿ, ಅಫಿಡವಿಟ್‌, ಅವರ ಬ್ಯಾಂಕ್‌ ಖಾತೆ ಹಾಗೂ ವಿವೇಕಾನಂದ ಅವರ ಘೋಷಣಾ ಪತ್ರವನ್ನು ಲೋಕಾಯುಕ್ತ ಸಂಗ್ರಹಿಸಿದೆ. ವಿವೇಕಾನಂದ ಅವರ ಹೇಳಿಕೆಯನ್ನು ಪರಿಶೀಲಿಸಲಾಗಿದ್ದು, ಬಡ್ಡಿರಹಿತ ಸಾಲವನ್ನು ಸಿದ್ಧರಾಮಯ್ಯ ಅವರಿಗೆ ನೀಡಲಾಗಿದೆ ಎಂದು ವಿವೇಕಾನಂದ ಹೇಳಿದ್ದು, ಅವರ ಐಟಿ ದಾಖಲೆಯಲ್ಲಿ ಉಲ್ಲೇಖಿತವಾಗಿದೆ. ಗೌರವಾನ್ವಿತ ಹುದ್ದೆಯ ಸ್ಟ್ಯುವರ್ಡ್‌ಶಿಪ್‌ಗೆ ನೇಮಕವಾಗುವ ಎಲ್ಲಾ ಅರ್ಹತೆಯನ್ನು ವಿವೇಕಾನಂದ ಹೊಂದಿದ್ದು, ಇದರಿಂದ ಅಕ್ರಮವಾಗಿ ಸಂಪಾದಿಸುವುದು ಏನೂ ಇಲ್ಲ. ಹೀಗಾಗಿ, ಹಾಲಿ ಪ್ರಕರಣಕ್ಕೆ ಭ್ರಷ್ಟಾಚಾರ ನಿಗ್ರಹ ಕಾಯಿದೆ ಸೆಕ್ಷನ್‌ 7,8 ಅಥವಾ 13 ಅನ್ವಯಿಸುವುದಿಲ್ಲ” ಎಂದು ನ್ಯಾಯಾಲಯ ತಿಳಿಸಿದೆ.

“ದೂರುದಾರರ ಪರ ವಕೀಲರು ತನಿಖಾ ಸಂಸ್ಥೆಗೆ ಅಗತ್ಯವಾದ ಸಮಯ ನೀಡಿಲ್ಲ ಎಂದಿದ್ದಾರೆ. ಇದನ್ನು ಒಪ್ಪಿಕೊಳ್ಳುವುದಾದರೆ ದೂರುದಾರರು ಪ್ರತಿಭಟನಾ ಅರ್ಜಿ ಸಲ್ಲಿಕೆಯ ವಾದದ ಸಂದರ್ಭದಲ್ಲಿ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಲು ಯಾರೂ ಅವರನ್ನು ನಿರ್ಬಂಧಿಸಿರಲಿಲ್ಲ. ಹಾಲಿ ಪ್ರಕರಣದಲ್ಲಿ ಆರೋಪ ಮಾಡಿರುವುದನ್ನು ಹೊರತುಪಡಿಸಿ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಕೆ ಮಾಡಲಾಗಿಲ್ಲ” ಎಂದು ನ್ಯಾಯಾಲಯ ಹೇಳಿದೆ.

“2014ರಲ್ಲಿ ಕೃತ್ಯ ನಡೆದಿದ್ದು, 2022ರಲ್ಲಿ ಮೊದಲ ಬಾರಿಗೆ ಎಂಟು ವರ್ಷಗಳ ಬಳಿಕ ದೂರು ದಾಖಲಿಸಲಾಗಿದೆ. ತಡವಾಗಿ ದೂರು ದಾಖಲಿಸಿರುವುದಕ್ಕೆ ನ್ಯಾಯಾಲಯವು ಯಾವುದೇ ಆಕ್ಷೇಪ ವ್ಯಕ್ತಪಡಿಸುತ್ತಿಲ್ಲ. ಆದರೆ, ತಡವಾಗಿ ದೂರು ದಾಖಲಿಸಲು ಕಾರಣವೇನು ಎಂದ ಹೇಳಿಲ್ಲ” ಎಂದು ನ್ಯಾಯಾಲಯ ತಿಳಿಸಿದೆ.

“ಸಿದ್ದರಾಮಯ್ಯ ಅವರು ವಿವೇಕಾನಂದ ಅವರಿಂದ ಸ್ವೀಕರಿಸಿರುವ 1.30 ಕೋಟಿ ರೂಪಾಯಿಯನ್ನು ಅವರಿಗೆ ಸ್ಟ್ಯುವರ್ಡ್‌ ಆಗಿ ನಾಮನಿರ್ದೇಶನ ಮಾಡಿರುವುದಕ್ಕೆ ಪಡೆದಿರುವ ಹಣ ಎನ್ನಲಾಗದು. ಈ ನೆಲೆಯಲ್ಲಿ ಸಿದ್ದರಾಮಯ್ಯ ಮತ್ತು ವಿವೇಕಾನಂದ ಅವರ ವಿರುದ್ಧ ಪ್ರಕ್ರಿಯೆ ಮುಂದುವರಿಸಲು ಯಾವುದೇ ದಾಖಲೆಗಳು ಇಲ್ಲದಿರುವುದರಿಂದ ತನಿಖಾ ಸಂಸ್ಥೆಯು ಸಲ್ಲಿಸಿರುವ ಮುಕ್ತಾಯ ವರದಿಯನ್ನು ಒಪ್ಪಿಕೊಳ್ಳಬೇಕಿದೆ” ಎಂದು ನ್ಯಾಯಾಲಯ ಹೇಳಿದೆ. ‌

ಕೃಪೆ : ಬಾರ್ & ಬೆಂಚ್

ಸಾಲ ಪಡೆದವರ ರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಶೀಘ್ರದಲ್ಲಿ ಹೊಸ ಕಾನೂನು ಜಾರಿ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...